KR Pete: ದೂಳುಪೇಟೆಯಾದ ಕೆ.ಆರ್‌.ಪೇಟೆ!


Team Udayavani, Aug 23, 2023, 3:52 PM IST

TDY-12

ಕೆ.ಆರ್‌.ಪೇಟೆ: ಮಂಡ್ಯ ಜಿಲ್ಲೆಯ ಲ್ಲಿಯೇ ಕೆ.ಆರ್‌.ಪೇಟೆ ಪಟ್ಟಣ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಟ್ಟಣವಾಗಿದೆ. ಕ್ಷೇತ್ರದ ಹಿಂದಿನ ಶಾಸಕರಾಗಿದ್ದ ಸಚಿವ ನಾರಾಯಣ ಗೌಡರ ವಿಶೇಷ ಪ್ರಯತ್ನದ ಫಲವಾಗಿ ನೂರಾರು ಕೋಟಿ ರೂ. ವಿಶೇಷ ಅನುದಾನವು ಪಟ್ಟಣದ ಅಭಿವೃದ್ಧಿಗೆ ಹರಿದು ಬಂದಿದ್ದರೂ ಪಟ್ಟಣದ ರಸ್ತೆಗಳು, ಚರಂಡಿಗಳು, ಕಲ್ವರ್ಟ್‌ಗಳು ಸೇರಿದಂತೆ ಒಳಚರಂಡಿ ಯೋಜನೆ ಕಾಮಗಾರಿಗಳು ಕುಂಟುತ್ತಾ ಸಾಗಿವೆ.

ಪಟ್ಟಣವು ಅಭಿವೃದ್ಧಿಯ ಪಥದತ್ತ ಸಾಗದೇ, ಅಭಿವೃದ್ಧಿ ಕೆಲಸ-ಕಾರ್ಯಗಳು ಕುಂಟುತ್ತಾ ಆಮೆ ವೇಗದಲ್ಲಿ ಸಾಗಿರುವುದರಿಂದ ಕೆ.ಆರ್‌.ಪೇಟೆಯು ಧೂಳುಪೇಟೆಯಾಗಿ ಬದಲಾಗಿದ್ದು ರೋಗ- ರುಜಿನಗಳನ್ನು ಹರಡುವ ತಾಣವಾಗಿದೆ.

ಮಳೆ ಬಂದ್ರೆ ಕೆರೆಯಂತಾಗುವ ಬಸ್‌ ನಿಲ್ದಾಣ: ಸಣ್ಣ ಮಳೆಬಂದರೆ ಸಾಕು ಕೆರೆಯಾಗಿ ಬದಲಾಗುವ ಬಸ್‌ ನಿಲ್ದಾಣ, ತ್ಯಾಜ್ಯವು ತುಂಬಿ ಉಕ್ಕಿ ಹರಿಯುತ್ತಿರುವ ಒಳಚರಂಡಿ ಯೋಜನೆಯ ಮ್ಯಾನ್‌ ಹೋಲ್‌ಗ‌ಳು, ನಾಯಿಗಳಿಂದ ತುಂಬಿ ತುಳುಕುತ್ತಿರುವ ವಿವಿಧ ಬಡಾವಣೆಯ ಬೀದಿಗಳು. ಹಾಳು ಬಿದ್ದಿರುವ ಖಾಸಗಿ ಬಸ್‌ ನಿಲ್ದಾಣ, ಅರ್ಧಂಬರ್ಧ ಕಾಮಗಾರಿಯಿಂದಾಗಿ ದೂಳುಮಯವಾದ ರಸ್ತೆಗಳಿಂದ ಪಟ್ಟಣದ ಜನತೆ ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ರೋಗ-ರುಜಿನಗಳಿಂದ ಬಳಲುತ್ತಿದ್ದಾರೆ.

ಪುರಸಭೆಗೆ ಹಿಡಿಶಾಪ:  ಕೆ.ಆರ್‌.ಪೇಟೆ ಪಟ್ಟಣದ ಪ್ರಮುಖವಾದ ಅಡ್ಡ ರಸ್ತೆಗಳಾಗಿರುವ ಹಳೇ ಕಿಕ್ಕೇರಿ ರಸ್ತೆ (ಡಾ.ಬಿ.ಆರ್‌.ಅಂಬೇಡ್ಕರ್‌) ಹಾಗೂ ಹೊಸ ಕಿಕ್ಕೇರಿ ರಸ್ತೆ (ಡಾ.ಪುನೀತ್‌ರಾಜ್‌ಕುಮಾರ್‌) ದೂಳುಮಯವಾದ ರಸ್ತೆಗಳಾಗಿ ಬದಲಾಗಿದ್ದು ಈ ಬಡಾವಣೆಯಲ್ಲಿ ವಾಸಮಾಡುತ್ತಿರುವ ನಿವಾಸಿಗಳು ಹಾಗೂ ಸಾರ್ವಜನಿಕರು ಪುರಸಭೆ ಆಡಳಿತ ಮಂಡಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

6 ತಿಂಗಳು ಕಳೆದ್ರೂ ಪೂರ್ಣಗೊಳ್ಳದ ಕಾಮ ಗಾರಿ: ನಗರೋತ್ಥಾನ ಯೋಜನೆಯ ವಿಶೇಷ ಅನು ದಾನ 3 ಕೋಟಿ ಹಣದಲ್ಲಿ ನಡೆಯುತ್ತಿರುವ ಎರಡೂ ರಸ್ತೆಗಳ ಚರಂಡಿ ಹಾಗೂ ಡಾಂಬರೀಕರಣ ಕಾಮಗಾರಿಗಳು ಕುಂಟುತ್ತಾ ಸಾಗಿವೆ. ಗುತ್ತಿಗೆದಾರ ಕಳಪೆ ಕೆಲಸ ನಡೆಸಿ ಸರ್ಕಾರದ ಹಣವನ್ನು ಕೊಳ್ಳೆ ಹೊಡೆಯುತ್ತಿದ್ದರೂ ಹೇಳುವವರು ಕೇಳುವವರು ಯಾರೂ ಇಲ್ಲದಂತಾ ಗಿದೆ. ಕಳೆದ ಫೆಬ್ರವರಿಯಲ್ಲಿ ಆರಂಭ ವಾದ ಕಾಮ ಗಾರಿಯು 6 ತಿಂಗಳು ಕಳೆಯುತ್ತಿ ದ್ದರೂ ಕಾಮಗಾರಿ ಸಂಪೂರ್ಣವಾಗುವ ಸೂಚನೆಯೇ ಕಾಣುತ್ತಿಲ್ಲ.

ಗುಂಡಿಮಯವಾದ ರಸ್ತೆಗಳು: ಕೆ.ಆರ್‌.ಪೇಟೆ ಪಟ್ಟಣದ ಪ್ರಮುಖ ಅಡ್ಡ ರಸ್ತೆಗಳಾಗಿರುವ ಹಳೇ ಮತ್ತು ಹೊಸ ಕಿಕ್ಕೇರಿ ರಸ್ತೆಗಳು ಸಂಪೂರ್ಣವಾಗಿ ಗುಂಡಿ ಬಿದ್ದು ಹಾಳಾಗಿರುವುದರಿಂದ ಗುಂಡಿ ಮಯ ವಾದ ರಸ್ತೆಗಳಲ್ಲಿ ವಾಹನಗಳು ಧೂಳೆಬ್ಬಿಸಿ ಕೊಂಡು ಓಡಾಡುತ್ತಿರುವುದರಿಂದ ಸಾರ್ವ ಜನಿಕರು ಹಾಗೂ ರಸ್ತೆ ಅಕ್ಕಪಕ್ಕದ ನಿವಾಸಿಗಳು ಅನಿವಾರ್ಯವಾಗಿ ಧೂಳು ಕುಡಿದು ಹಲವು ರೋಗ ಗಳಿಗೆ ತುತ್ತಾಗಿ ನರಳುತ್ತಿದ್ದಾರೆ. ಜನ ಸಾಮಾ ನ್ಯರ ಆರೋಗ್ಯದ ಜೊತೆ ಚೆಲ್ಲಾಟ ವಾಡಿ ಕೊಂಡು ಕಳಪೆ ಕಾಮಗಾರಿ ನಡೆಸಿ ಕೆಲಸ ಸಂಪೂ ರ್ಣ ಗೊಳಿಸದೇ ಬೇಜವಾಬ್ದಾರಿಯಿಂದ ವರ್ತಿ ಸುತ್ತಿರುವ ಗುತ್ತಿಗೆದಾರನ ವಿರುದ್ಧ ಕಾನೂನು ಕ್ರಮ ಕೈಗೊಂಡು ಕಪ್ಪುಪಟ್ಟಿಗೆ ಸೇರಿಸಬೇಕು ಎಂಬುದು ಪಟ್ಟಣದ ನಾಗರಿಕರ ಒತ್ತಾಯವಾಗಿದೆ.

ಪುರಸಭೆಯಲ್ಲಿ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ, ಮುಖ್ಯಾಧಿಕಾರಿಗಳ ಹುದ್ದೆ ಖಾಲಿ ಇದ್ದು, ಪ್ರಭಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಯಾರೂ ಕೂಡಾ ನಗರ ಅಭಿವೃದ್ಧಿಯ ಕಡೆ ಗಮನ  ಹರಿಸುತ್ತಿಲ್ಲ ಎಂಬುದು  ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

ನಗರೋತ್ಥಾನ ಯೋಜನೆ ಅಡಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಟೆಂಡರ್‌ ಪ್ರಕ್ರಿಯೆ ಮುಗಿದು. ಅರ್ಧಂಬರ್ಧ ಕಾಮಗಾರಿ ನಡೆಸಿ ಕೈಚೆಲ್ಲಿ ಕುಳಿತಿರುವ ಗುತ್ತಿಗೆದಾರನಿಂದ ಕಾಮಗಾರಿಯನ್ನು ಸಂಪೂರ್ಣಗೊಳಿಸಿ ದೂಳಿನ ವಾತಾವರಣ ಹೋಗಲಾಡಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು.ಕೆ.ಎಸ್‌.ಸುರೇಶ್‌ಕುಮಾರ್‌, ಹಿರಿಯ ನಾಗರಿಕರ ವೇದಿಕೆ  ಪ್ರಧಾನ ಕಾರ್ಯದರ್ಶಿ

ಹಳೆ ಹಾಗೂ ಹೊಸ ಕಿಕ್ಕೇರಿ ರಸ್ತೆಗಳು ಕೆ.ಆರ್‌.ಪೇಟೆ ಪಟ್ಟಣದ ಜನದಟ್ಟಣೆಯ ಪ್ರಮುಖ ರಸ್ತೆಗಳಾಗಿವೆ. ಪುರಸಭೆಯ ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿಗಳು ಗುತ್ತಿಗೆದಾರನಿಗೆ ಎಚ್ಚರಿಕೆ ನೀಡಿ ಆದಷ್ಟು ಜಾಗ್ರತೆಯಾಗಿ ರಸ್ತೆ ಕೆಲಸವನ್ನು ಸಂಪೂರ್ಣಗೊಳಿಸಿ ಶ್ರೀಸಾಮಾನ್ಯರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು.ಡಿ.ಪ್ರೇಮಕುಮಾರ, ಪುರಸಭಾ ಸದಸ್ಯ 

-ಅರುಣ್‌ ಕುಮಾರ್‌

 

ಟಾಪ್ ನ್ಯೂಸ್

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.