ಮಳವಳ್ಳಿ ಪಟ್ಟಣ ಅಭಿವೃದ್ಧಿ ಮರೀಚಿಕೆ

ಕೊಳಾಯಿ ಸಂಪರ್ಕಗಳಿಗೆ ಮೋಟಾರ್‌ ಅಳವಡಿಕೆ • ಒಳಚರಂಡಿ, ರಸ್ತೆ, ಸ್ವಚ್ಛತೆ ಎಲ್ಲವೂ ಅದ್ವಾನ

Team Udayavani, May 14, 2019, 1:03 PM IST

mandya-tdt-1..

ಮಳವಳ್ಳಿ ಪಟ್ಟಣದಲ್ಲಿ ಅವ್ಯವಸ್ಥಿತ ಚರಂಡಿ ವ್ಯವಸ್ಥೆ.

ಮಂಡ್ಯ: ಹಲವಾರು ದಶಕಗಳಿಂದ ಮಳವಳ್ಳಿ ಪಟ್ಟಣ ಅಭಿವೃದ್ಧಿ ಮರೀಚಿಕೆಯಾಗಿಯೇ ಉಳಿದಿದೆ. ಜನಪ್ರತಿನಿಧಿಗಳ ನಿರ್ಲಕ್ಷ್ಯ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಪಟ್ಟಣ ತನ್ನ ಸೌಂದರ್ಯ ಕಾಪಾಡಿಕೊಳ್ಳಲಾಗದೆ ಅವ್ಯವಸ್ಥೆಯ ಆಗರವಾಗಿದೆ.

ಪಟ್ಟಣದೊಳಗೆ ಇದುವರೆಗೂ ಸುಂದರವಾದ ಬಡಾವಣೆಗಳು ರಚನೆಯಾಗಿಲ್ಲ. ಅವೈಜ್ಞಾನಿಕ ಒಳಚರಂಡಿ ವ್ಯವಸ್ಥೆಯಿಂದ ನೈರ್ಮಲ್ಯ ಹಾಳಾಗಿದೆ. ಕೊಳಾಯಿ ಸಂಪರ್ಕಗಳಿಗೆ ಪ್ರಭಾವಿಗಳು ನೇರವಾಗಿ ಮೋಟಾರ್‌ ಪಂಪ್‌ ಅಳವಡಿಸಿಕೊಂಡಿದ್ದರೂ ಕೇಳ್ಳೋರಿಲ್ಲ. ಸ್ವಚ್ಛತೆಯ ಬಗ್ಗೆಯಂತೂ ಮಾತನಾಡು ವಂತೆಯೇ ಇಲ್ಲ. ಸಾರ್ವಜನಿಕ ಆಸ್ಪತ್ರೆ ಹಲವು ಅವ್ಯವಸ್ಥೆಗಳ ಗೂಡಾಗಿದ್ದು, ಮಹಿಳಾ ಆಸ್ಪತ್ರೆ ಕಟ್ಟಡ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ. ರಸ್ತೆಗಳ ಸ್ಥಿತಿ ಉತ್ತಮಗೊಂಡಿಲ್ಲ. ಕಿರಿದಾಗಿರುವ ರಸ್ತೆಗಳು ಸಂಚಾರಕ್ಕೆ ಅಡ್ಡಿ ಉಂಟುಮಾಡುತ್ತಿವೆ. ಪಟ್ಟಣದೊಳಗೆ ಅವ್ಯವಸ್ಥೆಗಳು ತಾಂಡವವಾಡುತ್ತಿರುವ ನಡುವೆಯೇ ಮಳವಳ್ಳಿ ಪುರಸಭೆಗೆ ಚುನಾವಣೆ ಘೋಷಣೆಯಾಗಿದೆ.

ಪಟ್ಟಣದೊಳಗೆ ಬಡಾವಣೆಗಳು ಅಭಿವೃದ್ಧಿಯ ದೂರದೃಷ್ಟಿಯೊಂದಿಗೆ ರಚನೆಯಾಗುತ್ತಿಲ್ಲ. ಅವೈಜ್ಞಾನಿಕ ಮತ್ತು ಅವ್ಯವಸ್ಥಿತ ರೀತಿಯಲ್ಲಿ ತಲೆಎತ್ತಿವೆ. ಹಲವು ಬಡಾವಣೆಯ ರಸ್ತೆಗಳು ಕಿರಿದಾಗಿವೆ. ಒಂದು ವಾಹನ ಸುಗಮವಾಗಿ ಚಲಿಸುವಷ್ಟು ಮಾತ್ರ ಜಾಗವಿದೆ. ಮತ್ತೂಂದು ವಾಹನಕ್ಕೆ ಅಲ್ಲಿ ಜಾಗವೇ ಇಲ್ಲ. ಇಕ್ಕಟ್ಟಾಗಿರುವ ರಸ್ತೆಗಳಲ್ಲಿ ಸುಗಮ ಸಂಚಾರ ಇಂದಿಗೂ ಅಸಾಧ್ಯದ ಮಾತಾಗಿದೆ.

ಗುಣಮಟ್ಟವಿಲ್ಲ: ರಸ್ತೆಗಳು ಕಿರಿದಾಗಿದ್ದರೂ ಗುಣಮಟ್ಟದಿಂದ ಕೂಡಿವೆಯೇ ಎಂದರೆ ಅದೂ ಇಲ್ಲ. ಬಹುತೇಕ ರಸ್ತೆಗಳಲ್ಲಿ ಡಾಂಬರು ಕಿತ್ತು ಬಂದಿದೆ. ಹಳ್ಳ-ಗುಂಡಿಗಳು ನಿರ್ಮಾಣಗೊಂಡಿವೆ. ರಸ್ತೆಯ ಲ್ಲಿರುವ ಗುಂಡಿಗಳನ್ನು ಮುಚ್ಚುವುದಕ್ಕೂ ಪುರಸಭೆ ಆಸಕ್ತಿ ತೋರಿಲ್ಲ. ಕುಲಗಟ್ಟ ರಸ್ತೆಗಳಲ್ಲೇ ಪಟ್ಟಣದ ಸಾರ್ವ ಜನಿಕರು ಸಂಚರಿಸುವಂತಹ ದುಸ್ಥಿತಿ ಎದುರಾಗಿದೆ.

ಅವೈಜ್ಞಾನಿಕ ಒಳಚರಂಡಿ: ಪಟ್ಟಣದ ಒಳಚರಂಡಿ ವ್ಯವಸ್ಥೆ ಅವೈಜ್ಞಾನಿಕವಾಗಿದೆ. ಒಳಚರಂಡಿ ವ್ಯವಸ್ಥೆಯನ್ನು ಎಲ್ಲಿಂದ ಆರಂಭ ಮಾಡಿ ಎಲ್ಲಿಗೆ ಬಿಡಬೇಕು ಎಂಬ ನೀಲಿ ನಕಾಶೆಯೇ ಇಲ್ಲದೆ ಒಳಚರಂಡಿಗಳನ್ನು ನಿರ್ಮಿಸಲಾಗಿದೆ. ಇದರ ಪರಿಣಾಮ ನೀರು ಸರಾಗವಾಗಿ ಹರಿದುಹೋಗದೆ ಅಲ್ಲಲ್ಲೇ ನಿಲ್ಲುತ್ತಿದೆ. ಹೀಗೆ ನಿಲ್ಲುತ್ತಿರುವ ಒಳಚರಂಡಿ ನೀರು ರಸ್ತೆಯಲ್ಲೆಲ್ಲಾ ತುಂಬಿ ಹರಿಯುತ್ತಿದೆ. ಇದರಿಂದಲೂ ಸಾಕಷ್ಟು ಅವಾಂತರಗಳು ಪಟ್ಟಣದೊಳಗೆ ಸೃಷ್ಟಿಯಾಗಿದೆ. ಎಷ್ಟೋ ಕಡೆ ಒಳಚರಂಡಿ ನೀರನ್ನು ನೇರವಾಗಿ ತೆರೆದ ಚರಂಡಿಗಳಿಗೆ ಸಂಪರ್ಕ ಕಲ್ಪಿಸಿ ಹರಿಯಬಿಡಲಾಗುತ್ತಿದೆ. ಇದು ಇನ್ನಷ್ಟು ಅವಾಂತರಗಳಿಗೆ ಕಾರಣವಾಗುತ್ತಿದೆ.

ಕೊಳಾಯಿಗಳಿಗೆ ಮೋಟಾರ್‌ ಪಂಪ್‌ ಅಳವಡಿಕೆ: ಪಟ್ಟಣದ ಜನರಿಗೆ ಕುಡಿಯುವ ನೀರು ಪೂರೈಸುವ ಕೊಳಾಯಿ ಸಂಪರ್ಕಗಳು ಉತ್ತಮವಾಗಿಲ್ಲ. ಪ್ರಭಾವಿಗಳು ಕೊಳಾಯಿ ಸಂಪರ್ಕಗಳಿಗೆ ನೇರವಾಗಿ ಮೋಟಾರ್‌ ಪಂಪ್‌ ಅಳವಡಿಸಿಕೊಂಡಿದ್ದಾರೆ. ಅದನ್ನು ಪ್ರಶ್ನಿಸುವ ತಾಕತ್ತನ್ನು ಯಾರೂ ಪ್ರದರ್ಶಿಸುತ್ತಿಲ್ಲ. ಕೊಳಾಯಿ ಸಂಪರ್ಕಗಳಿಗೆ ಟ್ಯಾಪ್‌ಗ್ಳನ್ನು ಸರಿಯಾಗಿ ಅಳವಡಿಸಿಲ್ಲದ ಕಾರಣ ನೀರು ಸರಬರಾಜು ವೇಳೆ ಎಗ್ಗಿಲ್ಲದೆ ಪೋಲಾಗುತ್ತಿದ್ದರೂ ಯಾರೂ ಗಮನಹ ರಿಸುತ್ತಿಲ್ಲ. ನೀರು ಪೂರೈಕೆಗೂ ನಿಗದಿತ ಸಮಯ ನಿಗದಿಪಡಿಸಿಲ್ಲ. ಇಷ್ಟಬಂದ ಸಮಯಕ್ಕೆ ನೀರು ಬಿಡುತ್ತಿರುವುದರಿಂದ ಪಟ್ಟಣದ ಜನರು ನೀರಿಗಾಗಿ ಕಾದು ಕೂರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ವಚ್ಛತೆ ಸಂಪೂರ್ಣ ಹಾಳು: ಪಟ್ಟಣದ ಸ್ವಚ್ಛತೆಯಂತೂ ಸಂಪೂರ್ಣ ಹಾಳಾಗಿದೆ. ಕಸ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲ. ಪ್ರಮುಖ ರಸ್ತೆಗಳಲ್ಲಿ ಶುಚಿತ್ವ ಕಾಪಾಡುವುದನ್ನು ಬಿಟ್ಟರೆ ಪಟ್ಟಣದೊಳಗೆ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಿ ಸೌಂದರ್ಯ ಹೆಚ್ಚಿಸುವ ಬದ್ಧತೆಯನ್ನು ಯಾರೊಬ್ಬರೂ ಪ್ರದರ್ಶಿಸುತ್ತಿಲ್ಲ. ಇದರಿಂದ ಎಲ್ಲೆಲ್ಲೂ ಕಸದ ರಾಶಿಯ ದಿವ್ಯದರ್ಶನವಾಗುತ್ತಿದೆ.

ನಿಯಮಾವಳಿಗಳಿಲ್ಲ: ಕಟ್ಟಡ ಹಾಗೂ ಗೃಹ ನಿರ್ಮಾಣಕ್ಕೆ ಪರವಾನಗಿ ನೀಡುವ ವೇಳೆ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಲಾಗುತ್ತಿದೆ. ಪಾರ್ಕಿಂಗ್‌ಗೆ ಜಾಗವನ್ನೇ ಬಿಡದೆ ಕಟ್ಟಡಗಳು ಮೇಲೇಳುತ್ತಿರುವುದರಿಂದ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸುವಂತಹ ಪರಿಸ್ಥಿತಿ ಸೃಷ್ಠಿಯಾಗಿದೆ. ಪಟ್ಟಣದೊಳಗೆ ಅಳವಡಿಸಿರುವ ಬಹುತೇಕ ಹೈಮಾಸ್ಟ್‌ ದೀಪಗಳು ಹಾಳಾಗಿವೆ. ರಸ್ತೆ ವಿಭಜಕದ ಮಧ್ಯೆ ಅಳವಡಿಸಲಾಗಿರುವ ಬೀದಿ ದೀಪಗಳು ಕೆಟ್ಟು ಕತ್ತಲು ಆವರಿಸಿದ್ದರೂ ಹೊಸ ಬೀದಿ ದೀಪಗಳನ್ನು ಅಳವಡಿಸದೆ ನಿರ್ಲಕ್ಷ್ಯ ವಹಿಸಲಾಗಿದೆ.

ನಿವೇಶನ ಕೊಟ್ಟಿಲ್ಲ: ಪಟ್ಟಣದ ಶ್ರೀ ಬೀರೇಶ್ವರ ದೇವಸ್ಥಾನದ ಬಳಿ 33 ಎಕರೆ ಪ್ರದೇಶವನ್ನು ಮೀಸಲಿಟ್ಟು ಬಡವರಿಗೆ ನಿವೇಶನಗಳನ್ನಾಗಿ ಪರಿವರ್ತಿಸಿ ಹಂಚುವ ಕೆಲಸವೂ ನಡೆದಿಲ್ಲ. ಇದರಲ್ಲಿ ಹದಿನಾಲ್ಕೂವರೆ ಎಕರೆ ಪ್ರದೇಶಕ್ಕೆ ಹಕ್ಕುಪತ್ರ ವಿತರಿಸಲಾಗಿದ್ದರೂ ಅವುಗಳನ್ನು ನಿವೇಶನಗಳಾಗಿ ಪರಿವರ್ತಿಸಿಲ್ಲ. ಮೂಲ ಸೌಲಭ್ಯಗಳನ್ನೂ ಕಲ್ಪಿಸಿಲ್ಲ. ಇದೂ ಸಹ ನಿವೇಶನ ಆಕಾಂಕ್ಷಿತರ ಆಕ್ರೋಶಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.