ಗ್ರಾಮಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಪಾಠ
Team Udayavani, Aug 8, 2020, 12:06 PM IST
ಭಾರತೀನಗರ: ಇಲ್ಲಿನ ಚಾಂಷುಗರ್ ಶಾಲೆಯಲ್ಲಿ ಮಕ್ಕಳಿಗೆ ಆನ್ಲೈನ್ ತರಗತಿ ನಡೆಸಲು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕರೇ ಖುದ್ದಾಗಿ ಗ್ರಾಮಗಳಿಗೆ ತೆರಳಿ ಪಾಠ ಮಾಡಲು ಮುಂದಾಗಿದ್ದಾರೆ.
ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಆನ್ಲೈನ್ ತರಗತಿ ನಡೆಸಲು ಸರ್ಕಾರ ಸುತ್ತೋಲೆ ಹೊರಡಿಸಿದೆ. ಆದರೆ ಎಲ್ಲಾ ಮಕ್ಕಳಿಗೆ ಆನ್ಲೈನ್ ನಡೆಸಲು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಒಬ್ಬೊಬ್ಬ ಶಿಕ್ಷಕರಿಗೂ ವಿದ್ಯಾರ್ಥಿಗಳ ತಂಡ ರಚಿಸಿ, ಗ್ರಾಮಗಳಿಗೆ ತೆರಳಿ ತರಗತಿ ನಡೆಸುತ್ತಿದ್ದಾರೆ. ಗ್ರಾಮಗಳಲ್ಲಿ ವಿದ್ಯಾರ್ಥಿಗಳನ್ನು ಗುರುತಿಸಿ ಅಲ್ಲಿಯೇ ತರಗತಿ ನಡೆಸಲಾಗುತ್ತದೆ. ಮಕ್ಕಳಿಗೆ ಪಾಠ ಬೋಧನೆ, ಹೋಂ ವರ್ಕ್ ಸೇರಿ ಎಲ್ಲಾ ಶೈಕ್ಷಣಿಕ ಚಟುವಟಿಕೆ ನೀಡಲಾಗುತ್ತಿದೆ. ಪ್ರತಿ ವಿದ್ಯಾರ್ಥಿಗಳಿಗೂ ಮೊಬೈಲ್ನ ಪಿಡಿಎಫ್ ಮೂಲಕ ಹೋಂ ವರ್ಕ್ ನೀಡಿ ಮಾಡುವಂತೆ ಸೂಚಿಸಲಾಗುತ್ತಿದೆ. ಮಕ್ಕಳೂ ಹೋಂ ವರ್ಕ್ ಮಾಡಿ ತೋರಿಸುತ್ತಿದ್ದಾರೆ. ಜತೆಗೆ ಪೋಷಕರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಶಿಕ್ಷಕಿ ನಾಗರತ್ನ ಹೇಳಿದರು.
ಈಗಾಗಲೇ ಸರ್ಕಾರ ಆನ್ಲೈನ್ ತರಗತಿ ನಡೆಸುವಂತೆ ಸುತ್ತೋಲೆ ಹೊರಡಿಸಿದೆ. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು. ಇದೇ ವೇಳೆ ಮುಖ್ಯ ಶಿಕ್ಷಕ ಪ್ರಕಾಶ್, ಶಿಕ್ಷಕರಾದ ಸ್ವರೂಪ, ಸುರೇಶ್, ಗಾಯಿತ್ರಿ, ಶ್ರೀನಿವಾಸ್, ಮೀನಾಕ್ಷಿ, ಆಶಾ, ಸುಜಾತಾ, ರೋಹಿಣಿ, ಅನಿತಾ, ಶಶಿಕಲಾ, ಲಕ್ಷ್ಮೀ, ಮೇರಿ, ರಾಜಶೇಖರ್, ತೆರೇಜಾ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!