ನಿಷ್ಠರಿಗೆ ಅನ್ಯಾಯ ಮಾಡಲ್ಲ, ದ್ರೋಹಿಗಳ ಕ್ಷಮಿಸಲ್ಲ
Team Udayavani, Feb 12, 2017, 3:45 AM IST
ಭಾರತೀನಗರ(ಮಂಡ್ಯ): ನಿಷ್ಠಾವಂತರಿಗೆ ಜೆಡಿಎಸ್ ಯಾವತ್ತೂ ಅನ್ಯಾಯ ಮಾಡಿಲ್ಲ. ಹಾಗೆಯೇ ಪಕ್ಷಕ್ಕೆ ದ್ರೋಹ ಎಸಗಿದವರನ್ನು ಕ್ಷಮಿಸುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮಕ್ಕೆಂದು ಭಾರತೀನಗರಕ್ಕೆ ಆಗಮಿಸಿದ್ದ ಅವರು, ವಿಧಾನಸಭಾ ಅಧಿವೇಶನದ ವೇಳೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಜೆಡಿಎಸ್ ಭಿನ್ನಮತೀಯ ಶಾಸಕ ಚಲುವರಾಯಸ್ವಾಮಿ ನಡುವಿನ ಮಾತುಕತೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ವಿಧಾನಸಭಾ ಅಧಿವೇಶನದ ಸಂದರ್ಭದಲ್ಲಿ ಜೆಡಿಎಸ್ ಬಂಡಾಯ ಶಾಸಕ ಚಲುವರಾಯಸ್ವಾಮಿ¿, ಎಚ್.ಡಿ.ರೇವಣ್ಣ ಅವರೊಂದಿಗೆ ಕುಳಿತಿರುವ ಕುರಿತು ಗಾಳಿಸುದ್ದಿ ಹಬ್ಬಿದೆ. ನಿಷ್ಠಾವಂತ ಕಾರ್ಯಕರ್ತರಿಗೆ ನಮ್ಮ ಪಕ್ಷ ಯಾವತ್ತೂ ಅನ್ಯಾಯ ಮಾಡಿಲ್ಲ. ಅದರಂತೆ ಪಕ್ಷಕ್ಕೆ ದ್ರೋಹ ಮಾಡಿದವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ.
ಚಲುವರಾಯಸ್ವಾಮಿ, ರೇವಣ್ಣ ಜತೆಗಿದ್ದರು ಎಂಬುದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದರು.
ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಬಿಜೆಪಿ ಸೇರುತ್ತಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆಯೇ ಹೊರತು ಕೃಷ್ಣ ಅವರು ತಮ್ಮ ನಿಲುವನ್ನು ಬಹಿರಂಗಪಡಿಸಿಲ್ಲ. ಹಾಗಾಗಿ ಕೃಷ್ಣ ಅವರು ಬಿಜೆಪಿ ಸೇರುತ್ತಾರೆಂಬುದು ಕೇವಲ ವದಂತಿ ಅಷ್ಟೆ. ಅವರು ಬಿಜೆಪಿಗೆ ಹೋಗುತ್ತಾರೆ ಎನ್ನುವುದು ಅನುಮಾನ. ರಾಜ್ಯದ ಹಿತದೃಷ್ಟಿಯಿಂದ ಅವರು ಅಂತಹ ತಪ್ಪು ಮಾಡುವುದಿಲ್ಲ ಎಂದುಕೊಂಡಿದ್ದೇನೆ ಎಂದರು.
ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಅವರನ್ನು ಜೆಡಿಎಸ್ಗೆ ಕರೆತಂದು ಮದ್ದೂರು ಕ್ಷೇತ್ರದಿಂದ ಕಣಕ್ಕಿಳಿಸುವ ಆಲೋಚನೆಗಳು ಪಕ್ಷದಲ್ಲಿಲ್ಲ. ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂಬ ನಿಟ್ಟಿನಲ್ಲಿ ಉತ್ತರ ಕರ್ನಾಟಕ ಭಾಗದಲ್ಲೂ ಹೆಚ್ಚಿನ ಸಂಘಟನೆಗೆ ಒತ್ತು ನೀಡಿದ್ದು, ಆ ಭಾಗದಲ್ಲಿ 40ರಿಂದ 45 ಸ್ಥಾನಗಳನ್ನು ಗೆಲ್ಲಿಸಿಕೊಳ್ಳುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ