ಮಂಡ್ಯ ವಿವಿಗೆ ಶೀಘ್ರವೇ ಕುಲಪತಿ ನೇಮಕ
Team Udayavani, Jun 13, 2020, 5:04 AM IST
ಮಂಡ್ಯ: ಮಂಡ್ಯ ವಿವಿಗೆ ಶೀಘ್ರವೇ ಹೊಸ ಕುಲಪತಿ ನೇಮಕ ಮಾಡುವ ಸಿದ್ಧತೆಗಳು ಆರಂಭವಾಗಿವೆ ಎಂದು ಉಪಮುಖ್ಯ ಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ತಿಳಿಸಿದರು. ಶುಕ್ರವಾರ ಮಂಡ್ಯ ವಿವಿ ಕಾಲೇಜಿಗೆ ಭೇಟಿ ನೀಡಿ ಸಮಗ್ರ ಮಾಹಿತಿ ಪಡೆದುಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮಂಡ್ಯ ವಿವಿಯ ಸ್ಥಾನಮಾನಗಳಿಗೆ ಕೆಲವು ಕಾನೂನು ತೊಡಕುಗಳಿದ್ದವು.
ಅವೆಲ್ಲವನ್ನೂ ಈಗ ಪರಿಹರಿಸಲಾಗಿದೆ. ಕುಲಪತಿಯನ್ನು ನೀಡುವ ಮೂಲಕ ಮಂಡ್ಯ ವಿವಿಗೆ ಹೊಸ ರೂಪ ನೀಡಲಾಗುವುದು. ಮಂಡ್ಯ ವಿವಿಗೆ ಕುಲಪತಿಗಳನ್ನು ನೇಮಕ ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ರಾಜ್ಯ ಪಾಲರ ಸುಗ್ರಿವಾಜ್ಞೆ ಹೊರಬೀಳುತ್ತಿದ್ದಂತೆ ಆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಶೈಕ್ಷಣಿಕ ಕ್ರಾಂತಿ: ಕೆ.ವಿ.ಶಂಕರಗೌಡರು ಶಿಕ್ಷ ಣದ ಕ್ರಾಂತಿಯನ್ನು ಮಾಡಿದ್ದಾರೆ. ನಾವು ಸಹ ಅದೇ ದಿಕ್ಕಿನಲ್ಲಿ ಮಂಡ್ಯ ವಿವಿಯಲ್ಲಿ ಶಿಕ್ಷಣ ಕ್ರಾಂತಿ ಮಾಡಿ, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು. ಗುಣಮಟ್ಟದ ಶಿಕ್ಷಣ ಸುಧಾರಣೆಗೂ ಕೆಲವು ಕ್ರಮ ಕೈಗೊಳ್ಳಲಾಗು ವುದು. ಪ್ರತಿ ವ್ಯಕ್ತಿಗೆ ಬದುಕು ಮತ್ತು ಜ್ಞಾನ ಬಹಳ ಮುಖ್ಯ. ಎರಡನ್ನು ಸಹ ಶೈಕ್ಷಣಿಕ ಕ್ರಾಂತಿಯಲ್ಲಿ ತುಂಬುವ ಇರಾದೆ ಹೊಂದಿ ದ್ದೇವೆ ಎಂದು ಹೇಳಿದರು.
ಫಲಿತಾಂಶ ನೀಡಲು ಸಿದ್ಧತೆ: ಮಂಡ್ಯ ವಿವಿಯಲ್ಲಿ ಕೆಲವು ಸಮಸ್ಯೆಗಳನ್ನು ಪರಿಹರಿಸಲು ಕಾನೂನು ತೊಡಕುಗಳು ಇದ್ದವು. ಅವು ಗಳನ್ನು ಈಗ ಸರಿಪಡಿಸಲು ಅವಕಾಶ ಸಿಕ್ಕಿದೆ. ಮುಂದಿನ ಒಂದು ವಾರದಲ್ಲಿ ವಿವಿಯ ಎಲ್ಲಾ ವಿದ್ಯಾರ್ಥಿಗಳಿಗೆ ಮೊದಲ ಸೆಮಿಸ್ಟರ್ ಫಲಿತಾಂಶ ನೀಡಲು ಸಿದ್ಧತೆ ಮಾಡಲಾಗುವು ದು. ಅಲ್ಲದೇ ಬೋಧಕ ಮತ್ತು ಬೋಧ ಕೇತರ 70 ಮಂದಿ ಸಿಬ್ಬಂದಿಗೆ ಸಂಬಳದ ಸಮಸ್ಯೆಯಾಗಿದೆ. ಕಾನೂನಿನ ವ್ಯಾಪ್ತಿಯಲ್ಲಿ ಸರಿ ಇರುವ ಎಲ್ಲಾ ಸಿಬ್ಬಂದಿಗಳಿಗೆ ಸಂಬಳ ನೀಡುವಂತೆ ಸೂಚಿಸಲಾಗಿದೆ ಎಂದರು.
ಕೌಶಲ್ಯ ಅಭಿವೃದ್ಧಿಗೆ ಆದ್ಯತೆ: ಪ್ರತಿಯೊಬ್ಬ ವಿದ್ಯಾರ್ಥಿ ಕೇವಲ ಪದವಿ ನೀಡಿದರೂ ಸಾಲದು. ಅತನಿಗೆ ಕೌಶಲ್ಯದ ಕೊರತೆ ಇರುತ್ತ ದೆ. ಈ ನಿಟ್ಟಿನಲ್ಲಿ ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಎಲ್ಲಾ ಕ್ಷೇತ್ರದಲ್ಲಿ ಒಬ್ಬ ವಿದ್ಯಾರ್ಥಿ ಪ್ರಗತಿದಾಯಕನಾಗುವಂತೆ ಶ್ರವಿು ಸಲಾಗುವುದು. ಮಂಡ್ಯ ವಿವಿಯಲ್ಲಿ 4 ಸಾವಿರ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಇಷ್ಟು ಜನ ವಿದ್ಯಾರ್ಥಿಗಳಿಗೆ ಸೂಕ್ತ ಗುಣಮಟ್ಟದ ಶಿಕ್ಷಣ ದೊರೆತರೆ ಮಂಡ್ಯದ ಶಿಕ್ಷಣದ ಕ್ರಾಂತಿ ದಿಕ್ಕು ಬದಲಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಮಂಡ್ಯ ವಿವಿಗೆ ಸೇರಿದ 31 ಎಕರೆ ಜಾಗದಲ್ಲಿ 6 ಎಕರೆ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಅಲ್ಲದೆ, ಕಾಲೇಜಿನ ವ್ಯಾಪ್ತಿಯಲ್ಲಿ ವಿದ್ಯುತ್ ಟೆನ್ಶನ್ ವೈರ್ ಹಾದು ಹೋಗಿದೆ. ಅವೆಲ್ಲವುಗಳನ್ನು ತೆರವುಗೊಳಿಸಲಾಗುವುದು. ಒತ್ತುವರಿದಾರರನ್ನು ಕಾನೂ ನಿನ ಪ್ರಕಾರ ತೆರವು ಮಾಡಲು ಜಿಲ್ಲಾಧಿಕಾರಿಗಳಿಗೆ ಆದೇಶಿಸಿರುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?