ನಾಯಕರು ಹೇಳಿಕೆ ನೀಡುವಾಗ ಎಚ್ಚರ ಅಗತ್ಯ


Team Udayavani, Mar 11, 2019, 7:41 AM IST

nayakaru.jpg

ಮಂಡ್ಯ: ಜೆಡಿಎಸ್‌ನಲ್ಲಿ ನಿಖಿಲ್ ಉಮೇದುವಾರಿಕೆ ಬಗ್ಗೆ ಯಾರಲ್ಲೂ ಅಪಸ್ವರವಿಲ್ಲ ಎಂದು ಶಾಸಕ ಕೆ.ಸುರೇಶ್‌ಗೌಡ ತಿಳಿಸಿದರು. ಮದ್ದೂರು ತಾಲೂಕಿನ ಕೊಪ್ಪ ಹೋಬಳಿ ನಂಬಿನಾಯಕನಹಳ್ಳಿ, ತರೀಕೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿ,

ಹಾಲಿ ಸಂಸದ ಎಲ್.ಆರ್‌.ಶಿವರಾಮೇಗೌಡರು ಸ್ಪರ್ಧಾಕಾಂಕ್ಷಿಯಾಗಿದ್ದರು. ಆನಂತರದಲ್ಲಿ ನಿಖಿಲ್ ಅಭ್ಯರ್ಥಿಯಾಗಬೇಕು ಎಂದು ಅವರೇ ವರಿಷ್ಠರನ್ನು ಒತ್ತಾಯಿಸಿದ್ದಾರೆ. ಅಲ್ಲದೆ, ಸಿಎಂ ಕುಮಾರಸ್ವಾಮಿ ಕರೆದಿದ್ದ ಸಭೆಯಲ್ಲೂ ಕೂಡ ಅಭ್ಯರ್ಥಿ ಯಾರಾಗಬೇಕೆಂಬ ವಿಷಯ ಪ್ರಸ್ತಾಪಕ್ಕೆ ಬಂದಾಗ ಎಲ್ಲರೂ ಒಕ್ಕೊರಲಿನಿಂದ ನಿಖಿಲ್ ಹೆಸರನ್ನು ಸೂಚಿಸಿದ್ದೇವೆ. ಹಾಗಾಗಿ ವಿರೋಧ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.

ಬೆಂಬಲ ಅನಿವಾರ್ಯ: ರಾಜ್ಯದಲ್ಲಿ ಮೈತ್ರಿ ಸರ್ಕಾರ ಆಡಳಿತದಲ್ಲಿದೆ. ಎರಡೂ ಪಕ್ಷದ ವರಿಷ್ಠರು ಯಾವ ಯಾವ ಕ್ಷೇತ್ರದಲ್ಲಿ ಪಕ್ಷಗಳು ಗೆಲ್ಲಲಿವೆ ಎನ್ನುವುದರ ಆಧಾರದ ಮೇಲೆ ತೀರ್ಮಾನ ಕೈಗೊಳ್ಳಲಿದ್ದಾರೆ. ಅದರಂತೆ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟುಕೊಡಲು ತೀರ್ಮಾನವಾಗಿದೆ. ಹಾಗಾಗಿ ಜೆಡಿಎಸ್‌- ಕಾಂಗ್ರೆಸ್‌ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿಗೆ ಬೆಂಬಲ ಸೂಚಿಸುವುದು ಅನಿವಾರ್ಯ. ಅದರಂತೆ ಡಿ.ಕೆ.ಶಿವಕುಮಾರ್‌ ಪಕ್ಷದ ಮುಖಂಡರು-ಕಾರ್ಯಕರ್ತರ ಸಭೆ ಕರೆದು ಭಿನ್ನಮತ ಬಗೆಹರಿಸಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ತಿಳಿಸಿದರು.

ತಿಂಡಿ ತಿಂದಿದ್ದೇನೆ: ಅಂಬರೀಶ್‌ ಮನೆಗೆ ನಾನು ಹೋದ ಸಂದರ್ಭದಲ್ಲೆಲ್ಲಾ ತಿಂಡಿ ಕೊಟ್ಟಿದ್ದಾರೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರ ಹೇಳಿಕೆ ಬಗ್ಗೆ ಶಾಸಕ ಸುರೇಶ್‌ಗೌಡ ಪ್ರತಿಕ್ರಿಯೆ ನೀಡಿದರು. ಒಬ್ಬೊಬ್ಬರು ಹೋದ ಸಂದರ್ಭದಲ್ಲಿ ಒಂದೊಂದು ರೀತಿಯ ಅನುಭವವಾಗಿರಬಹುದು. ಆ ಅನುಭವ, ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ನಾನೂ ಅಂಬರೀಶ್‌ ಮನೆಗೆ ಭೇಟಿ ನೀಡಿದ್ದೇನೆ, ತಿಂಡಿ ತಿಂದು ಬಂದಿದ್ದೇನೆ ಎಂದರು.

ಉದ್ವೇಗ ಸಲ್ಲ: ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗೆ ಕುಮಾರಸ್ವಾಮಿ ಸರ್ಕಾರದಿಂದ ಸಿಗುತ್ತಿರುವ ಸಹಕಾರ ಹಿಂದಿನ ಯಾವುದೇ ಸರ್ಕಾರದ ಅವಧಿಯಲ್ಲೂ ದೊರಕಿರಲಿಲ್ಲ. ಜಿಲ್ಲೆಯ ನೀರಾವರಿ, ಕುಡಿಯುವ ನೀರು ಸೇರಿದಂತೆ ಹಲವಾರು ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ನಿಖಿಲ್ ಅವರನ್ನು ಬೆಂಬಲಿಸುವ ಅವಶ್ಯಕತೆ ಇದೆ. ನಾವು ಯಾವಾಗಲೂ ಅಭಿವೃದ್ಧಿ ಪರವಾಗಿರಬೇಕೇ ವಿನಃ ತಾತ್ಕಾಲಿಕ ಉದ್ವೇಗಕ್ಕೆ ಒಳಗಾಗಬಾರದು ಎಂದರು.

ಆಬಲವಾಡಿ ಗ್ರಾಪಂ ಅಧ್ಯಕ್ಷ ಸುರೇಶ, ಸದಸ್ಯರಾದ ಸುಶೀಲ್ಕುಮಾರ್‌, ತಾಪಂ ಮಾಜಿ ಉಪಾಧ್ಯಕ್ಷ ಎಚ್.ಜಿ. ರಾಮಚಂದ್ರ, ಮುಖಂಡರಾದ ನರಸೇಗೌಡ, ಕುಷಾ, ಚಿಕ್ಕೋನಹಳ್ಳಿ ಜಗದೀಶ ಇತರರಿದ್ದರು.

ಟಾಪ್ ನ್ಯೂಸ್

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.