ಲಾಕ್‌ಡೌನ್‌ ಸಡಿಲಿಕೆ ಸರಿಯಲ್ಲ

ಆರೋಗ್ಯ ಸಮಸ್ಯೆ ಲಘುವಾಗಿ ಪರಿಗಣಿಸದಿರಿ: ಕುಮಾರಸ್ವಾಮಿ

Team Udayavani, Apr 25, 2020, 12:53 PM IST

ಲಾಕ್‌ಡೌನ್‌ ಸಡಿಲಿಕೆ ಸರಿಯಲ್ಲ

ಕೆಆರ್‌ಎಸ್‌ ವ್ಯಾಪ್ತಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅಕ್ಕಿ, ತರಕಾರಿ ವಿತರಿಸಿದರು.

ಶ್ರೀರಂಗಪಟ್ಟಣ: ಲಾಕ್‌ಡೌನ್‌ ಸಡಿಲಿಕೆ ವಿಚಾರದಲ್ಲಿ ಸರ್ಕಾರ ಜನಸಾಮಾನ್ಯರ ಪ್ರಾಣದ ಜೊತೆ ಚಲ್ಲಾಟವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಕೆಆರ್‌ಎಸ್‌ನಲ್ಲಿ ಬಡವರಿಗೆ ದಿನಸಿ ಹಾಗೂ ತರಕಾರಿ ವಿತರಿಸಿ ಮಾತನಾಡಿದ ಅವರು, ಆರೋಗ್ಯದ ಸಮಸ್ಯೆಯನ್ನು ಸರ್ಕಾರ ಲಘುವಾಗಿ ತೊಗೆದುಕೊಳ್ಳದೆ ಮುಂಜಾಗ್ರತೆ ವಹಿಸುವುದು ಅತ್ಯಗತ್ಯ. ಇದೊಂದು ಸಾಂಕ್ರಾಮಿಕ ಸೋಂಕು ಎಂದು ಹೇಳಿದರು.

ರಾಮನಗರಕ್ಕೆ ಪಾದರಾಯನಪುರ ಆರೋಪಿಗಳ ಶಿಫ್ಟ್ ವಿಚಾರದಲ್ಲಿ ಆರಂಭದಲ್ಲೇ ಕರೆತರುವುದನ್ನು ವಿರೋಧ ಮಾಡಿದ್ದೆ. ಈ ಬಗ್ಗೆ ಸರ್ಕಾರಕ್ಕೂ ತಿಳಿಸಿದ್ದೇನೆ. ಮುಖ್ಯಮಂತ್ರಿ, ಗೃಹಮಂತ್ರಿ ಶಿಫ್ಟ್ ಮಾಡದಿರಲು ಇದಕ್ಕೆ ಒಪ್ಪಿದ್ದರೂ ರಾಮನಗರಕ್ಕೆ ಅವರನ್ನು ಕರೆತರುವ ಪ್ರಮೇಯವೇನಿತ್ತು. ಬೆಂಗಳೂರಿನಲ್ಲಿ ಕ್ವಾರಂಟೈನಲ್ಲಿಟ್ಟು ನಿಗಾ ವಹಿಸಬಹುದಿತ್ತಲ್ಲವಾ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಈಗ ರಾಮನಗರ ಕಾರಾಗೃಹವನ್ನು ಸಂಪೂರ್ಣ ಕ್ವಾರಂಟೈನ್‌ ಮಾಡಬೇಕಿದೆ.

ಕಾರಾಗೃಹದ ಸಿಬ್ಬಂದಿ ಮೇಲೂ ನಿಗಾ ವಹಿಸಬೇಕಿದೆ. ಸರ್ಕಾರವನ್ನು ತಪ್ಪು ದಾರಿಗೆ ಎಳೆದ ಅಧಿಕಾರಿಗಳ ಬಗ್ಗೆ ಎಚ್ಚರ ವಹಿಸಬೇಕಿದೆ ಎಂದರು. ಮಂಡ್ಯದಲ್ಲಿ ಆಶಾ ಕಾರ್ಯಕರ್ತೆ ಮೇಲೆ ದೌರ್ಜನ್ಯ ನಡೆದಿದೆ. ಆಶಾ ಕಾರ್ಯಕರ್ತೆಯನ್ನು ಸರ್ಕಾರ ಇಲ್ಲಿವರೆಗೆ ಭೇಟಿ ಮಾಡಿ ವಿಚಾರಿಸಿಲ್ಲ. ಪತ್ರಿಕೆಗಳಿಗೆ ಹೇಳಿಕೆ ನೀಡುವುದಕ್ಕಷ್ಟೇ ಸೀಮಿತವಾಗಿರುವ ಸರ್ಕಾರ, ಕೋವಿಡ್ ಶ್ರಮಿಕರ ಮೇಲೆ ದೌರ್ಜನ್ಯವೆಸಗಿದರೆ 3 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ್ದರೂ ಪೊಲೀಸ್‌ ಠಾಣೆಯಲ್ಲಿ ಬೇಲ್‌ ನೀಡಿ ಆರೋಪಿಗಳನ್ನು  ಮನೆಗೆ ಕಳುಹಿಸಿದ್ದಾರೆ.

ಪರಿಜ್ಞಾನವಿದೆಯಾ: ಸರ್ಕಾರ ಮೈ
ಮರೆತಿಲ್ಲವೆಂದಿದ್ದ ಡಿಸಿಎಂ ಅಶ್ವತ್ಥನಾರಾಯಣಗೌಡ ಕಾರಾಗೃಹದಲ್ಲಿರುವ ಕೈದಿಗಳನ್ನು ತಪಾಸಣೆ ಮಾಡಿ ಶಿಫ್ಟ್ ಮಾಡಲಾಗಿದೆ ಎಂಬ ಹೇಳಿಕೆ ನೀಡುತ್ತಾರೆ. ಸರ್ಕಾರಕ್ಕೆ ಮೆದುಳೇ ಇಲ್ಲ. ಕೋವಿಡ್ ಹೆಸರಿನಲ್ಲಿ ದುಡ್ಡು ಮಾಡಿಕೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಕಿಡಿಕಾರಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಸಾ.ರಾ. ಮಹೇಶ್‌, ಶಾಸಕ ರವೀಂದ್ರ ಶ್ರೀಕಂಠಯ್ಯ ಟಿ.ನರಸೀಪುರ ಶಾಸಕ ಅಶ್ವಿ‌ನ್‌ ಕುಮಾರ್‌, ಜಿಪಂ ಸದಸ್ಯೆ ಸವಿತಾ ಹಾಗೂ ಪಕ್ಷದ ಮುಖಂಡರು ಹಾಜರಿದ್ದರು.

ಆಶಾ ಕಾರ್ಯಕರ್ತೆ ಯೋಗಕ್ಷೇಮ ವಿಚಾರಿಸಿದ ಎಚ್ಡಿಕೆ
ತಾಲೂಕಿನ ಹುರುಳಿ ಕ್ಯಾತನಹಳ್ಳಿ ಗ್ರಾಮದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿದ್ದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಶಾ ಕಾರ್ಯಕತೆಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಶುಕ್ರವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಗ್ರಾಮದಲ್ಲಿ ಇನ್ನು ಮುಂದೆ ನಿಮಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದೆಂದರು. ಈ ಸಂಬಂಧ ಗೃಹ ಸಚಿವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.