ಅಭಿವೃದ್ಧಿಯತ್ತ ಮುನ್ನಡೆಸುವೆ: ಚಿಕ್ಕಣ್ಣ
ಬೆನಮನಹಳ್ಳಿ ಚಿಕ್ಕಣ್ಣ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
Team Udayavani, May 5, 2019, 12:07 PM IST
ಮಳವಳ್ಳಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ ಅಯ್ಕೆಯಾದ ರವಿಗೌಡರನ್ನು ಹಲಗೂರು ಹೋಬಳಿ ಮುಖಂಡರು ಅಭಿನಂದಿಸಿದರು.
ಮಳವಳ್ಳಿ: ತಾಲೂಕಿನ ಕೃಷಿ ಪತ್ತಿನ ಸಹಕಾರ ಸಂಘದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬೆನಮನಹಳ್ಳಿ ಗ್ರಾಮದ ಚಿಕ್ಕಣ್ಣ ಉರುಫ್ ರವೀಗೌಡ ಎರಡನೇ ಬಾರಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಿಕಾರ್ಡ್ ಬ್ಯಾಂಕಿಗೆ ನಡೆದ ಚುನಾವಣೆಯಲ್ಲಿ ರವಿಗೌಡ ನಾಮಪತ್ರ ಸಲ್ಲಿಸಿದ್ದು, ಯಾರು ನಮ್ಮ ಪತ್ರ ಸಲ್ಲಿಸದ ಕಾರಣ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರವೀಗೌಡರನ್ನು ಅಧ್ಯಕ್ಷರನ್ನಾಗಿ ಅವಿರೋಧ ಆಯ್ಕೆ ಮಾಡಲಾಯಿತು.
ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ರವೀಗೌಡ, ಐದು ವರ್ಷಗಳ ಅವಧಿಯಲ್ಲಿ ಕೊನೆಯ ಒಂದು ವರ್ಷದ ಅವಧಿಗೆ ಸದಸ್ಯರು ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಮುಂದಿನ ನನ್ನ ಅವಧಿಯಲ್ಲಿ ಬ್ಯಾಂಕಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಎಲ್ಲರಿಗೂ ಸಹಕಾರಿ ಕ್ಷೇತ್ರದಲ್ಲಿ ಅಧಿಕಾರದ ಪರಿಮಿತಿಯಲ್ಲಿ ಸಹಕಾರ ನೀಡುತ್ತೇನೆ. ಹಲಗೂರು ಹೋಬಳಿಯ ಜನತೆಗೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಮರಿತಿಬ್ಬೇಗೌಡರಿಗೆ ಈ ಸಂದರ್ಭದಲ್ಲಿ ವಿಶೇಷವಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಎಲ್ಲರ ಸಹಕಾರದೊಂದಿಗೆ ಬ್ಯಾಂಕನ್ನು ಅಭಿವೃದ್ಧಿಯತ್ತ ಮುನ್ನಡೆಸುತ್ತೇನೆ ಎಂದು ತಿಳಿಸಿದರು.
ಜೆಡಿಎಸ್ ಮುಖಂಡರಾದ ಹೆಚ್.ಎನ್.ರಾಮಚಂದ್ರೇಗೌಡ, ಹೆಚ್.ಎಸ್.ಕೃಷ್ಣ, ಸೊಸೈಟಿ ಜಯರಾಮು, ಭಕ್ತ ವತ್ಸಲ, ಯತೇಂದ್ರ, ನವೀನ, ಜಾಕೀರ್ ಹುಸೇನ್, ಶ್ಯಾಮ್, ಶಿವ, ಸೋಮಶೇಖರ್, ಲಿಂಗರಾಜು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ