ಸೋಂಕಿತರಿಗೆ ಮೊದಲು ಲಸಿಕೆ ನೀಡಿ
Team Udayavani, Dec 16, 2020, 4:12 PM IST
ಮಂಡ್ಯ: ಕೋವಿಡ್-19 ಪಾಸಿಟಿವ್ ಬರುವವರಿಗೆ ಹಾಗೂ ಅವರ ಕುಟುಂಬದವರಿಗೆ ಮೊದಲು ಕೋವಿಡ್ ಲಸಿಕೆ ನೀಡಿ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ಲಸಿಕೆಪರಿಚಯ ಕುರಿತ 3ನೇ ಜಿಲ್ಲಾ ಮಟ್ಟದ ಚಾಲನಾ ಸಭೆಯಲ್ಲಿ ಮಾತನಾಡಿದ ಅವರು,ಈ ಕೋವಿಡ್-19 ಚುಚ್ಚು ಮದ್ದು ನೀಡಲುಹಾಸ್ಟೆಲ್ಗಳು,ಹೈಸ್ಕೂಲ್ಗಳು, ಕಾಲೇಜುಗಳು, ವಸತಿ ಶಾಲೆಗಳು, ವೈದ್ಯಕೀಯ ಕಾಲೇಜುಗಳನ್ನು ಬಳಸಿಕೊಳ್ಳಿ ಎಂದರು.
ಸಮರ್ಪಕವಾಗಿ ನಿರ್ವಹಿಸಿ: ಬೆಡ್, ಚೇರ್, ಹಾಸಿಗೆ, ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಶೌಚಾಲಯ,ನೀರು, ಎಲ್ಲ ವ್ಯವಸ್ಥೆ ಕಲ್ಪಿಸಬೇಕು. ಕೋವಿಡ್-19 ವ್ಯಾಕ್ಸಿನೇಷನ್ಕಂಟ್ರೋಲ್ ರೂಂ ಕೆಲಸ ಮಾಡುತ್ತಿದ್ದು, ಪರಿಶೀಲನಾ ಹಂತ, ಚುಚ್ಚು ಮದ್ದು ನೀಡುವಿಕೆ ಹಂತ, ಚುಚ್ಚುಮದ್ದು ನಂತರದ ಪರೀಕ್ಷಾ ಹಂತ, ಇವುಗಳನ್ನಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
3 ವರ್ಗದಲ್ಲಿ ಚುಚ್ಚುಮದ್ದು: ಕೋವಿಡ್-1 9ಚುಚ್ಚು ಮದ್ದನ್ನು ಮೊದಲಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ, ಫ್ರಂಟ್ ಲೈನ್ ವಾರಿಯರ್ಸ್ ಗಳಿಗೆ ,ಪೌರಕಾರ್ಮಿಕರಿಗೆ ಹಾಗೂ 50 ವರ್ಷ ಮೇಲ್ಪಟ್ಟವರು ಎಂಬ3ವರ್ಗಗಳಾಗಿಚುಚ್ಚುಮದ್ದನ್ನುನೀಡಲಾಗುತ್ತದೆ ಎಂದು ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಎಂ.ಸಿ. ಸೋಮಶೇಖರ್ ಹೇಳಿದರು.
ಚುಚ್ಚುಮದ್ದು ನೀಡುವಾಗ ಸ್ಥಳಗಳನ್ನು ಮೊದಲು ಪರೀಕ್ಷಿಸಿ ಸಾಮಾಜಿಕ ಅಂತರದೊಂದಿಗೆ, ಮಾಸ್ಕ್,ಸ್ಯಾನಿಟೈಸರ್ಗಳನ್ನು ನೀಡಬೇಕು. ಊರುಗಳಲ್ಲಿಶಿಬಿರಗಳನ್ನು ಏರ್ಪಡಿಸಿ, ಮೊದಲು ವಿಕಲಚೇತನರಿಗೆ,ಇನ್ನಿತರ ರೋಗ ಇರುವವರಿಗೆ, ದುರ್ಬಲರಿಗೆ,ಕೋವಿಡ್ ಪೋರ್ಟಲ್ನಲ್ಲಿ ನೋಂದಣಿ ಮಾಡಿದವರಿಗೆ ಮೊದಲು ಚುಚ್ಚುಮದ್ದನ್ನು ನೀಡಿ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೈಲಜಾ, ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಎಚ್.ಪಿ.ಮಂಚೇಗೌಡ, ವಾರ್ತಾ ಮತ್ತು ಪ್ರಸಾರ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ