ಮಿಮ್ಸ್‌ ನಲ್ಲಿ ನೆಲದ ಮೇಲೆಯೇ ಚಿಕಿತ್ಸೆ


Team Udayavani, Nov 26, 2022, 5:23 PM IST

tdy-18

ಮಂಡ್ಯ: ನಗರದ ಮಿಮ್ಸ್‌ ಅವ್ಯವಸ್ಥೆಗಳ ಅಗರ ಎಂಬುದು ಆಗಾಗ್ಗೆ ಸಾಬೀತಾಗುತ್ತಲೇ ಇರುತ್ತದೆ. ಅದು ಗುರುವಾರವೂ ಮತ್ತೂಮ್ಮೆ ಸಾಬೀತಾಗಿದ್ದು, ನಿರ್ಲಕ್ಷ್ಯ ಮುಂದುವರಿದಿದೆ.

ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾದ ರೋಗಿಗಳನ್ನು ಬೆಡ್‌ಗಳ ಕೊರತೆಯಿಂದ ನೆಲದ ಮೇಲೆ ಮಗಿಸಿದ್ದ ದೃಶ್ಯ ಕಂಡು ಬಂದಿತು. ಪ್ರತೀ ದಿನ ಹೆರಿಗೆ ವಾರ್ಡ್‌ನಲ್ಲಿ ಬೆಡ್‌ಗಳ ಕೊರತೆ ಇತ್ತು. ಅಲ್ಲಿ ಒಂದು ಬೆಡ್‌ಗಳ ಮೇಲೆ ನಾಲ್ಕೈದು ಮಂದಿಯನ್ನು ಮಲಗಿಸಲಾ ಗುತ್ತಿತ್ತು. ಉಳಿದವರನ್ನು ನೆಲದ ಮೇಲೆ ಮಲಗಿಸುವ ದೃಶ್ಯ ಸಾಮಾನ್ಯ ವಾಗಿತ್ತು. ಆದರೆ ಗುರುವಾರ ಕಣ್ಣಿನ ವಾರ್ಡ್‌ನಲ್ಲೂ ಕಂಡು ಬಂದಿತು. ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ವಯೋ ವೃದ್ಧರನ್ನು ಒಂದು ಬೆಡ್‌ ಮೇಲೆ ಐದಾರು ಮಂದಿ ಯನ್ನು ಮಲಗಿಸಲಾಗಿತ್ತು. ಅಲ್ಲದೆ, ಕೆಲವು ವೃದ್ಧರನ್ನು ನೆಲದ ಮೇಲೆ ಮಲಗಿಸಿದ್ದರು. ಬೆಡ್‌ಗಳಿಲ್ಲದೆ ಮಹಿಳಾ ರೋಗಿಗಳು ಒಬ್ಬರಿ ಗೊಬ್ಬರು ಅಂಟಿ ಕೊಂಡು ಮಲಗುವ ಪರಿಸ್ಥಿತಿ ಉಂಟಾಗಿತ್ತು. ಕಣ್ಣಿನ ಶಸ್ತ್ರ ಚಿಕಿತ್ಸೆಯಾ ಗಿದ್ದರಿಂದ ಕಣ್ಣು ಕಾಣುತ್ತಿರಲಿಲ್ಲ. ನೆಲದ ಮೇಲೆ ಮಲಗಿರುವ ದೃಶ್ಯಗಳು ಮನಕಲಕುವಂತಿತ್ತು.

ರೋಗ ಹರಡುವ ಶೌಚಾಲಯ: ರೋಗ ಗುಣಪಡಿಸಿ ಕೊಳ್ಳಲು ಆಸ್ಪತ್ರೆಗೆ ಬಂದರೆ ರೋಗ ಗುಣಪಡಿಸುವ ಬದಲು ರೋಗ ಹರಡುವ ಆಸ್ಪತ್ರೆಯಾಗಿ ಜಿಲ್ಲಾಸ್ಪತ್ರೆ ಬದಲಾಗುತ್ತಿದೆ. ಅ ಧಿಕಾರಿ, ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಮಿಮ್ಸ್‌ನ ಶೌಚಾಲಯಗಳು ರೋಗ ಹರಡುವ ಅವ್ಯವಸ್ಥೆಯ ಆಗರವಾಗಿದೆ. ಸರಿಯಾಗಿ ನಿರ್ವಹಣೆ ಇಲ್ಲದೆ ಶೌಚಾಲಯ ಗಬ್ಬೆದ್ದು ನಾರುತ್ತಿದೆ. ಇದರಿಂದ ರೋಗಿಗಳು ಪರದಾಡುವಂತಾಗಿದೆ. ಜತೆಗೆ ವಾರ್ಡ್‌ಗಳ ಶೌಚಾಲಯಗಳಲ್ಲಿ ಸ್ವತ್ಛತೆ ಇಲ್ಲದಂತಾಗಿದೆ. ಗೋಡೆಗಳು ಬಿರುಕು ಬಿಟ್ಟಿವೆ. ಮಳೆ ಬಂದಾಗ ನೀರು ಸೋರುವ ಸ್ಥಿತಿಗೆ ತಲುಪಿವೆ. ಸಿಂಕ್‌ ಗಳು, ನೆಲದ ಟೈಲ್ಸ್‌ಗಳು ಒಡೆದಿವೆ. ಶೌಚಾ ಲಯಕ್ಕೆ ಹೋಗಲು ನೂರು ಸಲ ಯೋಚನೆ ಮಾಡು ವಂಥ ಸ್ಥಿತಿ ಎದುರಾಗಿದೆ. ಆದರೂ ಮಿಮ್ಸ್‌ನ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ.

ಸೂಕ್ತ ಕ್ರಮಕೈಗೊಳ್ಳುವಲ್ಲಿ ಅಧಿಕಾರಿಗಳು ವಿಫ‌ಲ: ಮಿಮ್ಸ್‌ನಲ್ಲಿ ಆಗಾಗ್ಗೆ ವೈದ್ಯರ ನಿರ್ಲಕ್ಷ್ಯ, ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕರು ಆರೋಪ ಮಾಡುತ್ತಲೇ ಇರುತ್ತಾರೆ. ಆದರೆ, ಇದುವರೆಗೂ ಸಂಬಂಧಪಟ್ಟ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನಪ್ರತಿನಿಧಿಗಳು, ಸರ್ಕಾರ ಮಿಮ್ಸ್‌ ನ ಅವ್ಯವಸ್ಥೆ ಸರಿಪಡಿಸಲು ಮುಂದಾಗದಿರುವುದು ಶೋಚ ನೀಯವಾಗಿದೆ. ಕೂಡಲೇ ಜನಪ್ರತಿನಿ ಧಿಗಳು, ಸರ್ಕಾರ ಹಾಗೂ ಅಧಿ ಕಾರಿಗಳು ಎಚ್ಚೆತ್ತುಕೊಂಡು ಆಸ್ಪತ್ರೆಗೆ ಅಗತ್ಯ ಬೆಡ್‌, ಸುಸಜ್ಜಿತ ಶೌಚಾಲಯ ಸೇರಿ ರೋಗಿಗಳಿಗೆ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಪೂರ್ಣಚಂದ್ರ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.