ಸುಮಲತಾ ಸ್ವಾಭಿಮಾನದ ಅರ್ಥ ತಿಳಿಯಲಿ: ನಿಖೀಲ್ಕುಮಾರ್ ಟೀಕೆ
ಇವರನ್ನೆಲ್ಲಾ ಟಾರ್ಗೆಟ್ ಮಾಡಲು ನಮಗೆ ಪುರಸೊತ್ತಿಲ್ಲ
Team Udayavani, Apr 25, 2019, 1:57 PM IST
ಮಂಡ್ಯ: ಸ್ವಾಭಿಮಾನಕ್ಕೆ ಮತ ಹಾಕಿ ಎಂದು ಹೇಳುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸ್ವಾಭಿಮಾನದ ಅರ್ಥ ತಿಳಿದು ಮಾತನಾಡಲಿ ಎಂದು ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಅಭ್ಯರ್ಥಿ ಕೆ.ನಿಖೀಲ್ ಸವಾಲು ಹಾಕಿದರು.
ನಗರದ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ನಿವಾಸದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ನಾನು ನಾಮಪತ್ರ ಸಲ್ಲಿಸುವ ದಿನ ಒಂದೂವರೆ ಲಕ್ಷದಿಂದ ಎರಡು ಲಕ್ಷ ಜನರು ಸೇರಿದ್ದರು. ಆ ಜನರನ್ನು ನೋಡಿ ಒಂದು ಸಾವಿರ , ಎರಡು ಸಾವಿರ ರೂ. ಹಣ ಕೊಟ್ಟು ಜನರನ್ನು ಕರೆತಂದಿದ್ದಾರೆ ಎಂದು ಮಾತನಾಡಿದರು. ಅಂದರೆ, ಜನರನ್ನೇ ಇವರು ಹಣಕ್ಕಾಗಿ ಮಾರಾಟ ಮಾಡಿ ಕೊಳ್ಳುವರು ಎಂದು ಹೇಳುತ್ತಾ ಮತ್ತೆ ಅದೇ ಜನರನ್ನು ಸ್ವಾಭಿಮಾನಕ್ಕೆ ಮತ ಹಾಕಿ ಎಂದು ಹೇಳುವುದರಲ್ಲಿ ಯಾವ ಅರ್ಥವಿದೆ. ಜನರ ಸ್ವಾಭಿಮಾನ ಅವರೇ ಕಳೆದಂತಲ್ಲವೇ ಎಂದು ಪ್ರಶ್ನಿಸಿದರು.
ಯಾವ ರೀತಿ ಟಾರ್ಗೆಟ್: ರಾಜಕಾರಣದಲ್ಲಿ ಜೆಡಿಎಸ್ ಎಂದಿಗೂ ದ್ವೇಷದ ರಾಜಕಾರಣ ಮಾಡಿಲ್ಲ. ಅದರ ಅವಶ್ಯಕತೆಯೂ ನಮಗಿಲ್ಲ. ನಾವು ಯಾರನ್ನು, ಯಾವ ರೀತಿ ಟಾರ್ಗೆಟ್ ಮಾಡಿದ್ದೇವೆ ಅನ್ನೋದನ್ನ ಬಿಡಿಸಿ ಹೇಳಲಿ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅವರಿಗೆ ಮಾಡಲು ಬೇಕಾದಷ್ಟು ಕೆಲಸವಿದೆ. ಅದರ ಬಗ್ಗೆ ಯೋಚನೆ ಮಾಡುವುದಕ್ಕೂ ಅವರಿಗೆ ಪುರುಸೊತ್ತಿಲ್ಲ. ಸುಮ್ಮನೆ ಟಾರ್ಗೆಟ್ ಮಾಡ್ತಿದ್ದೇವೆ ಅಂತ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ. ಅಂತಹ ಮಾತುಗಳಿಗೆ ಪ್ರತಿಕ್ರಿಯೆ ನೀಡುವ ಅಗತ್ಯವೂ ಇಲ್ಲ ಎಂದು ಹೇಳಿದರು.
ಜನರು ಕೈಬಿಡಲ್ಲ: ಫಲಿತಾಂಶದ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸವಿದೆ. ಏಕೆಂದರೆ, ನಾನು ತಳಮಟ್ಟದಿಂದ ಜನಾಭಿಪ್ರಾಯ ಸಂಗ್ರಹಿಸಿರುವಂತೆ ಜಿಲ್ಲೆಯ ಜನರು ಅಷ್ಟು ಸುಲಭವಾಗಿ ದೇವೇಗೌಡರ ಕುಟುಂಬವನ್ನು ಕೈಬಿಡುವು ದಿಲ್ಲ. ನನಗೂ ಒಂದು ಅವಕಾಶ ಮಾಡಿಕೊಡುತ್ತಾರೆ ಎಂಬ ಅಚಲ ನಂಬಿಕೆ ಇದೆ. ಆದರೂ ಮಾಧ್ಯಮಗಳು ಒಂದು ಚೆಕ್ ಇಟ್ಟಿದ್ದೀರಿ. ಅದು ಮೇ 23ರಂದು ಬಹಿರಂಗ ವಾಗಲಿದೆ ಎಂದು ಹೇಳಿದರು.
ಫಲಿತಾಂಶ ಬರಲಿ: ಗ್ರಾಮೀಣಾಭಿವೃದ್ಧಿ ನನ್ನ ತಂದೆಯವರ ಕನಸು. ಅದೇ ಕಾರಣಕ್ಕೆ ಜಿಲ್ಲೆಗೆ ಸಿಎಂ ಕುಮಾರಸ್ವಾಮಿ ಈಗಾಗಲೇ 8500 ಕೋಟಿ ರೂ. ಹಣ ನೀಡಿದ್ದಾರೆ. ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರ ಜೊತೆ ಸೇರಿಕೊಂಡು ಅದನ್ನು ಅನುಷ್ಠಾನ ಗೊಳಿಸುವುದು. ಜನರ ಸಮಸ್ಯೆಗಳಿಗೆ ಪರಿಹಾರ ದೊರಕಿಸುವುದಕ್ಕೆ ಹೆಚ್ಚು ಆದ್ಯತೆ ನೀಡಬೇಕೆಂದುಕೊಂಡಿದ್ದೇನೆ. ಮೊದಲು ಫಲಿತಾಂಶ ಹೊರಬರಲಿ. ಆನಂತರ ನನ್ನ ಕನಸುಗಳನ್ನೆಲ್ಲಾ ನಿಮ್ಮೆದುರು ಬಿಚ್ಚುಡುತ್ತೇನೆ ಎಂದರು.
ಸವಾಲು ಎದುರಿಸಿದ ಖುಷಿ: ಈ ಚುನಾವಣೆಯನ್ನು ದೊಡ್ಡ ಸವಾಲಾಗಿ ಎದುರಿಸಿರುವುದಕ್ಕೆ ಖುಷಿಯಾಗುತ್ತಿದೆ. ಏಕೆಂದರೆ, ಸುಲಭವಾಗಿ ನಾನು ಗೆದ್ದು ಬಿಟ್ಟಿದ್ದರೆ ನನಗೆ ಜನರಿಂದ ಇಷ್ಟೊಂದು ಗೌರವ-ಮರ್ಯಾದೆ ಸಿಗುತ್ತಿರಲಿಲ್ಲ. ನಾನೂ ಸೇರಿದಂತೆ ಎಲ್ಲಾ ಪಕ್ಷದ ಮುಖಂಡರು, ಕಾರ್ಯಕರ್ತರು ಕಷ್ಟ ಪಟ್ಟಿದ್ದಾರೆ. ಇದೊಂದು ಅದ್ಭುತ ಅನುಭವ. ಗ್ರಾಮ ಗ್ರಾಮಗಳಿಗೆ ಹೋಗಿ ಜನರ ಅಭಿಪ್ರಾಯ ತಿಳಿದು ಬಂದಿರುವುದು ವಿಶಿಷ್ಟ ಅನುಭವ ನೀಡಿದೆ ಎಂದು ನಿಖೀಲ್ ಚುನಾವಣಾ ಪ್ರಚಾರದಲ್ಲಿ ದೊರೆತ ಅಭಿಮಾನ, ಅನುಭವಗಳನ್ನು ಸ್ಮರಿಸಿಕೊಂಡರು.
ನಾನು ಮಂಡ್ಯದಲ್ಲಿ ಜಮೀನು ಖರೀದಿಸಿ ತೋಟದ ಮನೆ ಮಾಡಬೇ ಕೆಂದಿರುವುದು ನಿಜ. ಆದರೆ, ಅದು ಒಂದೆರಡು ದಿನದಲ್ಲಿ ಆಗುವ ಕೆಲಸವಲ್ಲ. ನಾಲ್ಕಾರು ತಿಂಗಳು ಬೇಕು. ನಾನು ಎಲ್ಲಿಯೂ ಹೋಗುವುದಿಲ್ಲ. ಇಲ್ಲೇ ಇರುತ್ತೇನೆ. ನಿಮಗೇನಾದರೂ ನನ್ನ ಬಗ್ಗೆ ಸಂಶಯವಿದೆಯಾ ಎಂದು ಮಾಧ್ಯಮ ದವರನ್ನು ಪ್ರಶ್ನಿಸಿದರು.
ಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ