ಸಂಸದೆ ಸುಮಲತಾರ ಬೆಂಬಲ ಕೋರಿದ ಮಂಡ್ಯ ಬಿಜೆಪಿ ಅಭ್ಯರ್ಥಿ
Team Udayavani, Nov 25, 2021, 7:34 PM IST
ಬೆಂಗಳೂರು : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಜೆಪಿನಗರದಲ್ಲಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ ಭೇಟಿ ನೀಡಿ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪರ ಬೆಂಬಲ ಕೋರಿದರು.
ಸಂಸದೆ ಸುಮಲತಾ ಅಂಬರೀಶ್ ಅವರ ಆಶೀರ್ವಾದ ಪಡೆದ ಬೂಕಹಳ್ಳಿ ಮಂಜು ಅವರು, ವಿಧಾನ ಪರಿಷತ್ ಚುನಾವಣೆ ತನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ನಾನು ತಟಸ್ಥ
ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ತಟಸ್ಥವಾಗಿರುತ್ತೇನೆ, ಯಾವುದೇ ಪಕ್ಷದ ಅಭ್ಯರ್ಥಿಗಳ ಪರವಾಗಿ ಇರುವುದಿಲ್ಲ ಆದರೆ ಸಂಸದೆಯಾಗಿ ಮತ ಹಾಕುತ್ತೇನೆ. ಆಶೀರ್ವಾದ ಕೇಳಿದವರಿಗೆ ಆಶೀರ್ವದಿಸುತ್ತೇನೆ ಎಂದು ಈಗಾಗಲೇ ಸಂಸದೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.