ಬೃಂದಾವನದ ಅಂಗಳದಲಿ ಚಿರತೆ: ಆತಂಕ ಸೃಷ್ಟಿ !
ಪ್ರವಾಸಿಗರು, ಸ್ಥಳೀಯರಲ್ಲಿ ಆತಂಕ ! ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ ! ಅಧಿಕಾರಿಗಳಿಂದ ಹೆಜ್ಜೆ ಗುರುತು ಪರಿಶೀಲನೆ
Team Udayavani, Feb 8, 2021, 3:37 PM IST
ಶ್ರೀರಂಗಪಟ್ಟಣ: ವಿಶ್ವಪ್ರಸಿದ್ಧ ಕೆಆರ್ಎಸ್ ಬೃಂದಾವನಕ್ಕೆ ಪ್ರತಿದಿನ ಸಾವಿರಾರು ಪ್ರವಾಸಿಗರು ಬರುತ್ತಿದ್ದು, ಇದೀಗ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಿದೆ. ಇದರಿಂದ ಪ್ರವಾಸಿಗರು ಸೇರಿದಂತೆ ಸ್ಥಳೀಯರಲ್ಲಿ ಆತಂಕ ಮೂಡಿದೆ.
ಪ್ರವಾಸಿರು ಸೇರಿದಂತೆ ಜನರು ಕೆಆರ್ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ಒಂಟಿಯಾಗಿ ಸಂಚಾರ ಮಾಡಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಹೆಜ್ಜೆ ಗುರುತು ಪರಿಶೀಲಿಸಿ, ಚಿರತೆ ಸೆರೆಗೆ ಇದೀಗ ಮುಂದಾಗಿದ್ದಾರೆ. ರಾತ್ರಿ ವೇಳೆ ಚಿರತೆ ಪ್ರತ್ಯಕ್ಷ: ವಿಶ್ವ ಪ್ರಸಿದ್ಧ ಶ್ರೀರಂಗಪಟ್ಟಣದ ಕೆಆರ್ಎಸ್ ಬೃಂದಾವನದ ಸಮೀಪ ಕಳೆದ ಎರಡು ದಿನಗಳ ಹಿಂದೆಯಷ್ಟೇ ರಾತ್ರಿ ವೇಳೆಯಲ್ಲಿ ಚಿರತೆ ಯೊಂದು ಪ್ರತ್ಯಕ್ಷವಾಗಿತ್ತು. ಬೃಂದಾವನದ ಒಳ ಆವರಣದಲ್ಲಿ ಹಾಗೂ ಇತರ ಸಮೀಪದ ಪ್ರದೇಶದಲ್ಲಿ ಚಿರತೆ ಸಂಚಾರ ಮಾಡುತ್ತಿರುವ ದೃಶ್ಯ ಕೆಆರ್ಎಸ್ ಬೃಂದಾವನದಲ್ಲಿ ಅಳವಡಿಸಿರುವ ಸಿಸಿ ಟೀವಿಯಲ್ಲಿ ಸೆರೆಯಾಗಿತ್ತು. ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲೂ ಕೂಡ ವೈರಲ್ ಆಗಿತ್ತು. ಇದರಿಂದ ಕೆಆರ್ಎಸ್ ಬೃಂದಾವನಕ್ಕೆ ಬರುವ ಪ್ರವಾಸಿಗರಲ್ಲಿ ಆತಂಕದ ಮನೆ ಮಾಡಿದೆ.
ಇದೀಗ ಸಿಸಿ ಟೀವಿ ದೃಶ್ಯ ಎಲ್ಲೆಡೆ ಹರಿದಾಡಿದ ಹಿನ್ನೆಲೆ ಕೆಆರ್ಎಸ್ ಬೃಂದಾವನಕ್ಕೆ ಬರುವ ಪ್ರವಾಸಿಗರ ಮೇಲೂ ಪರಿಣಾಮ ಬೀರಿದೆ. ಇಲ್ಲಿಗೆ ಬರುವ ಪ್ರವಾಸಿಗರು ಕೂಡ ಚಿರತೆ ದಾಳಿ ನಡೆಸುವ ಆತಂಕದಲ್ಲಿದ್ದರೆ, ಇಲ್ಲಿ ಕೆಲಸ ಮಾಡುವ ನೌಕರರು ಮತ್ತು ಸಿಬ್ಬಂದಿ ಸೇರಿದಂತೆ ಪಕ್ಕದಲ್ಲೇ ಇರುವ ಕೆಆರ್ಎಸ್ ಗ್ರಾಮಸ್ಥರಿಗೂ ಕೂಡ ಒಂಟಿ ಚಿರತೆ ಭಯ ಕಾಡುತ್ತಿದೆ.
ಚಿರತೆ ಇರುವುದು ಸ್ಪಷ್ಟ; ಕೆಆರ್ಎಸ್ ಬೃಂದಾವನ ದಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ಅಲ್ಲಿನ ಅಧಿಕಾರಿ ಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸಿಸಿ ಟೀವಿ ದೃಶ್ಯಗಳು ಸ್ಪಷ್ಟವಾಗಿ ಆ ಒಂಟಿ ಚಿರತೆ ಬೃಂದಾವನದ ಸಮೀಪ ಸಂಚಾರ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸಿ, ಚಿರತೆಯ ಬಗ್ಗೆ ನೀರಾವರಿ ಅಧಿಕಾರಿಗಳಿಂದ ಮಾಹಿತಿ ಪಡೆದು ಕೊಂಡಿದ್ದಾರೆ.
ಇದನ್ನೂ ಓದಿ :ಕಟ್ಟಡ ತೆರವುಗೊಳಿಸುವಲ್ಲಿ ತಾರತಮ್ಯ
ಚಿರತೆ ಸೆರೆಗಾಗಿ ಯೋಜನೆ: ಬೃಂದಾವನದಲ್ಲಿ ಕಾಣಿಸಿಕೊಂಡ ಚಿರತೆಯ ಸೆರೆಗಾಗಿ ಯೋಜನೆಯನ್ನು ಕಾರ್ಯಗತಗೊಳಿಸಲು ಮುಂದಾಗಿದ್ದು, ಇದರ ಜೊತೆಗೆ ಸ್ಥಳೀಯ ಪಂಚಾಯಿತಿ ಮೂಲಕ ಚಿರತೆಯ ಬಗ್ಗೆ ಗ್ರಾಮದಲ್ಲಿ ಜನರು ಎಚ್ಚರವಹಿಸುವಂತೆ ಪಂಚಾಯಿತಿ ಮೂಲಕ ಅರಿವು ಮೂಡಿಸಲಾಗಿದೆ.
ವಾಹನಗಳ ಮೂಲಕ ಚಿರತೆ ದಾಳಿಯ ಬಗ್ಗೆ ಜನರು ಎಚ್ಚರ ವಹಿಸಲು ಸೂಚಿಸಿ, ಯಾರು ಒಂಟಿಯಾಗಿ ಸಂಚಾರ ಮಾಡದಂತೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಒಟ್ಟಾರೆ ವಿಶ್ವ ಪ್ರಸಿದ್ಧ ಕೆಆರ್ಎಸ್ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಮೂಡಿಸಿದ್ದು, ಅರಣ್ಯ ಇಲಾಖೆ ವತಿಯಿಂದ ಚಿರತೆ ಸೆರೆಗೆ ಪ್ರಯತ್ನ ನಡೆಯುತ್ತಿದೆ. ಪ್ರತಿದಿನ ಸಾವಿರಾರು ಪ್ರವಾಸಿಗರು ಬಂದು ಹೋಗುತ್ತಿದ್ದು, ಅನಾಹುತ ಸಂಭವಿಸುವ ಮೊದಲೇ ಕೆಆರ್ಎಸ್ ಬೃಂದಾವನ, ಅರಣ್ಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಆ ಚಿರತೆ ಹಿಡಿದು ಕಾಡಿಗೆ ಬಿಡುವ ಪ್ರಯತ್ನ ಮಾಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ