ಮಹಾರಾಷ್ಟ್ರ ಸರ್ಕಾರದ ಅವಿವೇಕಿತನ: ಪುಟ್ಟ ರಾಜು


Team Udayavani, May 3, 2020, 6:18 PM IST

Udayavani Kannada Newspaper

ಮಂಡ್ಯ: ಕೋವಿಡ್ 19 ಸೋಂಕಿನಿಂದ ಸೃಷ್ಟಿಯಾಗಿರುವ ಸಾಮಾಜಿಕ ತುರ್ತು ಪರಿಸ್ಥಿತಿ ವೇಳೆ ಸರ್ಕಾರಿ ಆ್ಯಂಬುಲೆನ್ಸ್‌ನಲ್ಲಿ ಶವ ಕಳುಹಿಸಲು ಅವಕಾಶ ಮಾಡಿಕೊಟ್ಟು ಮಹಾರಾಷ್ಟ್ರ ಸರ್ಕಾರ ಅವಿವೇಕತನ ಮೆರೆದಿದೆ ಎಂದು ಶಾಸಕ ಪುಟ್ಟರಾಜು ಟೀಕಿಸಿದರು.

ಮುಂಬೈನಿಂದ ಸರ್ಕಾರಿ ಆ್ಯಂಬುಲೆನ್ಸ್‌ ನಲ್ಲಿ ವ್ಯಕ್ತಿಯ ಶವವನ್ನು ಕಳುಹಿಸಿರುವುದರ ಹಿಂದೆ ಕಾಣದ ಕೈಗಳ ಕೈವಾಡವಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಇದರ ಹಿಂದೆ ಯಾರಿದ್ದಾರೆ ಎಂಬುದು ಪತ್ತೆ ಹಚ್ಚ ಬೇಕು. ಶವ ಹೊತ್ತ ಆ್ಯಂಬುಲೆನ್ಸ್‌ 42 ಚೆಕ್‌ಪೋಸ್ಟ್‌ಗಳನ್ನು ದಾಟಿ ಬರಬೇಕಾದರೂ ಬಲವಾದ ಪ್ರಭಾವವಿರುವಂತೆ ಕಾಣುತ್ತಿದೆ. ಯಾರೇ ಆಗಿ ದ್ದರೂ ಅವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದರು.

ಒಬ್ಬ ನಾಪತ್ತೆ: ಮುಂಬೈನಿಂದ ಆ್ಯಂಬುಲೆನ್ಸ್‌ ನಲ್ಲಿ ನಾಲ್ವರು ಬಂದಿದ್ದು, ಅವರಲ್ಲಿ ಒಬ್ಬರು ಕೆ.ಆರ್‌.ಪೇಟೆಯಲ್ಲೇ ಇಳಿದುಕೊಂಡಿದ್ದಾರೆ. ಆದರೆ, ವ್ಯಕ್ತಿಯ ಬಗ್ಗೆ ಯಾರಲ್ಲೂ ಮಾಹಿತಿ ಇಲ್ಲ. ಜಿಲ್ಲಾಡಳಿತ ಕೂಡಲೇ ಆತನನ್ನು ಪತ್ತೆ ಹಚ್ಚುವಂತೆ ಆಗ್ರಹಿಸಿದರು.

ಬಿ.ಕೊಡಗಹಳ್ಳಿ ಮೂಲದ ವ್ಯಕ್ತಿಯ ಶವ ಮುಂಬೈನಿಂದ ಆ್ಯಂಬುಲೆನ್ಸ್‌ನಲ್ಲಿ ಬರುತ್ತಿರುವ ವಿಷಯ ತಿಳಿದ ಕೂಡಲೇ ತಾಲೂಕು ಆಡಳಿತಕ್ಕೆ ಅದನ್ನು ಗಡಿಭಾಗದಲ್ಲೇ ತಡೆದು ಪರಿಶೀಲಿಸುವಂತೆ ಸೂಚಿಸಿದೆ. ಅದರಂತೆ ತಾಲೂಕು ಅಧಿಕಾರಿಗಳು ಆ್ಯಂಬುಲೆನ್ಸ್‌ ನ್ನು ತಡೆದು ತಪಾಸಣೆ ನಡೆಸಿದ್ದಾರೆ. ಆನಂತರ ಅಲ್ಲಿ ಔಷಧ ಸಿಂಪಡಿಸಿ, ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಬಳಿಕ ಬಿ.ಕೊಡಗಹಳ್ಳಿ ಒಳಗೆ ಪ್ರವೇಶಿಸಲು ಅವಕಾಶ ನೀಡದೆ. ಊರಿನಿಂದ ಒಂದೂವರೆ ಕಿ.ಮೀ. ದೂರದಲ್ಲೇ ಶವಕ್ಕೆ ಅಂತ್ಯಕ್ರಿಯೆ ನಡೆಸಲಾಯಿತು. ಗ್ರಾಮದವರು ಯಾರೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳದಂತೆ ಎಚ್ಚರ ವಹಿಸಲಾಗಿತ್ತು. ಒಂದು ವೇಳೆ ನಾನು ಆ್ಯಂಬುಲೆನ್ಸ್‌ ನ್ನು ವಾಪಸ್‌ ಕಳುಹಿಸಿದ್ದರೆ ಎಲ್ಲರ ಪಾಲಿಗೆ ಖಳ ನಾಯಕನಾಗುತ್ತಿದ್ದೆ ಎಂದು ಹೇಳಿದರು.

ಆ್ಯಂಬುಲೆನ್ಸ್‌ ಹಾಸನ ಹಾಗೂ ಕೆ.ಆರ್‌. ಪೇಟೆಯ ಹಲವಾರು ಗ್ರಾಮಗಳಲ್ಲಿ ನಿಂತು ಮೃತ ವ್ಯಕ್ತಿಯ ನೆಂಟರು ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಿರುವುದಾಗಿ ಹೇಳಲಾಗುತ್ತಿದೆ. ಇದೂ ಆಘಾತಕಾರಿ ಸಂಗತಿ ಎಂದರು.

ಪ್ರಕರಣ ದಾಖಲಿಸಿ: ಮುಂಬೈನಲ್ಲಿ ಕಂಡುಬಂದಿರುವ ಕೋವಿಡ್ 19  ವೈರಸ್‌ ಲಕ್ಷಣ ಬೇರೆ ರೀತಿಯಲ್ಲಿಯೇ ಇದೆ. ಹಾಗಾಗಿ ಮುಂಬೈ ನಿಂದ ಬರುವವರ ಮೇಲೆ ತೀವ್ರ ನಿಗಾ ವಹಿಸಬೇಕು. ಕಳ್ಳ ಮಾರ್ಗಗಳಲ್ಲಿ ನುಸುಳಿ ಬಂದವರ ಮೇಲೆ ಮೊದಲು ಪ್ರಕರಣ ದಾಖಲಿಸಿ ನಂತರ ಹೋಂ ಕ್ವಾರಂಟೈನ್‌ಗೆ ಒಳಪಡಿಸುವಂತೆ ಒತ್ತಾಯಿಸಿದರು.

ಸರ್ಕಾರಿ ಆ್ಯಂಬುಲೆನ್ಸ್‌ನಲ್ಲಿ ಶವ ತಂದ ಪ್ರಕರಣದಲ್ಲಿ ಮುಖ್ಯವಾಗಿ ಮಹಾರಾಷ್ಟ್ರ ಸರ್ಕಾರದ ಕೈವಾಡವಿರುವಂತೆ ಕಾಣುತ್ತಿದೆ. ಭದ್ರತಾ ಲೋಪದ ವಿಷಯದಲ್ಲಿ ನಾನು ಜಿಲ್ಲಾಡಳಿತ ಒಂದನ್ನೇ ಹೊಣೆಗಾರರನ್ನಾಗಿ ಮಾಡುವುದಿಲ್ಲ. ಮಹಾರಾಷ್ಟ್ರದ ಹಲವಾರು ಜಿಲ್ಲೆಗಳು ಹಾಗೂ ರಾಜ್ಯದ ಅನೇಕ ಜಿಲ್ಲೆಗಳನ್ನು ದಾಟಿ ಆ್ಯಂಬುಲೆನ್ಸ್‌ ಬಂದಿರುವುದರಿಂದ ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.