Mandya: ಕಬ್ಬಿಣ ಹಾಕಲು ನಿರ್ಮಾಣ ಮಾಡಿದ್ದ ಶೆಡ್ ನಲ್ಲಿ ರಾಶಿ ರಾಶಿ ಗೋವಿನ ಮೂಳೆಗಳು ಪತ್ತೆ
ದುರ್ನಾತ ತಡೆಯಲಾಗದೆ ಶೆಡ್ ನ ಬಾಗಿಲು ತೆರೆದ ಗ್ರಾಮಸ್ಥರಿಗೆ ಶಾಕ್
Team Udayavani, Dec 18, 2023, 12:16 PM IST
ಮಂಡ್ಯ: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಗೋ ಹತ್ಯೆ ಅನ್ನೋದು ಅವ್ಯಹತವಾಗಿ ನಡೀತಿದೆಯಾ ಅನ್ನೋದಕ್ಕೆ ಇದೊಂದು ತಾಜಾ ಉದಾಹರಣೆಯಾಗಿದೆ.
ಮಂಡ್ಯ ತಾಲೂಕಿನ ತೂಬಿನ ಕೆರೆ ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾಗಿದ್ದ ಶೆಡ್ ನಲ್ಲಿ ಗೋವಿನ ತಲೆ, ಬೆನ್ನು ಸೇರಿದಂತೆ ರಾಶಿ ರಾಶಿ ಮೂಳೆಗಳು ಪತ್ತೆಯಾಗಿವೆ.
ಗ್ರಾಮದ ನಿಂಗರಾಜು ಎಂಬುವರಿಗೆ ಸೇರಿದ್ದ ಜಮೀನಿನಲ್ಲಿ ಮೂಳೆಗಳ ರಾಶಿ ಪತ್ತೆಯಾಗಿದೆ. ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೆ ಶೆಡ್ ನಿರ್ಮಿಸಲು ಅನ್ಯಕೋಮಿನ ವ್ಯಕ್ತಿಗೆ ಅವಕಾಶ ಕೊಟ್ಟಿದ್ದ ನಿಂಗರಾಜು.
ಶೆಡ್ ನಿರ್ಮಿಸುವ ವೇಳೆ ಕಬ್ಬಿಣ ಹಾಕುವುದಾಗಿ ಹೇಳಿದ್ದ ಅನ್ಯಕೋಮಿನ ವ್ಯಕ್ತಿ. ಇದಾದ ಬಳಿಕ ಈ ಪ್ರದೇಶದ ಸುತ್ತ ಭಾರಿ ಪ್ರಮಾಣದಲ್ಲಿ ದುರ್ನಾತ ಬೀರುತ್ತಿದ್ದ ಹಿನ್ನೆಲೆಯಲ್ಲಿ ಇಲ್ಲಿನ ಸುತ್ತಮುತ್ತಲಿನ ಜನರು ಶೆಡ್ ಬಾಗಿಲು ತೆಗೆದು ನೋಡಿದಾಗ ಶೆಡ್ ನಲ್ಲಿ ರಾಶಿ ರಾಶಿ ಗೋವುಗಳ ಮೂಳೆಗಳು ಕಂಡುಬಂದಿವೆ.
ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಕೇಸ್ ಮಾಸುವ ಮುನ್ನವೇ ಸದ್ದು ಮಾಡುತ್ತಿರೊ ಮೂಳೆಗಳ ರಾಶಿ.
ಮೂಳೆಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪಿಡಿಒ ಅವರಿಗೆ ಮಾಹಿತಿ ನೀಡಲಾಗಿದ್ದು, ಈ ಮೂಳೆಗಳನ್ನ ಪೌಡರ್ ಮಾಡಿ ಆಲೆ ಮನೆಗಳಿಗೆ ಬಳಕೆ ಮಾಡಲಾಗ್ತಿತ್ತು ಎಂಬ ಆರೋಪವೂ ಕೇಳಿ ಬಂದಿದ್ದು ಇದರ ಬಗೆಗೂ ತನಿಖೆ ನಡೆಸುವಂತೆ ಒತ್ತಾಯಿಸ್ತಿರೊ ಗ್ರಾಮಸ್ಥರು. ಆದರೆ ವಿಷಯ ಪಿಡಿಒ ಗಮನಕ್ಕೆ ತಂದರೂ ಶೆಡ್ ತೆರವುಗೊಳಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದು ಕೂಡಲೇ ಆರೋಪಿಯ ವಿರುದ್ಧ ಕ್ರಮ ಕೈಗೊಂಡು ಶೆಡ್ ತೆರವುಗೊಳಿಸುವಂತೆ ಒತ್ತಾಯ ಮಾಡಿದ್ದಾರೆ.
ಇದನ್ನೂ ಓದಿ: Bollywood ನಟಿ ಕಾಜೋಲ್ ತಾಯಿ ಆಸ್ಪತ್ರೆಗೆ ದಾಖಲು; ಐಸಿಯು ನಲ್ಲಿ ಮುಂದುವರೆದ ಚಿಕಿತ್ಸೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !