ಇಂದಿನಿಂದ 13ರವರೆಗೆ ಮಹದೇಶ್ವರ ಜ್ಯೋತಿ ಯಾತ್ರೆ

14ರಿಂದ 16ರವರೆಗೆ ಮಹಾಕುಂಭಮೇಳ; ಮೂರು ವಾಹನಗಳ ಮೂಲಕ ಜ್ಯೋತಿ ಯಾತ್ರೆ ಸಂಚಾರ

Team Udayavani, Oct 6, 2022, 3:01 PM IST

21

ಮಂಡ್ಯ: ಜಿಲ್ಲೆಯ ಕೆ.ಆರ್‌.ಪೇಟೆ ತಾಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅ.14ರಿಂದ 16ರವರೆಗೆ ಮಹಾಕುಂಭಮೇಳ ಪುಣ್ಯಸ್ನಾನ ನಡೆಯಲಿರುವ ಹಿನ್ನೆಲೆ ಅ.6ರಂದು ಮಹದೇಶ್ವರ ಬೆಟ್ಟದಿಂದ ಮೂರು ವಾಹನಗಳ ಮೂಲಕ ಜ್ಯೋತಿ ಯಾತ್ರೆ ಆರಂಭಗೊಳ್ಳಲಿದೆ.

ಜ್ಯೋತಿ ಯಾತ್ರೆ ಚಾಮರಾಜನಗರ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಸಂಚರಿಸಿ ತ್ರಿವೇಣಿ ಸಂಗಮ ಸೇರಲಿದೆ.

ಮೊದಲನೇ ವಾಹನ ಸಂಚರಿಸುವ ಮಾರ್ಗ ಅ.6ರಂದು ಶ್ರೀ ಮಲೆ ಮಹದೇಶ್ವರ ಬೆಟ್ಟದಿಂದ ಸಾಲೂರು ಮಠ- ಹನೂರು- ಕುಂತೂರು- ಕೊಳ್ಳೇಗಾಲದ ಮಾರ್ಗವಾಗಿ ಸಂಚರಿಸಿ ಟಿ.ನರಸೀಪುರ ಜಗದ್ಗುರು ಶಿವರಾತ್ರೀಶ್ವರ ಮಂಗಳ ಮಂಟಪದಲ್ಲಿ ವಾಸ್ತವ್ಯ ಹೂಡಲಿದೆ.

ಮಠದಲ್ಲಿ ವಾಸ್ತವ್ಯ: 7ರ ಬೆಳಗ್ಗೆ ಟಿ.ನರಸೀಪುರದಿಂದ ಕರೊಹಟ್ಟಿ, ವಾಟಾಳು, ಮೂಗೂರು-ಸಂತೇಮರಳ್ಳಿ, ಯಳಂದೂರು ಇರಸುವಾಡಿ- ಮಸಣಾಪುರ-ಹೊಂಗನೂರು-ರೇ ಚಂಬಳ್ಳಿ-ಕಾಗಲವಾಡಿ, ಹುರಳಿಬಂಜನಪುರ, ಸರಗೂರು, ಚಂದಕವಾಡಿ, ಕೋಡಿಮೋಳೆ, ರಾಮಸಮುದ್ರ ಮಾರ್ಗವಾಗಿ ಸಂಚರಿಸಿ ಚಾಮರಾಜನಗರ ಸಿದ್ದಮಲ್ಲೇಶ್ವರ ಮಠದಲ್ಲಿ ವಾಸ್ತವ್ಯ ಹೂಡಲಿದೆ.

ಸಂಚಾರ: 8ರ ಬೆಳಗ್ಗೆ ಚಾಮರಾಜನಗರದಿಂದ ಗುಂಡ್ಲುಪೇಟೆ- ನಂಜನಗೂಡು -ಸುತ್ತೂರು ಮಠ- ಮಾರ್ಗವಾಗಿ ಸಂಚರಿಸಿ ಸುತ್ತೂರು ಮಠದಲ್ಲಿ ವಾಸ್ತವ್ಯ ಹೂಡಲಿದೆ. 9ರ ಬೆಳಗ್ಗೆ ಸುತ್ತೂರು ಮಠದಿಂದ ಅಲತ್ತೂರುಹುಂಡಿ, ಮಾದಯ್ಯನಹುಂಡಿ, ಮಲ್ಲರಾಜ ಯ್ಯನಹುಂಡಿ, ಮೂಡಳ್ಳಿ, ಹದಿನಾರು, ಮರಿಗೌಡನಹುಂಡಿ, ದೇವಲಾಪುರ, ಚಿಕ್ಕೇಗೌಡನಹುಂಡಿ, ಹೊಸಹುಂಡಿ, ತ್ರಿನೇಶ್ವರ ದೇವಸ್ಥಾನದ ಅರಮನೆ- ಮೈಸೂರು-ಚಾಮುಂಡಿ ಬೆಟ್ಟ- ಲಕ್ಷ್ಮೀಕಾಂತ ದೇವಸ್ಥಾನ-ಒಂಟಿಕೊಪ್ಪಲ್‌ -ವೆಂಕಟೇಶ್ವರ ದೇವಸ್ಥಾನ- ಚಂದ್ರಮೌಳೇಶ್ವರ ದೇವಸ್ಥಾನ- ಹೆಗ್ಗಡ ದೇವನಕೋಟೆ- ಸರಗೂರು ಹ್ಯಾಂಡ್‌ ಪೋಸ್ಟ್‌ ಮಾರ್ಗವಾಗಿ ಸಂಚರಿಸಿ ಶ್ರೀ ಮಹದೇಶ್ವರ ದೇಗುಲ ಭೀಮ ಕೊಲ್ಲಿಯಲ್ಲಿ ವಾಸ್ತವ್ಯ ಹೂಡಲಿದೆ.

10ರ ಬೆಳಗ್ಗೆ ಶ್ರೀ ಮಹದೇಶ್ವರ ದೇಗುಲ ಭೀಮ ಕೊಲ್ಲಿಯಿಂದ ಹೆಗ್ಗಡೆ ದೇವನಕೋಟೆ-ಅಂತರಸಂತಿ-ಬೇಲದ ಕುಪ್ಪೆ ಮಾರ್ಗವಾಗಿ ಸಂಚರಿಸಿ ಗದ್ದಿಗೆ ಶ್ರೀ ಕೆಂಡಗಣೇಶ್ವರ ದೇಗುಲದಲ್ಲಿ ವಾಸ್ತವ್ಯ ಹೂಡಲಿದೆ. 11ರ ಬೆಳಗ್ಗೆ ಗದ್ದಿಗೆ ಶ್ರೀ ಕೆಂಡಗಣೇಶ್ವರ ದೇಗುಲದಿಂದ ಹುಣಸೂರು-ಬೆಟ್ಟದಪುರ ಮಾರ್ಗವಾಗಿ ಮಹಾದೇಶ್ವರ ದೇಗುಲ ಪಿರಿಯಾಪಟ್ಟಣದಲ್ಲಿ ವಾಸ್ತವ್ಯ ಹೂಡಲಿದೆ.

12ರ ಬೆಳಗ್ಗೆ ಪಿರಿಯಾಪಟ್ಟಣದಿಂದ ಶಿವ ದೇವಸ್ಥಾನ-ಪಿರಿಯಾಪಟ್ಟಣ-ಹುಣಸೂರು-ತಿಪ್ಪೂರು-ಸಾಲಿಗ್ರಾಮ-ಕೆ.ಆರ್‌.ನಗರ-ಎಡತೊರೆ- ಅರ್ಕೇಶ್ವರ ದೇವಸ್ಥಾನ- ಆಲಂಬಾಡಿ ಕಾವಲು- ಅಕ್ಕಿ ಹೆಬ್ಟಾಳು ಮಾರ್ಗವಾಗಿ ಕೆ.ಆರ್‌.ಪೇಟೆಯಲ್ಲಿ ವಾಸ್ತವ್ಯ ಹೂಡಲಿದೆ. 13ರ ಬೆಳಗ್ಗೆ ಕೆ.ಆರ್‌.ಪೇಟೆಯಿಂದ ಮತ್ತಿಘಟ್ಟ-ವಿಠಲಾಪುರ -ಸೋಮನಹಳ್ಳಿ -ಪುರ- ಅಂಬಿಗರಹಳ್ಳಿ ಮಾರ್ಗವಾಗಿ ಸಂಚರಿಸಿ ತ್ರಿವೇಣಿ ಸಂಗಮಕ್ಕೆ ಆಗಮಿಸಲಿದೆ.

3ನೇ ವಾಹನ: 6ರ ಬೆಳಗ್ಗೆ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಜ್ಯೋತಿ ಯಾತ್ರೆ ಹನೂರು- ಕೊಳ್ಳೇಗಾಲ -ಮರಡಿಗುಡ್ಡ (ವಿಶೇಷ ಪೂಜೆ) ಬನ್ನೂರು- ಬೆಳವಾಡಿ -ಪಾಲಳ್ಳಿ ಬೆಳಗೋಳ- ಕೆಆರ್‌ಎಸ್‌ ಕನ್ನಂಬಾಡಿ- ವೇಣುಗೋಪಾಲಸ್ವಾಮಿ ಡಿಂಕಾ ಬಲ್ಲೇನಹಳ್ಳಿ ಮಾರ್ಗವಾಗಿ ಸಂಚರಿಸಿ ಕಲ್ಲಹಳ್ಳಿ ಭೂ ವರಾಹನಾಥಸ್ವಾಮಿ ದೇವಸ್ಥಾನದಲ್ಲಿ ವಾಸ್ತವ್ಯ ಹೂಡಲಿದೆ.

7ರ ಬೆಳಗ್ಗೆ ಕಲ್ಲಹಳ್ಳಿ ಭೂವರಾಹನಾಥಸ್ವಾಮಿ ದೇವಸ್ಥಾನದಿಂದ ಬಲ್ಲೇನಹಳ್ಳಿ ಗ್ರಾಪಂನ ಗ್ರಾಮಗಳು- ಭೂಕನಕೆರೆ ಗ್ರಾಪಂ ಗ್ರಾಮಗಳು-ತೆಂಡೆಕೆರೆ-ಶೀಳನೆರೆ ಮಾರ್ಗವಾಗಿ ಸಂಚರಿಸಿ ಶೀಳನೆರೆಯಲ್ಲಿ ವಾಸ್ತವ್ಯ ಹೂಡಲಿದೆ. 8ರ ಬೆಳಗ್ಗೆ ಶೀಳನೆರೆಯಿಂದ ಸಿಂಧಘಟ್ಟ- ಹರಳಹಳ್ಳಿ -ಚೌಡೇನಹಳ್ಳಿ -ಮಾಕಾವಳ್ಳಿ ಬಂಡಿಹೊಳೆ ಮಾರ್ಗವಾಗಿ ಸಂಚರಿಸಿ ಬಂಡಿಹೊಳೆಯಲ್ಲಿ ವಾಸ್ತವ್ಯ ಹೂಡಲಿದೆ.

9ರಂದು ಬಂಡಿಹೊಳೆಯಿಂದ ಹರಿಹರಪುರ- ಮಡುವಿನಕೋಡಿ -ಬಳ್ಳೇಕೆರೆ- ಐಚನಹಳ್ಳಿ ಮಾರ್ಗವಾಗಿ ಸಂಚರಿಸಿ ಗಂಜಿಗೆರೆಯಲ್ಲಿ ವಾಸ್ತವ್ಯ ಹೂಡಲಿದೆ.

ತ್ರಿವೇಣಿ ಸಂಗಮ: 10ರ ಬೆಳಗ್ಗೆ ಗಂಜಿಗೆರೆ ಭಾರತೀಪುರ ಕ್ರಾಸ್‌-ಅಘಲಯ- ಸಂತೆ ಬಾಚನಹಳ್ಳಿ -ರಂಗನಾಥಪುರ ಕ್ರಾಸ್‌-ಸಾರಂಗಿ ಮಾರ್ಗವಾಗಿ ಸಂಚರಿಸಿ ಆಗ್ರಹಾರ ಬಾಚಹಳ್ಳಿದಲ್ಲಿ ವಾಸ್ತವ್ಯ ಹೂಡಲಿದೆ. 11ರ ಬೆಳಗ್ಗೆ ಆಗ್ರಹಾರ ಬಾಚಹಳ್ಳಿಯಿಂದ ಕಿಕ್ಕೇರಿ -ಲಕ್ಷ್ಮೀಪುರ- ಆನೆಗೋಳ- ಮಾದಾಪುರ-ದಬ್ಬೆಘಟ್ಟ ಮಾರ್ಗವಾಗಿ ಸಂಚರಿಸಿ ಐಕನಹಳ್ಳಿಯಲ್ಲಿ ವಾಸ್ತವ್ಯ ಹೂಡಲಿದೆ.

12ರ ಬೆಳಗ್ಗೆ ಹೈಕನಹಳ್ಳಿಯಿಂದ ಬೀರುವಳ್ಳಿ- ಹಿರಿಕಳಲೆ -ಮಂದಗೆರೆ ಮಾರ್ಗವಾಗಿ ಸಂಚರಿಸಿ ಕೆ.ಆರ್‌.ಪೇಟೆಯಲ್ಲಿ ವಾಸ್ತವ್ಯ ಹೂಡಲಿದೆ.

13ರ ಬೆಳಗ್ಗೆ ಕೆ.ಆರ್‌.ಪೇಟೆ ಟೌನ್‌ ಮಾರ್ಗವಾಗಿ ಸಂಚರಿಸಿ ತ್ರಿವೇಣಿ ಸಂಗಮ ತಲುಪಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

2ನೇ ವಾಹನ ಸಂಚಾರ

ಅ.6ರಂದು ಶ್ರೀ ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲ -ಹನೂರು -ಬಿ.ಜಿ.ಪುರ- ಮಾರ್ಗ ವಾಗಿ ಸಂಚರಿಸಿ ಬಿ.ಜಿ.ಪುರ ಮಂಟೇ ಸ್ವಾಮಿ ಕ್ಷೇತ್ರದ ದೇಗುಲದಲ್ಲಿ ವಾಸ್ತವ್ಯ ಹೂಡಲಿದೆ.

7ರ ಬೆಳಗ್ಗೆ ಬಿ.ಜಿ.ಪುರ ಮಂಟೇಸ್ವಾಮಿ ಪುಣ್ಯ ಕ್ಷೇತ್ರದಿಂದ ಹಲಗೂರು ಮಳವಳ್ಳಿ- ಕಸಬಾ 1, 2 ಮತ್ತು 3 -ಕಿರಗಾವಲು 1, 2 ಮತ್ತು 3 ಕೆ.ಎಂ.ದೊಡ್ಡಿ ಮಾರ್ಗವಾಗಿ ಸಂಚರಿಸಿ ಕೆ.ಎಂ.ದೊಡ್ಡಿ ಹನುಮಂತನಗರ ಆತ್ಮಲಿಂಗೇಶ್ವರ ದೇಗುಲದಲ್ಲಿ ವಾಸ್ತವ್ಯ ಹೂಡಲಿದೆ.

8ರ ಬೆಳಗ್ಗೆ ಕೆ.ಎಂ.ದೊಡ್ಡಿ ಹನುಮಂತನಗರ ಆತ್ಮಲಿಂಗೇಶ್ವರ ದೇಗುಲದಿಂದ ಆತಗೂರು -ಕೆಸ್ತೂರು -ಬೆಸಗರಹಳ್ಳಿ -ಕೊಪ್ಪ- ಬಿದರಕೋಟೆ – ಮಾರಗೌಡನಹಳ್ಳಿ ಮಾರ್ಗವಾಗಿ ಸಂಚರಿಸಿ ಕೆರಗೋಡು ಪಂಚಲಿಂಗೇಶ್ವರ ದೇಗುಲದಲ್ಲಿ ವಾಸ್ತವ್ಯ ಹೂಡಲಿದೆ.

9ರ ಬೆಳಗ್ಗೆ ಕೆರಗೋಡು ಶ್ರೀ ಪಂಚಲಿಂಗೇಶ್ವರ ದೇಗುಲದಿಂದ ಕೀಲಾರ- ಹನಕೆರೆ- ಮಂಡ್ಯ ಹುಲಿವಾನ -ಜೀಗುಂಡಿ ಪಟ್ಟಣ -ದುದ್ದ -ಶಿವಳ್ಳಿ ಚಂದಗಾವಲು -ಹೊಳಲು -ಯಲಿಯೂರು -ತೂಬಿನಕೆರೆ ಮಾರ್ಗವಾಗಿ ಸಂಚರಿಸಿ ಕೊತ್ತತ್ತಿಯಲ್ಲಿ ವಾಸ್ತವ್ಯ ಹೂಡಲಿದೆ.

ಚುಂಚನಗಿರಿಯಲ್ಲಿ ವಾಸ್ತವ್ಯ: 10ರ ಬೆಳಗ್ಗೆ ಅರಕೆರೆ 1, 2 ಮಹದೇವಪುರ -ಮಂಡ್ಯ ಕೊಪ್ಪಲು- ಶ್ರೀರಂಗಪಟ್ಟಣ ಶೆಟ್ಟಳ್ಳಿ 1 ಮತ್ತು 2 ದರಸಗುಪ್ಪೆ- ಉಕ್ಕುಡ- ಕ್ಯಾತನಹಳ್ಳಿ- ಅರಳಕುಪ್ಪೆ -ಹರವು- ಕಟ್ಟೆರಿ -ಗಾಮನಹಳ್ಳಿ -ಚಿನಕುರಳಿ ಬೆಟ್ಟಹಳ್ಳಿ -ಪಾಂಡವಪುರ- ಬೆಳ್ಳಾಳೆ- ಇಂಗಳಗುಪ್ಪೆ ಕೆರೆತೊನ್ನೂರು -ಟಿ.ಎಸ್‌.ಛತ್ರ -ಜಕ್ಕನಹಳ್ಳಿ ಮಾರ್ಗವಾಗಿ ಸಂಚರಿಸಿ ಮೇಲುಕೋಟೆಯಲ್ಲಿ ವಾಸ್ತವ್ಯ ಹೂಡಲಿದೆ.

11ರ ಬೆಳಗ್ಗೆ ಮೇಲುಕೋಟೆಯಿಂದ ಹೊಣಕೆರೆ- ದೇವಲಾಪುರ -ನಾಗಮಂಗಲ -ಬೆಳ್ಳೂರು ಮಾರ್ಗವಾಗಿ ಸಂಚರಿಸಿ ಚುಂಚನಗಿರಿಯಲ್ಲಿ ವಾಸ್ತವ್ಯ ಹೂಡಲಿದೆ. 12ರ ಬೆಳಗ್ಗೆ ಚುಂಚನಗಿರಿಯಿಂದ ಬಿಂಡಿಗನವಿಲೆ- ಕಂಬದಹಳ್ಳಿ -ಸಂತೇಬಾಚನಹಳ್ಳಿ ಮಾರ್ಗವಾಗಿ ಸಂಚರಿಸಿ ಕೆ.ಆರ್‌.ಪೇಟೆಯಲ್ಲಿ ವಾಸ್ತವ್ಯ ಹೂಡಲಿದೆ. 13ರ ಬೆಳಗ್ಗೆ ಕೆ.ಆರ್‌.ಪೇಟೆಯಿಂದ ಮತ್ತಿಘಟ್ಟ -ವಿಠಲಾಪುರ -ಸೋಮನಹಳ್ಳಿ- ಪುರ ಅಂಬಿಗರ ಹಳ್ಳಿ ಮಾರ್ಗವಾಗಿ ಸಂಚರಿಸಿ ತ್ರಿವೇಣಿ ಸಂಗಮ(ಆಗಮನ) ವಾಸ್ತವ್ಯ ಹೂಡಲಿದೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.