ಮಂಡ್ಯ: ಕೋವಿಡ್ 19ನಿಂದ ಓರ್ವನ ಸಾವು
Team Udayavani, Jul 8, 2020, 5:46 AM IST
ಮದ್ದೂರು: ಪಟ್ಟಣದ ಲೀಲಾವತಿ ಬಡಾವಣೆಯ ನಿವಾಸಿಯೊಬ್ಬರು ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದು, ಇದು ಮಂಡ್ಯ ಜಿಲ್ಲೆಯಲ್ಲಿಯೇ ಕೋವಿಡ್ -19 ಪ್ರಕರಣದ ಮೊದಲ ಬಲಿಯಾಗಿದೆ. ಮದ್ದೂರು ಪಟ್ಟಣದ ಲೀಲಾವತಿ ಬಡಾವಣೆ ನಿವಾಸಿ 53 ವರ್ಷದ ಮಹಮದ್ ಸಲೀಮ್ ಕೋವಿಡ್ -19ಗೆ ಬಲಿಯಾದ ವ್ಯಕ್ತಿ. ಮೃತರು ಮದ್ದೂರು ಎಪಿಎಂಸಿ ಎಳನೀರು ಮಾರುಕಟ್ಟೆಯ ಸಗಟು ವ್ಯಾಪಾರಿಯಾಗಿದ್ದು, ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರ ಹಾಗೂ ನರ ರೋಗದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ.
ಸೋಂಕು ಇರುವುದು ದೃಢ: ಇವರು ನರ ರೋಗ ಸಂಬಂಧಿ ಮೂರ್ಚೆ ರೋಗ ವ್ಯಾದಿಯಿಂದ ಬಳಲುತ್ತಿದ್ದರು. ಗಂಟಲಿನ ದ್ರವ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಿದ ವೇಳೆ ಕೋವಿಡ್ 19 ಸೋಂಕು ಇರುವುದು ಖಾತ್ರಿಯಾದ ಹಿನ್ನೆಲೆಯಲ್ಲಿ ರೋಗಿಯೂ ಮೂಲತಃ ಮಂಡ್ಯ ಜಿಲ್ಲೆಯಾವರಾಗಿದ್ದರಿಂದ ಅವರನ್ನು ಮೈಸೂರಿನಿಂದ ಮಂಡ್ಯ ಜಿಲ್ಲಾಸ್ಪತ್ರೆ (ಕೋವಿಡ್-19) ರವಾನಿಸಲು ಸೂಚಿಸಿದ್ದಾರೆ. ಮೃತ ಸಲೀಮ್ ಅವರನ್ನು ಮಂಡ್ಯದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಎಂದು ಕರೆ ತರುವ ಮಾರ್ಗಮಧ್ಯೆ ಅಸುನೀಗಿರುವು ದ್ದು, ಮೃತರ ಶವವನ್ನು ಮಂಡ್ಯದ ಶವಗಾರದಲ್ಲಿ ಇರಿಸಲಾಗಿದೆ.
ಸಂಪರ್ಕಿತರು ಕ್ವಾರಂಟೈನ್: ಮೃತರ ಪತ್ನಿ ಸಹೋದರ ಹಾಗೂ ಅವರ ಸಂಪರ್ಕದಲ್ಲಿದ್ದ ಮದ್ದೂರು ಪಟ್ಟಣದ ವ್ಯಕ್ತಿಯೋರ್ವ ನನ್ನು ಮುಂಜಾಗ್ರತಾ ಕ್ರಮವಾಗಿ ಮಂಡ್ಯದ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿಯ ಮದ್ದೂರು ನಿವಾಸವನ್ನು ಸೀಲ್ಡೌನ್ ಮಾಡಲು ಸ್ಥಳೀಯ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
NDA ಕೂಟದಿಂದ ಜೆಡಿಎಸ್ ಹೊರ ಹಾಕಿ: ಶಿವರಾಮೇ ಗೌಡ
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
MUST WATCH
ಹೊಸ ಸೇರ್ಪಡೆ
Housing Fraud Case: ಇಡಿ ದಾಳಿ… ಬಿಲ್ಡರ್ ಗೆ ಸೇರಿದ 52 ಕೋಟಿ ಮೌಲ್ಯದ ಆಸ್ತಿ ಜಪ್ತಿ
UV Fusion: ಮೂಕಪ್ರಾಣಿಗಳ ವೇದನೆಗೆ ದನಿಯಾಗುವಿರಾ!
Daily Horoscope: ಉದ್ಯೋಗದಲ್ಲಿ ದಿನೇ ದಿನೇ ಉನ್ನತಿ, ಅಕಸ್ಮಾತ್ ಧನಾಗಮ ಯೋಗ
Market ಮೊಟ್ಟೆ ದರ ಏರಿಳಿತ: ಬಸವಳಿದ ಗ್ರಾಹಕರು
Dubai-Mangaluru ವಿಮಾನ ಪ್ರಯಾಣಿಕನ ದುರ್ವರ್ತನೆ; ವಿಮಾನದಿಂದ ಹಾರುವುದಾಗಿ ಬೆದರಿಕೆ!