ಶೀಘ್ರ ಕಾಮಗಾರಿ ಮುಗಿಸದಿದ್ದರೆ ಶಿಸ್ತು ಕ್ರಮ


Team Udayavani, Aug 29, 2020, 3:07 PM IST

ಶೀಘ್ರ ಕಾಮಗಾರಿ ಮುಗಿಸದಿದ್ದರೆ ಶಿಸ್ತು  ಕ್ರಮ

ಮಂಡ್ಯ: “ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸಬೇಕು. ಇಲ್ಲದಿದ್ದರೆ ಗುತ್ತಿಗೆದಾರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಎಚ್ಚರಿಸಿದರು. ನಗರದ ಜಿಪಂನ ಕಾವೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಂಡ್ಯ ನಗರ ಸೇರಿ ಪಾಂಡವಪುರ, ಶ್ರೀರಂಗಪಟ್ಟಣ, ಕೆ.ಆರ್‌.ಪೇಟೆ, ಮಳವಳ್ಳಿ, ಮದ್ದೂರು, ನಾಗಮಂಗಲ ಪಟ್ಟಣಗಳಲ್ಲಿ ಕುಡಿವ ನೀರು, ಒಳಚರಂಡಿ ಕಾಮಗಾರಿ ನಡೆಯುತ್ತಿವೆ. ಆದರೆ, ಅವಧಿಗೆ ಸರಿಯಾಗಿ ಗುತ್ತಿಗೆದಾರರು ಮುಗಿಸುತ್ತಿಲ್ಲ. ಹೀಗಾಗಿ ಜನತೆ ಪ್ರಶ್ನಿಸುತ್ತಿದ್ದಾರೆಂದರು.

4 ಬಾರಿ ಚಾಲನೆ: ಕೆ.ಆರ್‌.ಪೇಟೆಯಲ್ಲಿ ಕುಡಿವ ನೀರು ಮತ್ತು ಯುಜಿಡಿ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಅವಧಿಯಲ್ಲೇ ಕಾಮಗಾರಿಗೆ ಒಪ್ಪಿಗೆ ಪಡೆದು, 15 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿ, ಸುಮಾ ರು 4 ಬಾರಿ ಭೂಮಿ ಪೂಜೆ ಮಾಡಿದ್ದೇನೆ. ಆದರೂ, ಇನ್ನೂ ಕಾಮಗಾರಿ ಮುಗಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಸಚಿವ ಭೈರತಿ ಬಸವರಾಜು ಅವರ ಗಮನಕ್ಕೆ ತಂದರು.

ಶೀಘ್ರ ಕಾಮಗಾರಿ ಮುಗಿಸದಿದ್ದರೆ ಕೆಲಸ ದಿಂದ ಅಮಾನತು ಮಾಡಬೇಕಾಗು ತ್ತದೆ ಎಂದು ಪುರಸಭೆ ಸಹಾಯಕ ಎಂಜಿನಿ ಯರ್‌ ಮಹದೇವು ಅವರಿಗೆ ಎಚ್ಚರಿಕೆ ನೀಡಿದರು. ಜಿಲ್ಲೆಯ ಮಂಡ್ಯ ನಗರ ಮತ್ತು ತಾಲೂಕು ವಾರು ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿ ಶೀಘ್ರ ಮುಗಿಸಿ, ಡಿಸೆಂಬರ್‌ ಅಷ್ಟರೊಳಗೆ ಸಂಬಂಧಿಸಿದ ಕಾಮಗಾರಿಗಳ ಫೋಟೋ ತಲುಪಿಸುವಂತೆ ಜಲಮಂಡಳಿ ಅಧಿಕಾರಿ ಮುಖ್ಯ ಎಂಜಿನಿಯರ್‌ ಸಿದ್ದ ನಾಯಕ್‌ರಿಗೆ ಸೂಚಿಸಿದರು.

ಹೋಬಳಿವಾರು ಭೇಟಿ ನೀಡಿ: ಅಮೃತ್‌ ಯೋಜನೆಯಡಿ ಮಂಡ್ಯ ನಗರದ ಕುಡಿವ ನೀರಿನ ಯೋಜನೆಯನ್ನು ತಾನು ಸಂಸದ  ನಾಗಿದ್ದ ಅವಧಿಯಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ಅದು ಇನ್ನೂ ಮುಗಿದಿಲ್ಲ ಎಂದಾಗ, ಪ್ರಸ್ತುತ ಸುಮಾರು 23 ಕಿ.ಮೀ. ಪೈಪ್‌ಲೈನ್‌ ಹಾಕಲಾಗಿದೆ. ಇನ್ನು 2 ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಹೆದ್ದಾರಿ ಪಕ್ಕದ ಕಟ್ಟಡ ತೆರವು ಗೊಳಿಸದ ಕಾರಣ ಅರ್ಧಕ್ಕೆ ನಿಂತಿದೆ ಎಂದರು.  ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್‌, ಕೇವಲ ಐದಾರು ಕಟ್ಟಡ ಮಾತ್ರ ತೆರವು ಗೊಳಿಸಬೇಕಾಗಿದ್ದು, ಅದನ್ನು ಕೆಲವೇ ದಿನಗಳಲ್ಲಿ ತೆರವುಗೊಳಿಸಲಾಗುವುದ ಎಂದರು.

ಶಾಸಕ ಸಿ.ಎಸ್‌.ಪುಟ್ಟರಾಜು, ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್‌, ಸಿಇಒಜುಲ್ಫಿಕಾರ್‌ ಅಹಮದ್‌ ಉಲ್ಲಾ ಇದ್ದರು.

400 ನಿವೇಶನ ಹರಾಜಿಗೆ ಸೂಚನೆ :  ಮುಡಾ ವ್ಯಾಪ್ತಿಗೆ ಬರುವ ವಿವೇಕಾನಂದ ನಗರ (ಕೆರೆಯಂಗಳ)ದಲ್ಲಿ ಸುಮಾರು 400 ನಿವೇಶನಗಳಿದ್ದು, ಹರಾಜು ಹಾಕಿದರೆ 70 ಕೋಟಿ ರೂ. ಮುಡಾಗೆ ಲಾಭ ಬರಲಿದೆ ಎಂದು ಆಯುಕ್ತ

ನರಸಿಂಹಮೂರ್ತಿ ಸಚಿವರ ಗಮನಕ್ಕೆ ತಂದರು. ಶೀಘ್ರವೇ ಹರಾಜು ಹಾಕಿ ಬಂದ ಹಣದಲ್ಲಿ ನಗರದ ಮೂಲ ಸೌಕರ್ಯಕ್ಕೆ ಬಳಸಿಕೊಳ್ಳಿ ಎಂದು ಸಚಿವ ಬೈರತಿ ಬಸವರಾಜು ಸೂಚಿಸಿದರು.

27.76 ಕೋಟಿ ರೂ. ನೀರಿನ ಕರ ಬಾಕಿ :  ಮಂಡ್ಯ ನಗರಕ್ಕೆ ಪೂರೈಕೆ ಮಾಡುತ್ತಿರುವ ಕುಡಿವ ನೀರಿನ ಕರದ ಬಾಕಿ ಹಣ ಸುಮಾರು 27.76 ಕೋಟಿ ರೂ. ಬರಬೇಕಾಗಿದೆ ಎಂದು ಜಲ ಮಂಡಳಿ ಮುಖ್ಯ ಎಂಜಿನಿಯರ್‌ ಸಭೆ ಗಮನಕ್ಕೆ ತಂದಾಗ, ಇಂತಿಷ್ಟು ಅವಧಿಯಲ್ಲಿ ಅಸಲನ್ನು ಕಟ್ಟಿದರೆ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಜನತೆಗೆ ಒಂದು ನೋಟಿಸ್‌ ಹೊರಡಿಸಿ ಎಂದರು. ಜಿಲ್ಲಾ ಉಸ್ತು ವಾರಿ ಸಚಿವ ಕೆ.ಸಿ.ನಾರಾ ಯಣ  ಗೌಡ ಮಾತನಾಡಿ, ಅಧಿಕಾರಿಗಳು ನೀರನ್ನು ನಿಲ್ಲಿಸಿದರೆ, ಕೆಲವರು ಗೂಂಡಾಗಳಂತೆ ವರ್ತಿಸುತ್ತಾರೆ. ಯಾರು ನೀರಿನ ಕರವನ್ನು ಕಟ್ಟಿಲ್ಲವೋ ಅಂತಹವರ ಪಟ್ಟಿ ತಯಾರಿಸಿ ಕೊಡಿ. ಹಣ ಕಟ್ಟದಿದ್ದರೆ ನೀರನ್ನು ನಿಲ್ಲಿಸಿ ಎಂದು ಸೂಚಿಸಿದರು.

ಟಾಪ್ ನ್ಯೂಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-fusion

UV Fusion: ಏರಿಯಾ 51

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.