ಸಾಲಮನ್ನಾ ಶಾಶ್ವತ ಪರಿಹಾರವಲ್ಲ: ಕುಮಾರಸ್ವಾಮಿ

ಖಾಸಗಿ ಸಾಲಗಾರರ ಹಾವಳಿ ಕಡಿವಾಣಕ್ಕೆ ಕ್ರಮ • ಕೇರಳ ಮಾದರಿ ಕಾನೂನು ಜಾರಿಗೆ ಚಿಂತನೆ

Team Udayavani, Jun 19, 2019, 12:20 PM IST

mandya-tdy-1..

ರೈತ ಸುರೇಶ್‌ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಿಸಿದ ಸಿಎಂ ಕುಮಾರಸ್ವಾಮಿ.

ಮಂಡ್ಯ/ಕೆ.ಆರ್‌.ಪೇಟೆ: ರೈತರ ಸಮಸ್ಯೆಗೆ ಸಾಲ ಮನ್ನಾ ಶಾಶ್ವತ ಪರಿಹಾರವಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ಸಂತೆಬಾಚಹಳ್ಳಿ ಹೋಬಳಿ ಕೆರೆಗಳ ಭರ್ತಿ ಮಾಡುವಂತೆ ಸೆಲ್ಫಿ ವಿಡಿಯೋ ಮೂಲಕ ಮನವಿ ಮಾಡಿದ್ದಲ್ಲದೆ, ತನ್ನ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಸಿಎಂಗೆ ತಿಳಿಸಿ ಆತ್ಮಹತ್ಯೆಗೆ ಶರಣಾಗಿದ್ದ ಕೆ.ಆರ್‌.ಪೇಟೆ ತಾಲೂಕಿನ ಅಘಲಯ ಗ್ರಾಮದ ರೈತ ಸುರೇಶ್‌ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದ್ದ ಸಿಎಂ ಕುಮಾರಸ್ವಾಮಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ರೈತರು ಬ್ಯಾಂಕ್‌ ಸಾಲಗಳಿಗಿಂತ ಹೆಚ್ಚಾಗಿ ಖಾಸಗಿ ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಖಾಸಗಿ ಬಡ್ಡಿ ವ್ಯವಹಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕೇರಳ ಮಾದರಿ ಕಾನೂನನ್ನು ಜಾರಿಗೆ ತರಲು ಚಿಂತನೆ ನಡೆಸಿದ್ದೇನೆ. ಅದರ ಬಗ್ಗೆ ಈಗಾಗಲೇ ಮಾಹಿತಿ ತರಿಸಿಕೊಂಡಿದ್ದು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿ ಮಸೂದೆ ಜಾರಿಗೊಳಿಸುವ ಭರವಸೆ ನೀಡಿದರು.

ಬ್ಯಾಂಕ್‌ ನೋಟಿಸ್‌ಗೆ ಹೆದರಬೇಡಿ: ರೈತರ ಸಮಸ್ಯೆಗೆಲ್ಲಾ ಆತ್ಮಹತ್ಯೆಯೇ ಅಂತಿಮ ಪರಿಹಾರವಲ್ಲ. ಆತ್ಮಹತ್ಯೆಗೆ ಮುನ್ನ ರೈತರು ಕುಟುಂಬದ ಬಗ್ಗೆ ಆಲೋಚಿಸಬೇಕು. ನಾನು ರೈತರ ಕಷ್ಟಗಳನ್ನು ಹತ್ತಿರದಿಂದ ಬಲ್ಲವನಾಗಿದ್ದೇನೆ. ನಾಡಿನ ರೈತರ ಹರಕೆಯ ಫಲವಾಗಿ ಮುಖ್ಯಮಂತ್ರಿಯಾಗಿದ್ದೇನೆ. ರೈತರ ಸಾಲವನ್ನು ಮನ್ನಾ ಮಾಡುವ ಭರವಸೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಆದ್ದರಿಂದ ಬ್ಯಾಂಕುಗಳ ನೋಟಿಸ್‌ಗಾಗಲಿ ಖಾಸಗಿ ಲೇವಿದಾರರ ಸಾಲಕ್ಕಾಗಲಿ ಹೆದರಿ ಆತ್ಮಹತ್ಯೆ ದಾರಿ ತುಳಿಯಬೇಡಿ ಎಂದು ಮನವಿ ಮಾಡಿದರು.

ರೈತರ ಕಣ್ಣೀರು ಒರೆಸಲು ಬದ್ಧ: ರಾಜ್ಯದ ರೈತರ ಕಣ್ಣೀರೊರೆಸಲು ನಾನು ಬದ್ದನಿದ್ದೇನೆ. ಅಷ್ಟೇ ಅಲ್ಲ ರೈತರ ಸ್ವಾಭಿಮಾನಿ ಬದುಕಿಗೆ ನನ್ನ ಅಧಿಕಾರಾ ವಧಿಯಲ್ಲಿ ಕುಂದಾಗದಂತೆ ನೋಡಿ ಕೊಳ್ಳುತ್ತೇನೆ. ಈ ನಿಟ್ಟಿನಲ್ಲಿ ನಾನು ನಿಲ್ಲಿಸಿದ್ದ ಗ್ರಾಮ ವಾಸ್ತವ್ಯವನ್ನು ಈಗ ಮತ್ತೆ ಆರಂಭಿಸಿದ್ದೇನೆ. ಆದರೆ ಬಿಜೆಪಿಯವರು ಇದನ್ನು ರಾಜಕೀಯ ಕಾರಣಕ್ಕಾಗಿ ವಿರೋಧಿಸುತ್ತಿದ್ದಾರೆ. ನಾನು ಸ್ಟಾರ್‌ ಹೋಟೆಲ್ನಲ್ಲಿಯೂ ಮಲಗಿದ್ದೇನೆ. ಸಾಮಾನ್ಯ ಬಡವರ ಮನೆಯಲ್ಲಿಯೂ ಮಲಗಿದ್ದೇನೆ. ಬಿಜೆಪಿಯವ ರಿಂದ ರೈತರ ಬಗ್ಗೆ ಪಾಠ ಹೇಳಿಸಿಕೊಳ್ಳುವ ಪರಿಸ್ಥಿತಿ ಈ ನಿಮ್ಮ ಕುಮಾರಸ್ವಾಮಿಗೆ ಬಂದಿಲ್ಲ ಎಂದರು.

ಮಾಧ್ಯಮಗಳ ವಿರುದ್ಧ ಟೀಕೆ: ಗ್ರಾಮ ವಾಸ್ತವ್ಯದ ಬಗ್ಗೆ ಮಾಧ್ಯಮಗಳಲ್ಲಿ ತರಹೇವಾರಿ ಸುದ್ದಿಗಳು ಬರುತ್ತಿವೆ. ಈಗ ಕರ್ನಾಟಕದ ಕನಿಷ್ಠ ಮೂಲ ಸೌಕರ್ಯಗಳ ಕೊರತೆಯಿರುವ ಗ್ರಾಮಗಳನ್ನು ಹುಡುಕುತ್ತಿದ್ದಾರೆ. ಮಾಧ್ಯಮಗಳು ಈ ಹಿಂದೆ ಅಧಿಕಾರದಲ್ಲಿದ್ದ ಮುಖ್ಯಮಂತ್ರಿಗಳನ್ನು ಏಕೆ ಎಚ್ಚರಿಸಲಿಲ್ಲ? ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಆದರೂ ಮಾಧ್ಯಮಗಳ ವರದಿಗಳನ್ನು ಸಕಾರಾತ್ಮಕ ವಾಗಿ ಸ್ವೀಕರಿಸಿ ಸಮಸ್ಯೆಗಳ ಪರಿಹಾರಕ್ಕೆ ಸ್ಪಂದಿಸು ತ್ತೇನೆ ಎಂದು ಸಿಎಂ ಭರವಸೆ ನೀಡಿದರು.

ನಾಟಕ ಆಡ್ತಿರೋರು ಯಾರು? ಗ್ರಾಮ ವಾಸ್ತವ್ಯ ಮಾಡುವುದನ್ನು ಬಿಟ್ಟು ಬರ ವೀಕ್ಷಣೆ ಮಾಡಿ ಎಂದು ಹೇಳುವ ಬಿಜೆಪಿ ಅಧ್ಯಕ್ಷ ಯಡಿಯೂರ ಪ್ಪನವರು ಮತ್ತೂಂದು ಕಡೆ ಅಧಿಕಾರಿಗಳಿಗೆ ನೀವು ಚೆನ್ನಾಗಿ ಕೆಲಸ ಮಾಡುತ್ತಿದ್ದೀರಿ. ಆದರೆ, ನಾವು ವಿರೋಧ ಪಕ್ಷದವರು ಸರ್ಕಾರವನ್ನು ಟೀಕೆ ಮಾಡಬೇಕಲ್ಲ. ಅದಕ್ಕೆ ಟೀಕೆ ಮಾಡುತ್ತಿದ್ದೇವೆ. ಬೇಜಾರು ಮಾಡಿಕೊಳ್ಳಬೇಡಿ ಅಂತಾರೆ. ಡ್ರಾಮಾ ಯಾರು ಮಾಡುತ್ತಿದ್ದಾರೆ ಎನ್ನುವುದನ್ನು ರಾಜ್ಯದ ಜನರೇ ನಿರ್ಧರಿಸಬೇಕೆಂದು ಸಿಎಂ ಛೇಡಿಸಿದರು.

ಜನರ ಕಷ್ಟಕ್ಕೆ ಮಿಡಿಯುವ ಹೃದಯ: ನನ್ನದು ಜನಸಾಮಾನ್ಯರ ಕಷ್ಟಕ್ಕೆ ಮಿಡಿಯುವ ಹೃದಯ. ಜನಸಾಮಾನ್ಯರ ನೋವಿಗೆ ದನಿಯಾಗಿ ಕೈಲಾದ ಸಹಾಯವನ್ನು ಮಾಡುವುದು ನಾನು ಬೆಳೆಸಿ ಕೊಂಡು ಬಂದಿರುವ ಸಂಸ್ಕಾರ. ನನ್ನ ನಡೆ- ನುಡಿಯಲ್ಲಿ, ನನ್ನ ಕಾರ್ಯಕ್ರಮಗಳಲ್ಲಿ ತಪ್ಪು ಹುಡುಕುವ ಮಾಧ್ಯಮದವರ ನಡೆಯಿಂದ ನನ್ನ ಮನಸ್ಸಿಗೆ ನೋವಾಗಿದೆ. ಆದ್ದರಿಂದಲೇ ಮಾಧ್ಯಮ ದವರ ಜೊತೆ ಮಾತನಾಡುವುದನ್ನು ನಿಲ್ಲಿಸಿದ್ದೇನೆ. ರಾಜ್ಯದ ಸಮಗ್ರವಾದ ಅಭಿವೃದ್ಧಿಯೇ ನನ್ನ ಮೂಲಮಂತ್ರ ಎಂದು ಹೇಳಿದರು.

ಗ್ರಾಮ ವಾಸ್ತವ್ಯ ಮುನ್ನಡೆಸುವೆ: ಮಂಡ್ಯ ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಕನಸು ಕಂಡಿದ್ದೇನೆ. ನನಗೆ ಹಾಗೂ ನನ್ನ ತಂದೆಯವರಿಗೆ ಕಷ್ಟದಲ್ಲಿದ್ದಾಗ ಕೈಹಿಡಿದು ಮುನ್ನಡೆಸಿ ಆಶ್ರಯ ನೀಡಿದ ಮಂಡ್ಯ ಜಿಲ್ಲೆಯನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಟೀಕೆಗಳು ಸಾಯುತ್ತವೆ. ಆದರೆ, ನಾವು ಮಾಡುವ ಕೆಲಸಗಳು ಮಾತ್ರ ಉಳಿಯುತ್ತವೆ. ಯಾರು ಏನೇ ಟೀಕೆ- ಟಿಪ್ಪಣಿ ಮಾಡಿದರೂ ಗ್ರಾಮವಾಸ್ತವ್ಯ ಕಾರ್ಯ ಕ್ರಮವನ್ನು ಮುನ್ನಡೆಸುತ್ತೇನೆ. ನನ್ನ ಸಚಿವ ಸಂಪುಟದ ಸದಸ್ಯರಿಗೂ ಗ್ರಾಮ ವಾಸ್ತವ್ಯ ಮಾಡುವಂತೆ ನಿರ್ದೇಶನ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಅಘಲಯ ದೊಡ್ಡ ಕೆರೆ ವೀಕ್ಷಣೆ:ಅಘಲಯ ಗ್ರಾಮಕ್ಕೆ ಬರುವ ಮಾರ್ಗ ಮಧ್ಯದಲ್ಲಿ ಸಿಗುವ ಅಘಲಯ ಗ್ರಾಮದ ದೊಡ್ಡ ಕೆರೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾರಿನಿಂದ ಕೆಳಗಿಳಿದು ವೀಕ್ಷಿಸಿದರು. ಸಾಲದಭಾದೆ ಯಿಂದ ನೇಣು ಬಿಗಿದುಕೊಂಡು ಮೃತರಾದ ಸುರೇಶ್‌ ಅವರ ತೋಟವನ್ನೂ ವೀಕ್ಷಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು, ಶಾಸಕ ನಾರಾಯಣಗೌಡ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಜಾನಕೀರಾಂ, ಜಿಲ್ಲಾಧಿಕಾರಿ ಮಂಜುಶ್ರೀ, ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಶಿವಪ್ರಕಾಶ್‌ ದೇವರಾಜು, ಪಾಂಡವಪುರ ಉಪ ವಿಭಾಗಾಧಿಕಾರಿ ಶೈಲಜಾ, ತಹಶೀಲ್ದಾರ್‌ ಎಂ.ಶಿವಮೂರ್ತಿ, ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಜಿ.ಪ್ರಭು, ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಡಿ.ರಮೇಶ್‌, ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು, ಸದಸ್ಯ ಬಿ.ಎಲ್.ದೇವರಾಜು, ಪುರಸಭೆಯ ಮಾಜಿ ಅಧ್ಯಕ್ಷ ಹೆಚ್.ಕೆ.ಅಶೋಕ್‌, ಪುರಸಭೆಯ ಸದಸ್ಯರಾದ ಹೆಚ್.ಆರ್‌.ಲೋಕೇಶ್‌, ಕೆ.ಎಸ್‌.ಸಂತೋಷ್‌, ಅಶೋಕ್‌ ಮತ್ತಿತರರಿದ್ದರು.

ಉಪಾಹಾರ ಸೇವನೆ: ತಾಪಂ ಮಾಜಿ ಉಪಾಧ್ಯಕ್ಷ ಜಾನಕೀರಾಂ ಮನೆಯಲ್ಲಿ ಶಾಸಕ ನಾರಾಯಣ ಗೌಡ ಅವರೊಂದಿಗೆ ಉಪಾಹಾರ ಸೇವಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಮನೆಯವರ ಕುಶಲೋಪರಿ ವಿಚಾರಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.