ರೋಗಿಗಳ ಸುರಕ್ಷತೆಗೆ ಮಣಿಪಾಲ್‌ ಆಸ್ಪತ್ರೆ ಆದ್ಯತೆ


Team Udayavani, Jun 26, 2020, 5:47 AM IST

rogi-manipal

ಮಂಡ್ಯ: ಕೋವಿಡ್‌ 19 ಹರಡುವುದನ್ನು ನಿರ್ಬಂಧಿಸಲು ಮಣಿಪಾಲ್‌ ಆಸ್ಪತ್ರೆ ರೋಗಿಗಳ ಸುರಕ್ಷತೆಗೆ ಆದ್ಯತೆ ನೀಡಿದೆ ಎಂದು ಮಣಿಪಾಲ್‌ ಆಸ್ಪತ್ರೆ ಛೇರ¾ನ್‌ ಡಾ.ಸುನೀಲ್‌ ಕಾರಂತ್‌ ಹೇಳಿದರು.

ಮಣಿಪಾಲ್‌ ಆಸ್ಪತ್ರೆ, ಜಿಲ್ಲಾ  ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೋವಿಡ್‌ 19 ನಿಯಂತ್ರಣ ಕುರಿತು ಪತ್ರಕರ್ತರಿಗೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ವಿಡಿಯೋ ಸಂವಾದದ ಮೂಲಕ ಮಾತನಾಡಿ, ಸುರಕ್ಷತೆ ನಮ್ಮೊಂದಿಗೆ ಆರಂಭ ಅಭಿಯಾನದಡಿ  ಸೋಂಕು ತಡೆಗೆ ಕಟ್ಟುನಿ ಟ್ಟಿನ ನಿಬಂಧನೆಗಳು, ಸ್ನೇಹಪೂರ್ಣ ಸೇವೆಗಳು ಮತ್ತು ಹಲವಾರು ಉನ್ನತ ಕ್ರಮ ಕೈಗೊಳ್ಳಲಾಗಿದೆ. ರೋಗಿಗಳ ಭದ್ರತೆ ಮತ್ತು ಸುರಕ್ಷತೆ ಅವರೊಂ ದಿಗೇ ಆರಂಭವಾಗಬೇಕು ಎಂದರು.

ವೈಜ್ಞಾನಿಕ ಮುನ್ನೆಚ್ಚರಿಕೆ ಕ್ರಮ: ನಮ್ಮಲ್ಲಿ ವೈಜ್ಞಾನಿಕವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದೇವೆ. ಗುಣಮಟ್ಟದ ವೈಯಕ್ತಿಕ ಸುರಕ್ಷತಾ ಉಪಕರಣಗಳ ನ್ನು ಪೂರೈಸಿದೆ. ವಿಕಿರಣಶಾಸ್ತ್ರ ತಜ್ಞರು, ಪ್ರಯೋ ಗಾಲಯ ತಂತ್ರಜ್ಞರು,  ಆಹಾರ ಮತ್ತು ಪೇಯಗಳ ಮಾರಾಟಗಾರರು ಹಾಗೂ ವೈದ್ಯರು ಮತ್ತು ಅರೆ-ವೈದ್ಯಕೀಯ ಸಿಬ್ಬಂದಿಗೆ ಔಪಚಾರಿಕವಾದ ಸುರಕ್ಷತಾ ತರಬೇತಿ ನೀಡಲಾಗಿದೆ ಎಂದರು.

ಸಂದರ್ಶಕರಿಗೆ ಜ್ವರ ಲಕ್ಷಣಗಳು ಅಥವಾ ಉಸಿರಾಟದ ಅಸ್ವಸ್ಥತೆ,  ನೆಗಡಿ, ಕೆಮ್ಮು ಮುಂತಾದ ಲಕ್ಷ ಣಗಳು ಇರುವುದು ವರದಿಯಾದಲ್ಲಿ ಅವರಿಗೆ ಮುನ್ನಚ್ಚರಿಕೆಯ ಕ್ರಮವಾಗಿ ವೈದ್ಯರಿಂದ ಅಗತ್ಯ ಪರೀಕ್ಷೆ ನಡೆಸಲು ಫೀವರ್‌ ಕ್ಲಿನಿಕ್‌ಗಳಿಗೆ ಕರೆದೊಯ್ಯಲಾಗುವುದು. ಸರ್ಕಾರದ ನಿಯಮಗಳಿಗೆ  ಅನುಗುಣವಾಗಿ, ಮಾಸ್ಕ್, ಸ್ಯಾನಿಟೈಸರ್‌ ಬಳಕೆ, ಒಬ್ಬ ರೋಗಿ-ಒಬ್ಬರು ಆರೈಕೆ ಮಾಡುವವರು ಎಂಬ ನಿಯಮವನ್ನು ಪಾಲಿಸುವುದು ಒಳ್ಳೆ ಯದು.

ಆಸ್ಪತ್ರೆ ಆವರಣದಲ್ಲಿ ಹೆಚ್ಚಿನ ಜನ ಸೇರುವುದನ್ನು ತಪ್ಪಿಸಬಹುದು. ಸೋಂಕುಗಳಿಗೆ  ಸುಲಭವಾಗಿ ತುತ್ತಾಗಬಲ್ಲ ಹಿರಿಯ ವಯಸ್ಕರು ಮಕ್ಕಳು, ತಾಯಂದಿರಾಗುವ ನಿರೀಕ್ಷೆಯಲ್ಲಿರುವವರಿಗೆ ಮನೆಯಲ್ಲಿಯೇ ಆರೋಗ್ಯ ಸೇವೆ ನೀಡುವ ಮತ್ತು ಟೆಲಿಕನ್ಸಲ್ಟೆಷನ್‌ ಮೂಲಕ ಸಲಹೆ ನೀಡುವ ಕ್ರಮಗಳನ್ನು ಆಯೋಜಿಸಲಾಗಿದೆ ಎಂದು ವಿವರಿಸಿದರು.

ಕಟ್ಟುನಿಟ್ಟಿನ ನಿಯಮ ಜಾರಿ:ತುರ್ತು ಶಸ್ತ್ರಕ್ರಿಯಾ ಪ್ರಕರಣಗಳಿಗಾಗಿ ಆಸ್ಪತ್ರೆ ಕಟ್ಟುನಿಟ್ಟಿನ ನಿಯಮಜಾರಿಗೆ ತಂದಿದೆ. ಪ್ರಾಥಮಿಕವಾಗಿ ರೋಗಿಗಳ ರೋಗ ನಿರೋಧಕತೆ, ಲಕ್ಷಣಗಳ ತೀವ್ರತೆ ಆಧರಿಸಿ ಶಸ್ತ್ರಕ್ರಿಯಾ ಕ್ರಮಗಳನ್ನು ಉನ್ನತ  ಮತ್ತು ಕಡಿಮೆ ಎಂದು ಗುರುತಿಸಲಾಗುವುದು. ಎಲ್ಲಾ ಸುರಕ್ಷತಾ ಅಗತ್ಯಗಳನ್ನು ಪೂರೈಸುವಂತಹ ಸಂಪೂರ್ಣವಾಗಿ ಸಜ್ಜಾಗಿರುವ ಶಸ್ತ್ರಕ್ರಿಯಾ ಕೊಠಡಿಗಳ ಪ್ರದೇಶಗಳಲ್ಲಿ ಅಥವಾ ನಿಯೋಜಿತ ಶಸ್ತ್ರಕ್ರಿಯಾ ಕೊಠಡಿಗಳಲ್ಲಿ ಶಸ್ತ್ರಕ್ರಿಯೆಯನ್ನು ನಂತರ ನಡೆಸಲಾಗುವುದು  ಎಂದು ಹೇಳಿದರು.

ವಿಶ್ವದಾದ್ಯಂತ ಮಣಿಪಾಲ್‌ ಆಸ್ಪತ್ರೆ ಯಶಸ್ವಿ ಯಾಗಿ 15 ಆಸ್ಪತ್ರೆಗಳಲ್ಲಿ 5900ಕ್ಕೂ ಹೆಚ್ಚಿನ ಹಾಸಿಗೆ ಗಳನ್ನು ನಿರ್ವಹಿಸುತ್ತಿದೆ. ಮಣಿಪಾಲ್‌ ಆಸ್ಪತ್ರೆ ಸಮಗ್ರ ಗುಣಪಡಿಸುವ ಮತ್ತು ರೋಗವನ್ನು ತಡೆ ಯುವ ಆರೈಕೆಯನ್ನು ವಿಶ್ವದ ಎಲ್ಲೆಡೆ  ರೋಗಿಗಳಿಗೆ ನೀಡುತ್ತಿದೆ. ನೈಜೀರಿಯಾದ ಲಾಗೋಸ್‌ನಲ್ಲಿ ಮಣಿಪಾಲ್‌ ಆಸ್ಪತ್ರೆ ಒಂದು ಡೇ ಕೇರ್‌ ಕ್ಲಿನಿಕ್‌ ಹೊಂದಿದೆ ಎಂದು ಹೇಳಿದರು.

ಎಚ್ಚರಿಕೆಯಿಂದ ಕೆಲಸ ಮಾಡಿ: ಜಿಪಂ ಸಿಇಒ ಕೆ.ಯಾಲಕ್ಕಿಗೌಡ ಮಾತನಾಡಿ, ಕೋವಿಡ್‌ 19 ಸಮು ದಾಯಕ್ಕೆ ಹರಡುವ ಭೀತಿ ನಿರ್ಮಾಣವಾಗಿದ್ದು, ಕೋವಿಡ್‌ 19 ವಾರಿಯರ್ಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದರು.  ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಸಿ. ಮಂಜುನಾಥ್‌, ರಾಜ್ಯ ಉಪಾಧ್ಯಕ್ಷ ಎಂ.ಆರ್‌.ಜಯರಾಮು, ಆಸ್ಪತ್ರೆ ಪಿಆರ್‌ಒ ಅರುಣ್‌ ಹಾಜರಿದ್ದರು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.