ಹಳ್ಳಿ ಫೈಟ್‌: ಸಂಸದೆ ಸುಮಲತಾ ಮೌನ

1.25 ಲಕ್ಷ ಮತಗಳಿಂದ ಗೆಲ್ಲಿಸಿದ್ದ ಕಾರ್ಯಕರ್ತರಿಗೆ ಬೆಂಬಲವಿಲ್ಲ

Team Udayavani, Dec 20, 2020, 6:44 PM IST

ಹಳ್ಳಿ ಫೈಟ್‌: ಸಂಸದೆ ಸುಮಲತಾ ಮೌನ

ಮಂಡ್ಯ: ಜಿಲ್ಲೆಯಲ್ಲಿ ಸ್ವಾಭಿಮಾನದ ರಣಕಹಳೆ ಊದಿ ಕಳೆದ ಬಾರಿ ಲೋಕಸಭೆಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿಗೆಲುವು ದಾಖಲಿಸಿದ್ದ ಸಂಸದೆ ಸುಮಲತಾ ಅಂಬರೀಶ್‌ ಕಾರ್ಯಕರ್ತರಿಗೆ ಬೆಂಬಲ ನೀಡದೆ ತಟಸ್ಥರಾಗಿ ಉಳಿದಿರುವುದು ಕಾರ್ಯಕರ್ತರಲ್ಲಿ ಬೇಸರ ತರಿಸಿದೆ.

ಬಿಜೆಪಿ, ಕಾಂಗ್ರೆಸ್‌ ಹಾಗೂ ರೈತಸಂಘದ ಕಾರ್ಯಕರ್ತರು ಸುಮಲತಾ ಅವರನ್ನು ಸುಮಾರು 1.25 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿದ್ದರು. ಆದರೆ ಗ್ರಾಪಂ ಚುನಾವಣೆ ಕಾರ್ಯಕರ್ತರ ಚುನಾವಣೆಯಾಗಿದ್ದು, ಗೆಲ್ಲಿಸಿದ್ದಕಾರ್ಯಕರ್ತರಿಗೆ ಬೆಂಬಲ ನೀಡದೆ ದೂರ ಉಳಿದಿದ್ದಾರೆ. ಮಂಡ್ಯ ಲೋಕಸಭೆ ವ್ಯಾಪ್ತಿಯ 8 ಕ್ಷೇತ್ರಗಳಲ್ಲಿ ಸಂಸದೆ ಸುಮಲತಾ ಅವರ ಗೆಲುವಿಗೆಕಾರ್ಯಕರ್ತರು ಸ್ವಾಭಿಮಾನಿಗಳಂತೆ ದುಡಿದಿದ್ದರು. ನಾಗಮಂಗಲ ಹೊರತುಪಡಿಸಿ ಉಳಿದ 7 ಕ್ಷೇತ್ರಗಳಲ್ಲೂ ಮುನ್ನಡೆ ‌ ತಂದುಕೊಟ್ಟಿದ್ದರು.

ಮೈತ್ರಿಗೂ ಬಗ್ಗದ ಕಾರ್ಯಕರ್ತರು: ಸುಮಲತಾ ಗೆಲುವಿಗೆ ಬಿಜೆಪಿ ಪ್ರತ್ಯಕ್ಷವಾಗಿಬೆಂಬಲ ಘೋಷಿಸಿತ್ತು. ಇತ್ತ ರೈತಸಂಘವೂ ಬೆಂಬಲ ನೀಡಿತ್ತು. ಆದರೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದ ಮೈತ್ರಿ ಅಭ್ಯರ್ಥಿ ಇದ್ದರೂ ಕಾಂಗ್ರೆಸ್‌ ಕಾರ್ಯಕರ್ತರು ಮಾತ್ರ ಮೈತ್ರಿಯನ್ನು ಮುರಿದು ಸುಮಲತಾ ಅವರನ್ನುಗೆಲ್ಲಿಸಿದ್ದರು.

ಸ್ಪಷ್ಟ ನಿಲುವು ತಿಳಿಸದ ಸುಮಲತಾ:

ಬಿಜೆಪಿ, ಕಾಂಗ್ರೆಸ್‌ ಹಾಗೂ ರೈತ ಸಂಘದ ಕಾರ್ಯಕರ್ತರೇ ಗ್ರಾಪಂ ಚುನಾವಣೆಯಲ್ಲಿ ಎದುರಾಳಿಗಳಾಗಿರುವುದರಿಂದ ಯಾರಿಗೆ ಬೆಂಬಲ ನೀಡಬೇಕು ಎಂಬ ಗೊಂದಲವೂ ಇದೆ. ಆದರೆ ಇದುವರೆಗೂ ಯಾವುದೇ ಸ್ಪಷ್ಟ ‌ ನಿಲುವು ತಿಳಿಸಿಲ್ಲ. ಇದರಿಂದ ಕಾರ್ಯಕರ್ತರು ಅತಂತ್ರರಾಗಿದ್ದಾರೆ.

ಕಹಳೆ ಊದುವ ರೈತ ಚಿಹ್ನೆಗೆ ಬೇಡಿಕೆ: 2019ರಲ್ಲಿ ನಡೆದ ಸಾರ್ವತ್ರಿಕ ಲೋಕಸಭೆಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸಂಸದೆ ಸುಮಲತಾ ಅಂಬರೀಶ್‌ ಅವರು ಪಡೆದಿದ್ದ ಕಹಳೆ ಊದುವ ರೈತ ಚಿಹ್ನೆ ಪಡೆದು ಗೆಲುವು ಸಾಧಿಸಿದ್ದರು. ಈಗ ಆ ಚಿಹ್ನೆಗೆ ಹೆಚ್ಚು ಬೇಡಿಕೆ ಬಂದಿದೆ. ಮತದಾರರ ಮನದಲ್ಲಿ ಚಿಹ್ನೆ ಉಳಿದುಕೊಂಡಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ದುಂಬಾಲು ಬಿದ್ದಿದ್ದಾರೆ.

ಮೊದಲ ಹಂತದಲ್ಲಿ ನಡೆಯುವ ಮಂಡ್ಯ, ಮದ್ದೂರು ಹಾಗೂ ಮಳವಳ್ಳಿ ತಾಲೂಕುಗಳ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಹುತೇಕ ಅಭ್ಯರ್ಥಿಗಳು ಇದೇ ಚಿಹ್ನೆಗೆ ಬೇಡಿಕೆ ಇಟ್ಟಿದ್ದರು. ಅದರಂತೆ ಹಲವು ಅಭ್ಯರ್ಥಿಗಳಿಗೆ ಚಿಹ್ನೆ ಸಿಕ್ಕಿದೆ. ಎರಡನೇ ಹಂತದಲ್ಲಿ ನಡೆಯಲಿರುವ ಪಾಂಡವಪುರ, ಶ್ರೀರಂಗಪಟ್ಟಣ, ಕೆ.ಆರ್‌.ಪೇಟೆ ಹಾಗೂ ನಾಗಮಂಗಲ ತಾಲೂಕುಗಳಲ್ಲಿಯೂ ಚಿಹ್ನೆಗೆ ಬೇಡಿಕೆ ಹೆಚ್ಚಾಗಿದೆ.

ಗೊಂದಲದಲ್ಲಿರುವ ಅಭ್ಯರ್ಥಿಗಳು :

ತಳಮಟ್ಟದಲ್ಲಿ ಸುಮಲತಾ ಗೆಲುವಿಗೆ ಶ್ರಮಿಸಿದ್ದ ಕಾರ್ಯಕರ್ತರು ಈಗಾಗಲೇ ಗ್ರಾಪಂ ಚುನಾವಣೆ ಅಭ್ಯರ್ಥಿಗಳಾಗಿದ್ದಾರೆ. ಜಿಲ್ಲೆಯ ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ,ಕೆ.ಆರ್‌.ಪೇಟೆ, ನಾಗಮಂಗಲ ಹಾಗೂ ಮಳವಳ್ಳಿ ತಾಲೂಕುಗಳಲ್ಲಿರುವ ಕೆಲವು ಅಭ್ಯರ್ಥಿಗಳು ಪಕ್ಷೇತರರಾಗಿ ಸ್ಪರ್ಧಿಸಿದ್ದರೆ,ಕೆಲವರುಕಾಂಗ್ರೆಸ್‌,ಬಿಜೆಪಿಹಾಗೂ ರೈತಸಂಘದ ಬೆಂಬಲಿತರಾಗಿ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ.

ಕ್ಷೇತ್ರಕ್ಕೆ ಬಾರದ ಸಂಸದೆ :  ಕಳೆದ ನವೆಂಬರ್‌ ತಿಂಗಳಲ್ಲಿ ಅಂಬರೀಶ್‌ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸಿದ್ದ ಸಂಸದೆ ಸುಮಲತಾ ಅವರು, ಗ್ರಾಪಂ ಚುನಾವಣೆ ಘೋಷಣೆಯಾದ ಬಳಿಕ ಕ್ಷೇತ್ರಕ್ಕೆ ಬಂದಿಲ್ಲ. ಇದರಿಂದ ಕಾರ್ಯಕರ್ತರು ಸಂಸದೆಯ ಆಗಮನದ ನಿರೀಕ್ಷೆಯಲ್ಲಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.