ಪೊಲಿಯೋ ಲಸಿಕೆ ಅಭಿಯಾನ ಯಶಸ್ಸುಗೊಳಿಸಿ


Team Udayavani, Jan 6, 2021, 1:21 PM IST

ಪೊಲಿಯೋ ಲಸಿಕೆ ಅಭಿಯಾನ ಯಶಸ್ಸುಗೊಳಿಸಿ

ಮಂಡ್ಯ: ಪ್ರಸ್ತುತ ಜಿಲ್ಲೆಯಲ್ಲಿ ಪಲ್ಸ್‌ ಪೊಲಿಯೋ ಲಸಿಕಾ ಅಭಿಯಾನ ಯಶಸ್ಸಿಗೆ ಎಲ್ಲರ ಪಾತ್ರ ಅವಶ್ಯಕ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್‌.ಪಿ.ಮಂಚೇಗೌಡ ಹೇಳಿದರು.

ನಗರದ ಹೊರ ವಲಯದ ಸಮುದಾಯಭವನದಲ್ಲಿ ರೋಟರಿ ಸಂಸ್ಥೆ, ವಿನ್ನರ್‌ವ್ಹೀಲ್‌ ಸಂಸ್ಥೆಮತ್ತು ಜಿಲ್ಲಾ ಪಲ್ಸ್‌ ಪೊಲಿಯೋ ಸಮಿತಿ ವತಿಯಿಂದ ನಡೆದ “ವಲಯ ಪೊಲಿಯೋ ಪ್ಲಸ್‌ ದೃಷ್ಟಿಕೋನ ಮತ್ತು ಯೋಜನೆ ಸಭೆ ಮತ್ತು ಕಾರ್ಯಾಗಾರ’ವನ್ನು ಉದ್ಘಾಟಿಸಿ ಮಾತನಾಡಿದರು.

ಮುತುವರ್ಜಿವಹಿಸಿ: ರಾಜ್ಯದಲ್ಲಿ ಜ.17ರಿಂದ 20ರವರೆಗೆ ಪಲ್ಸ್‌ ಪೊಲಿಯೋ ಲಸಿಕೆ ಹಾಕುವಕಾರ್ಯ ನಡೆಯಲಿದೆ. 5 ವರ್ಷದೊಳಗಿನಯಾವುದೇ ಮಗು ಈ ಯೋಜನೆಯಿಂದಕೈಬಿಟ್ಟು ಹೋಗದಂತೆ ಮುತುವರ್ಜಿವಹಿಸಬೇಕು. ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ಯಶಸ್ಸಿಗೆ ಪ್ರತಿಯೊಬ್ಬರೂ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.

ಕೋವಿಡ್‌-19ರ ಮಾರ್ಗಸೂಚಿ ಅನ್ವಯ 2021ನೇ ಜ.17ರಂದು ರಾಜ್ಯದ ಸುಮಾರು66 ಲಕ್ಷ ಮಕ್ಕಳಿಗೆ ಸುರಕ್ಷಿತವಾಗಿ ಪೊಲಿಯೋಲಸಿಕೆ ಹಾಕಲು ಎಲ್ಲ ರೀತಿಯ ಮುಂಜಾಗ್ರತಾಕ್ರಮ ಕೈಗೊಳ್ಳಲು ಸರ್ಕಾರ ಸೂಚಿಸಿದೆ.ಆರೋಗ್ಯ, ಅಂಗನವಾಡಿ ಮತ್ತು ಆಶಾಕಾರ್ಯಕರ್ತೆಯರು ರೂಪಾಂತರ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ತಾಯಿ ಮತ್ತು ಮಗುವಿನ ಆರೋಗ್ಯ ರಕ್ಷಣೆಗಾಗಿ ಪಾಲಿಸಬೇಕು ಎಂದು ತಿಳಿಸಿದರು.

ಪ್ರತಿ ಮನೆಗೂ ಭೇಟಿ ನೀಡಿ: ನಗರ ಹಾಗೂಗ್ರಾಮಾಂತರ ಪ್ರದೇಶದಲ್ಲಿ ಈಗಾಗಲೇಗುರುತಿಸಲ್ಪಟ್ಟ ಲಸಿಕಾ ಕೇಂದ್ರಗಳಲ್ಲಿ ಮಕ್ಕಳಿಗೆಲಸಿಕೆ ಹಾಕಬೇಕು. ನಂತರ 2-3 ದಿನಗಳ ಕಾಲಪ್ರತಿ ಮನೆ ಮನೆಗೂ ಭೇಟಿ ನೀಡಿ ಯಾವುದೇಮಗು ಲಸಿಕೆಯಿಂದ ಕೈ ಬಿಟ್ಟು ಹೋಗದೆಖಾತರಿಪಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಪಲ್ಸ್‌ ಪೊಲಿಯೋ ಮತ್ತು ರೂಪಾಂತರ ಕೋವಿಡ್ ವೈರಸ್‌ ನಿಯಂತ್ರಣ ಮಾರ್ಗಸೂಚಿ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ಆರೋಗ್ಯ-ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿದರು.

ಡಾ.ಶಶಿಕಲಾ, ಡಾ.ಯಶ್ವಂತ್‌ಗೌಡ, ಡಾ.ಮನುಉಪನ್ಯಾಸ ನೀಡಿದರು. ಮಿಮ್ಸ್‌ನ ನಿರ್ದೇಶಕಡಾ.ಎಂ.ಆರ್‌.ಹರೀಶ್‌, ರಾಷ್ಟ್ರೀಯ ಪಲ್ಸ್ ‌ಪೊಲಿಯೋ ತಂಡದ ಸದಸ್ಯ ಡಾ.ನಾಗೇಂದ್ರ,ಡಬ್ಲೂಎಚ್‌ಒ ಮೈಸೂರು ಭಾಗದಡಾ.ಸುಧೀರ್‌ನಾಯಕ್‌, ಪಲ್ಸ್‌ ಪೊಲಿಯೋಸಮಿತಿ ಜಿಲ್ಲಾಧ್ಯಕ್ಷ ಎಸ್‌.ಬಸರಾಜು, ಆರ್‌ಸಿಎಚ್‌ಒ ಡಾ.ಸೋಮಶೇಖರ್‌, ತಾಲೂಕುಆರೋಗ್ಯಾಧಿಕಾರಿ ಡಾ.ಜವರೇಗೌಡ, ರೋಟರಿಸಂಸ್ಥೆ ಅಧ್ಯಕ್ಷ ಕೆ.ಎಸ್‌.ಲೋಕೇಶ್‌, ಕಾರ್ಯ ದರ್ಶಿಪ್ರತಿಕ್‌, ವಿನ್ನರ್‌ವ್ಹೀಲ್‌ ಜಿಲ್ಲಾಧ್ಯಕ್ಷೆ ಅಶ್ವಿ‌ನಿಲೋಕೇಶ್‌, ಕಾರ್ಯದರ್ಶಿ ಶೈಲಜಾಶಿವಕುಮಾರ್‌, ರೋಟರಿ ಕಾರ್ಯಕ್ರಮಾಧಿಕಾರಿಜೆ. ಲಕ್ಷ್ಮೀನಾರಾಯಣ, ರೋಟರಿ ಸಂಸ್ಥೆಯ ಪದಾಧಿಕಾರಿಗಳಾದ ಅನುಪಮಾ, ನಾರಾಯಣ  ಶಾಸ್ತ್ರೀ, ಶಿವಕುಮಾರ್‌, ಮಹೇಂದ್ರ ಬಾಬು, ವಿ.ಸಿ.ರಮೇಶ್‌, ಶರತ್‌, ಅನಂತು, ಶ್ರೀನಿವಾಸ್‌ ಪ್ರಸಾದ್‌, ಸೋಮಶೇಖರ್‌, ಅಮರನಾಥ್‌ ಹಾಜರಿದ್ದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.