ಮೈಷುಗರ್‌ ಕಾರ್ಖಾನೆಯಲ್ಲಿ ಮತ್ತೆ ಸಕ್ಕರೆ ಸಿಹಿ 


Team Udayavani, Sep 2, 2022, 6:10 AM IST

ಮೈಷುಗರ್‌ ಕಾರ್ಖಾನೆಯಲ್ಲಿ ಮತ್ತೆ ಸಕ್ಕರೆ ಸಿಹಿ 

ದೇಶದ ಏಕೈಕ ಸರಕಾರಿ ಸ್ವಾಮ್ಯದ ಕಾರ್ಖಾನೆ ಹಾಗೂ 90 ವರ್ಷಗಳ ಇತಿಹಾಸವಿರುವ ಮೈಸೂರಿನ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹಾಗೂ ಕೋಲ್ಮನ್‌ ಅವರು ಸ್ಥಾಪಿಸಿದ ಮೈಷುಗರ್‌ ಕಾರ್ಖಾನೆ 4 ವರ್ಷಗಳ ಬಳಿಕ ಮತ್ತೆ ಪುನಾರಂಭಗೊಳ್ಳುತ್ತಿದೆ. ಮೈಷುಗರ್‌ ಕಾರ್ಖಾನೆ ಕಥೆ ಮುಗಿಯಿತು, ಅಸಿಸ್ಟೇಟ್‌ ಕಾರ್ಖಾನೆ ಹಾದಿಯಲ್ಲಿಯೇ ಮೈಷುಗರ್‌ ಕಾರ್ಖಾನೆ ಶಾಶ್ವತವಾಗಿ ಮುಚ್ಚಲಿದೆ, ಎಷ್ಟು ಅನುದಾನ ಕೊಟ್ಟರೂ ಪುನಶ್ಚೇತನ ಸಾಧ್ಯವಿಲ್ಲ, ಸರಕಾರ ಈ ಐತಿಹಾಸಿಕ ಕಾರ್ಖಾನೆಗೆ ಕೊನೆಯ ಮೊಳೆ ಹೊಡೆಯಲಿದೆ ಎಂಬ ಮಾತುಗಳೇ ಕೇಳಿ ಬರುತ್ತಿದ್ದವು. ಆದರೆ ಅದನ್ನು ಮೀರಿ ಸಂಘಟನೆಗಳ ಸಾಮೂಹಿಕ ಹೋರಾಟಕ್ಕೆ ಜಯ ಸಿಕ್ಕಿದಂತಾಗಿದೆ.

ಬುಧವಾರದಿಂದಲೇ ಚಾಲನೆ :

ಕಾರ್ಖಾನೆಯನ್ನು ಸರಕಾರಿ ಸ್ವಾಮ್ಯದಲ್ಲಿಯೇ ಪುನರಾರಂಭಿಸುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ನಡೆಸಿದ ಹೋರಾಟ ಫಲ ನೀಡಿದ್ದು, ಗಣೇಶ ಚತುರ್ಥಿ ದಿನ ಕಬ್ಬು ಅರೆಯುವಿಕೆ ಪ್ರಾರಂಭವಾಗಿದೆ. ಇದು ಈ ಭಾಗದ ರೈತರು, ಕಬ್ಬು ಬೆಳೆಗಾರರಲ್ಲಿ ಸಂತಸ ತಂದಿದೆ. ನಾಲ್ಕು ವರ್ಷಗಳ ಬವಣೆಗೆ ವಿರಾಮ ಬೀಳಲಿದೆ ಎಂಬ ಆಶಾಭಾವನೆ ಮೂಡಿದೆ.

ನಷ್ಟಕ್ಕೆ ಒಳಗಾಗಿದ್ದ ಕಾರ್ಖಾನೆ:

ದುರಾಡಳಿತ, ರಾಜಕೀಯ ಹಸ್ತಕ್ಷೇಪ, ದುಡಿಯುವ ಬಂಡವಾಳ ಕೊರತೆ, ಸಾಲ ಸಹಿತ ವಿವಿಧ ಸಮಸ್ಯೆಗಳಿಂದ ಕಾರ್ಖಾನೆ 2019ನೇ ಸಾಲಿನಿಂದ ಸಂಪೂರ್ಣ ಸ್ಥಗಿತಗೊಂಡಿತ್ತು. ನೂರಾರು ಕೋಟಿ ರೂ. ನಷ್ಟದಲ್ಲಿತ್ತು. ಇದರಿಂದ ಕಾರ್ಖಾನೆ ವ್ಯಾಪ್ತಿಯ ಕಬ್ಬು ಬೆಳೆಗಾರರು ಸಂಕಷ್ಟ ಅನುಭವಿಸಿದ್ದರು. ಖಾಸಗಿ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಲು ಸಾಕಷ್ಟು ತೊಂದರೆಯಾಗುತ್ತಿತ್ತು. ಕಬ್ಬು ಕಟಾವು, ಕಾರ್ಮಿಕರ ಕೊರತೆ, ಸಾಗಾಣಿಕೆ, ವೆಚ್ಚ ಭರಿಸಲಾಗದೆ ಸಂಕಷ್ಟದಲ್ಲಿದ್ದರು.

ಸರಕಾರಗಳಿಂದ 522 ಕೋಟಿ ರೂ. :

ಕಾರ್ಖಾನೆಯ ಪುನಶ್ಚೇತನಕ್ಕಾಗಿ ಇದುವರೆಗೆ ಸರಕಾರಗಳು 522 ಕೋಟಿ ರೂ.ಗೂ ಹೆಚ್ಚು ಅನುದಾನ ನೀಡಿವೆ. ಆದರೆ ಇದುವರೆಗೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸಾಧ್ಯವಾಗಿರಲಿಲ್ಲ. ಅಲ್ಲದೆ ಅನುದಾನ ಏನಾಗುತ್ತಿದೆ ಎಂಬುದರ ಬಗ್ಗೆ ಕಾರ್ಖಾನೆಯಲ್ಲಿ ಮಾಹಿತಿಯೇ ಇಲ್ಲ.

ಗುತ್ತಿಗೆಗೆ ವಹಿಸಲು ನಿರ್ಧಾರ:

2019ರಲ್ಲಿದ್ದ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಕಾರ್ಖಾನೆ ಯನ್ನು ಒ ಅಂಡ್‌ ಎಂಗೆ ವಹಿಸಲು ನಿರ್ಧರಿಸಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಯಿತು. ಅನಂತರ ಬಂದ ಬಿಜೆಪಿ ಸರಕಾರ ಪಾಂಡವಪುರದ ಪಿಎಸ್‌ಎಸ್‌ಕೆ ಕಾರ್ಖಾನೆಯನ್ನು 40 ವರ್ಷ ಖಾಸಗಿಯವರಿಗೆ ನೀಡಲು ಮುಂದಾಗಿತ್ತು.

ಐದಾರು ಬಾರಿ ಸಭೆ:

ಕಾರ್ಖಾನೆ ಆರಂಭಿಸುವ ವಿಚಾರದಲ್ಲಿ ಸಿಎಂ, ಸಕ್ಕರೆ ಸಚಿವರ ನೇತೃತ್ವದಲ್ಲಿ ಹಲವಾರು ಬಾರಿ ಜಿಲ್ಲೆಯ ರಾಜಕೀಯ ಪಕ್ಷಗಳು, ಜನಪ್ರತಿನಿಧಿ ಗಳು, ರೈತ ಮುಖಂಡರು, ವಿವಿಧ ಸಂಘಟನೆಗಳ ಮುಖಂಡರ ಸಭೆಗಳು ನಡೆದಿದ್ದವು. ಅಲ್ಲಿಯೂ ಒಮ್ಮತಕ್ಕೆ ಬಾರದೆ ಇದ್ದುದರಿಂದ ಮುಂದೂಡಿಕೆಯಾಗುತ್ತಲೇ ಇತ್ತು.

50 ಕೋಟಿ ರೂ. ಘೋಷಣೆ :

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ ಮೈಷುಗರ್‌ ಕಾರ್ಖಾನೆಗೆ 50 ಕೋಟಿ ರೂ. ಘೋಷಣೆ ಮಾಡಿದರು. ಅದರಲ್ಲಿ 20 ಕೋಟಿ ರೂ. ಬಿಡುಗಡೆ ಮಾಡಿದ್ದು, ಉಳಿದ 30 ಕೋಟಿ ರೂ. ಬಿಡುಗಡೆಯಾಗಬೇಕಾಗಿದೆ.

ವಿವಿಧ ಸಂಘಟನೆಗಳ ಪ್ರತಿಭಟನೆ :

ಮಂಡ್ಯ ಜಿಲ್ಲಾ ರೈತ ಹಿತರಕ್ಷಣ ಸಮಿತಿ ಎರಡು ಗುಂಪುಗಳಾದ ಹಿನ್ನೆಲೆಯಲ್ಲಿ ಒಂದು ಗುಂಪು ಒ ಆ್ಯಂಡ್‌ ಎಂ ಪರ ನಿಂತಿದ್ದರೆ, ಮತ್ತೂಂದು ಬಣ ಸರಕಾರಿ ಸ್ವಾಮ್ಯದಲ್ಲಿಯೇ ಆರಂಭಿಸಬೇಕು ಎಂದು ಪಟ್ಟು ಹಿಡಿದಿದ್ದರು. ಅನಂತರ ಸರಕಾರ 40 ವರ್ಷ ಗುತ್ತಿಗೆ ನೀಡುತ್ತೇವೆ ಎಂದಾಗ ಎಲ್ಲ ಸಂಘಟನೆಗಳು ಒಗ್ಗೂಡಿದವು. ನಿರಂತರ ಒಂದು ತಿಂಗಳ ಕಾಲ ಧರಣಿ ನಡೆಸಿ ಸರಕಾರದ ಮೇಲೆ ಒತ್ತಡ ಹಾಕುವ ಮೂಲಕ ಸರಕಾರಿ ಸ್ವಾಮ್ಯದಲ್ಲಿಯೇ ನಡೆಸುವ ಘೋಷಣೆ ಮಾಡಲಾಯಿತು.

ಯಂತ್ರಗಳ ದುರಸ್ತಿ :

ನಾಲ್ಕು ವರ್ಷಗಳಿಂದ ಕಾರ್ಖಾನೆ ಸಂಪೂರ್ಣ ನಿಂತದ್ದರಿಂದ ಕಾರ್ಖಾನೆಯ ಕೆಲವು ಯಂತ್ರಗಳು ತುಕ್ಕು ಹಿಡಿದು ಹಾಳಾಗುವ ದುಃಸ್ಥಿತಿಯಲ್ಲಿದ್ದವು. ಆಗ ಪರಿಣತರ ತಂಡವನ್ನು ಕರೆಸಿ ಯಂತ್ರಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು. ಅಧಿ ಕಾರಿಗಳು ಆಯಿಲಿಂಗ್‌ ಮಾಡಿ ಕಾರ್ಖಾನೆ ಪ್ರಾರಂಭಿಸಬಹುದು ಎಂದು ವರದಿಯಲ್ಲಿ ಉಲ್ಲೇಖೀಸಿದ್ದರು. ತಾಂತ್ರಿಕ ತಜ್ಞರ ವರದಿಯಂತೆ ಖಾಸಗಿ ಕಂಪೆನಿಗೆ ಯಂತ್ರಗಳ ದುರಸ್ತಿಯ ಟೆಂಡರ್‌ ನೀಡುವ ಮೂಲಕ ದುರಸ್ತಿ ಭರದಿಂದ ಸಾಗಿತ್ತು.

ಹೆಚ್ಚು ಆದಾಯವಿರುವ ಕಾರ್ಖಾನೆ :

ಮೈಷುಗರ್‌ ಹೆಚ್ಚು ಆದಾಯವಿರುವ ಕಾರ್ಖಾನೆ ಯಾಗಿದೆ. ಸಕ್ಕರೆ ಉತ್ಪಾದನೆಯ ಜತೆಗೆ ಸ್ಪಿರಿಟ್‌ ಉತ್ಪಾದಿಸುವ ಡಿಸ್ಟಿಲರಿ ಘಟಕ, ಸಹ ವಿದ್ಯುತ್‌ ಘಟಕ, ಮಡ್ಡಿ ತಯಾರಿಕೆ, ಮೊಲಾಸಸ್‌ ಸೇರಿದಂತೆ ಉಪ ಉತ್ಪನ್ನಗಳ ಮೂಲಕ ಆದಾಯ ಬರಲಿದೆ. ಬೆಂಗಳೂರಿನ ವಾಣಿಜ್ಯ ಸಕೀರ್ಣಗಳ ಬಾಡಿಗೆ, ಕಾರ್ಖಾನೆಯ ವ್ಯಾಪ್ತಿಯಲ್ಲಿ ನೂರಾರು ಎಕರೆ ಆಸ್ತಿ ಸಹಿತ ವಿವಿಧ ಮೂಲಗಳು ಕಾರ್ಖಾನೆ ಆದಾಯ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಮುಂದೆ ನಷ್ಟವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸರಕಾರಕ್ಕಿದೆ.

ಆ.11ರಂದು ಬಾಯ್ಲರ್‌ಗೆ ಬೆಂಕಿ :

ಆ.11ರಂದು ಕಾರ್ಖಾನೆಯ ಬಾಯ್ಲರ್‌ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ಸಚಿವ ಕೆ.ಸಿ. ನಾರಾಯಣಗೌಡ, ಶಾಸಕ ಎಂ. ಶ್ರೀನಿವಾಸ್‌ ಸೇರಿದಂತೆ ಮತ್ತಿತರರು ಬಾಯ್ಲರ್‌ಗೆ ಬೆಂಕಿ ಹಚ್ಚುವ ಮೂಲಕ ರೈತರಿಗೆ ಕಾರ್ಖಾನೆ ಆರಂಭವಾಗುವ ಬಗ್ಗೆ ಖಾತ್ರಿಪಡಿಸಿದ್ದರು.

ಶತಕ ಪೂರೈಸಲಿರುವ ಏಕೈಕ ಕಾರ್ಖಾನೆ :

ಮೈಷುಗರ್‌ ಕಾರ್ಖಾನೆ ಸತತವಾಗಿ ಇನ್ನು 10 ವರ್ಷ ನಿರಂತರವಾಗಿ ನಡೆದರೆ ಶತಕ ಪೂರೈಸಿದ ಏಕೈಕ ಕಾರ್ಖಾನೆ ಆಗಲಿದೆ. 1933ರ ಜ.30ರಂದು ಪ್ರಾರಂಭಗೊಂಡ ಕಾರ್ಖಾನೆ ಈಗ 90 ವರ್ಷ ಪೂರೈಸಿದ್ದು, ಶತಕ ಪೂರೈಸಲು 10 ವರ್ಷ ಬಾಕಿ ಉಳಿದಿದೆ.

ಇನ್ನು ಮುಂದೆ ಯಾವುದೇ ತೊಂದರೆ ಇಲ್ಲದೆ  ಕಾರ್ಖಾನೆ ನಿರಂತರವಾಗಿ ನಡೆಯಲಿ ಎಂಬುದು  ರೈತರ ಹೆಬ್ಬಯಕೆಯಾಗಿದೆ.

ಸವಾಲುಗಳು :

  • ಕಾರ್ಖಾನೆಯನ್ನು ಲಾಭದತ್ತ ಕೊಂಡೊಯ್ಯಬೇಕು.
  • ಭ್ರಷ್ಟಾಚಾರ ರಹಿತ ವಾಗಿ, ರಾಜಕೀಯ ಹಸ್ತಕ್ಷೇಪವಿಲ್ಲದೆ, ಕಾರ್ಮಿಕರು ಹಾಗೂ ಅಧಿಕಾರಿಗಳ ನಡುವೆ ಸಮನ್ವಯ ಕಾಪಾಡಬೇಕು.
  • ಹಣಕಾಸು ವ್ಯವಹಾರ ಪಾರದರ್ಶಕವಿದ್ದು, ಸುಸ್ಥಿತಿಯಲ್ಲಿಡಬೇಕು.
  • ನಿರಂತರವಾಗಿ ಕಾರ್ಖಾನೆ ನಡೆಯುವಂತೆ ನೋಡಿಕೊಳ್ಳಬೇಕು.
  • ನಿಗದಿತ ಅವಧಿಯ ಒಳಗೆ ರೈತರಿಗೆ ಹಣ ಪಾವತಿಸಬೇಕು.
  • ಕಾರ್ಖಾನೆಯ ಆಸ್ತಿಯನ್ನು ಸಂರಕ್ಷಿಸಬೇಕು.
  • ಕಾರ್ಖಾನೆ ವ್ಯಾಪ್ತಿಯ ಕಬ್ಬನ್ನು ಸಂಪೂರ್ಣವಾಗಿ ಅರೆಯಬೇಕು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.