“ಕೈ’ನಲ್ಲಿ ಮೂಲ-ವಲಸಿಗರ ತಿಕ್ಕಾಟ


Team Udayavani, Apr 27, 2022, 3:47 PM IST

Untitled-1

ಮಂಡ್ಯ: ಜಿಲ್ಲಾ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತು ಆಗಾಗ ಕೇಳಿ ಬರುತ್ತಲೇ ಇದೆ. ಈಗ ಸದ್ಯ ಮೂಲ ಹಾಗೂ ವಲಸಿಗರ ನಡುವಿನ ಭಿನ್ನಾಭಿಪ್ರಾಯಕ್ಕೆ ಜಿಲ್ಲಾಧ್ಯಕ್ಷ ಸ್ಥಾನ ಮುಖ್ಯ ವೇದಿಕೆಯಾಗಿದೆ.

ಜಿಲ್ಲಾಧ್ಯಕ್ಷ ಸ್ಥಾನ ಬದಲಿಸುವ ಉದ್ದೇಶದಿಂದಲೇ ಸಿ.ಡಿ.ಗಂಗಾಧರ್‌ರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಡ್ತಿ ನೀಡಲಾಗಿದೆ.

ಇದರ ಜತೆಗೆ ಮುಂದೆ ಯಾವುದಕ್ಕೂ ಯಾರೂ ತಕರಾರು, ಭಿನ್ನಾಭಿಪ್ರಾಯ ಉಂಟಾಗದಂತೆ ಶಮನ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಅಳೆದು ತೂಗಿ ಎನ್‌.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರ ಸ್ವಾಮಿ, ಡಾ.ಎಚ್‌.ಎನ್‌. ರವೀಂದ್ರ, ದಡದಪುರ ಶಿವಣ್ಣ ಅವರಿಗೂ ಸ್ಥಾನ ನೀಡಿದ್ದಾರೆ. ಆದರೆ ಖಾಲಿಯಾಗುವ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಗೊಂದಲ ಉಂಟಾಗಿದೆ.

ಪೈಪೋಟಿ: ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಈಗಾಗಲೇ ಪೈಪೋಟಿ ಶುರುವಾಗಿದ್ದು, ಇದರ ಜತೆಯಲ್ಲಿ ಯೇ ಮೂಲ-ವಲಸಿಗ ಎಂಬ ಚರ್ಚೆಯೂ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್‌ನ ಮೂಲ ಕಾರ್ಯಕರ್ತರಿಗೆ ಮಣೆ ಹಾಕಬೇಕು ಎಂದು ಪಕ್ಷದ ಮೂಲ ಹಿರಿಯ ಮುಖಂಡರ ಬಣ ಪಟ್ಟು ಹಿಡಿದಿದೆ.

ಅತ್ತ ಪಕ್ಷ ಸೇರಿರುವ ನಾಯಕರು, ಆಪ್ತರಿಗೆ ಕೊಡಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ. ಹಿರಿಯ ಮುಖಂಡ ಮಾಜಿ ಸಚಿವ ಎಂ.ಎಸ್‌.ಆತ್ಮಾನಂದ ಬಣದವರಿಗೆ ನೀಡ ಬೇಕು ಎಂದು ಒಂದು ಬಣ ಇದ್ದರೆ, ಮತ್ತೂಂದೆಡೆ ಎನ್‌.ಚಲುವರಾಯಸ್ವಾಮಿ ಬಣ ತಮ್ಮ ಆಪ್ತರಿಗೆ ಜಿಲ್ಲಾಧ್ಯಕ್ಷ ಸ್ಥಾನದ ಪಟ್ಟ ಕಟ್ಟಲು ಪೈಪೋಟಿ ಏರ್ಪಟ್ಟಿದೆ. ಇಬ್ಬರ ನಡುವಿನ ಭಿನ್ನಾಭಿಪ್ರಾಯ ಬೂದಿ ಮುಚ್ಚಿದ ಕೆಂಡದಂತಿದ್ದು, ಯಾವಾಗ ಬೇಕಾದರೂ ಸ್ಫೋಟಗೊಳ್ಳುವ ಸಾಧ್ಯತೆ ಇದೆ.

ವರಿಷ್ಠರಿಗೆ ಗೊಂದಲ: ಮೂಲ-ವಲಸಿಗ ಕಾರ್ಯಕರ್ತರ ಭಿನ್ನಾಭಿಪ್ರಾಯದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹೈಕಮಾಂಡ್‌ ನಾಯಕರಿಗೆ ಜಿಲ್ಲಾಧ್ಯಕ್ಷ ಸ್ಥಾನ ಆಯ್ಕೆ ಕಗ್ಗಂಟಾಗಿದೆ. ಯಾವ ಬಣದವರನ್ನು ನೇಮಿಸಿದರೂ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆಯೇ ಹೆಚ್ಚಾಗಿದೆ. ಸ್ಥಳೀಯ ಸಂಸ್ಥೆಗಳಲ್ಲೂ ಸೋಲು ಅನುಭವಿಸುತ್ತಾ, ಆಡಳಿತ ಚುಕ್ಕಾಣಿ ಕಳೆದುಕೊಳ್ಳುವಂತಾಗಿದೆ.

ಹೀಗಾಗಿ ಎಲ್ಲರನ್ನು ಒಗ್ಗಟ್ಟಾಗಿ ಕೊಂಡೊ ಯ್ಯುವ ಸಂಘಟನಾತ್ಮಕ ನಾಯಕನನ್ನು ಆಯ್ಕೆ ಮಾಡುವ ಅನಿವಾರ್ಯತೆ ಇದೆ. ಅಲ್ಲದೆ, ಜೆಡಿಎಸ್‌ ಅನ್ನು ಸಮರ್ಥವಾಗಿ ನಿಭಾಯಿಸುವ ಸಮರ್ಥ ಅಭ್ಯರ್ಥಿ ಅಗತ್ಯವಾಗಿದೆ.

ಒತ್ತಡ ಹಾಕಿದವರಿಗೆ ಮಣೆ : ದಿ.ಅಂಬರೀಷ್‌ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವೇಳೆ ತಮ್ಮ ಆಪ್ತರೇ ಆಗಿದ್ದ ಸಿ.ಡಿ.ಗಂಗಾಧರ್‌ರನ್ನು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಅಂದಿನ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ರಿಗೆ ಒತ್ತಡ ತಂದಿದ್ದರು. ಕೆಲವೇ ದಿನಗಳಲ್ಲಿ ಹಾಲಿ ಜಿಲ್ಲಾಧ್ಯಕ್ಷರಾಗಿದ್ದ ಮಾಜಿ ಸಚಿವ ಎಂ.ಎಸ್‌.ಆತ್ಮಾನಂದರನ್ನು ಕೆಪಿಸಿಸಿ ಕಾರ್ಯದರ್ಶಿ ನ್ನಾಗಿ ನೇಮಿಸಿ ಅವರ ಸ್ಥಾನಕ್ಕೆ ಅಂಬರೀಷ್‌ ಆಪ್ತ ಗಂಗಾಧರ್‌ರನ್ನು ಕೆಪಿಸಿಸಿ ನೇಮಿಸಿತ್ತು. ಅದರಂತೆ ಈ ಬಾರಿಯೂ ಎನ್‌. ಚಲುವರಾಯಸ್ವಾಮಿ ತಮ್ಮ ಆಪ್ತರ ಪರ ಬ್ಯಾಟ್‌ ಬೀಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಜಿಲ್ಲೆಯಲ್ಲಿ ಬಣ ರಾಜಕೀಯ ಹೊಸದೇನಲ್ಲ : ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಹೊಸದೇನಲ್ಲ. ಹಿರಿಯ ನಾಯಕರಾಗಿದ್ದ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಹಾಗೂ ಮಾಜಿ ಸಚಿವ ದಿವಂಗತ ಅಂಬರೀಷ್‌ ನಡುವಿನ ಭಿನ್ನಾಭಿಪ್ರಾಯದಿಂದ ಉಂಟಾದ ಬಣ ರಾಜಕೀಯ ಮುಂದುವರಿಯುತ್ತಲೇ ಬಂದಿದೆ. ಈಗಲೂ ಎಸ್‌.ಎಂ.ಕೃಷ್ಣ ಬಣ ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿದೆ. ಅಂಬರೀಷ್‌ ಬಣದ ಕೆಲವರು ಈಗಾಗಲೇ ಸಂಸದೆ ಸುಮಲತಾಅಂಬರೀಷ್‌ ಪರ ನಿಂತಿದ್ದರೆ, ಕೆಲವರು ಮೌನವಾಗಿಯೇ ಇದ್ದಾರೆ.

ಹಿರಿಯರ ಕಡೆಗಣನೆ ಆರೋಪ : ಕಾಂಗ್ರೆಸ್‌ನಲ್ಲಿ ಮೂಲ ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿವೆ. ಇತ್ತೀಚೆಗೆ ಪಕ್ಷಕ್ಕೆ ಬಂದವರಿಗೆ ಸಿಗುತ್ತಿರುವ ಗೌರವ ನಮಗೆ ಸಿಗುತ್ತಿಲ್ಲ. ಜಿಲ್ಲಾ ಪದಾಧಿ ಕಾರಿಗಳ ಆಯ್ಕೆಯಲ್ಲೂ ಅವರಿಗೆ ಬೇಕಾದವರಿಗೆ ನೀಡಲಾಗುತ್ತಿದೆ. ಇದು ಮೊದಲಿನಿಂದ ಪಕ್ಷ ಕಟ್ಟಿದ ಹಿರಿಯ ಮುಖಂಡರಿಗೆ ಬೇಸರ ತರಿಸಿದೆ. ಇದರಿಂದ ಪಕ್ಷದ ಬಹುತೇಕ ಚಟುವಟಿಕೆಗಳಿಂದ ಹಿರಿಯ ಮುಖಂಡರು ಹಿಂದೆ ಸರಿಯುವಂತಾಗಿದೆ ಎಂದು ಕಾಂಗ್ರೆಸ್‌ ಹಿರಿಯ ಮುಖಂಡರೊಬ್ಬರು ತಿಳಿಸಿದರು.

ಮೂಲ ಕಾರ್ಯಕರ್ತರ ಗೌಪ್ಯ ಸಭೆ?: ಕುತೂಹಲ : ಮೂಲ ಕಾರ್ಯಕರ್ತರೊಬ್ಬರಿಗೆ ಜಿಲ್ಲಾಧ್ಯಕ್ಷ ಸ್ಥಾನ ಸಿಗಲು ಮೂಲ ವಲಸಿಗರು ಗೌಪ್ಯ ಸಭೆ ಸೇರಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ, ಈಗಾಗಲೇ ಹಿರಿಯ ಮುಖಂಡ ಎಂ.ಎಸ್‌.ಆತ್ಮಾನಂದರನ್ನು ಜೆಡಿಎಸ್‌ ತಮ್ಮ ಪಕ್ಷಕ್ಕೆ ಕರೆತರಲು ಎಲ್ಲ ರೀತಿಯ ಸಿದ್ಧತೆ ನಡೆದಿವೆ. ಆಪ್ತ ಸಿ.ಎಂ.ಇಬ್ರಾ ಹಿಂ ಮೂಲಕ ಆಹ್ವಾನ ನೀಡಲಾಗಿದ್ದು, ಕಸರತ್ತು ನಡೆಸಲಾಗುತ್ತಿದೆ. ಇದೆಲ್ಲವೂ ಕಾಂಗ್ರೆಸ್‌ ಮೇಲೆ ಪರಿಣಾಮ ಬೀರಬಹುದು ಎಂಬ ರಾಜಕೀಯ ಚರ್ಚೆ ನಡೆಯುತ್ತಿವೆ.

ಎಚ್‌.ಶಿವರಾಜು

ಟಾಪ್ ನ್ಯೂಸ್

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.