ಗೃಹಸ್ಥಾಶ್ರಮ ಗಟ್ಟಿ ಇರುವ ದೇಶದಲ್ಲಿ ಸಂಸ್ಕೃತಿ ಸುಭದ್ರ


Team Udayavani, Mar 6, 2020, 6:13 PM IST

ಗೃಹಸ್ಥಾಶ್ರಮ ಗಟ್ಟಿ ಇರುವ ದೇಶದಲ್ಲಿ ಸಂಸ್ಕೃತಿ ಸುಭದ್ರ

ಮಂಡ್ಯ: ಯಾವ ದೇಶದಲ್ಲಿ ಗೃಹಸ್ಥಾಶ್ರಮ ಗಟ್ಟಿ ನೆಲೆಯನ್ನು ಕಂಡಿರುತ್ತದೋ ಆ ನೆಲದಲ್ಲಿ ಮಾತ್ರ ಸಂಸ್ಕೃತಿ ಸುಭದ್ರವಾಗಿರಲು ಸಾಧ್ಯ ಎಂದು ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾ ನಂದನಾಥ ಸ್ವಾಮೀಜಿ ಹೇಳಿದರು.

ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾ ಸಂಸ್ಥಾನಮಠದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ನಡೆದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಅಕ್ಕಿ, ಅರಿಶಿನ-ಕುಂಕುಮ ಒಂದಾಗಿ ಮಂತ್ರಾ ಕ್ಷತೆಯಾಗಿರುವಂತೆ ಎಲ್ಲಿದ್ದವರೋ ಇಂದು ಒಂದಾಗಿ ಸಂಗಾತಿಗಳಾಗಿದ್ದೀರಿ. ಜೀವನದಲ್ಲಿ ಸೋಲಿಗೆ ಹೆದರದೆ ಏನೇ ಸಮಸ್ಯೆಗಳು ಬಂದರೂ ಸಹಿಸಿ ಕೊಂಡು ನಿಮ್ಮೊಳಗೆ ಅಡಗಿರುವ ಶಕ್ತಿಯನ್ನು ಸಂಘಟಿಸಿ ಕೊಂಡು ಜೀವನವನ್ನು ಸಂತೃಪ್ತಿಯಾಗಿ ಕಳೆಯಿರಿ ಎಂದು ನವ ವಧುವರರಿಗೆ ಶುಭ ಹಾರೈಸಿದರು.

ಮನದೊಳಗಿನ ಶಕ್ತಿ ಜಾಗೃತಗೊಳಿಸಿ: ಮದುವೆಗಳು ಯಾವ ಹಂತದಲ್ಲಿ ನಡೆದರೆ ಭದ್ರವಾಗಿರಲು ಸಾಧ್ಯ ಎಂಬುದನ್ನು ಪ್ರಶ್ನೆ ಮಾಡಿಕೊಳ್ಳಬೇಕು. ವ್ಯಕ್ತಿ ವ್ಯಕ್ತಿಯನ್ನಾಗಿ ನೋಡಿದ ಸಂದರ್ಭದಲ್ಲಿ ನಮಗೆ ಕಾಣುವುದು ದೇಹ ಮತ್ತು ಹೆಸರು ಮಾತ್ರ. ಮದುವೆ ನಿಜವಾಗಿಯೂ ಸಾರ್ಥಕತೆ ಕಾಣಬೇಕೆಂದಾದರೆ ಒಳಗಿರುವ ಶಕ್ತಿಯನ್ನು ಜಾಗೃತ ಗೊಳಿಸಲು ನಮ್ಮೊಳಗಿರುವ ವಿವಿಧ ಕೋಶಗಳಾಚೆಗೆ ನಾವುಬದುಕಲು ಪ್ರಾರಂಭಿಸಬೇಕು. ಆಗ ಮಾತ್ರ ಗಂಡು ಹೆಣ್ಣಿನ ಪ್ರೀತಿ ಅಥವಾ ಪ್ರೇಮ ಶಿವ ಶಿವೆಯರ ಪ್ರೀತಿ ರೀತಿಯಲ್ಲಿ ಅಂತಿಮ ಕ್ಷಣದ ವರೆಗೂ ಇರಲು ಸಾಧ್ಯವಾಗುತ್ತದೆ. ಆದ್ದರಿಂದ ಗಂಡು ಮತ್ತು ಹೆಣ್ಣು ಈ ಇಬ್ಬರೂ ಬದುಕನ್ನು ಆಧ್ಯಾತ್ಮಿಕರಣಗೊಳಿಸಿಕೊಳ್ಳಬೇಕು ಎಂದು ಹೇಳಿದರು.

ಭೈರವೈಕ್ಯ ಶ್ರೀಗಳ ಸಂಕಲ್ಪ: ಭೈರವೈಕ್ಯ ಶ್ರೀಗಳು ತಮ್ಮ ಬದುಕಿನಲ್ಲಿ ಏನೆಲ್ಲಾ ಸಂಕಲ್ಪ ಮಾಡಿ ಹೋಗಿದ್ದಾರೆಯೋ ಭೌತಿಕವಾಗಿ ಅವರ ಅನುಪಸ್ಥಿತಿಯಲ್ಲಿಯೂ ಅವರು ಕೈಗೊಂಡ ಎಲ್ಲ ಸಂಕಲ್ಪಗಳು ಸಹಕಾರ ಕೊಡುತ್ತಿರುವುದು ನಮ್ಮ ಪರಿಶ್ರಮ ದಿಂದಲ್ಲ. ದಿವ್ಯಾತ್ಮ ವ್ಯಕ್ತಿಗಳು ಈ ಜಗತ್ತಿಗೆ ಆಗೊಮ್ಮೆ ಹೀಗೊಮ್ಮೆ ದೇಹ ಧರಿಸಿ ಬರುತ್ತಾರೆ. ಆದರೆ ಅವರಿಗೆ ದೇಹ ನೆಪಮಾತ್ರ. ದೇಹದ ಹೊರತಾಗಿಯೂ ಇನ್ನೂ ಹೆಚ್ಚಿನ ಕೆಲಸ ಮಾಡಲು ಸಾಧ್ಯವಾಗುತ್ತದೆ. ಅಂತಹ ಮಹಾತ್ಮರು ತಾವು ಭೌತಿಕವಾಗಿ ಬದುಕಿದ್ದ ವೇಳೆ ನಾಲ್ಕಾರು ಜಾಡ್ಯಗಳಿಂದ ನರಳುತ್ತಿರುವ ವ್ಯಕ್ತಿಗಳಿಗೆ ಒಂದಿಷ್ಟು ಚೈತನ್ಯ ಶಕ್ತಿ ಕೊಟ್ಟು ಹೋದದ್ದೇ ಆದರೆ, ಅಂತವ ರೆಲ್ಲರ ಮೂಲಕ ಅವರ ದಿವ್ಯ ಶಕ್ತಿಗಳು ಕೆಲಸ ಮಾಡುತ್ತಿರುತ್ತವೆ. ಅದಕ್ಕೆ ತಕ್ಕಂತೆ ಶ್ರೀಮಠದಲ್ಲಿ ಇಷ್ಟು ಸೇವೆಗಳು ಭಕ್ತರಿಗೆ ಸಿಗುತ್ತಿವೆ ಎಂದು ಹೇಳಿದರು.

ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥಸ್ವಾಮೀಜಿ, ಮರಳೆ ಗವಿಮಠದ ಶ್ರೀ ಶಿವರುದ್ರಸ್ವಾಮೀಜಿ, ವಿಧಾನಪರಿಷತ್‌ ಸದಸ್ಯರಾದ ಭೋಜೇಗೌಡ, ಕೆ.ಟಿ.ಶ್ರೀಕಂಠೇಗೌಡ, ವಧುವರರ ಸಂಬಂಧಿಕರು ಸೇರಿದಂತೆ ಸಹಸ್ರಾರು ಭಕ್ತರು ಉಚಿತ ಸಾಮೂಹಿಕ ವಿವಾಹಕ್ಕೆ ಸಾಕ್ಷಿಯಾದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.