ಕುಂತಿಬೆಟ್ಟದ ಕಲ್ಯಾಣಿಕೊಳಕ್ಕೆ ನಿರ್ವಹಣೆ ಕೊರತೆ


Team Udayavani, May 10, 2019, 4:30 PM IST

man-2

ಪಾಂಡವಪುರ: ಪುರಾಣ ಪ್ರಸಿದ್ಧ ಐತಿಹಾಸಿಕ ಕುಂತಿಬೆಟ್ಟದಲ್ಲಿರುವ ಕಲ್ಯಾಣಿಕೊಳ ಸೂಕ್ತ ನಿರ್ವಹಣೆ ಇಲ್ಲದೆ ಸಂಪೂರ್ಣ ಪಾಳು ಬಿದ್ದಂತಾಗಿದೆ. ತಾಲೂಕಿನ ಪ್ರವಾಸಿ ತಾಣಗಳ ಪೈಕಿ ಕುಂತಿಬೆಟ್ಟ ಅತ್ಯಂತ ಪ್ರಸಿದ್ಧಿ ಪಡೆದಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಇಲ್ಲಿನ ಪ್ರಕೃತಿಕ ಸೌಂದರ್ಯ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ.

ಕುಂತಿಬೆಟ್ಟದಲ್ಲಿ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಾಲಯ ಸೇರಿದಂತೆ ಅನೇಕ ದೇವಾಲಯಗಳಿವೆ. ಇಂದು ಅವುಗಳು ಅವಸಾನ ಅಂಚಿನಲ್ಲಿವೆ. ಜತೆಗೆ ಶ್ರೀಶಂಕರಾನಂದ ಭಾರತಿ ವಿದ್ಯಾಪೀಠ ಇದೆ. ಪಾಂಡವರು ವನವಾಸಕ್ಕೆ ಹೊರಟಾಗ ಇಲ್ಲಿ ಬಂದು ನೆಲೆಸಿದ್ದರು ಎನ್ನುವುದು ಪುರಾಣದಲ್ಲಿ ದಾಖಲಾಗಿದೆ.

ಪುರಾಣ ಕುರುಹುಗಳಿವೆ: ಕುಂತಿಬೆಟ್ಟದಲ್ಲಿ ಭಕಾಸುರನೆಂಬ ರಾಕ್ಷಕ ವಾಸವಾಗಿದ್ದು, ಪಾಂಡವರು ತಂಗಿದ್ದ ವೇಳೆ ಭಕಾಸುರನನ್ನು ಪಾಂಡವರಲ್ಲಿ ಅತ್ಯಂತ ಬಲಶಾಲಿಯಾದ ಭೀಮ ಕೊಂದಿದ್ದನು ಎಂಬ ಇತಿಹಾಸವಿದೆ. ಇದಕ್ಕೆ ಪುರಾವೆ ಎಂಬಂತೆ ಬೆಟ್ಟದಲ್ಲಿ ಭೀಮನ ಪಾದ, ಕುಂತಿದೇವಿ ಸೀರೆ ಒಣಹಾಕಿದ ಸ್ಥಳ, ಅರ್ಜುನ ತನ್ನ ಬಾಣದಿಂದ ಭೂಮಿಗೆ ಸ್ಪರ್ಶಿಸಿ ನೀರು ಬರುವಂತೆ ಮಾಡಿರುವ ದೃಶ್ಯಗಳು ಇಂದಿಗೂ ಪ್ರಸ್ತುತವಾಗಿದ್ದು, ಮತ್ತಷ್ಟು ಕುರುಹುಗಳಿವೆ. ಇದಕ್ಕಾಗಿ ಈ ಬೆಟ್ಟಕ್ಕೆ ಕುಂತಿ ಬೆಟ್ಟ ಎಂಬ ಹೆಸರು ಬಂದಿದೆ ಎಂಬ ಪ್ರತೀತಿ ಇದೆ. ಬ್ರಿಟೀಷರ ಕಾಲದಲ್ಲಿ ಫ್ರೆಂಚ್ ತುಕಡಿಯೊಂದು ಕುಂತಿಬೆಟ್ಟದ ತಪ್ಪಲಲ್ಲಿ ತಂಗಿದ್ದರು ಎನ್ನುವುದು ಮತ್ತೂಂದು ಇತಿಹಾಸ.

ಹಿರೋಡೆ ಕೆರೆ: ಕುಂತಿಬೆಟ್ಟಕ್ಕೆ ಹೊಂದಿಕೊಂಡಂತೆ ಹಿರೋಡೆ ಕೆರೆ ಇದೆ. ಇದು ಪ್ರಕೃತಿಯ ಮಡಿಲಲ್ಲಿದೆ. ಇಲ್ಲಿನ ಪ್ರಾಕೃತಿಕ ಸೌಂದರ್ಯಯವನ್ನು ವೀಕ್ಷಿಸಲು ನಿತ್ಯ ನೂರಾರು ಪ್ರವಾಸಿಗರು ದೂರದೂರುಗಳಿಂದ ಆಗಿಮಿಸುತ್ತಾರೆ. ಇವುಗಳ ಜತೆಗೆ ಬೆಟ್ಟದಲ್ಲಿ ಐತಿಹಾಸಿಕ ಕಲ್ಯಾಣಿ ಕೊಳವೊಂದು ನಿರ್ಮಿಸಲಾಗಿದೆ. ಇಂದು ಕಲ್ಯಾಣಿ ಕೊಳ ಸೂಕ್ತ ನಿರ್ವಹಣೆ ಇಲ್ಲದೆ ಅವನತಿ ಹೊಂದುತ್ತಿದೆ. ಈ ಹಿಂದೆ ಕಲ್ಯಾಣಿಯಲ್ಲಿ ದೇವರ ವಿಗ್ರಹ ಸ್ವಚ್ಛಗೊಳಿಸಲು ಈ ನೀರನ್ನೇ ಬಳಕೆ ಮಾಡಲಾಗುತ್ತಿತ್ತು.

ಕೊಳದ ವಿಶೇಷತೆ: ಸುತ್ತ-ಮುತ್ತಲಿನ ಗ್ರಾಮಸ್ಥರು ಮದುವೆ ಮತ್ತಿತರೆ ಶುಭ ಸಮಾರಂಭ ಮಾಡುವ ವೇಳೆ ಅಡುಗೆಗೆ ಈ ಕೊಳದ ನೀರನ್ನೆ ಬಳಸುತ್ತಿದ್ದರಂತೆ. ಎಂತಹ ಬೇಸಿಗೆ ಕಾಲದಲ್ಲೂ ಈ ಕಲ್ಯಾಣಿಕೊಳದಲ್ಲಿ ನೀರು ಬತ್ತುತ್ತಿರಲಿಲ್ಲ. ಆದರೆ, ಇಲ್ಲಿಗೆ ಬರುವ ಪ್ರವಾಸಿಗರು ಮತ್ತು ಸ್ಥಳೀಯ ಯುವಕರು ಕಲ್ಯಾಣಿ ಕೊಳದ ಸುತ್ತ ಸ್ವಚ್ಛತೆ ಕಾಪಾಡದೆ ಹಾಳು ಮಾಡಿದ್ದಾರೆ. ಪ್ರವಾಸಿಗರು ಕಸಕಡ್ಡಿ, ಪ್ಲಾಸ್ಟಿಕ್‌, ಬಾಟಿಲು, ಬಟ್ಟೆ, ಚಪ್ಪಲಿ ಸೇರಿದಂತೆ ಇನ್ನಿತರ ತ್ಯಾಜ್ಯ ಕಲ್ಯಾಣಿ ಕೊಳದಲ್ಲಿ ಎಸೆದು ಕಸ ತುಂಬಿಕೊಂಡಿದೆ.

ನೀರು ಕಲುಷಿತ: ಕಲ್ಯಾಣಿಕೊಳದ ನೀರು ಸಂಪೂರ್ಣ ಕಲುಷಿತಗೊಂಡು ನೀರು ಹಸಿರು ಬಣ್ಣಕ್ಕೆ ತಿರುಗಿದೆ. ಕೊಳದಲ್ಲಿ ಹಲವಾರು ವರ್ಷಗಳಿಂದ ಹೂಳು ತೆಗೆಯದ ಕಾರಣ ಕಲ್ಯಾಣಿಕೊಳದ ಜಲಕಣ್ಣುಗಳು ಹೂಳಿನಲ್ಲಿ ಮುಚ್ಚಿಹೋಗಿವೆ. ಕಲ್ಯಾಣಿಯ ಸುತ್ತಲು ಕಲ್ಲಿನಿಂದ ಕಟ್ಟಿದ ತಡೆಗೊಡೆ ಕುಸಿದು ಕಲ್ಯಾಣಿಯೊಳಗೆ ಬಿದ್ದಿದೆ. ಕಲ್ಯಾಣಿ ಸುತ್ತಲು ಇರುವ ಮರಗಳ ಎಲೆಗಳು ತೆಂಗಿನ ಗರಿಗಳು ಕೊಳದೊಳಗೆ ಬಿದ್ದಿವೆ. ಕಲ್ಯಾಣಿಯ ನೀರು ಯಾವುದಕ್ಕೂ ಪ್ರಯೋಜನಕ್ಕೆ ಬಾರದಂತಾಗಿದೆ.

ಸ್ವಚ್ಛತೆ ಅಗತ್ಯ: ಇಲ್ಲಿನ ದೇವಸ್ಥಾನದ ಆಡಳಿತ ಮಂಡಳಿ ಅಥವಾ ಪ್ರವಾಸೋದ್ಯಮ ಇಲಾಖೆ ಕಲ್ಯಾಣಿ ಕೊಳ ಸ್ವಚ್ಛಗೊಳಿಸುವ ಮೂಲಕ ನಿರ್ವಹಣೆ ಮಾಡಿ ಸಂರಕ್ಷಣೆ ಮಾಡಬೇಕೆಂಬ ಗೋಜಿಗೆ ಮುಂದಾಗದಿರುವುದು. ನಿಜಕ್ಕೂ ಶೋಚನೀಯ ಸಂಗತಿಯಾಗಿದೆ. ಸ್ಥಳೀಯ ಆಡಳಿತ ಮಂಡಳಿ ಅಥವಾ ಪ್ರವಾಸೋದ್ಯಮ ಇಲಾಖೆಯಾಗಲಿ ಕ್ರಮ ತೆಗೆದುಕೊಂಡು ಸ್ವಚ್ಛಗೊಳಿಸಿ ಪ್ರವಾಸಿ ತಾಣ ಅಭಿವೃದ್ಧಿ ಪಡಿಸುವರೇ ಕಾದು ನೋಡಬೇಕಾಗಿದೆ.

ಕುಮಾರಸ್ವಾಮಿ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.