ಮನ್‌ಮುಲ್ ಚುನಾವಣೆ ಮುಂದೂಡಿಕೆ

ಕಾಂಗ್ರೆಸ್‌ ಪ್ರಾಬಲ್ಯ ಕುಗ್ಗಿಸಲು ಜೆಡಿಎಸ್‌ ತಂತ್ರವೇ? • ಅವಧಿ ಬಳಿಕ ಆಡಳಿತಾಧಿಕಾರಿ ನೇಮಕ ಸಾಧ್ಯತೆ

Team Udayavani, May 6, 2019, 5:28 PM IST

mandya-2..

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯ ರಾಜಕೀಯ ಸಂಘರ್ಷದ ಕಾವು ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಗೂ ತಟ್ಟಿದ್ದು ಮೇ 13ಕ್ಕೆ ನಿಗದಿಯಾಗಿದ್ದ ಚುನಾವಣೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿರುವುದು ವಿವಾದಕ್ಕೆ ಕಾರಣವಾಗಿದೆ.

ಲೋಕಸಭಾ ಚುನಾವಣಾ ಪೂರ್ವದಲ್ಲೇ ಕಳೆದ 20 ದಿನಗಳ ಹಿಂದೆಯೇ ಮೇ 13ರಂದು ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿಗೆ ಚುನಾವಣೆ ನಡೆಸುವುದಾಗಿ ಘೋಷಿಸಿದ್ದ ಸರ್ಕಾರ ಜಿಲ್ಲಾಧಿಕಾರಿ ವರ್ಗಾವಣೆ ಬಳಿಕ ಹಠಾತ್ತನೆ ಅನಿರ್ದಿಷ್ಟಾವಧಿಗೆ ಮುಂದೂಡಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

ಕಾಂಗ್ರೆಸ್‌ ಬೆಂಬಲಿತ ನಿರ್ದೇಶಕ ಮಂಡಳಿಯನ್ನು ಹೊಂದಿರುವ ಮನ್‌ಮುಲ್ಗೆ ನಿಗದಿತ ಅವಧಿಯಲ್ಲೇ ಚುನಾವಣೆ ನಡೆದರೆ ಅದರಿಂದ ಜೆಡಿಎಸ್‌ಗೆ ನಿರೀಕ್ಷಿತ ಲಾಭವಾಗುವುದಿಲ್ಲ. ಅಧಿಕಾರ ಪಡೆಯುವುದು ಕಷ್ಟಕರವಾಗಿದೆ ಎಂಬ ಅಂಶವನ್ನು ಮನವರಿಕೆ ಮಾಡಿಕೊಂಡಿರುವ ಜೆಡಿಎಸ್‌, ತನ್ನ ಭದ್ರಕೋಟೆಯಲ್ಲಿ ಪಕ್ಷದ ಅಸ್ತಿತ್ವಕ್ಕಾಗಿ ಇಂತಹುದೊಂದು ಪ್ರಕ್ರಿಯೆ ನಡೆಸಿದೆ ಎಂದು ಹೇಳಲಾಗುತ್ತಿದೆ.

ಸಂಖ್ಯಾಬಲ ಕುಸಿತ: 12 ಮಂದಿ ನಿರ್ದೇಶಕರನ್ನು ಒಳಗೊಂಡಿರುವ ಹಾಲು ಒಕ್ಕೂಟದಲ್ಲಿ 8 ಮಂದಿ ಕಾಂಗ್ರೆಸ್ಸಿಗರು ಮತ್ತು ನಾಲ್ವರು ಜೆಡಿಎಸ್‌ ಬೆಂಬಲಿತರಿ ದ್ದಾರೆ. ಇವರಲ್ಲಿ ರಮೇಶ್‌ ಬಂಡಿಸಿದ್ದೇಗೌಡ ಬೆಂಬಲಿತ ಶೆಟ್ಟಹಳ್ಳಿ ಬೋರೇಗೌಡ, ಎನ್‌. ಚಲುವರಾಯಸ್ವಾಮಿ ಆಪ್ತ ಬಳಗದ ನಾಗಮಂಗಲ ಕೃಷ್ಣೇಗೌಡ ಅವರು ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ಸಿಗೆ ಪಕ್ಷಾಂತರ ಗೊಂಡಿರುವುದರಿಂದ ಮನ್‌ಮುಲ್ನಲ್ಲಿ ಜೆಡಿಎಸ್‌ನ ಸಂಖ್ಯಾ ಬಲ ಕೇವಲ 2ಕ್ಕೆ ಸೀಮಿತವಾಗಿದೆ.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ 6 ಮಂದಿ ಕಾಂಗ್ರೆಸ್ಸಿಗರು ಮತ್ತು ಇಬ್ಬರು ವಲಸಿಗರೂ ಸೇರಿದಂತೆ 8 ಮಂದಿ ನಿರ್ದೇಶಕರು ಮೈತ್ರಿ ಧರ್ಮವನ್ನು ಧಿಕ್ಕರಿಸಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಚುನಾವಣೆ ನಡೆಸಿರುವುದು ಜೆಡಿಎಸ್‌ ವರಿಷ್ಠರ ಆಕ್ರೋಶಕ್ಕೆ ಕಾರಣವಾಗಿದೆ.

ಹರಸಾಹಸ: ಒಂದು ವೇಳೆ ನಿಗಧಿತ ಅವಧಿಯಲ್ಲೇ ಮನ್‌ಮುಲ್ ಚುನಾವಣೆ ನಡೆಸಿದರೆ, ಕಾಂಗ್ರೆಸ್‌ ಪ್ರಾಬಲ್ಯ ಮುಂದುವರಿಯುವ ಸ್ಪಷ್ಟ ಸಾಧ್ಯತೆ ಇದ್ದು, ಹಾಲಿ ಚುನಾಯಿತ ಕಾಂಗ್ರೆಸ್‌ ಬೆಂಬಲಿತ ನಿರ್ದೇಶಕರು ಮತ್ತೂಮ್ಮೆ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ಜೆಡಿಎಸ್‌ ಚುನಾವಣಾ ಮುಂದೂಡಿಕೆಯ ಅಸ್ತ್ರವನ್ನು ಬಳಸಿ ಆ ಮೂಲಕ ಸುಮಲತಾ ಪರ ಚುನಾವಣೆ ನಡೆಸಿರುವ ನಿರ್ದೇಶಕರಿಗೆ ಸೋಲಿನ ರುಚಿ ತೋರಿಸುವ ಹರಸಾಹಸ ನಡೆಸಿದೆ.

ನಿರ್ದೇಶಕರ ಅಸಮಾಧಾನ: ಈಗಾಗಲೇ ಕೋಲಾರ, ಶಿವಮೊಗ್ಗ ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ಚುನಾವಣೆ ನಡೆದಿದ್ದು, ಮೈಸೂರಿನಲ್ಲಿ ಕೂಡ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಇದರನ್ವಯ ಮಂಡ್ಯ ಹಾಲು ಒಕ್ಕೂಟದಲ್ಲಿ ಸಹ ನಿಗಧಿತ ಅವಧಿಯಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ, ಜಿಲ್ಲಾಧಿ ಕಾರಿಗಳ ವರ್ಗಾವಣೆಯನ್ನೇ ನೆಪ ಮಾಡಿಕೊಂಡು ಚುನಾವಣೆಯನ್ನು ಮುಂದೂಡಿರುವುದು ನಿರ್ದೇಶಕ ಮಂಡಳಿಯ ಅಸಮಾಧಾನಕ್ಕೂ ಕಾರಣವಾಗಿದೆ.

ಲೋಕಸಭಾ ಚುನಾವಣಾ ಫಲಿತಾಂಶವನ್ನೇ ಹೆಚ್ಚು ಕೇಂದ್ರೀಕರಿಸಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್‌ ಅಭ್ಯರ್ಥಿ ಗೆಲುವು ಸಾಧಿಸಿ ದರೆ, ಅದಕ್ಕೆ ಪೂರವಾಗಿ ಮನ್‌ಮುಲ್ ಆಡಳಿತ ಮಂಡಳಿಯನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಉದ್ದೇಶವನ್ನು ಹೊಂದಿದ್ದಾರೆ. ಒಂದು ವೇಳೆ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದರೆ ತಮ್ಮ ಅಧಿಕಾರ ಬಲವನ್ನು ಬಳಸಿ ಮನ್‌ಮುಲ್ನಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಹೆಚ್ಚದಂತೆ ನೋಡಿಕೊಳ್ಳುವ ಲೆಕ್ಕಾಚಾರವೂ ಇದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.