ಬಗೆಹರಿಯದ ವಿವಿ ವಿದ್ಯಾರ್ಥಿಗಳ ಸಮಸ್ಯೆ

ವರ್ಷ ಕಳೆದರೂ ಪ್ರಕಟವಾಗದ ಫಲಿತಾಂಶ,ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿಗಳ ಪರದಾಟ

Team Udayavani, Jan 5, 2021, 5:19 PM IST

ಬಗೆಹರಿಯದ ವಿವಿ ವಿದ್ಯಾರ್ಥಿಗಳ ಸಮಸ್ಯೆ

ಮಂಡ್ಯ: ಮಂಡ್ಯ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿಗಳನ್ನು ನೇಮಕ ಮಾಡಿದ್ದರೂ ವಿವಿ ವಿದ್ಯಾರ್ಥಿಗಳ ಸಮಸ್ಯೆ ಇನ್ನೂ ಬಗೆಹರಿದಂತೆ ಕಾಣುತ್ತಿಲ್ಲ. 2019ರಲ್ಲಿ ವಿಶ್ವವಿದ್ಯಾಲಯದಡಿ ಪ್ರವೇಶಾತಿ ಪಡೆದಿದ್ದ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಇನ್ನೂ ಸಂಕಷ್ಟ ಅನುಭವಿಸುವಂತಾಗಿದೆ.

ಸರ್ಕಾರ ಹಾಗೂ ಆಡಳಿತ ಮಂಡಳಿಯ ನಡುವಿನ ಗೊಂದಲದಿಂದ ವಿವಿಯಡಿ ಪ್ರವೇಶಾತಿ ಪಡೆದಿದ್ದ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರಥಮ ವರ್ಷದ ಮೊದಲ ಹಾಗೂ ದ್ವಿತೀಯಸೆಮಿಸ್ಟರ್‌ ಫಲಿತಾಂಶ ಬಿಡುಗಡೆ ಮಾಡಿಲ್ಲ. ಇತ್ತ ಅಂತಿಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಫಲಿತಾಂಶ ಬಿಡುಗಡೆ ಮಾಡಿದ್ದರೂ, ಅಂಕಪಟ್ಟಿ ವಿತರಿಸುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.

2019ರಲ್ಲಿ ನಡೆದಿದ್ದ ಪರೀಕ್ಷೆ: 2019ರ ನವೆಂಬರ್‌ ಹಾಗೂ ಡಿಸೆಂಬರ್‌ ತಿಂಗಳಲ್ಲಿ ಮೊದಲ ಸೆಮಿಸ್ಟರ್‌ಪರೀಕ್ಷೆ ನಡೆದಿತ್ತು. ಒಂದು ವರ್ಷ ಕಳೆದರೂ ಇನ್ನೂ ಫಲಿತಾಂಶ ಬಿಡುಗಡೆ ಮಾಡಿಲ್ಲ. ಎರಡನೇಸೆಮಿಸ್ಟರ್‌ ಪರೀಕ್ಷೆಯು ಕೋವಿಡ್ ದಿಂದ ನಡೆಯಲಿಲ್ಲ. ಇದರಿಂದ ಸರ್ಕಾರ ದ್ವಿತೀಯ ವರ್ಷಕ್ಕೆ ಪ್ರಮೋಟ್‌ ಮಾಡಿದೆ. ಅದಕ್ಕೂ ಪ್ರಾಜೆಕ್ಟ್ ಸಲ್ಲಿಸಲಾಗಿತ್ತು. ಆದರೂ, ಇದುವರೆಗೂ ಅಂಕಪಟ್ಟಿ ನೀಡಿಲ್ಲ.

ದ್ವಿತೀಯ ವರ್ಷಕ್ಕೆ ದಾಖಲಾತಿ: ಮೊದಲ ವರ್ಷದ ಸೆಮಿಸ್ಟರ್‌ಗಳ ಫಲಿತಾಂಶ ಇನ್ನೂ ಬಿಡುಗಡೆಮಾಡಿಲ್ಲ. ಆದರೂ 2ನೇ ವರ್ಷಕ್ಕೆ ದಾಖಲಾತಿ ಮಾಡಿಕೊಳ್ಳಲಾಗಿದೆ. ಇದರ ಜತೆಗೆ ಮೊದಲ ವರ್ಷಕ್ಕೆವಿವಿಯಡಿಯಲ್ಲಿಯೇ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲಾಗಿದೆ.

ವಿದ್ಯಾರ್ಥಿ ವೇತನ ಪಡೆಯಲು ತೊಂದರೆ: ಮೊದಲ ವರ್ಷದ ಸೆಮಿಸ್ಟರ್‌ಗಳ ಫಲಿತಾಂಶ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ವೇತನ ಪಡೆಯಲು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿ ವೇತನ ಪಡೆಯಲು ಅಂಕಪಟ್ಟಿ ಬೇಕಾಗಿರುವುದರಿಂದ ವಿದ್ಯಾರ್ಥಿ ವೇತನದಿಂದ ವಂಚಿತರಾಗ ಬೇಕಾಗಿದೆ. ಈಗಾಗಲೇ ಹಲವಾರು ಕಂಪನಿಗಳು ಆನ್‌ಲೈನ್‌ ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದ್ದವು. ಕಳೆದ ಡಿಸೆಂಬರ್‌ 31ಕ್ಕೆ ಕೊನೆ ದಿನಾಂಕ ನಿಗದಿಯಾಗಿತ್ತು. ಆದರೆ, ಅಂಕಪಟ್ಟಿ ಇಲ್ಲದೆಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಈಗ ಮತ್ತೂಂದು ಕಂಪನಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಜ.11ಕ್ಕೆ ಕೊನೆ ದಿನವಾಗಿದೆ. ಅಷ್ಟರಲ್ಲಿ ಫಲಿತಾಂಶಪ್ರಕಟ ಮಾಡಿ, ಅಂಕಪಟ್ಟಿ ನೀಡಿದರೆ ವಿದ್ಯಾರ್ಥಿ  ವೇತನ ಪಡೆಯಲು ಸಾಧ್ಯವಾಗಲಿದೆ ಎಂದು ವಿದ್ಯಾರ್ಥಿನಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.

ಬಡ ವಿದ್ಯಾರ್ಥಿಗಳೇ ಹೆಚ್ಚು: ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜು ವಿಶ್ವ ವಿದ್ಯಾಲಯವಾಗಿ ಮೇಲ್ದರ್ಜೆಗೇರಿದ ಬಳಿಕ ಜಿಲ್ಲೆಯ ಬಡ ವಿದ್ಯಾರ್ಥಿಗಳು ತುಂಬಾ ಖುಷಿಪಟ್ಟಿದ್ದರು. ವಿವಿಯಡಿ ವಿದ್ಯಾಭ್ಯಾಸ ಮಾಡಿದರೆ ಮುಂದಿನಭವಿಷ್ಯ ಉತ್ತಮಗೊಳ್ಳಲಿದೆ ಎಂದು ಕನಸು ಕಟ್ಟಿಕೊಂಡಿದ್ದರು. ಎಲ್ಲದಕ್ಕೂ ಮೈಸೂರು ವಿವಿಗೆ ಹೋಗಿಬರಬೇಕಿತ್ತು. ಇದಕ್ಕಾಗಿ ಎಷ್ಟೋ ವಿದ್ಯಾರ್ಥಿಗಳುತರಗತಿಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ. ವಿವಿ ಆಗಿದ್ದರಿಂದ 2019ರಲ್ಲಿ ಸುಮಾರು 2500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದರು

ಗೊಂದಲದಲ್ಲೇ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು :  2019ರಲ್ಲಿ ಮೊದಲ ವರ್ಷಕ್ಕೆ ವಿವಿಯಡಿ ಪ್ರವೇಶ ಪಡೆದಿದ್ದ ವಿದ್ಯಾರ್ಥಿಗಳು ಪರೀಕ್ಷೆಗೂ ತೊಂದರೆ ಅನುಭವಿಸುವಂತಾಗಿತ್ತು.ವಿಶೇಷಾಧಿಕಾರಿ ಹಾಗೂ ಆಡಳಿತ ಮಂಡಳಿಯಬಣ ರಾಜಕೀಯ, ಮುಸುಕಿನ ಗುದ್ದಾಟದಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದರು.

ವಿವಿಯಡಿ ಪ್ರವೇಶಾತಿ ಪಡೆದಿದ್ದ ವಿದ್ಯಾರ್ಥಿ ಗಳಿಗೆ ಸ್ವಾಯತ್ತದಡಿ ಪರೀಕ್ಷೆ ಬರೆಯುವಂತೆ 2020ರ ಜನವರಿಯಲ್ಲಿ ಸೂಚಿಸಲಾಗಿತ್ತು. ಇದರಿಂದ ಮುಂದೆ ಶೈಕ್ಷಣಿಕವಾಗಿತೊಂದರೆಯಾಗಲಿದೆ ಎಂಬುದನ್ನು ಅರಿತವಿದ್ಯಾರ್ಥಿಗಳು ಸುಮಾರು 15 ದಿನಗಳ ಕಾಲಪ್ರತಿಭಟನೆ ನಡೆಸಿದರು. ಸರ್ಕಾರ ಹಾಗೂ ಸಚಿವರಿಗೆ ಮನವಿ ಸಲ್ಲಿಸಿದ ಬಳಿವಿವಿಯಡಿಯಲ್ಲಿಯೇ ಪರೀಕ್ಷೆ ಬರೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಈಗ ಮತ್ತೆಫಲಿತಾಂಶಕ್ಕಾಗಿ ಪ್ರತಿಭಟನೆ ಅನಿವಾರ್ಯ ವಾಗಿದೆ ಎನ್ನುತ್ತಾರೆ ವಿದ್ಯಾರ್ಥಿಗಳು.

ವಿದ್ಯಾರ್ಥಿಗಳಿಗೆ ಆನ್‌ಲೈನ್‌: ವಿಶ್ವವಿದ್ಯಾಲ ಯದಡಿ 2020ರಲ್ಲಿ ಪ್ರವೇಶಾತಿ ಪಡೆದಿರುವ ಪ್ರಥಮ ಹಾಗೂ ದ್ವಿತೀಯ ವರ್ಷದವಿದ್ಯಾರ್ಥಿಗಳಿಗೆ ಡಿಸೆಂಬರ್‌ನಿಂದ ಆನ್‌ಲೈನ್‌ತರಗತಿ ಪ್ರಾರಂಭವಾಗಿದೆ. ಅಂತಿಮವರ್ಷದ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿಗಳು ನಡೆಯುತ್ತಿವೆ.

ಪ್ರಥಮ ವರ್ಷದ 2 ಸೆಮಿಸ್ಟರ್‌ ಪರೀಕ್ಷೆ ಗಳ ಫಲಿತಾಂಶ ಪ್ರಕಟ ಮಾಡಿಲ್ಲ. ಇದರಿಂದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗದಂತಾಗಿದೆ. ವಿವಿಧ ಕಂಪನಿಗಳು20ರಿಂದ 30 ಸಾವಿರದವರೆಗೆ ವಿದ್ಯಾರ್ಥಿ ವೇತನ ನೀಡುತ್ತವೆ. ಆದರೆ, ಪ್ರಥಮ ವರ್ಷದ ಅಂಕಪಟ್ಟಿ ಇಲ್ಲದೆ, ದ್ವಿತೀಯ ವರ್ಷಕ್ಕೆ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಕಾಲೇಜಿಗೆ ಬರುವವರೆಲ್ಲ ತುಂಬಾ ಬಡವಿದ್ಯಾರ್ಥಿಗಳಾಗಿದ್ದಾರೆ. ಮುಂದೆ ಏನು ಮಾಡುವುದು ಎಂಬುದು ತೋಚುತ್ತಿಲ್ಲ. ಹೆಸರೇಳದ ಬಿಸಿಎ ವಿದ್ಯಾರ್ಥಿನಿ

ಸ್ನಾತಕ ಹಾಗೂ ಸ್ನಾತಕೋತ್ತರ ದ್ವಿತೀಯ  ವರ್ಷದ ವಿದ್ಯಾರ್ಥಿಗಳಿಗೆ ಮೊದಲ ಹಾಗೂ ಎರಡನೇ ಸೆಮಿಸ್ಟರ್‌ಗಳ ಪರೀಕ್ಷೆಯಫಲಿತಾಂಶ ಬಿಡುಗಡೆ ಮಾಡಿಲ್ಲ. ಇತ್ತ ದ್ವಿತೀಯ ವರ್ಷದಿದ ಅಂತಿಮ ವರ್ಷಕ್ಕೆ ದಾಖಲಾತಿ ಪಡೆದಿರುವ ವಿದ್ಯಾರ್ಥಿಗಳ ಫಲಿತಾಂಶಬಿಡುಗಡೆ ಮಾಡಿದ್ದರೂ ಅಂಕಪಟ್ಟಿ ವಿತರಿಸಿಲ್ಲಈಗಾಗಲೇ ಸರ್ಕಾರವು ಸಹ ಫಲಿತಾಂಶ ಬಿಡುಗಡೆ ಮಾಡುವಂತೆ ಆದೇಶ ನೀಡಿದೆ.ಆದರೂ ಪ್ರಕಟ ಮಾಡಿಲ್ಲ. ಕೇಳಿದರೆ ಇಲ್ಲದ ಸಬೂಬು ಹೇಳುತ್ತಾರೆ. – ಹೆಸರೇಳದ ಎಂಎಸ್ಸಿ ವಿದ್ಯಾರ್ಥಿ

ವಿಶ್ವವಿದ್ಯಾಲಯವಾಗಿ ಮಾನ್ಯತೆ ಪಡೆದ ನಂತರ ಯಾವುದೇ ನಿಯ ಮಾವಳಿಗಳನ್ನು ಹಾಕಿಲ್ಲ. ಬದಲಾಗಿ ಮೈಸೂರು ವಿವಿಯ ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಗಿತ್ತು. ಆದರೆ,ಹಿಂದೆ ಇದ್ದವರು ಇದನ್ನು ಪಾಲಿಸದ ಪರಿಣಾಮ ಗೊಂದಲ ಉಂಟಾಗಿದೆ. ಇದರಿಂದ ಕಳೆದ ಒಂದು ವಾರದಿಂದ ಫಲಿತಾಂಶ ಪ್ರಕಟ ಮಾಡಲು ಹರಸಾಹಸಪಡಲಾಗುತ್ತಿದೆ. ಎಲ್ಲ ವಿಭಾಗದ ಮುಖ್ಯಸ್ಥರ ಸಭೆ ಕರೆದು ಇನ್ನೊಂದು ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲು ಕ್ರಮ ವಹಿಸಲಾಗುವುದು.ಡಾ.ಪುಟ್ಟರಾಜು, ಕುಲಪತಿ, ವಿಶ್ವವಿದ್ಯಾಲಯ ಮಂಡ್ಯ

 

 –ಎಚ್‌.ಶಿವರಾಜು

ಟಾಪ್ ನ್ಯೂಸ್

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.