ವೈದ್ಯರ ಕೊರತೆ ನೀಗಿಸಲು ಪತ್ರ: ತಮ್ಮಣ್ಣ
Team Udayavani, Jun 11, 2020, 4:41 AM IST
ಮದ್ದೂರು: ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ನೀಗಿಸಲು ಈಗಾಗಲೇ ಆರೋಗ್ಯ ಸಚಿವ ಶ್ರೀರಾಮುಲು ಅವರೊಂದಿಗೆ ಪತ್ರ ವ್ಯವಹಾರ ನಡೆಸಿರುವು ದಾಗಿ ಶಾಸಕ ಡಿ.ಸಿ.ತಮ್ಮಣ್ಣ ತಿಳಿಸಿದರು. ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಗೊಂಡ ಆಧುನಿಕ ತಂತ್ರಜ್ಞಾನದ ಎಕ್ಸರೇ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೋಟ್ಯಂತರ ರೂ.ವೆಚ್ಚದಲ್ಲಿ ತಾಲೂಕು ಆಸ್ಪತ್ರೆಯನ್ನು ನೂತನವಾಗಿ ನಿರ್ಮಾಣ ಮಾಡಿದ್ದು ಹಲವು ವರ್ಷ ಗಳಿಂದಲೂ ವೈದ್ಯರ ಕೊರತೆಯಿದೆ. ಇದನ್ನು ಸರಿದೂಗಿಸಲು ಈಗಾಗಲೇ ಆರೋಗ್ಯ ಸಚಿವ ಶ್ರೀರಾಮುಲು, ಜಿಲ್ಲಾ ಡಿಎಚ್ಒ ಅವರಿಗೆ ಪತ್ರ ಬರೆದಿರುವು ದಾಗಿ ತಿಳಿಸಿದರು. ವೈದ್ಯರ ಕೊರತೆ ನೀಗಿಸಲು ತಾಲೂಕು ಪ್ರಾಥಮಿಕ ಕೇಂದ್ರಗಳ ವೈದ್ಯರನ್ನು ಎರವಲು ಪಡೆಯಲು ಸೂಚನೆ ನೀಡಿದ್ದು ಬೇರೆಡೆ ಕರ್ತವ್ಯ ನಿರ್ವಹಿಸುವ ವೈದ್ಯ ರನ್ನು ತಾಲೂಕು ಆಸ್ಪತ್ರೆಗೆ ನಿಯೋಜನೆ ಮಾಡಲು ಸೂಚನೆ ನೀಡಿರುವುದಾಗಿ ತಿಳಿಸಿದರು.
ಹಾಗೆಯೇ ವೈದ್ಯರಿಗೆ 1.10 ಲಕ್ಷರೂ. ವೇತನ ನೀಡಿದರೂ ವೈದ್ಯರ ಕೊರತೆ ಕಂಡು ಬಂದಿರುವುದಾಗಿ ಹೇಳಿ ದರು. ಈಗಾಗಲೇ ಹಲವು ವೈದ್ಯಕೀಯ ಸೌಲಭ್ಯ ಕಲ್ಪಿಸಿದ್ದು 4 ಕೋಟಿ ರೂ. ವೆಚ್ಚ ದಲ್ಲಿ ಆಸ್ಪತ್ರೆ ನಿರ್ಮಾಣ ಮಾಡುವ ಜತೆಗೆ ಕುಡಿವ ನೀರು, ಶೌಚಾಲಯ, ವಿದ್ಯುತ್, 100 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಿದ್ದು ಬಡ ವರು, ಕೂಲಿ ಕಾರ್ಮಿಕರು, ಹಿಂದು ಳಿದ ವರ್ಗದವರು ಇದರ ಸದುಪಯೋಗಕ್ಕೆಮುಂದಾಗಬೇಕೆಂದರು. ತಾಲೂಕು ಆರೋಗ್ಯಾಧಿಕಾರಿ ಡಾ.ಆಶಾಲತಾ, ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಪ್ರೇಮ ಲತಾಗೂಗಿ, ವೈದ್ಯರಾದ ಮಧು, ಶಿವಕುಮಾರ್, ಚಿಕ್ಕಬೋರೇಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ