ಅಕಾಲಿಕ ಜಲಪಾತೋತ್ಸವ ಯಾರಿಗಾಗಿ?

2 ಟಿಎಂಸಿ ಅಡಿ ನೀರು, ಕೋಟ್ಯಂತರ ರೂ. ಹಣ ವ್ಯರ್ಥ „ ಬೇಸಿಗೆ ಬೆಳೆಗೆ ನೀರಿನ ಬಗ್ಗೆ ಇನ್ನೂ ನಿರ್ಧಾರವಿಲ್ಲ

Team Udayavani, Jan 16, 2020, 3:59 PM IST

16-January-21

ಮಂಡ್ಯ: ಸಮೃದ್ಧ ಮಳೆ ಸುರಿದ ವೇಳೆ ಜಲಪಾತದಲ್ಲಿ ಜಲಧಾರೆ ಉಕ್ಕಿ ಹರಿಯುವ ಸೊಬಗನ್ನು ನೋಡುವುದೇ ನಯನ ಮನೋಹರ. ಆದರೆ, ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಹರಿಸಿ ಜಲಪಾತದಲ್ಲಿ ಕೃತಕ ಜಲಧಾರೆ ಸೃಷ್ಟಿಸಿ ಮಾಡುವ ಜಲಪಾತೋತ್ಸವ ಯಾರಿಗೆ ಮಜವಾಗಿರುತ್ತದೆ ಎನ್ನುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ವರುಣನ ಕೃಪೆಯಿಂದ ಕಳೆದ ವರ್ಷ ಉತ್ತಮ ಮುಂಗಾರು ಹಾಗೂ ಹಿಂಗಾರು ಮಳೆಯಾದ ಪರಿಣಾಮ ಜೀವನದಿಗಳೆಲ್ಲಾ ಉಕ್ಕಿ ಹರಿದು ಜಲಾಶಯಗಳು ಜೀವಕಳೆ ಪಡೆದುಕೊಂಡವು. ದಶಕಗಳ ಬಳಿಕ ನೂರು ದಿನಗಳ ಕಾಲ ಕೆಆರ್‌ ಎಸ್‌ ಪೂರ್ಣ ಮಟ್ಟವನ್ನು ಕಾಯ್ದುಕೊಂಡಿತ್ತು.

ಈ ಹಿಂದೆ ಗಗನಚುಕ್ಕಿ ಜಲಪಾತೋತ್ಸವವನ್ನು ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ ತಿಂಗಳಿನಲ್ಲಿ ನಡೆಸಲಾಗಿತ್ತು. ಮಳೆಗಾಲದಲ್ಲಿ ನಡೆಯುವ ಜಲಪಾತೋತ್ಸವಕ್ಕೆ ಅರ್ಥವೂ ಇತ್ತು. ಈ ಬಾರಿ ನವೆಂಬರ್‌ ತಿಂಗಳಲ್ಲಿ ನಿಗದಿಯಾಗಿದ್ದ ಜಲಪಾತೋತ್ಸವ ಉಪ ಚುನಾವಣೆ ಕಾರಣದಿಂದ ಮುಂದಕ್ಕೆ ಹೋಗಿ ಅಂತಿಮವಾಗಿ ಜನವರಿ 18 ಹಾಗೂ 19ರಂದು ಎರಡು ದಿನಗಳ ಕಾಲ ನಡೆಸಲು ನಿರ್ಧರಿಸಲಾಗಿದೆ.

ಎರಡರಿಂದ ಮೂರು ಟಿಎಂಸಿ ನೀರು ವ್ಯರ್ಥ: ಗಗನಚುಕ್ಕಿ ಜಲಪಾತೋತ್ಸವ ನಡೆಸಬೇಕಾದರೆ ಕನಿಷ್ಠ 2 ರಿಂದ 3 ಟಿಎಂಸಿ ಅಡಿ ನೀರಿನ ಅಗತ್ಯವಿದೆ. ಪ್ರಸ್ತುತ ಕೆಆರ್‌ಎಸ್‌ ಜಲಾಶಯದಲ್ಲಿ
120.67 ಅಡಿ ನೀರಿದ್ದು, ಅಣೆಕಟ್ಟೆಗೆ 285 ಕ್ಯುಸೆಕ್‌ ನೀರು ಹರಿದುಬರುತ್ತಿದ್ದರೆ, ಜಲಾಶಯದಿಂದ ನದಿಗೆ 1577 ಕ್ಯುಸೆಕ್‌ ಹಾಗೂ ನಾಲೆಗಳಿಗೆ 2849 ಕ್ಯುಸೆಕ್‌ ಸೇರಿದಂತೆ ಒಟ್ಟು 4538 ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ.

30 ಕ್ಯುಸೆಕ್‌ ನೀರು: ಜಲಪಾತೋತ್ಸವಕ್ಕೆ ಕೇವಲ ಕೆಆರ್‌ಎಸ್‌ ನೀರನ್ನಷ್ಟೇ ಬಳಸಿಕೊಳ್ಳದೆ ಕಬಿನಿ ಜಲಾಶಯದಿಂದಲೂ ನೀರನ್ನು ಹರಿಸಲಾಗುತ್ತಿದೆ. ಕನಿಷ್ಠ ಎರಡೂ ಜಲಾಶಯಗಳಿಂದ 25 ರಿಂದ 30 ಕ್ಯುಸೆಕ್‌ ನೀರು ಹರಿದರಷ್ಟೇ ಜಲಪಾತದಲ್ಲಿ ಜಲಧಾರೆ ಧುಮ್ಮಿಕ್ಕಲು ಸಾಧ್ಯ. ಅದಕ್ಕಾಗಿ ಜಲಾಶಯಗಳಿಂದ ನೀರನ್ನು ಹೊರಗೆ ಬಿಟ್ಟು ಜಲಾಶಯಕ್ಕೆ ಸೊಬಗು ತುಂಬುವ ಕಾರ್ಯದಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಜಲಪಾತೋತ್ಸವ ಹೆಸರಲ್ಲಿ ನೀರು ಪೋಲು: ಕಳೆದ ವರ್ಷ ತಮಿಳುನಾಡಿಗೆ ಹರಿಸಬೇಕಾಗಿದ್ದ ನೀರಿಗಿಂತಲೂ ಅಧಿಕ ಪ್ರಮಾಣದ ನೀರು ಹರಿದುಹೋಗಿದೆ. ಇದೀಗ ಜಲಪಾತೋತ್ಸವದ ಹೆಸರಿನಲ್ಲಿ 2ರಿಂದ 3 ಟಿಎಂಸಿ ಅಡಿ ನೀರನ್ನು ವ್ಯರ್ಥ ಮಾಡುವುದು ಎಷ್ಟರಮಟ್ಟಿಗೆ ಸರಿ. ಒಮ್ಮೆ ಮುಂದಕ್ಕೆ ಹರಿಸಿದ ನೀರನ್ನು ಮತ್ತೆ ಹಿಂದಕ್ಕೆ ತೆಗೆದುಕೊಳ್ಳಲಾಗುವುದಿಲ್ಲ. ಹೀಗಾಗಿ ಜಲಪಾತೋತ್ಸವದ ಹೆಸರಿನಲ್ಲಿ ಸಾಕಷ್ಟು ಪ್ರಮಾಣದ ನೀರು ತಮಿಳುನಾಡಿಗೆ ಸೇರುವುದು ನಿಶ್ಚಿತವಾಗಿದೆ.

ಭರಚುಕ್ಕಿಯಲ್ಲಿ ಜಲಪಾತೋತ್ಸವವಿಲ್ಲ: ಗಗನಚುಕ್ಕಿಯಲ್ಲಿ ಜಲಪಾತೋತ್ಸವ ನಡೆದ ಸಮಯದಲ್ಲಿ ಭರಚುಕ್ಕಿಯಲ್ಲೂ ಜಲಪಾತೋತ್ಸವ ಆಚರಿಸಲಾಗುತ್ತಿತ್ತು. ಗಗನಚುಕ್ಕಿಗೆ ಹರಿಸಲಾಗುವ ನೀರೇ ಭರಚುಕ್ಕಿಯ ಸೊಬಗನ್ನೂ ಹೆಚ್ಚಿಸುತ್ತದೆ. ಇವೆರಡು ಅವಳಿ ಜಲಪಾತಗಳಾಗಿದ್ದು, ಗಗನಚುಕ್ಕಿ ಮಂಡ್ಯ ಜಿಲ್ಲೆಗೂ, ಭರಚುಕ್ಕಿ ಚಾಮರಾಜನಗರ ಜಿಲ್ಲೆಗೂ ಸೇರಿದೆ. ಆದರೆ, ಚಾಮರಾಜನಗರ ಜಿಲ್ಲಾಡಳಿತ ಭರಚುಕ್ಕಿ ಜಲಪಾತೋತ್ಸವ ಆಚರಣೆಗೆ ಒಲವು ತೋರಿಲ್ಲ. ಮಂಡ್ಯ ಜಿಲ್ಲಾಡಳಿತ ಮಾತ್ರ ಜಲಪಾತೋತ್ಸವಕ್ಕೆ ಹೆಚ್ಚಿನ ಉತ್ಸಾಹ ತೋರುತ್ತಿರುವುದರ ಕಾರಣ ತಿಳಿದಿಲ್ಲ.

ಹೆಚ್‌ಡಿಕೆ ಬಿಡುಗಡೆ ಮಾಡಿದ್ದ ಹಣ: ಹೆಚ್‌ .ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಗಗನಚುಕ್ಕಿ ಜಲಪಾತೋತ್ಸವಕ್ಕೆ ಬಿಡುಗಡೆ ಮಾಡಿದ್ದ 50 ಲಕ್ಷ ರೂ. ಹಣ ಕಾರಣಾಂತರಗಳಿಂದ ಖರ್ಚಾಗಿರಲಿಲ್ಲ. ಹಾಗಾಗಿ ಆ ಹಣದ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 30 ಲಕ್ಷ ರೂ. ಹಣವೂ ಸೇರಿದಂತೆ ಒಂದು ಕೋಟಿಗೂ ಹೆಚ್ಚು ಹಣವನ್ನು ಖರ್ಚು ಮಾಡಲಾಗುತ್ತಿದೆ. ಇದರಿಂದ ರೈತರಿಗಾಗಲೀ, ಸಾರ್ವಜನಿಕರಿಗಾಗಲೀ ಯಾವ ಪ್ರಯೋಜನವಾಗಲಿದೆ ಎನ್ನುವುದು ಜನಸಾಮಾನ್ಯರ ಪ್ರಶ್ನೆಯಾಗಿದೆ.

●ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.