ಕೊಂಡೋತ್ಸವ ವೀಕ್ಷಿಸಲು ಮನೆ ಮೇಲೆ ನಿಂತಿದ್ದ ಜನ: ಮೇಲ್ಛಾವಣಿ ಕುಸಿದು ಮಹಿಳೆ ಮೃತ್ಯು
ಹಲವರಿಗೆ ಗಾಯ
Team Udayavani, Mar 29, 2022, 8:59 AM IST
ಮಂಡ್ಯ: ಬಸವೇಶ್ವರ ಕೊಂಡೋತ್ಸವ ವೀಕ್ಷಿಸಲು ಮನೆಯೊಂದರ ಮೇಲೆ ನಿಂತಿದ್ದ ಹಿನ್ನಲೆಯಲ್ಲಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಓರ್ವ ಮಹಿಳೆ ಮೃತಪಟ್ಟು 25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಹುಲಿಗೆರೆ ಪುರ ಗ್ರಾಮದಲ್ಲಿ ಜರುಗಿದೆ
ಹುಲಿಗೆರೆಪುರ ಗ್ರಾಮದ ದ್ಯಾವರಸ ರವರ ಪತ್ನಿ ಪುಟ್ಟಲಿಂಗಮ್ಮ 40 ಮೃತಪಟ್ಟ ಮಹಿಳೆಯಾಗಿದ್ದು ಸುಮಾರು 8ಮಕ್ಕಳು ಸೇರಿದಂತೆ ಮಹಿಳೆಯರು ವಯೋವೃದ್ಧರು ಮತ್ತು ಪುರುಷರು ಸೇರಿದಂತೆ 25 ಹೆಚ್ಚು ಮಂದಿ ಗಾಯಗೊಂಡಿದ್ದು ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ
ಗ್ರಾಮದಲ್ಲಿ ಸೋಮವಾರ ಬಂಡಿ ಉತ್ಸವ
ಹಾಗೂ ಇನ್ನಿತರ ಪೂಜಾ ವಿಧಿವಿಧಾನಗಳು ನೆರವೇರಿದ ಬಳಿಕ ಮಂಗಳವಾರ ಬೆಳಿಗ್ಗೆ ಗ್ರಾಮದ ಶ್ರೀ ಬಸವೇಶ್ವರ ಕೊಂಡೋತ್ಸವವನ್ನು ಏರ್ಪಡಿಸಲಾಗಿತ್ತು
ದೇವರಗುಡ್ಡ ಹಾಯುವ ಕೊಂಡೋತ್ಸವವನ್ನು ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮದಿಂದ ಆಗಮಿಸಿದ ನೂರಾರು ಸಂಖ್ಯೆಯ ಗ್ರಾಮಸ್ಥರು ಪಟೇಲ್ ಸಿದ್ದೇಗೌಡ ಎಂಬುವರಿಗೆ ಸೇರಿದ ಮನೆಯ ಮೇಲೆ ನಿಂತು ವೀಕ್ಷಣೆ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಮೇಲ್ಚಾವಣಿ ಕುಸಿದು ಬಿದ್ದು ಈ ದುರ್ಘಟನೆ ಸಂಭವಿಸಿದೆ
ಸುಮಾರು 60 ವರ್ಷದ ಹಿಂದೆ ನಿರ್ಮಿಸಿದ ಮನೆಯ ಮೇಲೆ ಪ್ರತಿ ವರ್ಷದಂತೆ ಸ್ಥಳೀಯ ಗ್ರಾಮಸ್ಥರು ಕೊಂಡ ವೀಕ್ಷಿಸಲು ಮನೆಯ ಮೇಲೆ ಹತ್ತಿದ ಪರಿಣಾಮವಾಗಿ ನೂಕುನುಗ್ಗಲು ಉಂಟಾಗಿ ಮನೆಗೆ ಅಳವಡಿಸಿದ ಮೇಲ್ಚಾವಣಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಸಾವು ನೋವು ಸಂಭವಿಸಿದೆ
ಬಳಿಕ ಸ್ಥಳದಲ್ಲಿದ್ದ ಗ್ರಾಮಸ್ಥರು ಶೀಘ್ರ ಕ್ರಮ ವಹಿಸಿದ ಹಿನ್ನೆಲೆಯಲ್ಲಿ ಅಪಾರ ಸಾವು ನೋವುಗಳ ಪ್ರಮಾಣ ಕಡಿಮೆಯಾಗಿದ್ದು ಕೆಲವರಿಗೆ ತಲೆ ಮುಖ ಕೈ ಕಾಲು ಸೇರಿದಂತೆ ಇನ್ನಿತರ ಗಾಯಗಳಾಗಿದ್ದು ಘಟನಾ ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಅಗತ್ಯ ಕ್ರಮವಹಿಸಿದ್ದು ತುರ್ತು ಚಿಕಿತ್ಸಾ ವಾಹನಗಳ ಮೂಲಕ ವಿವಿಧ ಆಸ್ಪತ್ರೆಗಳಿಗೆ ಗಾಯಗೊಂಡವರನ್ನು ರವಾನಿಸುತ್ತಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ