ಕಲ್ಲು ಗಣಿಗಾರಿಕೆ ಸಮಸ್ಯೆ ಬಿಚ್ಚಿಟ್ಟ ಸ್ಥಳೀಯರು


Team Udayavani, Apr 5, 2022, 4:05 PM IST

ಕಲ್ಲು ಗಣಿಗಾರಿಕೆ ಸಮಸ್ಯೆ ಬಿಚ್ಚಿಟ್ಟ ಸ್ಥಳೀಯರು

ಪಾಂಡವಪುರ: ಕನಗನಮರಡಿ ಹೊರವಲಯದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ತಾಲೂಕಿನ ಕನಗನಮರಡಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕನಗನಮರಡಿ ಗ್ರಾಮದಲ್ಲಿ ಗ್ರಾಮಸ್ಥರು ರಸ್ತೆ ತಡೆದು ಗಣಿ ಮಾಲಿಕರು ಹಾಗೂ ಪೊಲೀಸ್‌ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ಪ್ರಾಕೃತಿಕ ಸಂಪತ್ತು ಲೂಟಿ: ಕನಗನಮರಡಿ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದ ಪಕ್ಕದಲ್ಲಿ ಕಲ್ಲು ಗಣಿಗಾರಿಕೆ ಅಕ್ರಮವಾಗಿ ನಡೆಯುತ್ತಿದೆ. ಇಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಜನರಿಗೆ ಅನಾ ನುಕೂಲದ ಜತೆಗೆ ಪ್ರಾಕೃತಿಕ ಸಂಪತ್ತು ಲೂಟಿಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೂಳು ಹೆಚ್ಚಾಗಿದೆ: ಕಲ್ಲು ಗಣಿಗಾರಿಕೆ ಜತೆಗೆ ಕ್ರಷರ್‌ ಗಳಿಂದ ದೂಳು ಹಾಗೂ ಶಬ್ಧ ಹೆಚ್ಚಾಗಿದೆ. ಕಲ್ಲಿನ ದೂಳು ಜಮೀನು ಹಾಗೂ ಕೆರೆಕಟ್ಟೆಗಳ ಮೇಲೆ ಬೀಳುತ್ತಿರುವುದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಕೃಷಿ ಮಾಡಲು ಸಾಧ್ಯವಾಗುತ್ತಿಲ್ಲ, ಜತೆಗೆ ಜನರ ಆರೋಗ್ಯದ ಮೇಲೂ ಕೆಟ್ಟಪರಿಣಾಮ ಬೀರುತ್ತಿದೆ. ಇನ್ನೂ ಜನಜಾನುವಾರು ಮೇವಿಗೂ ಸಾಕಷ್ಟು ಅನಾನುಕೂಲ ಉಂಟಾಗಿದೆ ಎಂದು ಕಿಡಿಕಾರಿದರು.

ಪೊಲೀಸ್‌ ಅಧಿಕಾರಿಗಳ ವಿರುದ್ಧ ಆಕ್ರೋಶ: ತಾಲೂಕಿನ ಸರ್ಕಲ್‌ ಇನ್ಸ್‌ಪೆಕ್ಟರ್‌ ಪ್ರಭಾಕರ್‌ ಅವರು ಗಣಿ ಮಾಲಿಕ ಅಶೋಕ್‌ಪಾಟೀಲ್‌ ಕೈಬೊಂಬೆಯಂತೆ ಕುಣಿಯುತ್ತಿದ್ದಾರೆ. ಗ್ರಾಮದ ರೈತರು ಕಲ್ಲುಗಣಿಗಾರಿಕೆಯಿಂದ ತೊಂದರೆಯಾಗುತ್ತಿದೆ ಎಂದು ಕ್ರಷರ್‌ ಬಳಿ ಹೋಗಿ ಕೇಳಿದ್ದಕ್ಕೆ ಗಣಿ ಮಾಲಿಕ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಅದಕ್ಕೆ ಪೊಲೀಸರು ರೈತರನ್ನು ಬಂಧಿಸಲು ಬಂದಿದ್ದಾರೆ. ಅದೇ ರೈತರು, ಸ್ಥಳೀಯರು, ಗ್ರಾಮಸ್ಥರು ಗಣಿ ಮಾಲಿಕನ ವಿರುದ್ದ ದೂರು ನೀಡಿದರೆ ನಮ್ಮ ದೂರನ್ನು ಸ್ವೀಕರಿಸೋದೆ ಇಲ್ಲ. ಗಣಿ ಮಾಲಿಕರು ಹೇಳಿದ ಹಾಗೆ ಸರ್ಕಲ್‌ ಇನ್ಸ್‌ಪೆಕ್ಟರ್‌ ಪ್ರಭಾಕರ್‌ ಕುಣಿಯುತ್ತಿದ್ದಾರೆ.ಪೊಲೀಸ್‌ ವ್ಯವಸ್ಥೆಯೇ ಹೀಗಾದರೆ ಹೇಗೆ ಎಂದು ಆಕ್ರೋಶ ಹೊರಹಾಕಿದರು.

ಅವರು ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಪೊಲೀಸ್‌ ಠಾಣೆ ಎದುರೇ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇಲ್ಲಿನ ಕಲ್ಲುಗಣಿಗಾರಿಕೆ ಸ್ಥಗಿತಗೊಳಿಸುವಂತೆ ಜಿಲ್ಲಾ ಧಿಕಾರಿ, ಎಸಿ, ತಹಶೀಲ್ದಾರ್‌, ಗಣಿ ಅಧಿಕಾರಿಗಳಿಗೆ ಮನವಿ ನೀಡಿದ್ದೇವೆ. ಹೀಗಿದ್ದರೂ  ಅಧಿಕಾರಿಗಳು ಕ್ರಮವಹಿಸುತ್ತಿಲ್ಲ. ಹೀಗೆಯೇ ನಮ್ಮ ಬದುಕಿಗೆ ತೊಂದರೆಯಾಗುತ್ತಿದ್ದರೆ ಇಡೀ ಗ್ರಾಮಸ್ಥರೆಲ್ಲಾ ಮುಂದಿನ ದಿನಗಳಲ್ಲಿ ಉಗ್ರವಾದ ಚಳವಳಿ ಹಮ್ಮಿ ಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸಂದರ್ಭದಲ್ಲಿ ಮೈಷುಗರ್‌ ಅಧ್ಯಕ್ಷ ಜೆ.ಶಿವಲಿಂಗೇಗೌಡ, ಮುಖಂಡರಾದ ಕೃಷಮೂರ್ತಿ, ಜೆ.ಗಿರೀಶ್‌, ಚಿಕ್ಕಣ್ಣೇಗೌಡ, ಉಮೇಶ್‌, ಅಂಕೇಗೌಡ, ಶಂಕರೇಗೌಡ, ನಾಗರಾಜು, ಸುರೇಶ್‌, ಗುರುವಯ್ಯ, ತಮ್ಮಣ್ಣ ಮತ್ತಿತರರು ಉಪಸ್ಥಿತರಿದ್ದರು.

ಮನೆ, ದೇಗುಲಗಳ ಗೋಡೆ ಬಿರುಕು ಬಿಟ್ಟಿವೆ… : ಗಣಿಮಾಲಿಕರು ಕಲ್ಲು ಸಿಡಿಸಲು ಮೆಗ್ಗರ್‌, ರಿಗ್‌ ಬೋರ್‌ ಬ್ಲಾಸ್ಟಿಂಗ್‌ ಮಾಡುತ್ತಿದ್ದಾರೆ. ಇದರಿಂದಾಗಿ ಮನೆಗಳು, ದೇವಸ್ಥಾನ ಗೋಡೆಗಳು ಬಿರುಕು ಬಿಡುತ್ತಿವೆ. ಜತೆಯಲ್ಲಿ ಗ್ರಾಮದಲ್ಲಿ ವಿಶ್ವೇಶ್ವರಯ್ಯ ನಾಲೆಯ ಅಕ್ವಡೆಟ್‌(ನಾಲೆಯ ಮೇಲ್ಸೇತುವೆ) ನಾಲೆಯೂ ಹಾದು ಹೋಗಿದೆ. ಬ್ಲಾಸ್ಟಿಂಗ್‌ ಶಬ್ಧಕ್ಕೆ ನಾಲೆಗೂ ಅಪಾಯ ಎದುರಾಗಿದೆ. ಇಲ್ಲಿಗೆ ಸಮೀಪವೇ ವಿಸಿ ನಾಲೆಯ ಸುರಂಗವಿದ್ದು ಅದಕ್ಕೂ ಅಪಾಯ ಎದುರಾಗಿದೆ. ರಾತ್ರಿಯ ವೇಳೆಯಲ್ಲಿ ಬ್ಲಾಸ್ಟಿಂಗ್‌ ಮಾಡುವುದರಿಂದ ಮನೆಯಲ್ಲಿ ಮಲಗುವ ಮಕ್ಕಳು, ವಯೋವೃದ್ಧರು ಬೆಚ್ಚಿಬೀಳುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.