ಮಂಡ್ಯ; ಶ್ರೀಕಂಠೇಗೌಡ ವಿರುದ್ಧ ಅಂಬಿ ಅಭಿಮಾನಿಗಳ ಪ್ರತಿಭಟನೆ, ಆಕ್ರೋಶ
Team Udayavani, Feb 4, 2019, 12:44 PM IST
ಮಂಡ್ಯ: ಸುಮಲತಾ ಮಂಡ್ಯ ಗೌಡತಿ ಅಲ್ಲ, ಆಂಧ್ರ ಗೌಡ್ತಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಧಾನಪರಿಷತ್ ಸದಸ್ಯ ಕೆಟಿ ಶ್ರೀಕಂಠೇಗೌಡ ವಿರುದ್ಧ ಅಂಬಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿ ಸೋಮವಾರ ಸಂಜೆ ಮದ್ದೂರಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ನಟಿ ರಮ್ಯಾಳನ್ನು ಮಂಡ್ಯ ಜನ ನೋಡಿ ಆಗಿದೆ. ಅವರು ಎಷ್ಟರ ಮಟ್ಟಿಗೆ ಕೆಲಸ ಮಾಡಿದ್ದಾರೆ ಅಂತ ಗೊತ್ತಿದೆ. ಅಂಬರೀಶ್ ಕಡೇ ದಿನಗಳಲ್ಲಿ ಮಂಡ್ಯದಿಂದ ಚುನಾವಣೆಗೆ ಸ್ಪರ್ಧಿಸಲಿಲ್ಲ. ಜನ ಸೋಲಿಸುತ್ತಾರೆ ಅಂತ ಅವರಿಗೆ ಚೆನ್ನಾಗಿ ಗೊತ್ತಿತ್ತು. ಈಗ ಸುಮಲತಾ ಅವರನ್ನು ಗೆಲ್ಲಿಸಿದರೆ ಎಲ್ಲಿ ಹುಡುಕುತ್ತೀರಿ ಎಂದು ಶ್ರೀಕಂಠೇಗೌಡ ವಾಗ್ದಾಳಿ ನಡೆಸಿದ್ದರು.
ನಟಿ ಸುಮಲತಾ ಹಾಗೂ ದಿ.ಅಂಬರೀಶ್ ವಿರುದ್ಧ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ವಿರುದ್ಧ ಅಂಬಿ ಫ್ಯಾನ್ಸ್ ಬೀದಿಗಿಳಿದಿದ್ದಾರೆ. ಮದ್ದೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಅಲ್ಲದೇ ಶ್ರಿಕಂಠೇಗೌಡ ಅವರ ಪ್ರತಿಕೃತಿ ಸುಟ್ಟು, ಬೆಂಗಳೂರು, ಮೈಸೂರು ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿ, ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ