ಗುಂಡಿಗೆ ಇದ್ದರೇ ಈ ಗುಂಡಿ ರಸ್ತೆಗೆ ಬನ್ನಿ


Team Udayavani, Jan 22, 2021, 1:24 PM IST

madya road issue

ಮಂಡ್ಯ: ಕೆ.ಆರ್‌.ಪೇಟೆ ಪಟ್ಟಣದ ಹಳೇ ಕಿಕ್ಕೇರಿ ರಸ್ತೆಯು ಹಳ್ಳ, ಗುಂಡಿ ಗಳಿಂದ ಕೂಡಿದೆ. ಇದರಿಂದ ಪ್ರತಿ ದಿನ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರತಿನಿತ್ಯ ಸಾವಿರಾರು ಸಂಖ್ಯೆಯ ವಾಹನಗಳು ಸಂಚಾರ ಮಾಡುವ ಜನನಿಬಿಡ ರಸ್ತೆಯಾಗಿದ್ದು, ಈ ರಸ್ತೆಯಲ್ಲಿ ಬಸವೇಶ್ವರ ಚಿತ್ರ ಮಂದಿರ, ಬ್ಯಾಂಕ್‌ಗಳು, ಖಾಸಗಿ ಆಸ್ಪತ್ರೆಗಳು, ಅಂಗಡಿ -ಮುಂಗಟ್ಟುಗಳು, ವಾಣಿಜ್ಯ ಕಟ್ಟಡಗಳು, ವಿವಿಧ ಮಳಿಗೆಗಳಿದ್ದು, ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಸಂಚಾರ ಮಾಡುತ್ತವೆ.

ಬೀದಿ ದೀಪಗಳು ಹಾಳು: ಮುಖ್ಯ ರಸ್ತೆಗೆ ಹೊಂದಿಕೊಂಡಂತೆ ಇರುವ ಮಸೀದಿಯಿಂದ ಟೌನ್‌ಕ್ಲಬ್‌ವರೆಗೆ ದ್ವಿಚಕ್ರ ವಾಹನಗಳನ್ನು ಚಲಾಯಿಸಲು ಎದುರಾಗುವ ಗುಂಡಿಗಳು ಸಾಕಷ್ಟು ಕಿರಿಕಿರಿ ಉಂಟು ಮಾಡುತ್ತದೆ. ಕಾರು, ಲಾರಿಗಳು ಸಂಚಾರ ಮಾಡಬೇಕಾದರೆ ಡ್ರೆçವರ್‌ಗಳ ಕಥೆಯಂತೂ ಹೇಳ ತೀರದಾಗಿದೆ. ಒಂದು ಗುಂಡಿಯನ್ನು ತಪ್ಪಿಸಲು ಹೋದರೆ ಮತ್ತೂಂದು ಗುಂಡಿಗೆ ವಾಹನದ ಚಕ್ರಗಳು ಇಳಿಯುತ್ತವೆ. ಅಷ್ಟರ ಮಟ್ಟಿಗೆ ರಸ್ತೆ ಹಾಳಾ ಗಿದೆ. ರಸ್ತೆಯ ಇಕ್ಕೆಲಗಳಲ್ಲಿರುವ ಬೀದಿ ದೀಪಗಳು ಕೆಟ್ಟು ನಿಂತಿರುವುದ ರಿಂದ ರಾತ್ರಿ ವೇಳೆಯಲ್ಲಿ ಸಂಚಾರ ಮಾಡಲು ಸಾಧ್ಯವಾಗುತ್ತಿಲ್ಲ. ಅಲ್ಲದೆ, ಒಳ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮಳೆ ಬಂದಾಗ ಗುಂಡಿಗಳಲ್ಲಿ ನೀರು ನಿಲ್ಲುತ್ತದೆ. ಇದರಿಂದ ವಾಹನ ಸವಾರರಿಗೆ ರಸ್ತೆಯೇ ಗೋಚರಿಸು ವುದಿಲ್ಲ. ಇದರಿಂದ ವಾಹನ ಸವಾರರು ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ.

ಕಂಡೂ ಕಾಣದಂತೆ ವರ್ತನೆ: ಇದೇ ರಸ್ತೆಯಲ್ಲಿ ಸಚಿವ ನಾರಾಯಣಗೌಡ ಸೇರಿ ದಂತೆ ಜಿಪಂ ಸದಸ್ಯರು, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷರು, ಬ್ಯಾಂಕ್‌ ಉದ್ಯೋಗಿಗಳು, ವ್ಯಾಪಾರ ವಹಿವಾಟು ನಡೆಸುವವರು ಎಲ್ಲರೂ ಸಂಚಾರ ಮಾಡುತ್ತಿದ್ದರೂ ಕಂಡೂ ಕಾಣದಂತೆ ಇರುವುದು ಸಾರ್ವಜನಿಕರನ್ನು ಕೆರಳುವಂತೆ ಮಾಡಿದೆ.

ಅನುದಾನವಿದ್ದರೂ ಬಳಕೆ ಮಾಡಿಲ್ಲ: ಪಟ್ಟಣದ ಅಭಿವೃದ್ಧಿಗೆ ಕೋಟಿ ಕೋಟಿ ರೂ. ಅನುದಾನ ಬಂದಿದೆ. ಆದರೂ ರಸ್ತೆಯ ದುರಸ್ತಿಯನ್ನಾಗಲೀ ಅಥವಾ ಗುಂಡಿಗಳನ್ನು ಮುಚ್ಚದೇ ಇರುವುದು ಮಾತ್ರ ವಿಪರ್ಯಾಸ. ಪ್ರತಿನಿತ್ಯ ಸಾರ್ವಜನಿಕರು ಹಾಗೂ ವಾಹನ ಸವಾರರು ಹಿಡಿಶಾಪ ಹಾಕುತ್ತಿ  ದ್ದಾರೆ. ಕೂಡಲೇ ಹೊಸ ರಸ್ತೆ ನಿರ್ಮಿಸಬೇಕು. ಇಲ್ಲವಾದಲ್ಲಿ ರಸ್ತೆಯ ಗುಂಡಿ ಗಳನ್ನಾದರೂ ಮುಚ್ಚಬೇಕು ಎಂದು ಸಾರ್ವಜನಿಕರು ಪುರಪಿತೃ ಗಳಿಗೆ ಹಾಗೂ ಪುರಸಭೆ ಮುಖ್ಯಾಧಿಕಾರಿಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ವಿಟಿಯು ಆನ್ ಲೈನ್- ಆಫ್ ಲೈನ್ ಪರೀಕ್ಷೆ ಗೊಂದಲ: ಮಹತ್ವದ ಆದೇಶ ನೀಡಿದ ಹೈಕೋರ್ಟ್

ಪಟ್ಟಣದ ಎಲ್ಲಾ ಬಡಾವಣೆಗಳಲ್ಲಿ ಯುಜಿಡಿ ಕಾಮಗಾರಿಯನ್ನು ಅಂತಿಮಗೊಳಿಸಿ, ನಂತರ ಹಳೇ ಕಿಕ್ಕೇರಿ ರಸ್ತೆ ಮತ್ತು ಹೊಸ ಕಿಕ್ಕೇರಿ ರಸ್ತೆಯನ್ನು ಸಂಪೂರ್ಣವಾಗಿ ಹೊಸದಾಗಿ ನಿರ್ಮಿಸಲಾಗುತ್ತದೆ. ಕೂಡಲೇ ಆ ಕಾಮಗಾರಿಗೆ ಚಾಲನೆ ನೀಡಲಿದ್ದೇವೆ.

 ಸತೀಶ್ಕುಮಾರ್‌, ಮುಖ್ಯಾಧಿಕಾರಿ, ಪುರಸಭೆ, ಕೆ.ಆರ್‌.ಪೇಟೆ

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.