Lok Sabha Election ದೇಶದಲ್ಲೇ ಸದ್ದು ಮಾಡುತ್ತಿರುವ ಮಂಡ್ಯ ರಾಜಕೀಯ

ಒಕ್ಕಲಿಗರ ಭದ್ರಕೋಟೆಯಲ್ಲಿ ಕೈ ದಳದ್ದೇ ಪಾರುಪತ್ಯ; ಪಕ್ಷೇತರವಾಗಿ ಗೆದ್ದು ಇತಿಹಾಸ ಸೃಷ್ಟಿಸಿದ ಸುಮಲತಾ ಅಂಬರೀಷ್‌

Team Udayavani, Mar 20, 2024, 7:00 AM IST

Lok Sabha Election ದೇಶದಲ್ಲೇ ಸದ್ದು ಮಾಡುತ್ತಿರುವ ಮಂಡ್ಯ ರಾಜಕೀಯ,

ಮಂಡ್ಯ: ಮಂಡ್ಯ ರಾಜಕಾರಣವೇ ವಿಭಿನ್ನವಾಗಿದ್ದು, ಜಿಲ್ಲೆಯ ರಾಜಕೀಯ ದೇಶದಲ್ಲೂ ಸದ್ದು ಮಾಡುತ್ತದೆ ಎಂಬ ಮಾತಿದೆ. ಘಟನಾನುಘಟಿ ನಾಯಕರು ಜಿಲ್ಲೆಯನ್ನು ಪ್ರತಿನಿಧಿಸಿದ್ದಾರೆ. ಮೊದಲು ಕಾಂಗ್ರೆಸ್‌ ಹಿಡಿತದಲ್ಲಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಅನಂತರ ಜೆಡಿಎಸ್‌ ತೆಕ್ಕೆಗೆ ಜಾರಿತು.

ಮಂಡ್ಯ ರಾಜಕಾರಣ ದಿಲ್ಲಿ ಮಟ್ಟದಲ್ಲಿ ಸದ್ದು ಮಾಡುತ್ತದೆ. ಅದು ಹಲವಾರು ಬಾರಿ ಸಾಬೀತಾಗಿದೆ. ಇದೀಗ ಲೋಕಸಭೆ ಚುನಾವಣೆ ಎದುರಾಗುತ್ತಿರುವುದರಿಂದ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದೆ. ಜಿಲ್ಲೆಯ ರಾಜಕಾರಣ ಹಲವು ಮಜಲುಗಳನ್ನು ಕಂಡಿದೆ.

ಅತೀ ಹೆಚ್ಚು ಬಾರಿ ಕಾಂಗ್ರೆಸ್‌
ಇದುವರೆಗೂ ಉಪಚುನಾವಣೆ ಸೇರಿ 20 ಚುನಾವಣೆಗಳನ್ನು ಎದುರಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 13 ಬಾರಿ ಕಾಂಗ್ರೆಸ್‌ ಗೆದ್ದಿದ್ದರೆ, ಒಂದು ಬಾರಿ ಪ್ರಜಾ ಸೋಷಿಯಲಿಸ್ಟ್‌ ಪಕ್ಷ, 5 ಬಾರಿ ಜೆಡಿಎಸ್‌ ಹಾಗೂ ಒಂದು ಬಾರಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿ ಸಿದ್ದಾರೆ. ಮೊದಲು ಕ್ಷೇತ್ರವನ್ನು ಆಳಿದ್ದು ಕಾಂಗ್ರೆಸ್‌ ಪಕ್ಷವಾಗಿದೆ. ಎಂ.ಕೆ. ಶಿವನಂಜಪ್ಪ ಅವರಿಂದ ಹಿಡಿದು ಈಗಿನ ಹಾಲಿ ಸಂಸದೆ ಸುಮಲತಾ ಅಂಬರೀಷ್‌ವರೆಗೂ ಕಾಂಗ್ರೆಸ್‌ ಪಕ್ಷ ನಿರ್ಣಾಯಕ ಪಾತ್ರ ವಹಿಸಿದೆ.

1952ರ ಮೊದಲ ಚುನಾವಣೆಯಿಂದ 1967ರವರೆಗೆ ನಾಲ್ಕು ಬಾರಿ ಎಂ.ಕೆ. ಶಿವನಂಜಪ್ಪ ಸಂಸದರಾಗಿದ್ದರು. 1968ರ ಉಪಚುನಾವಣೆಯಲ್ಲಿ ಹಾಗೂ 1971ರ 2 ಬಾರಿ ಎಸ್‌.ಎಂ. ಕೃಷ್ಣ, 1972, 1977ರಲ್ಲಿ ಕೆ. ಚಿಕ್ಕಲಿಂಗಯ್ಯ 2 ಬಾರಿ, 1980ರಲ್ಲಿ ಮತ್ತೆ ಎಸ್‌.ಎಂ. ಕೃಷ್ಣ, 1984ರಲ್ಲಿ ಕೆ.ವಿ. ಶಂಕರಗೌಡ, 1989, 1991ರಲ್ಲಿ ಜಿ. ಮಾದೇಗೌಡ, 1996ರಲ್ಲಿ ಕೆ.ಆರ್‌. ಪೇಟೆ ಕೃಷ್ಣ, 1998, 1999, 2004ರಲ್ಲಿ ಎಂ.ಎಚ್‌. ಅಂಬರೀಷ್‌ 3 ಬಾರಿ, 2009ರಲ್ಲಿ ಎನ್‌. ಚಲುವರಾಯಸ್ವಾಮಿ, 2023ರ ಉಪಚುನಾವಣೆಯಲ್ಲಿ ರಮ್ಯಾ, 2014ರಲ್ಲಿ ಸಿ.ಎಸ್‌. ಪುಟ್ಟರಾಜು ಹಾಗೂ ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಷ್‌ ಮೊದಲ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪ ರ್ಧಿಸಿ ಗೆಲುವು ಸಾಧಿ ಸುವ ಮೂಲಕ ಇತಿಹಾಸ ಬರೆದಿದ್ದಾರೆ. ಬಿಜೆಪಿ ಇಲ್ಲಿ ಒಮ್ಮೆಯೂ ಗೆದ್ದಿಲ್ಲ.

ಸಾಂಪ್ರದಾಯಿಕ ಎದುರಾಳಿಗಳಾದ ಕಾಂಗ್ರೆಸ್‌-ಜೆಡಿಎಸ್‌ ನಡುವೆ ಹಾವು ಏಣಿ ಆಟ ನಡೆಯುತ್ತಲೇ ಇದೆ. ಮೊದಲ 1952ರ ಚುನಾವಣೆಯಿಂದ 1967ರ ವರೆಗೂ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು.

ಅನಂತರ 1968ರ ಮೊದಲ ಉಪಚುನಾವಣೆಯಲ್ಲಿ ಎಸ್‌.ಎಂ. ಕೃಷ್ಣ ಅವರು ಪ್ರಜಾ ಸೋಷಿಯಲಿಸ್ಟ್‌ ಪಾರ್ಟಿಯಿಂದ ಗೆಲುವು ಸಾಧಿ ಸುವ ಮೂಲಕ ಕಾಂಗ್ರೆಸ್‌ ಹಿಡಿತ ತಪ್ಪುವಂತೆ ಮಾಡಿದ್ದರು. 1972, 1977ರಲ್ಲೂ ಕಾಂಗ್ರೆಸ್‌ ಗೆಲುವು ಸಾಧಿ ಸಿತ್ತು. 1984ರಲ್ಲಿ ಜನತಾ ಪಕ್ಷದಿಂದ ಕೆ.ವಿ. ಶಂಕರಗೌಡ ಗೆಲುವು ಸಾಧಿ ಸುವ ಮೂಲಕ ಜನತಾ ಪರಿವಾರದ ಹಿಡಿತಕ್ಕೆ ತಂದರು. 1998ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪ ರ್ಧಿಸಿದ್ದ ನಟ ಅಂಬರೀಷ್‌ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದರೆ, 1999ರ ಚುನಾವಣೆ ವೇಳೆಗೆ ಮತ್ತೆ ಕಾಂಗ್ರೆಸ್‌ಗೆ ವಾಪಸ್‌ ಆಗುವ ಅಂಬರೀಷ್‌ ಅಲ್ಲಿಯೂ ಗೆಲುವಿನ ನಾಗಾಲೋಟ ಮುಂದುವರಿಸಿದ್ದರು. ಮತ್ತೆ 2004ರಲ್ಲೂ ಅಂಬರೀಷ್‌ ಜಯ ಗಳಿಸಿದ್ದರು.

ಒಕ್ಕಲಿಗರ ಪ್ರಾಬಲ್ಯ
ಮಂಡ್ಯ ಜಿಲ್ಲೆ ಒಕ್ಕಲಿಗರ ಭದ್ರಕೋಟೆಯಾಗಿದೆ. ಲೋಕಸಭಾ ವ್ಯಾಪ್ತಿಗೆ 8 ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಮಂಡ್ಯ, ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣ, ಪಾಂಡವಪುರ, ನಾಗಮಂಗಲ, ಕೆ.ಆರ್‌. ಪೇಟೆ ಹಾಗೂ ಮೈಸೂರು ಜಿಲ್ಲೆಯ ಕೆ.ಆರ್‌. ನಗರ ಕ್ಷೇತ್ರಗಳನ್ನೊಳಗೊಂಡಿವೆ. ಇಲ್ಲಿ ಒಕ್ಕಲಿಗ ಮತದಾರರೇ ಮೊದಲ ಸ್ಥಾನದಲ್ಲಿದ್ದರೆ, 2ನೇ ಸ್ಥಾನದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಅನಂತರ ಕುರುಬ, ಲಿಂಗಾಯತ, ಮುಸ್ಲಿಂ ಸೇರಿ ಇತರ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಮೂವರು ಸಿನೆಮಾದವರಿಗೆ ಮಣೆ
ಮಂಡ್ಯದ ಮತದಾರರು 3 ಮಂದಿ ಸಿಮೆಮಾ ನಟ-ನಟಿಯರಿಗೆ ಮಣೆ ಹಾಕಿದ್ದಾರೆ. 3 ಬಾರಿ ನಟ ಅಂಬರೀಷ್‌ ಸಂಸದರಾಗಿದ್ದರು. ಅನಂತರ 2013ರ ಉಪಚುನಾವಣೆಯಲ್ಲಿ ನಟಿ ರಮ್ಯಾ ಗೆಲ್ಲುವ ಮೂಲಕ ಮೊದಲ ಮಹಿಳಾ ಸಂಸದೆಯಾಗಿ ಆಯ್ಕೆಯಾಗಿದ್ದರು. ಅನಂತರ 2019ರಲ್ಲಿ ಹಾಲಿ ಸಂಸದೆ ಸುಮಲತಾ ಅಂಬರೀಷ್‌ ಅವರನ್ನು ಗೆಲ್ಲಿಸುವ ಮೂಲಕ ನಟರಿಗೂ ಮಣೆ ಹಾಕಿದ ಕ್ಷೇತ್ರವಾಗಿ ಬಿಂಬಿತವಾಗಿದೆ.

– ಎಚ್‌. ಶಿವರಾಜು

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.