ಮನೆಗಳು ಬಿರುಕು: ಶಾಸಕರಿಂದ ಪರಿಹಾರ ಭರವಸೆ
Team Udayavani, Jul 26, 2021, 7:21 PM IST
ಮದ್ದೂರು: ತಾಲೂಕಿನ ಚಂದಹಳ್ಳಿದೊಡ್ಡಿ ಗ್ರಾಮದಲ್ಲಿಕಲ್ಲುಗಣಿಗಾರಿಕೆಯಿಂದ ಮನೆಗಳು ಬಿರುಕು ಬಿಟ್ಟಿರುವಹಿನ್ನೆಲೆ ಪರಿಹಾರ ನೀಡುವಂತೆ ಒತ್ತಾಯಿಸಿ ಸ್ಥಳೀಯಗ್ರಾಮಸ್ಥರು ಡಿಬಿಎಲ್ ಕಂಪನಿ ವಿರುದ್ಧ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಶಾಸಕ ಡಿ.ಸಿ. ತಮ್ಮಣ್ಣ ಅಧಿಕಾರಿಗಳೊಟ್ಟಿಗೆಭೇಟಿ ನೀಡಿ ಪರಿಶೀಲನೆ ನಡೆಸಿ ಚರ್ಚಿಸಿದರು.
ತಾಲೂಕಿನ ಚಂದಹಳ್ಳಿದೊಡ್ಡಿ ಗ್ರಾಮದಲ್ಲಿ ಕಳೆದಎರಡು ದಿನಗಳ ಹಿಂದೆ ಸ್ಥಳೀಯ ಸಾರ್ವಜನಿಕರುಹಾಗೂ ಚುನಾಯಿತ ಪ್ರತಿನಿಧಿಗಳು ಪರಿಹಾರ ವಿತರಿಸುವಂತೆ ನಡೆಸುತ್ತಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೆನಿರ್ಲಕ್ಷ್ಯ ವಹಿಸಿರುವ ಕಂಪನಿ ವಿರುದ್ಧ ಘೋಷಣೆಕೂಗಿದರಲ್ಲದೇ ಕೂಡಲೇ ಪರಿಹಾರ ದೊರಕಿಸಿಕೊಡುವಂತೆ ಶಾಸಕರಲ್ಲಿ ಮನವಿ ಮಾಡಿದರು.
ದಿನ ನಿತ್ಯ ಕಲ್ಲುಗಣಿಗಾರಿಕೆ ನಡೆಯುತ್ತಿರುವುದರಿಂದರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು ಮನೆ, ದೇವಾಲಯ, ಅಂಗನವಾಡಿ ಕಟ್ಟಡ ಇನ್ನಿತರೆ ಕಟ್ಟಡಗಳು ಬಿರುಕುಬಿಟ್ಟು ಬೀಳುವ ಪರಿಸ್ಥಿತಿಯಲ್ಲಿರುವ ಜತೆಗೆ ಸ್ಫೋಟಕವಸ್ತುಗಳನ್ನು ಸಿಡಿಸುವುದರಿಂದ ಜಮೀನುಗಳಲ್ಲಿ ಬೆಳೆಬೆಳೆಯದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಭಯದವಾತಾವರಣದಲ್ಲಿ ಜೀವನ ಸಾಗಿಸಬೇಕಾದ ಅನಿವಾರ್ಯತೆ ಬಂದೊದಗಿದೆ ಎಂದು ಅಳಲು ತೋಡಿ ಕೊಂಡರು.
ಬಳಿಕ ಮಾತನಾಡಿದ ಶಾಸಕ ಡಿ.ಸಿ.ತಮ್ಮಣ್ಣ, ರಸ್ತೆಹಾಗೂ ಮನೆಗಳು ಬಿರುಕು ಬಿಟ್ಟಿರುವ ಬಗ್ಗೆ ಸಮರ್ಪಕಮಾಹಿತಿ ಕಲೆಹಾಕುವಂತೆ ಸಂಬಂಧಿಸಿದ ಅಧಿಕಾರಿಗಳಿಗೆಸೂಚಿಸಿದ್ದು, ಚಂದಹಳ್ಳಿದೊಡ್ಡಿ ಗ್ರಾಮದಿಂದ ಡಿ.ಹೊಸೂರು ವರೆಗೆ ರಸ್ತೆ ನಿರ್ಮಿಸಲು ಕಂಪನಿ ಅಧಿಕಾರಿಗಳಿಗೆ ತಿಳಿಸಿದ್ದು, ಬಿರುಕು ಬಿಟ್ಟಿರುವ ಮನೆಗಳಿಗೆ ಕೂಡಲೇಪರಿಹಾರ ವಿತರಿಸುವುದಾಗಿ ಭರವಸೆ ನೀಡಿದ ಬಳಿಕಪ್ರತಿಭಟನೆ ಹಿಂಪಡೆದರು. ಈ ವೇಳೆ ಗ್ರಾಪಂ ಸದಸ್ಯರಾಮಕೃಷ್ಣ, ಮುಂಖಡರಾದ ಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ