ಎಸ್ಪಿ ನಿವಾಸ ಆವರಣದ ಮರಗಳ ಹನನ?

ಅನುಮತಿ ಪಡೆಯದೇ ಮರಗಳ ಕಟಾವು ಮಾಡಿದ ಆರೋಪ

Team Udayavani, Sep 14, 2021, 5:44 PM IST

ಎಸ್ಪಿ ನಿವಾಸ ಆವರಣದ ಮರಗಳ ಹನನ?

ಮಂಡ್ಯ: ಅರಣ್ಯ ಇಲಾಖೆ ಅನುಮತಿ ಪಡೆಯದೇ ಎಸ್ಪಿ ಡಾ.ಎಂ.ಅಶ್ವಿ‌ನಿ ಅವರು, ಸುಭಾಷ್‌ ನಗರದಲ್ಲಿರುವ ತಮ್ಮ ಅಧಿಕೃತ ನಿವಾಸದ
ಆವರಣದಲ್ಲಿದ್ದ ಮರಗಳನ್ನುಕತ್ತರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸೋಮವಾರ ಮಧ್ಯಾಹ್ನ ರಸ್ತೆಯನ್ನು ಬಂದ್‌ ಮಾಡಿ ನಿವಾಸದ ಒಳ ಆವರಣದಲ್ಲಿದ್ದ 11 ಅಶೋಕ ಮರಗಳನ್ನು ಕತ್ತರಿಸಿದ್ದು, ಸಾರ್ವಜನಿಕರ
ಟೀಕೆಗೆ ಗುರಿಯಾಗಿದೆ. ತಮ್ಮ ಮಕ್ಕಳು ಆಟವಾಡುತ್ತಿದ್ದಾಗ ಒಂದು ಮರದ ಕೊಂಬೆ ಬಿದ್ದಿದ್ದರಿಂದ ಹಾಗೂ ಕಾಂಪೌಂಡ್‌ಗೆ ಹಾನಿಯಾಗಬಾರದು ಎಂಬ ಉದ್ದೇಶದಿಂದ ಸೋಮವಾರ ಯಂತ್ರದ ಮೂಲಕ ಮರಗಳನ್ನು ಕತ್ತರಿಸಲಾಗಿದೆ ಎಂದು ತಿಳಿದು ಬಂದಿದೆ.

ನೋಟಿಸ್‌ ನೀಡಲು ತೀರ್ಮಾನ: ಮರಗಳ ಕತ್ತರಿಸಲು ಅರಣ್ಯ ಇಲಾಖೆಯಿಂದ ಮಾಹಿತಿ ಪಡೆದಿಲ್ಲ ಎಂದು ತಿಳಿದು ಬಂದಿದೆ. ಈ ಸಂಬಂಧ ಸುದ್ದಿಗಾರರೊಂದಿಗೆ ಸಹಾಯಕ ಅರಣ್ಯ ಸಂರಕ್ಷಣಾಕಾರಿ ಶಶಿಧರ್‌ ಮಾತನಾಡಿ, ಎಸ್ಪಿಯವರು ನಮ್ಮಿಂದ ಯಾವುದೇ ರೀತಿಯ ಅನುಮತಿ ಪಡೆ ದಿಲ್ಲ. ಸರ್ಕಾರಿ ನಿವಾಸ ಆಗಿರುವುದರಿಂದ ಅನುಮತಿ ಪಡೆಯಬೇಕಾಗಿದೆ. ಈ ಬಗ್ಗೆ ನೋಟಿಸ್‌ ನೀಡಲಾಗುವುದು. ಉತ್ತರ ನೀಡದಿದ್ದರೆ ಪ್ರಕರಣ
ದಾಖಲಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ರಾಜ್ಯದಲ್ಲಿ ಐದು ಸಾವಿರ ಶಿಕ್ಷಕರ ನೇಮಕ : ಸಚಿವ ಬಿ.ಸಿ. ನಾಗೇಶ್ ಭರವಸೆ

ವಸತಿ ಗೃಹದ ಸುರಕ್ಷತೆಗಾಗಿ ಮರಗಳಿಗೆ ಟ್ರಿಮ್ಮಿಂಗ್‌: ಎಸ್ಪಿಸ್ಪಷ್ಟನೆ ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್ಪಿ ಅಶ್ವಿ‌ನಿ, ವಸತಿ ಗೃಹದ
ಸುರಕ್ಷತೆಗಾಗಿ ಮರದ ರೆಂಬೆ-ಕೊಂಬೆಗಳ ಟ್ರಿಮ್ಮಿಂಗ್‌ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಮರಗಳ ರೆಂಬೆ-ಕೊಂಬೆಗಳು ಬೆಳೆದು ವಿದ್ಯುತ್‌ ತಂತಿಗಳಿಗೆ ತಗಲುತ್ತಿದ್ದು, ಮಳೆಗಾಲವಿರುವುದರಿಂದ ತೊಂದರೆಯಾಗಲಿದೆ. ರೆಂಬೆ-ಕೊಂಬೆಗಳುಕಾಂಪೌಂಡ್‌ಗೆ ವಾಲಿದ್ದು, ಹಾನಿಯಾಗುವ ಸಾಧ್ಯತೆ ಇದೆ. ಆದ್ದರಿಂದ ವಸತಿ ಗೃಹಗಳ ಲೈನ್‌ ಅಧಿಕಾರಿ ಆರ್‌ಪಿಐ ಡಿಎಆರ್‌, ಚೆಸ್ಕಾಂ ಮತ್ತು ಅರಣ್ಯ ಇಲಾಖೆ ಅವರಿಗೆ ಲಿಖಿತ ಮನವಿಯನ್ನು ಸೋಮವಾರ ಸಲ್ಲಿಸಲಾಗಿದೆ. ಅದರಂತೆ ವಸತಿ ಗೃಹದ ಸುರಕ್ಷತೆಗಾಗಿ ಮರಗಳಿಗೆ ಟ್ರಿಮ್ಮಿಂಗ್‌ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.