ವಿಶ್ವಮಾನವತೆ ಬಲಪಡಿಸುವ ಸಾಹಿತ್ಯ ರಚನೆಯಾಗಲಿ

ಮೌಡ್ಯದ ವಿರುದ್ಧ ಜಾಗೃತಿ ಮೂಡಿಸುವ ಸಾಹಿತ್ಯ ಅಗತ್ಯ | ಕವಿ-ಕಾವ್ಯ ಸಮ್ಮಿಲನ ಸಮಾರೋಪ

Team Udayavani, May 4, 2019, 11:46 AM IST

MANDYA 2 TDY

ಪಾಂಡವಪುರದಲ್ಲಿ ಜಿಲ್ಲಾ ಯುವ ಬರಹಗಾರರ ಬಳಗದದ ತಾಲೂಕು ಘಟಕ ಏರ್ಪಡಿಸಿದ್ದ ಪುತಿನ ಸ್ಮರಣಾರ್ಥ ರಾಜ್ಯ ಮಟ್ಟದ ಕವಿ-ಕಾವ್ಯ ಸಮ್ಮಿಲನದ ಸಮಾರೋಪ ಸಮಾರಂಭದಲ್ಲಿ ಕನ್ನಡ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪಾಂಡವಪುರ: ಯುವ ಜನರಲ್ಲಿ ಹೊಸ ಆದರ್ಶಗಳು ಮತ್ತು ಜೀವನ ಮೌಲ್ಯಗಳನ್ನು ಬೆಳೆಸಿ ವಿಶ್ವಮಾನವತೆಯ ಗುಣ ಬಲಪಡಿಸುವಂತಹ ಸಾಹಿತ್ಯ ರಚನೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹೆಚ್.ಕೆ. ರಾಮು ಸಲಹೆ ನೀಡಿದರು.

ಪಟ್ಟಣದ ವಿಜಯ ಬಿಇಡಿ. ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಯುವ ಬರಹಗಾರರ ಬಳಗದ ಪಾಂಡವಪುರ ತಾಲೂಕು ಘಟಕದ ವತಿಯಿಂದ ನಡೆದ ಪುತಿನ ಸ್ಮರಣಾರ್ಥ ರಾಜ್ಯ ಮಟ್ಟದ ಕವಿ-ಕಾವ್ಯ ಸಮ್ಮಿಲನದ ಸಮಾರೋಪ ಸಮಾರಂಭದಲ್ಲಿ ಕನ್ನಡ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಸಮಾಜದಲ್ಲಿನ ಮೌಡ್ಯತೆಯ ವಿರುದ್ಧ ಜನಜಾಗೃತಿ ಮೂಡಿಸುವ ಸಾಹಿತ್ಯದ ಅಗತ್ಯತೆ ಇದೆ ಎಂದು ಹೇಳಿದರು.

ಚಿಂತನಾಶೀಲ ಮನೋಭಾವ ಹೆಚ್ಚಿಸಿ: ಸಾಹಿತ್ಯಕ್ಕೆ ಸಮಾಜದ ಪರಿವರ್ತನೆ ಮಾಡುವ ಶಕ್ತಿ ಇದೆ. ಈ ಕಾಯಕವನ್ನು ಬಿಎಂಶ್ರೀ, ಕುವೆಂಪು, ಪುತಿನರಂತಹ ಕವಿಗಳು ಸಾಹಿತ್ಯದ ಮೂಲಕ ಸಮರ್ಥವಾಗಿ ಮಾಡಿದರು. ಅದಕ್ಕಾಗಿ ಅವರು ನಿತ್ಯ ಸ್ಮರಣೀಯರು ಎಂದ ಅವರು, ಜನರಲ್ಲಿ ಚಿಂತನಾಶೀಲತೆಯ ಮನೋಭಾವ ಬೆಳೆಸುವ ಬರಹಗಳು ಹೆಚ್ಚು ಪ್ರಕಟಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಇರುವ ಎಲೆ ಮರೆಯ ಪ್ರತಿಭೆಗಳನ್ನು ಗುರುತಿಸುವ ಕೆಲಸ ವ್ಯಾಪಕವಾಗಿ ನಡೆಯಬೇಕು. ಅವರಿಗೆ ಸೂಕ್ತ ವೇದಿಕೆ ಮತ್ತು ಪ್ರೋತ್ಸಾಹವನ್ನು ಸಂಘಟನೆಗಳು ನೀಡಬೇಕು. ಈ ದಿಕ್ಕಿನಲ್ಲಿ ಕಳೆದ ಎರಡು ದಶಕಗಳಿಂದ ಜಿಲ್ಲಾ ಯುವ ಬರಹಗಾರರ ಬಳಗವು ನಾಡಿನ ವಿವಿಧೆಡೆ ಇರುವ ಯುವ ಕವಿಗಳನ್ನು ಬೆಳೆಸುವ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ ಮಡುತ್ತಿರುವುದು ಶ್ಲಾಘನೀಯ ಎಂದರು. ಡಾ. ಎ.ಆರ್‌. ಮದನಕುಮಾರ್‌ ಮಾತನಾಡಿ, ಸ್ವಾರ್ಥಪರ ನಿಲುವುಗಳಿರುವ ಜನರಿಂದ ತುಂಬಿರುವ ಸಮಾಜದಲ್ಲಿ ಹಲವು ಮಂದಿ ವಿವಿಧ ಕ್ಷೇತ್ರದಲ್ಲಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ದುಡಿಯುತ್ತಿದ್ದಾರೆ. ಇಂತಹವರನ್ನು ಗುರುತಿಸಿ ಗೌರವಿಸಿದಾಗ ಅವರು ಮತ್ತಷ್ಟು ಸಮಾಜಮುಖೀಯಾಗಿ ಕೆಲಸ ಮಾಡಬಲ್ಲರು. ಜೊತೆಗೆ ಸಾಮಾಜಿಕ ಆರೋಗ್ಯ ಮತ್ತು ಸಾಮರಸ್ಯ ಕಾಯಬಲ್ಲರು ಎಂದರು.

ಪ್ರಶಸ್ತಿ ಪ್ರದಾನ: ವಿವಿಧ ಕ್ಷೇತ್ರದ ಸಾಧಕರಾದ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯ ವೆಂಕಟೇಗೌಡ ಸೇವಾ ಸಮಿತಿಯ ಅಧ್ಯಕ್ಷ ಡಾ. ಕೆ.ವೈ. ಶ್ರೀನಿವಾಸ್‌, ಬೆಂಗಳೂರಿನ ವಿಶ್ವಮಾನವ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಎಂ. ಪುಟ್ಟರಾಜು, ಬೀದರಿನ ಸಾಹಿತಿ ಹಾಗೂ ಸಾಂಸ್ಕೃತಿಕ ಸಂಘಟಕ ಸಂಜೀವಕುಮಾರ್‌ ಅತಿವಾಳೆ, ಮದ್ದೂರು ತಾಲ್ಲೂಕಿನ ಚಂದೂಪುರದ ಡಿ.ಕೆ.ಗೌಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಹೆಚ್. ಪುಟ್ಟಸ್ವಾಮಿ, ರಂಗಭೂಮಿ ಕಲಾವಿದ ಹಾಗೂ ಗಾಯಕ ಬೇವಿನಕುಪ್ಪೆ ನಾಗಲಿಂಗೇಗೌಡ, ನಾಗಮಂಗಲದ ಹಾರ್ಟ್‌ ಟ್ರಸ್ಟ್‌ ನಿರ್ದೇಶಕ ಡಿ.ಆರ್‌. ವಸಂತ್‌ ಕುಮಾರ್‌ ಅವರಿಗೆ ‘ಕನ್ನಡ ಸೇವಾರತ್ನ’ ಪ್ರಶಸ್ತಿ ಪ್ರದಾನ ಮಡಲಾಯಿತು.

ಅಭಿನಂದನಾ ನುಡಿ: ಜಿಲ್ಲಾ ಯುವ ಬರಹಗಾರರ ಬಳಗದ ಅಧ್ಯಕ್ಷ ಟಿ. ಸತೀಶ್‌ ಜವರೇಗೌಡ ಪ್ರಶಸ್ತಿ ಪುರಸ್ಕೃತರನ್ನು ಕುರಿತು ಅಭಿನಂದನಾ ನುಡಿಗಳನ್ನಾಡಿದರು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾಯರ್ದರ್ಶಿ ಕೆ. ಯುವರಾಜ್‌ ಕವಿಗಳಿಗೆ ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ವಿತರಿಸಿದರು. ತಾಲೂಕು ಯುವ ಬರಹಗಾರರ ಬಳಗದ ಅಧ್ಯಕ್ಷ ರಂಗನಾಥ್‌ ಕ್ಯಾತನಹಳ್ಳಿ, ಪ್ರಧಾನ ಕಾರ್ಯದರ್ಶಿ ಸುಜಾತ ಕೃಷ್ಣ, ಸಂಚಾಲಕಿ ವಿ. ತ್ರಿವೇಣಿ ಉಪಸ್ಥಿರಿದ್ದರು.

ಇದಕ್ಕೂ ಮುನ್ನ ನಡೆದ ಕವಿ-ಕಾವ್ಯ ಸಮ್ಮಿಲನದ ಮೊದಲನೆಯ ಕವಿಗೋಷ್ಠಿಯು ಕೆ.ಆರ್‌. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ದ. ಸತೀಶ್‌ ಚಂದ್ರ ಅವರ ಅಧ್ಯಕ್ಷತೆಯಲ್ಲಿ ಹಾಗೂ ಎರಡನೆಯ ಕವಿಗೋಷ್ಠಿಯು ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎ.ಆರ್‌. ಮದನಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದವು. ಈ ಎರಡು ಕವಿಗೋಷ್ಠಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸುಮಾರು 74 ಮಂದಿ ಕವಿ-ಕವಯಿತ್ರಿಯರು ತಮ್ಮ ಸ್ವರಚಿತ ಕವನ ವಾಚನ ಮಾಡಿದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.