ಕರೀಘಟ್ಟ ಹಸಿರೀಕರಣಕ್ಕೆ ಆಟೋ ಚಾಲಕನ ಶ್ರಮ


Team Udayavani, Jun 5, 2022, 5:10 PM IST

ಕರೀಘಟ್ಟ ಹಸಿರೀಕರಣಕ್ಕೆ ಆಟೋ ಚಾಲಕನ ಶ್ರಮ

ಶ್ರೀರಂಗಪಟ್ಟಣ: “ಆತನಿಗೆ ಪರಿಸರ ಬಗ್ಗೆ ಎಲ್ಲಿಲ್ಲದ ಕಾಳಜಿ. ಬಿಡುವಿಲ್ಲದ ಕೆಲಸ ನಡುವೆಯೂ ಪರಿಸರ ಉಳಿವಿನ ಕಾಯಕದಲ್ಲಿ ತೊಡಗುತ್ತಾರೆ. ಅಲ್ಲದೇ, ಇತರರನ್ನೂ ಪ್ರೇರೇಪಿಸುತ್ತಿದ್ದಾರೆ. ಈ ಮೂಲಕ, ಕರೀಘಟ್ಟ ಬೆಟ್ಟದ ಹಸಿರೀಕರಣಕ್ಕೆ ಸದ್ದಿಲ್ಲದೆ ಮುಂದಾಗಿದ್ದಾರೆ. ಇವರೇ, ಶ್ರೀರಂಗಪಟ್ಟಣ ಪುರಸಭಾ ವ್ಯಾಪ್ತಿಯ ನಿವಾಸಿ ರಮೇಶ್‌.

ವೃತ್ತಿಯಲ್ಲಿ ಗೂಡ್ಸ್‌ ಆಟೋ ಇಟ್ಟುಕೊಂಡು ಪಟ್ಟಣದಲ್ಲಿ ಮನೆ ಮನೆಗೆ ಬಿಸ್ಲರಿ ನೀರು ಹಾಕುತ್ತಾರೆ. ಇಂತಹ ಶ್ರಮದ ಕೆಲಸದ ನಡುವೆಯೂ ಪರಿಸರದ ಸಂರಕ್ಷಣೆಗಾಗಿ ಸಮಯ ಮೀಸಲಿಟ್ಟು ಯಾವುದೇ ಪ್ರತಿಫ‌ಲಾಪೇಕ್ಷೆ ಇಲ್ಲದೆ ಪರಿಸರದ ಸೇವೆ ಮಾಡುತ್ತಿದ್ದಾರೆ.

ಹಸಿರಿನಿಂದ ನಳನಳಿಸುತ್ತದೆ: ಕರಿಘಟ್ಟದ ಬೆಟ್ಟದ ತಪ್ಪಲಿನಲ್ಲಿ ಇದುವರೆಗೂ ಸಾವಿರಾರು ಗಿಡನೆಟ್ಟು ಫೋಷಣೆ ಮಾಡುತ್ತಿದ್ದು ಪ್ರತಿದಿನ ಆ ಗಿಡಗಳಿಗೆ ನೀರುಣಿಸುತ್ತಾರೆ. ಇವರ ಈ ಪರಿಸರದ ಕಳಕಳಿಯಿಂದ ಮಳೆಗಾಲದಲ್ಲಿ ಈ ಬೆಟ್ಟ ಹಸಿರಿನಿಂದ ನಳನಳಿಸುತ್ತದೆ. ಇಲ್ಲಿಗೆ ಬರುವ ಪ್ರವಾಸಿಗರೂ ಈ ಹಸಿರಿನಿಂದ ಕಂಗೊಳಿಸುವ ಬೆಟ್ಟದ ಸೌಂದರ್ಯಕ್ಕೆ ಮಾರು ಹೋಗುತ್ತಾರೆ.

ಬೆಂಕಿ ನಂದಿಸುತ್ತಾರೆ: ಇನ್ನು ಬೇಸಿಗೆಯಲ್ಲಿ ಪ್ರತಿ ವರ್ಷ ಈ ಬೆಟ್ಟಕ್ಕೆ ಬೆಂಕಿ ಬಿದ್ದು ಇಲ್ಲಿನ ಪರಿಸರ ಹಾಳಾಗುತ್ತಿದೆ. ಇಷ್ಟಾದರೂ ಪರಿಸರ ಉಳಿಸುವ ಕಾಳಜಿ ಮಾತ್ರ ನಿಂತಿಲ್ಲ. ಬೆಟ್ಟಕ್ಕೆ ಬೆಂಕಿ ಬಿದ್ದ ವೇಳೆ ಆಗಮಿಸಿ ಬೆಂಕಿ ನಂದಿಸುವ ಕೆಲಸವನ್ನೂ ಮಾಡುತ್ತಿದ್ದಾರೆ.ಬೆಟ್ಟದ ಬುಡ ದಲ್ಲಿರುವ ಕಾಲುವೆಯಿಂದ ಆಟೋ ಮೂಲಕ ವಾಟರ್‌ ಕ್ಯಾನ್‌ನಲ್ಲಿ ಗಿಡಗಳಿಗೆ ನೀರುಣಿಸುತ್ತಾರೆ. ಸುಮಾರು 10 ವರ್ಷದಿಂದಲೂ ಸಸಿ ನೆಟ್ಟು ಪರಿಸರ ಕಾಳಜಿ ಮೆರೆಯುತ್ತಿರುವ ಇವರ ಸೇವೆಗೆ ಕೆಲ ಯುವಕರ ತಂಡವೂ ಕೈ ಜೋಡಿಸಿದೆ.

ತುಂತುರು ನೀರಾವರಿ: ಬೇಸಿಗೆಯಲ್ಲಿ ಗಿಡಗಳಿಗೆ ನೀರಿನ ಅಭಾವ ಹಿನ್ನೆಲೆ ತಮ್ಮದೆ ತಂತ್ರಜ್ಞಾನದ ಮೂಲಕ ನಿರುಪಯುಕ್ತ ಪ್ಲಾಸ್ಟಿಕ್‌ ಬಾಟಲ್‌, ಆಸ್ಪತ್ರೆಯಲ್ಲಿ ಬಳಸಿ ಬಿಸಾಡಿದ ಗ್ಲೂಕೋಸ್‌ ಪೈಪ್‌ ಬಳಸಿ ಇಲ್ಲಿನ ಗಿಡಗಳಿಗೆ ಹನಿ ನೀರಾವರಿ ಅಳವಡಿಸಿದ್ದಾರೆ. ಇದರಿಂದ ಒಮ್ಮೆ ಈ ಬಾಟಲ್‌ಗೆ ನೀರು ತುಂಬಿಸಿದರೆ ಒಂದು ದಿನ ಪೂರ್ತಿ ಆ ಗಿಡಕ್ಕೆ ನೀರು ಪೂರೈಕೆಯಾಗುತ್ತದೆ. ಪರಿಸರ ಪ್ರೇಮಿ ರಮೇಶ್‌ ತಮ್ಮ ಬಿಡುವಿಲ್ಲದ ಕೆಲಸದ ನಡುವೆಯೂ ಪರಿಸರ ಕಾಳಜಿ ಮೆರೆಯುತ್ತಿದ್ದಾರೆ. ಇನ್ನಾದರೂ ಇಂತಹ ಪರಿಸರ ಪ್ರೇಮಿಗಳನ್ನು ಸರ್ಕಾರ ಗುರ್ತಿಸಿ ಪ್ರೋತ್ಸಾಹಿಸಬೇಕಿದೆ.

ಪರಿಸರ ಕಾಳಜಿಗೆ ಮದುವೆಯಾಗದೇ ಉಳಿದ ಸಾಲುಮರದ ನಾಗರಾಜು :

ಮಂಡ್ಯ: ಕಳೆದ 25 ವರ್ಷಗಳಿಂದ ಪರಿಸರ ಸೇವೆಯಲ್ಲಿ ತೊಡಗಿರುವ ಹಾಗೂ ಸಾಲು ಮರದ ನಾಗರಾಜು ಎಂದೇ ಹೆಸರು ಪಡೆದಿರುವ ಮಳವಳ್ಳಿ ಪಟ್ಟಣದ ಪೇಟೆಬೀದಿಯ ನಾಗರಾಜು, ಇಂದಿಗೂ ಯಾವುದೇ ಪ್ರಚಾರ ಸದ್ದಿಲ್ಲದೆ ಗಿಡ ಮರಗಳ ಪೋಷಣೆ ಮಾಡುತ್ತಿದ್ದಾರೆ.

8ನೇ ತರಗತಿಯಿಂದಲೂ ಮರಗಿಡ ಬೆಳೆಸುವ ಹವ್ಯಾಸ ಮಾಡಿಕೊಂಡ ಅವರು, ಪರಿಸರಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ಪರಿಸರ ಸಂರಕ್ಷಣೆಯಲ್ಲಿ ತೊಡಗಿದ್ದಾರೆ. ಇದುವರೆಗೂ ಸುಮಾರು 15 ಸಾವಿರಕ್ಕೂ ಹೆಚ್ಚು ಮರಗಿಡ ನೆಟ್ಟು ಬೆಳೆಸಿದ್ದಾರೆ.

ಪರಿಸರ ಸೇವೆ: ಶಾಲಾ-ಕಾಲೇಜು ಆವರಣ, ಕ್ರೀಡಾಂಗಣ, ರಸ್ತೆ ಬದಿ, ಸ್ಮಶಾನಗಳಲ್ಲಿ ಗಿಡ ನೆಡುವ ಅವರು ಯಾರಿಂದಲೂ ಯಾವುದೇ ಅಪೇಕ್ಷೆ ಪಡದೆ ತಮ್ಮ ಸ್ವಂತ ಖರ್ಚಿನಲ್ಲಿ ಗಿಡಗಳಿಗೆ ಇರುವ ಒಂದು ಸೈಕಲ್‌ನಲ್ಲಿ 2 ಬಿಂದಿಗೆ ಕಟ್ಟಿಕೊಂಡು ನೀರು ಹಾಯಿಸುತ್ತಾರೆ. ಇವರ ಪರಿಸರ ಸೇವೆಗೆ ಸಂಸಾರ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಮದುವೆಯೂ ಆಗಿಲ್ಲ. ಇರುವ ತಾಯಿಯನ್ನು ಪೋಷಣೆ ಮಾಡುತ್ತಾ, ಪರಿಸರ ಸೇವೆಯಲ್ಲಿ ತೊಡಗಿದ್ದಾರೆ.

ಇರುವ-ನೆಟ್ಟಿರುವ ಮರಗಿಡ ಪಟ್ಟಣದ ರಸ್ತೆ ಬದಿ, ಶಾಲಾ-ಕಾಲೇಜು ಆವರಣಗಳಲ್ಲಿ ದೊಡ್ಡ ಮರಗಳಾಗಿ ಬೆಳೆದು ನಿಂತಿವೆ. ಅಲ್ಲದೆ, ರಸ್ತೆ ನಿರ್ಮಾಣ ಹಾಗೂ ಅಭಿವೃದ್ಧಿ ಕಾಮಗಾರಿಗಾಗಿ ಹಲವು ಮರಗಳನ್ನು ಕತ್ತರಿಸಲಾಗಿದೆ. ಇದರಿಂದ ದುಖಃವಾದರೂ ಕಡಿದ ಅಷ್ಟೇ ಮರಗಳನ್ನು ನೆಟ್ಟು ಬೆಳೆಸುತ್ತಿದ್ದಾರೆ.

ಉಚಿತವಾಗಿ ವಿತರಣೆ: ತಮ್ಮದೇ ಆದ ನರ್ಸರಿ ಯಲ್ಲಿ ಗಿಡಗಳನ್ನು ಪೋಷಣೆ ಮಾಡುವ ಮೂಲಕ ಉಚಿತವಾಗಿ ಗಿಡ ವಿತರಿಸುತ್ತಿದ್ದಾರೆ. ಹುಟ್ಟುಹಬ್ಬ ಸೇರಿ ವಿವಿಧ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಗೆ ಗಿಡ ಹಂಚಲು ಉಚಿತವಾಗಿ ಆಯೋಜಕರಿಗೆ ನೀಡುತ್ತಿದ್ದಾರೆ. ಯಾವುದೇ ಪ್ರಚಾರ, ಪ್ರಶಸ್ತಿಗಳ ಆಪೇಕ್ಷೆ ಪಡೆದ ಸದ್ದಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಇವರ ಸೇವೆ ಗುರುತಿಸಿರುವ ಕೆಲವು ಸಂಘ- ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿವೆ. ಮರಗಿಡ ಬೆಳೆಸುವ ಮೂಲಕ ಪರಿಸರಕ್ಕೆ ಪ್ರತಿಯೊಬ್ಬರೂ ಕೊಡುಗೆ ನೀಡಲು ಮುಂದಾಗಬೇಕು ಎಂದು ಸಾಲುಮರದ ನಾಗರಾಜು ಮನವಿ ಮಾಡಿದ್ದಾರೆ.

-ಗಂಜಾಂ ಮಂಜು

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.