ಪುರಸಭಾ ವ್ಯಾಪ್ತಿಯಲ್ಲಿ ಸಮಸ್ಯೆಗಳದ್ದೇ ದರ್ಬಾರ್‌!


Team Udayavani, Jan 9, 2020, 4:08 PM IST

9-January-21

ಮಳವಳ್ಳಿ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ 2020-21ನೇ ಸಾಲಿನ ಬಜೆಟ್‌ಗೆ ಸಂಬಂಧಿಸಿದಂತೆ ಪುರಸಭೆ ಸದಸ್ಯರು, ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ಸ್ಥಳೀಯ ಮುಖಂಡರು ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ ಮಾತನಾಡಿ, ಪಟ್ಟಣದ 23 ವಾರ್ಡಿನ ಚರಂಡಿ ನೀರು ಗಂಗಾಮತ ಬಡಾವಣೆ ಯಲ್ಲಿರುವ ದೊಣ್ಣೆಹಳ್ಳದ ಮೂಲಕ ಹರಿದುಹೋಗುತ್ತಿದೆ. ಇದರಿಂದ ಈ ಹಳ್ಳದ ಅಕ್ಕ-ಪಕ್ಕದಲ್ಲಿರುವ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿದ್ದು, ಹಳ್ಳದ ಎರಡು ಕಡೆ ತಡೆಗೋಡೆ ನಿರ್ಮಿಸಿ ಚರಂಡಿ ನೀರು ಸರಾಗವಾಗಿ ಹೋಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.

ಪಟ್ಟಣದಲ್ಲಿರುವ ಸಾರ್ವಜನಿಕ ಸ್ಮಶಾನ ಅಭಿವೃದ್ಧಿಪಡಿಸಬೇಕು ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದ್ದು ಬೈಪಾಸ್‌ ರಸ್ತೆ ನಿರ್ಮಿಸಲು ಕ್ರಮ ಕೈಗೊಳ್ಳಬೇಕು, ಪುರಸಭೆ ಕಸ ಸಂಗ್ರಹಿಸಲು ಹೆಚ್ಚಿನ ವಾಹನಗಳನ್ನು ಖರೀದಿಸಬೇಕು ಎಂದು ಸಲಹೆ ನೀಡಿದರು.

ಹಸಿಕಸ ವಿಂಗಡಣೆ: ಪುರಸಭೆ ಮುಖ್ಯಾಧಿಕಾರಿ ಗಂಗಾಧರ್‌ ಮಾತನಾಡಿ, ಪಟ್ಟಣದ ವ್ಯಾಪ್ತಿಯಲ್ಲಿ ಪ್ರತಿದಿನ 18 ಟನ್‌ ಕಸ ಸಂಗ್ರಹವಾಗುತ್ತಿದ್ದು, ವಿಲೇವಾರಿ ಮಾಡಲು ಸಾರ್ವಜನಿಕರು ಒಣ ಕಸ ಮತ್ತು ಹಸಿಕಸ ವಿಂಗಡಣೆ ಮಾಡಿ ಪುರಸಭೆ ವಾಹನಗಳಗೆ ನೀಡಬೇಕು. ಕಸ ಸಂಗ್ರಹಿಸಲು ಈಗಾಗಲೇ ಐದು ಹೊಸ ಆಟೋ ಟಿಪ್ಪರ್‌ಗಳನ್ನು ಖರೀದಿಸಲು ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ ಉಳಿದಂತೆ ತಮ್ಮ ಸಲಹೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಮುಖ್ಯ ಸ್ಥಳಗಳಲ್ಲೇ ಶೌಚಾಲಯವಿಲ್ಲ: ಪಟ್ಟಣದಲ್ಲಿರುವ ಉದ್ಯಾನವನ ಗಳನ್ನು ಅಭಿವೃದ್ಧಿಪಡಿಸಬೇಕು. ಮುಖ್ಯ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು, ಶುದ್ಧ ಕುಡಿಯುವ ನೀರು ಘಟಕಗಳ ನಿರ್ಮಾಣ, ಹಲವು ಕಡೆ ಚರಂಡಿಗಳ ಸಮಸ್ಯೆ ಇದ್ದು, ಚರಂಡಿ ವ್ಯವಸ್ಥೆ ಕಲ್ಪಿಸಬೇಕು, ಬೀದಿದೀಪಗಳ ದುರಸ್ತಿ, ಬೇಡಿಕೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಎಂ.ಹೆಚ್‌. ಕೆಂಪಯ್ಯ ಹಾಗೂ ಹಲವು ಪುರಸಭೈ ಸದಸ್ಯರು, ಮುಖಂಡರಾದ ಜವಹರ್‌, ಗುರು, ಶ್ರೀನಿವಾಸ್‌, ವಕೀಲ ಗುರುಸ್ವಾಮಿ ಮತ್ತಿತರರಿದ್ದರು.

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.