ಬದುಕಿಗೆ ಮೌಲ್ಯಯುತ ಶಿಕ್ಷಣ ಅವಶ್ಯ


Team Udayavani, Sep 27, 2020, 3:14 PM IST

Mandya-tdy-1

ಮಂಡ್ಯ: ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದ ಶಿಕ್ಷಣ ಬದುಕು ಕಟ್ಟಿಕೊಳ್ಳುವುದನ್ನು ಕಲಿಸುತ್ತದೆ ಎಂದು ಮಾಜಿ ಸಚಿವ ಮತ್ತು ಮಂಡ್ಯ ಜಿಲ್ಲಾ ಬಿಜೆಪಿ ಸಂಘಟನೆಯ ಉಸ್ತುವಾರಿ ಎ.ಮಂಜು ಹೇಳಿದರು.

ತಾಲೂಕಿನ ಸಾತನೂರು ಗ್ರಾಮದ ಅಚೀವರ್ ಇಂಟರ್‌ ನ್ಯಾಷನಲ್‌ ಪಬ್ಲಿಕ್‌ ಸ್ಕೂಲ್‌ನಲ್ಲಿ ರಾಜ್ಯ ಶೈಕ್ಷಣಿಕ ದಿಕ್ಸೂಚಿಮತ್ತು ಸುಧಾರಣಾ ಸಮಿತಿ, ಅನನ್ಯ ಹಾರ್ಟ್‌ ಸಂಸ್ಥೆಯು ಶನಿವಾರ ಆಯೋಜಿಸಿದ್ದ ಭಾರತೀಯ ಶಿಕ್ಷಣ-ಅನುಷ್ಠಾನದಲ್ಲಿ ಮೋದಿ ಸರ್ಕಾರದ ಹೆಜ್ಜೆಗಳು ಮತ್ತು ಸವಾಲುಗಳು ಕುರಿತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ನೀತಿ ಜಾರಿ: ಭಾರತದ ಶಿಕ್ಷಣ ಪದ್ಧತಿ, ಸಂಸ್ಕೃತಿ ಮತ್ತು ಸಂಸ್ಕಾರವನ್ನು ವಿಶ್ವವೇ ಅನುಸರಿಸುತ್ತಿದೆ. ಹೀಗಾಗಿ ಶಿಕ್ಷಣದ ವಿಚಾರದಲ್ಲಿ ಭಾರತ ನಿಜಕ್ಕೂ ವಿಶ್ವಗುರುವಾಗಿದೆ. ಸ್ವಾತಂತ್ರ್ಯ ನಂತರ ಶಿಕ್ಷಣ ನೀತಿಗಳನ್ನು ಜಾರಿಗೊಳಿಸಲಾಗುತ್ತಿದೆ. ಅದರಲ್ಲೂ ಉನ್ನತ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಹಿಂದೆ ಕೆಲವರಿಗೆ ಮಾತ್ರವೇ ಉನ್ನತ ಶಿಕ್ಷಣ ಸಿಗುತ್ತಿತ್ತು. ಒಂದು ವರ್ಗಕ್ಕೆ ಮಾತ್ರ ಶಿಕ್ಷಣ ಸಿಗುತ್ತಿತ್ತು. ಆದರೀಗ ಹಲವು ಸರ್ಕಾರ ಗಳ ಚಿಂತನೆಗಳ ಫ‌ಲವಾಗಿ ಶಿಕ್ಷಣ ನೀತಿಗಳು ಬದಲಾಗಿವೆ. ಇದರಿಂದ ಎಲ್ಲ ವರ್ಗದವರಿಗೆ ಶಿಕ್ಷಣ ಸಿಗುತ್ತಿದೆ. ಆದರೆ, ಭಾರತದಲ್ಲಿ ಓದಿದವರು ಭಾರತಕ್ಕಿಂತ ಬೇರೆ ದೇಶಗಳಿಗೆ ಸೇವೆ ನೀಡಿದ್ದೇ ಹೆಚ್ಚು. ದೇಶದ ವಿಜ್ಞಾನಿಗಳು, ಎಂಜಿನಿಯರ್‌ ಗಳಿಂದ ವಿಶ್ವದ ವಿವಿಧ ರಾಷ್ಟ್ರಗಳು ಅಭಿವೃದ್ಧಿ ಸಾಧಿಸಿವೆ. ಇದು ಹೆಮ್ಮೆಯ ಸಂಗತಿ ಎಂದರು.

ಶೈಕ್ಷಣಿಕ ಸುಧಾರಣೆಗೆ ನಾಂದಿ: ಇದೀಗ ಪ್ರಧಾನಿ ಮೋದಿ ಅವರು ಮತ್ತೆ ಶೈಕ್ಷಣಿಕ ‌ ಸುಧಾರಣೆಗೆ ನಾಂದಿ ಹಾಡಿದ್ದರೆ. ಯುವ ಜನರನ್ನು ಭಾರತದ ‌ ಸತ್ಪ್ರಜೆಯಾಗಿ ರೂಪಿಸುವ ಶಕ್ತಿ ಶಿಕ್ಷಣಕ್ಕಿದೆ. ಹೊಸ ‌ ಶಿಕ್ಷಣ ನೀತಿಯಿಂದ ‌ ಇದು ಇನ್ನಷ್ಟು ಹೆಚ್ಚಾಗಿದೆ. ಅಂಬೇಡ್ಕರ್‌ ಅವರು ಶಿಕ್ಷಣಕ್ಕೆ ಒತ್ತು ನೀಡಿದ್ದಾರೆ. ಆದರೆ, ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವುದು ಸರಿಯಲ್ಲ. ಎಲ್ಲ ವರ್ಗದ ಮಕ್ಕಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರೆಯಲು ಅಂಬೇಡ್ಕರ್‌ ಕಾರ‌ಣ ಎಂದು ತಿಳಿಸಿದರು.

ಶಿಕ್ಷಣ, ಸಂಸ್ಕೃತಿ ಭಾರತದ ಶಕ್ತಿ: ವಿಚಾರ ಮಂಡಿಸಿದ ಪ್ರಾಧ್ಯಾಪಕ ಹಾಗೂ ಚಿಂತಕ ಡಾ.ಲಕ್ಷ್ಮೀಶ್‌, ಹಿಂದಿನ ಹಾಗೂ ಇಂದಿನ ಮತ್ತು ಮುಂದಿನ ಶೈಕ್ಷಣಿಕ ವ್ಯವಸ್ಥೆಯನ್ನು ಸ್ಥೂಲವಾಗಿ ಪರಿಚಯಿಸಿದರು. ಜ್ಞಾನವೆಂದರೆ ಹಂಚಿಕೊಳ್ಳುವುದು. ಅಂಧಕಾರವನ್ನು ನಿವಾರಿಸುವವನೇ ಗುರು. ಅಂತಹ ಶಕ್ತಿ ಶಾಲಿ ಶಿಕ್ಷಕರನ್ನು ಹೊಂದಿರುವ ಭಾರತವನ್ನು ಒಡೆಯಲು ಸಾಧ್ಯವಿಲ್ಲ ಎಂಬ ಸಂಗತಿಯನ್ನು ಮೆಕಾಲೆ ಅವರು ಬ್ರಿಟಿಷ್‌ ಸರ್ಕಾರಕ್ಕೆ ತಿಳಿಸಿದ್ದಾರೆ. ಭಾರತದ ಶಿಕ್ಷಣ ವ್ಯವಸ್ಥೆ, ಇಲ್ಲಿನ ಸಂಸ್ಕೃತಿ, ಆಚಾರ -ವಿಚಾರಗಳಿಂದಲೇ ಭಾರತ ಶಕ್ತಿಯಾಗಿದೆ ಎಂಬ ಸಂಗತಿಯನ್ನು ಅವರು ಪ್ರತಿಪಾದಿಸಿದ್ದರು ಎಂದು ಸ್ಮರಿಸಿದರು.

ಸೃಜನಶೀಲತೆ ಬಹಳ ಮುಖ್ಯ: ಮನುಷ್ಯನಿಗೆ ಸೃಜನಶೀಲತೆ ಬಹಳ ಮುಖ್ಯ. ಇಂಥ ‌ ಸೃಜನಶೀಲತೆ, ಸಂಸ್ಕೃತಿ, ಸಂಸ್ಕಾರವನ್ನು ಶತಶತಮಾನಗಳಿಂದ ಕಲಿಸುತ್ತಾ ಬಂದಿದೆ. ಆದರೀಗ ಮಕ್ಕಳು ‌ಮಣ್ಣಿನೊಂದಿಗೆ ಆಡುತ್ತಿದ್ದ ಆಟಪಾಠಗ ‌ಳನ್ನು ಬಿಟ್ಟು ಮೊಬೈಲ್‌, ಕಂಪ್ಯೂಟರ್‌ ಗೇಮ್‌ ಗಳಿಗೆ ಮೊರೆ ಹೋಗಿದ್ದಾರೆ. ಇಂಥ  ಪ‌ರಿಸ್ಥಿತಿಯಲ್ಲಿ ಸಂಸ್ಕೃತಿ, ಸಂಸ್ಕಾರವನ್ನು ಅರಳಿಸುವ ಕೆಲಸವನ್ನು ಹೊಸ ‌ ಶಿಕ್ಷಣ ನೀತಿ ಮಾಡಲಿದೆ. ಹಿಂದಿನ ಗುರುಕುಲ ಪದ್ಧತಿಯ ಶಿಕ್ಷಣ ಮೌಲ್ಯಗಳನ್ನು ಎತ್ತಿಹಿಡಿಯುವುದು ಹೊಸ ‌ ಶಿಕ್ಷಣ ನೀತಿಯಆಶಯವಾಗಿದೆ ಎಂದು ತಿಳಿಸಿದರು.

ರಾಜ್ಯ ಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರ‌ಣಾ ಸಮಿತಿ ರಾಜ್ಯಾಧ್ಯಕ್ಷ ಡಾ. ಸುಧಾಕರ ಹೊಸಳ್ಳಿ, ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಅಪರ ಆಯುಕ್ತ ಡಾ.ಸಿದ್ದರಾಮಯ್ಯ, ಅನನ್ಯ ಹಾರ್ಟ್‌ ಸಂಸ್ಥೆಯ ಅದ್ಯಕ್ಷೆ ಬಿ.ಎಸ್‌.ಅನುಪಮ ಹಾಜರಿದ್ದರು.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.