ಶುಭ ಸಮಾರಂಭಗಳಲ್ಲಿ ಹೂಕುಂಡ ಕೊಟ್ಟು ಸ್ವಾಗತಿಸಿ
ಪ್ಲಾಸ್ಟಿಕ್ ನಿರ್ಮೂಲನೆಗೆ ಜನರ ಸಹಕಾರ ಅಗತ್ಯ: ಡೀಸಿ ಸಾರ್ವಜನಿಕರಿಗೆ ಹೂ ಕುಂಡ ವಿತರಣೆಗೆ ಚಾಲನೆ
Team Udayavani, Feb 13, 2020, 3:57 PM IST
ಮಂಡ್ಯ: ಶುಭ ಸಮಾರಂಭಗಳಲ್ಲಿ ಸಾರ್ವಜನಿಕರು, ಹಿರಿಯರು, ಸ್ನೇಹಿತರಿಗೆ ಶುಭಕೋರುವ ಸಮಯದಲ್ಲಿ ಹೂವಿನ ಕುಂಡಗಳನ್ನು ನೀಡುವ ಮೂಲಕ ಸ್ವಾಗತಿಸುವುದರೊಂದಿಗೆ ಪ್ಲಾಸ್ಟಿಕ್ ನಿರ್ಮೂಲನೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಮನವಿ ಮಾಡಿದರು.
ಬುಧವಾರ ತೋಟಗಾರಿಕೆ ಇಲಾಖಾ ಆವರಣದಲ್ಲಿ ನಡೆದ ತೋಟಗಾರಿಕೆ ಇಲಾಖೆಯಿಂದ ಸಿಗುವ ವಿವಿಧ ಜಾತಿಯ ಹೂವಿನ ಗಿಡಗಳ ಕುಂಡಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪುಷ್ಪಕೃಷಿ ಪ್ರೋತ್ಸಾಹಿಸಿ: ಹೂಗುಚ್ಛಗಳ ತಯಾರಿಕೆಯಲ್ಲಿ ಹೆಚ್ಚಾಗಿ ಪ್ಲಾಸ್ಟಿಕ್ ಬಳಸಲಾಗುತ್ತಿದೆ. ಹೂಗುತ್ಛಗಳು ಕೇವಲ 1 ರಿಂದ 2 ನಿಮಿಷ ಬಾಳಿಕೆ ಬರುವಂತಹವು. ಬಳಿಕ ಅವು ಕಸದ ಬುಟ್ಟಿ ಸೇರುತ್ತವೆ. ಅದರ ಬದಲು ಹೂವಿನ ಕುಂಡಗಳನ್ನು ನೀಡುವುದರಿಂದ ಪುಷ್ಪಕೃಷಿಯನ್ನು ಪ್ರೋತ್ಸಾಹಿಸಿದಂತಾಗುತ್ತದೆ. ಬಿದಿರಿನ ಬುಟ್ಟಿಗಳಲ್ಲಿ ನೀಡುವುದರಿಂದ ಗುಡಿ ಕೈಗಾರಿಕೆಯನ್ನೂ ಉತ್ತೇಜಿಸಿ ದಂತಾಗುವುದು ಎಂದು ಹೇಳಿದರು.
ಸಕಾರಾತ್ಮಕ ಭಾವನೆ: ವಿವಿಧ ಬಗೆಯ ಹೂವಿನ ಕುಂಡಗಳನ್ನು ಕಚೇರಿ, ಮನೆಗಳಲ್ಲಿ ಇಡುವುದರಿಂದ ಹಸಿರಿನ ವಾತಾವರಣ, ಹೆಚ್ಚಿನ ಆಮ್ಲಜನಕ ಉತ್ಪಾದನೆಯೊಂದಿಗೆ ಸಕಾರಾತ್ಮಕ ಭಾವನೆಗಳು ಮೂಡುತ್ತವೆ. ದೀರ್ಘಕಾಲ ಬಾಳಿಕೆ ಬರುವ ಹೂವಿನ ಗಿಡಗಳು ಮನೆಯ ಸೊಬಗನ್ನು ಹೆಚ್ಚಿಸುತ್ತವೆ. ಆದ್ದರಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೂವಿನ ಕುಂಡಗಳನ್ನು ಶುಭ ಸಮಾರಂಭಗಳಲ್ಲಿ ಭಾಗವಹಿಸುವವರಿಗೆ ನೀಡುವಂತೆ ಕೋರಿದರು.
ಹೂವು, ಹಣ್ಣು ಗಿಡ: ಒಂದು ಹೂವಿನ ಕುಂಡಕ್ಕೆ 50 ರೂ. ಬಿದಿರಿನ ಬುಟ್ಟಿಗೆ 50 ರೂ. ಸೇರಿ 100 ರೂ. ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಇದು ಹಾಪ್ ಕಾಮ್ಸ್ಗಳಲ್ಲಿ ದೊರೆಯುವಂತೆಯೂ ವ್ಯವಸ್ಥೆ ಮಾಡಲಾಗಿದೆ. ಪುಷ್ಪಗಳ ಜೊತೆಗೆ ಹಣ್ಣಿನ ಗಿಡಗಳನ್ನೂ ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಜು, ಹಿರಿಯ ಸಹಾಯಕ ನಿರ್ದೇಶಕಿ ರೇಖಾ, ವಾರ್ತಾಧಿಕಾರಿ ಹರೀಶ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ