ವಿಜೃಂಭಣೆಯ ಲಕ್ಷ್ಮೀದೇವಿ ಬಂಡಿ ಉತ್ಸವ


Team Udayavani, Mar 28, 2019, 5:14 PM IST

man
ಪಾಂಡವಪುರ: ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮದೇವತೆ ಶ್ರೀಲಕ್ಷ್ಮೀದೇವಿ ಬಂಡಿ ಉತ್ಸವ ಸಂಭ್ರಮದಿಂದ ನೆರವೇರಿತು.
ಜಾತ್ರೆಯಲ್ಲಿ ಹಾರೋಹಳ್ಳಿ- ಶಂಭೂವಿನಹಳ್ಳಿ, ಕೆ.ಬೆಟ್ಟಹಳ್ಳಿ, ಡಾಮಡಹಳ್ಳಿ, ಹುಲ್ಕೆರೆ ಗ್ರಾಮದ ಎತ್ತಿನ ಬಂಡಿಗಳ ವಿಶೇಷ
ಉತ್ಸವ ಮೆರಗು ನೀಡಿತು. ಜಾತ್ರೆಯಲ್ಲಿ ಭಕ್ತರು ಶಿಳ್ಳೆ ಹೊಡೆದು, ಕುಣಿದು ಕುಪ್ಪಳಿಸಿದರು.
ಪ್ರತಿವರ್ಷದಂತೆ ಜಾತ್ರೆಯ ಹಿಂದಿನ ದಿನ ಮಂಗಳವಾರ ರಾತ್ರಿಯೆ ಹಣ್ಣಿನ ಹೆಡಿಗೆಗಳನ್ನು ಎತ್ತಿನ ಬಂಡಿಯ ಮೂಲಕ
ಗ್ರಾಮದ ಶ್ರೀಲಕ್ಷ್ಮೀದೇವಿಯ ದೇವಸ್ಥಾನಕ್ಕೆ ತಂದು ಪದ್ಧತಿಯಂತೆ ಪೂಜಾ ಕಾರ್ಯದಲ್ಲಿ ಭಾಗಿಯಾದರು.
ಭಕ್ತರಿಂದ ಬಾಯಿಬೀಗ: ಜಾತ್ರಾ ಮಹೋತ್ಸವದಲ್ಲಿ ನೂರಾರು ಭಕ್ತರು ಬಾಯಿಬೀಗ ಹಾಕಿಕೊಂಡು ದೇವಸ್ಥಾನದು ಸುತ್ತ ಮೂರು ಪ್ರದಕ್ಷಿಣೆ ಸುತ್ತಿ ದೇವರ ಹರಕೆ ತೀರಿಸಿದರು. ಸುತ್ತಮುತ್ತಲಿನ ಗ್ರಾಮಗಳಿಂದ ಎತ್ತಿನ ಬಂಡಿ ಹೊಡೆದುಕೊಂಡು ಬಂದಿರುವಂತಹ ಭಕ್ತರು ಶ್ರೀಲಕ್ಷ್ಮೀದೇವಿ ದೇವಸ್ಥಾನವನ್ನು ಮೂರು ಸುತ್ತು ಪ್ರದಕ್ಷಿಣೆ ಮಾಡಿ, ಬಳಿಕ ಎತ್ತಿನ ಬಂಡಿಯಲ್ಲಿ ತಂದಿದ್ದ ಹೂವು, ಹಣ್ಣು ದೇವಸ್ಥಾನಕ್ಕೆ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಹಣ್ಣು ದವನ ಸಮರ್ಪಣೆ: ಜಾತ್ರೆಯ ಅಂಗವಾಗಿ ಬುಧವಾರ ಕೆ.ಬೆಟ್ಟಹಳ್ಳಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ
ಮುಂದೆ ಅಪಾರ ಜನಸೋಮ ಬಂದು ಸೇರಿದ್ದರು. ಮೊದಲು ನಾಲ್ಕು ಗ್ರಾಮದ ದೇವರ ಪೂಜೆ ಹೊತ್ತು
ಲಕ್ಷ್ಮೀದೇವಿಯ ದೇವಸ್ಥಾನದ ಸುತ್ತ ಮೆರವಣಿಗೆ ನಡೆಸಲಾಗುತ್ತದೆ. ಈ ವೇಳೆ ಭಕ್ತರು ಹಣ್ಣು ದವನ ದೇವರಿಗೆ
ಸಮರ್ಪಿಸಿ ಪೂಜೆ ಸಲ್ಲಿಸಿದರು.  ಪೂಜಾ ಕುಣಿತ, ಪೂಜಾ ವಿಧಾನಗಳು ಮುಗಿಯುತ್ತಿದ್ದಂತೆಯೇ ಜಾತ್ರೆಯ ಮುಖ್ಯಭಾಗವಾದ
ಎತ್ತಿನ ಬಂಡಿ ಉತ್ಸವ ದೇವರಗುಡ್ಡರು ಮುಂದೆ ನಡೆಸುತ್ತಿದ್ದಾಗ ಯುವಕರು ಪಟಾಕಿ ಸಿಡಿಸಿ ಊಘೇ ಊಘೇ ಎಂದು ಕೂಗಿದರು. ಎತ್ತುಗಳು ಬಂಡಿಗಳನ್ನು ಹೊತ್ತು ಲಕ್ಷ್ಮೀದೇವಿ ದೇವಸ್ಥಾನದ ಸುತ್ತ ಮೂರು ಸುತ್ತು ಪ್ರದಕ್ಷಿಣೆ ಹಾಕಿದವು.
ಬಂಡಿ ಉತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮನ್ನೆಚ್ಚರಿಕೆ ಕ್ರಮ  ವಹಿಸಿದರು. ಬಳಿಕ ಬಂಡಿ ಉತ್ಸವ ಭಕ್ತರು ತಮ್ಮ ತಮ್ಮ ಊರಿಗೆ ತೆರಳಿದರು ಬಳಿಕ ಲಕ್ಷ್ಮೀದೇವಿ ಜಾತ್ರೆಗೆ ತೆರೆಬಿದ್ದಿತು.
ಜಾತ್ರಾ ಮಹೋತ್ಸವಕ್ಕೆ ಕೆ.ಬೆಟ್ಟಹಳ್ಳಿ ಗ್ರಾಮದ ಅಕ್ಕಪಕ್ಕದ ಗ್ರಾಮಗಳಾದ ಹಾರೋಹಳ್ಳಿ, ಎಂ.ಬೆಟ್ಟಹಳ್ಳಿ, ಜಾಗಶೆಟ್ಟಹಳ್ಳಿ,
ವಡ್ಡರಹಳ್ಳಿ, ಹರವು, ಅರಳಕುಪ್ಪೆ, ಡಾಮಡಹಳ್ಳಿ, ಶಂಭೂನಹಳ್ಳಿ ಮತ್ತು ಹುಲ್ಕೆರೆ, ಹುಲ್ಕರೆಕೊಪ್ಪಲು, ಶ್ಯಾದನಹಳ್ಳಿ, ಗ್ರಾಮಗಳು ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಗ್ರಾಮಗಳಿಂದ ಸಾವರಾರು ಭಕ್ತರು ಆಗಮಿಸಿ ಜಾತ್ರೆಯನ್ನು
ಯಶಸ್ವಿಗೊಳಿಸಿದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

Melukote: ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.