ಲೋಕ ಅದಾಲತ್: 2,055 ಪ್ರಕರಣ ಇತ್ಯರ್ಥ
Team Udayavani, Dec 16, 2019, 4:59 PM IST
ಮಂಡ್ಯ: ಜಿಲ್ಲೆಯ ನ್ಯಾಯಾಲಯಗಳಲ್ಲಿ ನಡೆದ ಲೋಕ ಅದಾಲತ್ ಕಾರ್ಯಕ್ರಮದಲ್ಲಿ 2,055 ಪ್ರಕರಣಗಳನ್ನು ರಾಜಿ- ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎಚ್.ಜಿ.ವಿಜಯಕುಮಾರಿ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಯೋಜಿಸಿದ್ದ ಲೋಕ ಅದಾಲತ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲಾದ್ಯಂತ ಒಟ್ಟು 8,328 ಪ್ರಕರಣಗಳಲ್ಲಿ 2,055 ಪ್ರಕರಣಗಳನ್ನು ಪರಿಹರಿಸಲಾಗಿದೆ.ಒಟ್ಟು ಪ್ರಕರಣಗಳಲ್ಲಿ 27.77 ಕೋಟಿ ರೂ ರಾಜಿಯಾಗಿದ್ದು, ಮಂಡ್ಯದಲ್ಲೇ ಎಂಇಸಿ ಪ್ರಕರಣ ಸೇರಿದಂತೆ ಒಟ್ಟು 16.69 ಕೋಟಿ ರೂ.ರಾಜಿಯಾಗಿದೆ. ಇದಲ್ಲದೆ ಪ್ರೀ-ಲಿಟಿಗೇಷನ್ ಪ್ರಕರಣದಲ್ಲಿ ಎಸ್ಬಿಐ, ಸಿಂಡಿಕೇಟ್, ಇಂಡಿಯನ್, ಕಲ್ಪತರು ಕಾವೇರಿ ಗ್ರಾಮೀಣ ಬ್ಯಾಂಕ್ಗಳ ಅಧಿಕಾರಿಗಳೂ ಹಾಜರಾಗಿ ಕೆಲ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರು. ಕೆ.ಆರ್.ಪೇಟೆ ತಾಲೂಕಿನಲ್ಲಿ 170, ಮದ್ದೂರು 442, ನಾಗಮಂಗಲ 133, ಶ್ರೀರಂಗಪಟ್ಟಣ 269, ಪಾಂಡವಪುರ 175, ಮಂಡ್ಯ 758, ಮಳವಳ್ಳಿ 86 ಪ್ರಕರಣ ರಾಜಿಯಾಗಿದೆ ಎಂದರು.
ಜನಜಂಗುಳಿ: ಲೋಕ ಅದಾಲತ್ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ನ್ಯಾಯಾಲಯ ಎದುರು ನೂರಾರು ಜನರು ಹಾಜರಾಗಿದ್ದರು. ಮಧ್ಯಸ್ಥಿಕೆ ವಹಿಸುವ ಮೂಲಕ ತಮ್ಮ ಪ್ರಕರಣಗಳ ಇತ್ಯರ್ಥ ಪಡಿಸಿಕೊಂಡರು. ಕೋರ್ಟ್, ಕೇಸು ಎಂದು ವರ್ಷಗಟ್ಟಲೇ ಅಲೆಯುವ ಬದಲು ಒಂದೇ ದಿನದಲ್ಲಿ ರಾಜಿ ಮಾಡಿಕೊಂಡು ಇತ್ಯರ್ಥಪಡಿಸಿಕೊಳ್ಳಲು ದೂರದ ಊರು ಗಳಿಂದ ಬಂದಿದ್ದರು. ಗಂಟೆಗಟ್ಟಲೆ ಕಾಯ್ದು ತಮ್ಮ ಸರದಿ ಬಂದಾಗ ಮಧ್ಯಸ್ಥಿಕೆ ವಹಿಸಿ ಒಪ್ಪಿತವಾದ ನಂತರ ರಾಜಿ ಮಾಡಿ ಕೊಂಡು ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ