ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕಾಗಿ ಚರ್ಚೆ
Team Udayavani, Nov 8, 2020, 5:25 PM IST
ಮಂಡ್ಯ: ಉಪಚುನಾವಣೆ ಫಲಿತಾಂಶ ಬಳಿಕ ಸಚಿವ ಸಂಪುಟದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ, ಕಾರ್ಖಾನೆ ಆರಂಭಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಸಂಸದೆ ಸುಮಲತಾ ಹೇಳಿದರು.
ನಗರದ ಡೀಸಿ ಕಚೇರಿ ಸಭಾಂಗಣದಲ್ಲಿ ನಡೆದಕಬ್ಬುಬೆಳೆಗಾರರಸಭೆಯಲ್ಲಿಮಾತನಾಡಿ, ಈಗಾಗಲೇ ಸಕ್ಕರೆ ಸಚಿವ ಶಿವರಾಂ ಹೆಬ್ಟಾರ್ ಅವರಿಗೆ ರೈತರ ನೇತೃತ್ವದಲ್ಲಿ ನಿಮ್ಮ ಬಾಗಿಲಿಗೆ ಬಂದು ಧರಣಿ ಕೂರಲಾಗುವುದು ಎಂದು ಎಚ್ಚರಿಸಲಾಗಿದೆ. ರೈತರು ಆವೇಶಕ್ಕೆ ಒಳಗಾಗಬಾರದು. ಸ್ವಲ್ಪ ಕಾಲಾವಕಾಶ ಕೊಡಬೇಕು. ಮೈಷುಗರ್ಕಾರ್ಖಾನೆ ಆರಂಭಿಸುವುದೇ ನಮ್ಮ ಮೂಲ ಉದ್ದೇಶವಾಗಿದೆ. ಕಬ್ಬು ಕಟಾವು ದರ ಏರಿಕೆ ಮಾಡಿರುವುದು ಸರಿಯಲ್ಲ. ಡೀಸಿ ನೇತೃತ್ವದಲ್ಲಿ ಎಲ್ಲ ಸಕ್ಕರೆ ಕಾರ್ಖಾನೆಗಳ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು.
ಕನಗನಮರಡಿ ಗಣಿಗಾರಿಕೆ ಸ್ಥಗಿತ: ಡೀಸಿ ಡಾ.ವೆಂಕಟೇಶ್ ಮಾತನಾಡಿ, ಪಾಂಡವಪುರದಕನಗನಮರಡಿ ಗ್ರಾಮದಲ್ಲಿ ಬೆಂಗಳೂರು- ಮೈಸೂರು ರಾಷ್ಟ್ರೀಯಹೆದ್ದಾರಿ ಕಾಮಗಾರಿಗಾಗಿ ಕಲ್ಲು ತೆಗೆದು ಬಳಸಲಾಗುತ್ತಿದೆ. ಗಣಿಗಾರಿಕೆಯಿಂದ ನಾಲೆಗೆ ತೊಂದರೆಯಾಗುತ್ತಿದೆ ಎಂದು ರೈತರ ಆರೋಪವಿದ್ದು, ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದರ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ. ಶೀಘ್ರದಲ್ಲಿಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಲಿದ್ದು, ನಂತರ ವರದಿ ಮೇರೆಗೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ರೈತರ ದಿಕ್ಕು ತಪ್ಪಿಸುವ ಕೆಲಸ: ಮೈಷುಗರ್ ಕಾರ್ಖಾನೆಯ ಕಬ್ಬು ಬೆಳೆಗಾರರ ಸಂಘದ ಮುಖಂಡರಾದ ಎಸ್.ಕೃಷ್ಣ, ವೇಣು ಮಾತನಾಡಿ, ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸಿಕೊಳ್ಳಬೇಕು. ಒ ಆ್ಯಂಡ್ ಎಂ ಆಧಾರದಲ್ಲಿ ಸರ್ಕಾರಿ ನೇತೃತ್ವದಲ್ಲಿಯೇ ಕಾರ್ಖಾನೆ ಆರಂಭಿಸಬೇಕು. ಸರ್ಕಾರಗಳು ಗೊಂದಲಮಯ ಹೇಳಿಕೆ ನೀಡಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ. ಶಾಸಕರು ಕಾರ್ಖಾನೆ ಸಂಬಂಧಪಟ್ಟಂತೆ ರೈತರ ಪರವಾಗಿ ಚಕಾರ ಎತ್ತುತ್ತಿಲ್ಲ. ಆದ್ದರಿಂದ ನಿಮ್ಮ ನಾಯಕತ್ವದಲ್ಲಿ ಮೈಷುಗರ್ ಸಕ್ಕರೆ ಕಾರ್ಖಾನೆಆರಂಭಿಸಲುಕ್ರಮವಹಿಸುವ ಮೂಲಕ ರೈತರಿಗೆ ನೇರವಾಗಬೇಕು ಎಂದು ಮನವಿ ಮಾಡಿದರು.
ಕಬ್ಬು ಬೆಳೆಗಾರರಾದ ಗೊರವಾಲೆ ನಾಗೇಶ್, ನಾಗಣ್ಣ, ಚಾಮಲಾಪುರ ಬೊಮ್ಮೇಗೌಡ, ಪಾಪಣ್ಣ ಮಾರಗೌಡನಹಳ್ಳಿ, ಶಿವಶಂಕರ್, ಚಂದ್ರಶೇಖರ್, ಹೊಸಹಳ್ಳಿ ಲಿಂಗಣ್ಣ, ಕೃಷಿ ಜಂಟಿ ನಿರ್ದೇಶಕ ಚಂದ್ರಶೇಖರ್, ಆಹಾರ ಇಲಾಖೆಯಕುಮುದ ಶರತ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ