ಹತ್ತು ತಿಂಗಳಿಂದ ನಗರಸಭೆಗೆ ನಾಮಕೇವಾಸ್ಥೆ ಸದಸ್ಯರು

ಅಧ್ಯಕ್ಷ-ಉಪಾಧ್ಯಕ್ಷ ಮೀಸಲು ವಿವಾದ: ಚುನಾವಣೆಗೆ ವಿಘ್ನ • ಅಧಿಕಾರ ವಂಚಿತ ಸದಸ್ಯರು, ಅಭಿವೃದ್ಧಿ ಕಾರ್ಯಗಳು ಸ್ತಬ್ಧ

Team Udayavani, May 7, 2019, 3:12 PM IST

mandya-tdy-1..

ಮಂಡ್ಯ: ನಗರಸಭೆಗೆ ಚುನಾವಣೆ ನಡೆದು ಹತ್ತು ತಿಂಗಳಾದರೂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆಯದೆ ಆಡಳಿತ ವ್ಯವಸ್ಥೆಗೆ ಗ್ರಹಣ ಹಿಡಿದಿದೆ. ಆಡಳಿತದಲ್ಲಿ ಅಧಿಕಾರಿಗಳ ದರ್ಬಾರ್‌ ನಡೆದಿದ್ದು, ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ತಬ್ಧಗೊಂಡಿವೆ.

ನಗರದ 35 ವಾರ್ಡ್‌ಗಳಿಗೆ ಆಯ್ಕೆಯಾದ ಸದಸ್ಯರು ಇಂದಿಗೂ ನಾಮಕಾವಸ್ಥೆ ಸದಸ್ಯರಾಗೇ ಉಳಿದು ಕೊಂಡಿದ್ದಾರೆ. ಅವರಿಗೆ ಯಾವುದೇ ಅಧಿಕಾರವಿಲ್ಲ. ವಾರ್ಡ್‌ಗಳ ಕೆಲಸ ಮಾಡಲಾಗದೆ ಜನರಿಂದ ಸಹಸ್ರ ನಾಮಾರ್ಚನೆ ಮಾಡಿಸಿಕೊಳ್ಳುತ್ತಲೇ ದಿನ ದೂಡು ವಂತಹ ಸ್ಥಿತಿ ಸೃಷ್ಟಿಯಾಗಿದೆ. ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಗೆ ಮೀಸಲಾತಿ ವಿಘ್ನ ದೊಡ್ಡ ತೊಡಕಾಗಿ ಪರಿಣಮಿಸಿದ್ದು, ಅದಕ್ಕಿನ್ನೂ ಮುಕ್ತಿ ದೊರಕಿಲ್ಲ.

ಮಂಡ್ಯ ನಗರಸಭೆಗೆ 2018ರ ಆಗಸ್ಟ್‌ 31ರಂದು ಚುನಾವಣೆ ನಡೆಯಿತು. ಸೆ.3ರಂದು ಫ‌ಲಿತಾಂಶ ಪ್ರಕಟಗೊಂಡು ಅದೇ ದಿನವೇ ರಾಜ್ಯಸರ್ಕಾರ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ಪ್ರಕಟಿಸಿತು. ಇದಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಯಿತು. ಆ ಹಿನ್ನೆಲೆಯಲ್ಲಿ ಪಟ್ಟಿಯನ್ನು ಪರಿಷ್ಕರಣೆಗೊಳಪಡಿಸಲಾಯಿತು. ಪರಿಣಾಮ ಆ ಮೀಸಲಿನಡಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಅವಕಾಶವಿದ್ದವರು ತೀವ್ರ ನಿರಾಸೆಗೆ ಒಳಗಾದರು.

ಆನಂತರದಲ್ಲಿ ಸರ್ಕಾರದಿಂದ ಪರಿಷ್ಕರಣೆಗೊಂಡು ಹೊಸ ಪಟ್ಟಿ ಬಿಡುಗಡೆಯಾಯಿತು. ಅದಕ್ಕೂ ಸಹಮತ ವ್ಯಕ್ತವಾಗಲಿಲ್ಲ. ಮೊದಲ ಪಟ್ಟಿಯಲ್ಲಿ ಅವಕಾಶ ವಂಚಿತರಾದವರು ನಗರಸಭೆ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಪರಿಷ್ಕೃತ ಮೀಸಲು ಪಟ್ಟಿ ವಿರುದ್ಧ ಧಾರವಾಡ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದರು. ಇದರಿಂದ ಚುನಾವಣೆ ನನೆಗುದಿಗೆ ಬಿದ್ದಿತು.

ನಿರಂತರ ವಿಘ್ನಗಳು: ಮೀಸಲಾತಿ ಗೊಂದಲದ ಬಗೆಗಿನ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಮೊದಲ ಪಟ್ಟಿಯಲ್ಲಿರುವ ಮೀಸಲು ಪ್ರಕಾರವೇ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆಸುವಂತೆ 2018ರ ಅಕ್ಟೋಬರ್‌ ತಿಂಗಳಲ್ಲೇ ಆದೇಶ ನೀಡಿದೆ. ಅದೇ ವೇಳೆಗೆ ರಾಜ್ಯದಲ್ಲಿ 3 ಲೋಕಸಭೆ, ಎರಡು ವಿಧಾನಸಭೆಗೆ ಉಪ ಚುನಾವಣೆಗಳು ಎದುರಾದವು. ಚುನಾವಣೆ ಅಧಿಸೂಚನೆ ಹೊರಬಿದ್ದು 2018ರ ನವೆಂಬರ್‌ 3ಕ್ಕೆ ಚುನಾವಣೆ ನಿಗದಿಯಾಯಿತು. ಆಗ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಹಳೇ ಮೀಸಲುಪಟ್ಟಿಯಂತೆ ಚುನಾವಣೆ ನಡೆಸುವುದಕ್ಕೆ ತಡೆ ಬಿದ್ದಿತು.

ಲೋಕಸಭೆ ಹಾಗೂ ವಿಧಾನಸಭಾ ಉಪ ಚುನಾವಣೆಗಳು ಮುಗಿದ ಬಳಿಕ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆಸುವುದಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು. ಆದರೆ, ಧಾರವಾಡ ಹಾಗೂ ಇತರೆ ಜಿಲ್ಲೆಯವರು ನಗರಸಭೆ ವರಿಷ್ಠರ ಮೀಸಲು ಪಟ್ಟಿ ಪ್ರಶ್ನಿಸಿ ಮತ್ತೆ ಹೈಕೋರ್ಟ್‌ ಮೊರೆ ಹೋದರು. ಮತ್ತೆ ಚುನಾವಣೆಗೆ ಕೋರ್ಟ್‌ ತಡೆಯಾಜ್ಞೆ ನೀಡಿತು. ನಿರಂತರ ವಿಘ್ನಗಳಿಂದಾಗಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ವಿಳಂಬವಾಗುತ್ತಲೇ ಇದೆ.

ಅಭಿವೃದ್ಧಿ ಕಾರ್ಯಗಳು ಸ್ತಬ್ಧ: ಕಳೆದ ಹತ್ತು ತಿಂಗಳಿಂದ ನಗರಸಭೆಯಿಂದ ನಗರ ವ್ಯಾಪ್ತಿಯೊಳಗೆ ಯಾವುದೇ ಅಭಿವೃದ್ಧಿ ಕಾರ್ಯಗಳೂ ನಡೆಯುತ್ತಿಲ್ಲ. ನಗರದ ರಸ್ತೆಗಳೆಲ್ಲಾ ಹಾಳಾಗಿದೆ. ಕುಡಿಯುವ ನೀರು, ಕಸದ ಸಮಸ್ಯೆ ತೀವ್ರವಾಗಿದೆ. ಸ್ವಚ್ಛತೆಯೂ ಮಾಯ ವಾಗಿದೆ. ನಗರಸಭೆ ಆಡಳಿತದಲ್ಲಿ ಅಧಿಕಾರಿಗಳ ದರ್ಬಾರ್‌ ನಡೆದಿರುವುದರಿಂದ ಅವರನ್ನು ಹೇಳು ವವರು, ಕೇಳುವವರು ಯಾರೂ ಇಲ್ಲದಂತಾಗಿದೆ.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಸಮಯದಲ್ಲಿ ಮಂಡಿಸಿದ ಬಜೆಟ್‌ನಲ್ಲಿ ನಗರಾಭಿವೃದ್ಧಿಗೆ 50 ಕೋಟಿ ರೂ. ಹಣ ಬಿಡುಗಡೆ ಘೋಷಣೆ ಮಾಡಿತ್ತು. ಆ ಹಣ ಬಿಡುಗಡೆಯಾಗಿದೆಯೋ, ಇಲ್ಲವೋ ಗೊತ್ತಿಲ್ಲ. ನೂರಡಿ ರಸ್ತೆ ಹೊರತುಪಡಿಸಿದಂತೆ ಅವ್ಯವಸ್ಥಿತ ಸ್ವರೂಪ ಪಡೆದುಕೊಂಡಿರುವ ಉಳಿದ ಯಾವ ರಸ್ತೆಗಳ ಅಭಿವೃದ್ಧಿಯನ್ನೂ ಕೈಗೆತ್ತಿಕೊಂಡಿಲ್ಲ.

ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡರೆ ಕೆಲಸಗಳನ್ನು ಸುಸೂತ್ರವಾಗಿ ಮಾಡಿಕೊಂಡು ಹೋಗಬಹುದು. ಯಾವುದೇ ಕಾಮಗಾರಿಗಳ ಕ್ರಿಯಾಯೋಜನೆಗಳಿಗೆ ನಗರಸಭೆ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪಡೆಯಬೇಕು. ಆದರೆ, ಸ್ಥಳೀಯ ಸಂಸ್ಥೆಗಳ ವರಿಷ್ಠರ ಆಯ್ಕೆ ಪ್ರಕ್ರಿಯೆಯೇ ನಡೆದಿಲ್ಲ. ಹೀಗಾಗಿ ಸಾಮಾನ್ಯ ಸಭೆಗಳು ನಡೆದಿಲ್ಲ. ಹೊಸ ಕಾಮಗಾರಿಗಳು ಆರಂಭವಾಗಿಲ್ಲ. ಅಭಿವೃದ್ದಿ ಕಾರ್ಯಗಳು ನೆನೆಗುದಿಗೆ ಬಿದ್ದಿವೆ. ಚುನಾವಣಾ ನೀತಿ ಸಂಹಿತೆ ನೆಪದಲ್ಲಿ ಅಧಿಕಾರಿಗಳ ಅಂಧಾ ದರ್ಬಾರ್‌ ನಡೆದಿದೆ ಎನ್ನುವುದು ನಗರಸಭೆಗೆ ಆಯ್ಕೆಯಾಗಿರುವ ಜನಪ್ರತಿನಿಧಿಗಳ ಅನಿಸಿಕೆಯಾಗಿದೆ.

ಕಾಯದೇ ವಿಧಿ ಇಲ್ಲ: ಈ ಮಧ್ಯೆ ಮಾ.10ರಂದು ದಿಢೀರನೆ ಲೋಕಸಭೆ ಸಾರ್ವತ್ರಿಕ ಚುನಾವಣೆಯ ಅಧಿಸೂಚನೆಯೂ ಪ್ರಕಟವಾಗಿತು. ಈಗಾಗಲೇ ರಾಜ್ಯದಲ್ಲಿ ಎರಡು ಹಂತದ ಚುನಾವಣೆ (ಏ.18 ಮತ್ತು 23) ಮುಗಿದಿದೆ. ಮೇ 23ರಂದು ಮತ ಎಣಿಕೆಯೊಂದಿಗೆ ಫಲಿತಾಂಶ ಪ್ರಕಟಗೊಳ್ಳಲಿದೆ. ಆ ಬಳಿಕ ಐದು ದಿನಗಳ ನಂತರ ಮೇ 27ರಂದು ಚುನಾವಣಾ ನೀತಿ ಸಂಹಿತೆ ಅಂತ್ಯಗೊಳ್ಳಲಿದೆ. ಹೀಗಾಗಿ ಅಲ್ಲಿವರೆಗೆ ಕಾಯದೇ ವಿಧಿ ಇಲ್ಲ.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದಿರುವವರು ಹೆಸರಿಗಷ್ಟೇ ಸದಸ್ಯರು. ಆದರೆ, ಅವರಿಗೆ ಯಾವುದೇ ಅಧಿಕಾರವಿಲ್ಲ. ಅಧಿಕಾರಾವ ಧಿಯೂ ಆರಂಭವಾಗಿಲ್ಲ. ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಾಗಿ ನಂತರ ನಡೆಯುವ ಮೊದಲ ಸಾಮಾನ್ಯ ಸಭೆ ನಡೆಯುವ ದಿನದಿಂದ ಹೊಸ ಸದಸ್ಯರ ಅಧಿಕಾರವಧಿ ಅಧಿಕೃತವಾಗಿ ಆರಂಭವಾಗಲಿದೆ.

ಅಧಿಕಾರಿಗಳ ಕಾರ್ಯವೈಖರಿಗೆ ಕನ್ನಡಿ: ನಗರಸಭೆಗೆ ವರಿಷ್ಠರ ಆಯ್ಕೆ ನಡೆಯದಿರುವುದರಿಂದ ಬೃಹತ್‌ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗದಂತಾಗಿದೆ. ಹತ್ತು ತಿಂಗಳ ಹಿಂದೆ ಬಜೆಟ್‌ನಲ್ಲಿ ಘೋಷಣೆಯಾದ 50 ಕೋಟಿ ರೂ. ಹಣಕ್ಕೆ ಈಗ ಯೋಜನಾ ವರದಿ ಯನ್ನು ಸಿದ್ಧಪಡಿಸಲಾಗುತ್ತಿದೆ ಎಂದರೆ ಇದು ಅಧಿ ಕಾರಿಗಳ ಕಾರ್ಯವೈಖರಿಗೆ ಹಿಡಿದ ಕನ್ನಡಿಯಂತಾಗಿದೆ.

ಲೋಕಸಭೆ ಚುನಾವಣೆ ಘೋಷಣೆಯಾದ ನಂತರದಲ್ಲಿ ನಗರಸಭೆಯ ಮೂವರು ಆಯುಕ್ತರು ಬದಲಾಗಿದ್ದಾರೆ. ಯಾರೊಬ್ಬರಿಗೂ ನಗರಸಭೆ ಕಾಮಗಾರಿಗಳು ಯಾವ ಹಂತದಲ್ಲಿವೆ, ಯಾವ ಯಾವ ಯೋಜನೆಯಡಿ ಏನೇನು ಕೆಲಸ ನಡೆಯುತ್ತಿವೆ ಎಂಬುದರ ಅರಿವಿಲ್ಲ. ವರ್ಗಾವಣೆ ಯಾಗಿ ಬಂದ ನಂತರದಲ್ಲಿ ಚುನಾವಣಾ ಕೆಲಸ- ಕಾರ್ಯಗಳಿಗೆ ನಿಯೋಜನೆಗೊಂಡ ಅಧಿಕಾರಿಗಳಿಗೆ ಇಂದಿಗೂ ನಗರಸಭೆ ಆಡಳಿತದತ್ತ ಗಮನಹರಿಸುವುದಕ್ಕೆ ಸಾಧ್ಯವಾಗಿಲ್ಲ.

ಹದಿನಾಲ್ಕನೇ ಹಣಕಾಸು ಯೋಜನೆಯಡಿ ಕೆಲವೊಂದು ರಸ್ತೆ, ಚರಂಡಿ ಕಾಮಗಾರಿಗಳು ನಡೆಯುತ್ತಿರುವುದನ್ನು ಹೊರತುಪಡಿಸಿದರೆ ಬಹು ನಿರೀಕ್ಷೆಯ ಯೋಜನೆಗಳೆಲ್ಲವೂ ಹಳ್ಳ ಹಿಡಿದಿವೆ. ಹೊಸದಾಗಿ ಆಯ್ಕೆಯಾಗಿರುವ ಸದಸ್ಯರಿಗೆ ಅಧಿಕಾರಿಗಳು ಬೆಲೆ ಕೊಡುತ್ತಿಲ್ಲ. ವರಿಷ್ಠರ ಚುನಾವಣೆ ನಡೆಯದಿರುವುದು ಹಾಗೂ ಚುನಾವಣೆ ನೀತಿ ಸಂಹಿತೆಯೂ ಇದಕ್ಕೆ ಕಾರಣವಾಗಿರಬಹುದು. ವಾರ್ಡ್‌ಗಳಲ್ಲಿ ಬೀದಿ ದೀಪ ದುರಸ್ತಿ, ಶುಚಿತ್ವದ ಕೆಲಸವನ್ನಷ್ಟೇ ಮಾತ್ರ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ.

● ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.