ಚಿರತೆ ಸೆರೆಗೆ ಅರಣ್ಯ ಇಲಾಖೆ ವಿಫಲ
Team Udayavani, Jun 3, 2020, 5:17 AM IST
ಮದ್ದೂರು: ಚಿರತೆ ಸೆರೆ ಹಿಡಿಯಲು ವಿಫಲವಾಗಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದಟಛಿ ರೈತ ಸಂಘದ ಕಾರ್ಯಕರ್ತರು ಕೊಪ್ಪ ನಾಡಕಚೇರಿ ಬಳಿ ಪ್ರತಿಭಟನೆ ನಡೆಸಿ, ಉಪ ವಲಯ ಅರಣ್ಯಾಧಿಕಾರಿ ರತ್ನಾಕರ್ ಅವರಿಗೆ ಮನವಿ ಸಲ್ಲಿಸಿದರು. ತಾಲೂಕಿನ ಕೊಪ್ಪ ಹೋಬಳಿಯ ನಾಡಕಚೇರಿ ಬಳಿ ಸಂಘಟನೆ ಕಾರ್ಯಕರ್ತರು ಜಿಲ್ಲಾ, ತಾಲೂಕು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ವಿರುದಟಛಿ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಚಿರತೆ ಸೆರೆ ಹಿಡಿಯುವ ಮೂಲಕ ಜನರ ಆತಂಕ ದೂರ ಮಾಡುವಂತೆ ಒತ್ತಾಯಿಸಿದರು.
ಚಿರತೆ ದಾಳಿಗೆ ಪ್ರಾಣಿಗಳು ಬಲಿ: ತಾಲೂಕಿನ ಬಿದರಕೋಟೆ, ಹುರಗಲವಾಡಿ, ಹೊಸಗಾವಿ, ಚೆನ್ನಮ್ಮನಕೊಪ್ಪಲು, ಮೂಡಲು ದೊಡ್ಡಿ, ಆಬಲವಾಡಿ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ನಿತ್ಯ ಗ್ರಾಮಗಳಲ್ಲಿ ಕುರಿ, ಮೇಕೆ, ನಾಯಿ, ಜಾನುವಾರುಗಳನ್ನು ತಿಂದು ಹಾಕುತ್ತಿದ್ದು, ಇದರಿಂದ ರಾಸುಗಳು ಮರಣ ಹೊಂದಿವೆ. ಒಂದು ವಾರದೊಳಗೆ ಚಿರತೆ ಸೆರೆ ಹಿಡಿಯಲು ಮುಂದಾಗದಿದ್ದಲ್ಲಿ ನಿರಂತರ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದರು.
ಚಿರತೆ ಸೆರೆಗೆ ಕ್ರಮ: ಉಪವಲಯ ಅರಣ್ಯಾಧಿಕಾರಿ ರತ್ನಾಕರ್ ಮಾತನಾಡಿ, ಆಬಲವಾಡಿ, ಮೂಡಲದೊಡ್ಡಿಯಲ್ಲಿ ಚಿರತೆ ಸೆರೆಗೆ ಬೋನು ಇಟ್ಟಿದ್ದೇವೆ. ಮೇಲಧಿಕಾರಿಗಳೊಂದಿಗೆ ಚರ್ಚಿಸಿ, ಚಿರತೆ ಸೆರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು. ರೈತ ಸಂಘದ ಮುಖಂಡರಾದ ಕೀಳಘಟ್ಟ ನಂಜುಂಡಯ್ಯ, ಉಮೇಶ್, ಪುಟ್ಟಸ್ವಾಮಿ, ಶಿವು, ತಿಮ್ಮೇಶ್, ಶಿವರಾಮು, ತಿಮ್ಮೇಗೌಡ, ರವಿ, ರಮೇಶ್, ಜಗದೀಶ್ ಮೊದಲಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್