25ರಂದು ಮಡಿವಾಳ ಮಾಚಿದೇವರ ಜಯಂತಿ
Team Udayavani, Feb 23, 2020, 3:44 PM IST
ಮಳವಳ್ಳಿ: ತಾಲೂಕು ಮಡಿವಾಳ ಮಾಚಿದೇವರ ಸಂಘದ ವತಿಯಿಂದ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮವು ಫೆ.25ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ತಾಲೂಕು ಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಮಾಚಿದೇವರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಪ್ರತಿಷ್ಠಾಪಿಸಿ ಮಾಚಿದೇವರ ದೇವಸ್ಥಾನದಿಂದ ಅಂಬೇಡ್ಕರ್ ಭವನದ ವರೆಗೆ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಲಿದ್ದು, ಕಾರ್ಯ ಕ್ರಮವನ್ನು ಶಾಸಕ ಡಾ.ಕೆ.ಅನ್ನದಾನಿ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ರಾಜ್ಯ ಮಡಿವಾಳ ಸಂಘದ ಅಧ್ಯಕ್ಷ ನಂಜಪ್ಪ, ಜೆಡಿಎಸ್ ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಕೆ.ವಿ.ಅಮರ್ ನಾಥ್, ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಸಿದ್ದರಾಜು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಹೀಗಾಗಿ ವಿವಿಧ ಸಂಘ ಸಂಸ್ಥೆಯ ಮುಖಂಡರು, ತಾಲೂಕು ಮಡಿವಾಳ ಮಾಚಿದೇವರ ಸಂಘದ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯ ಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಮನವಿ ಮಾಡಿದರು.
ತಾಲೂಕು ಮಡಿವಾಳ ಮಾಚಿದೇವರ ಸಂಘದ ಗೌರವ ಅಧ್ಯಕ್ಷ ಸಿದ್ದಪ್ಪಾಜಿ, ಕಾರ್ಯಾಧ್ಯಕ್ಷ ವೀರಭದ್ರಣ್ಣ, ಉಪಾಧ್ಯಕ್ಷ ಗಣೇಶ್ ಕರಳಕಟ್ಟೆ, ವಿಶಾಲಕ್ಷ್ಮಮ್ಮ, ಖಜಾಂಚಿ ತಳಗವಾದಿ ನಿಂಗರಾಜು, ರೇವಣ್ಣ, ಕೆಇಬಿ ನಾಗರಾಜು, ರಮೇಶ್ ಮಹದೇವು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…