ಕೆಆರ್‌ಎಸ್‌ ಬಳಿ ಕೇಳಿಬಂದದ್ದು ಗಣಿ ಸ್ಫೋಟ ಶಬ್ಧ!


Team Udayavani, Sep 28, 2018, 6:00 AM IST

ban2809180.jpg

ಮಂಡ್ಯ: ಕೆಆರ್‌ಎಸ್‌ ಸುತ್ತಮುತ್ತ ಸೆ.25ರಂದು ನಡುಕ ಹುಟ್ಟಿಸಿದ ಭಾರೀ ಶಬ್ಧ ಎಲ್ಲಿಂದ ಬಂತು ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಅದು ಪಾಂಡವಪುರ ತಾಲೂಕು ಬೇಬಿ ಬೆಟ್ಟದ ಕಾವಲ್‌ ಪ್ರದೇಶದಲ್ಲಿ ಆದ ಗಣಿ ಸ್ಫೋಟದಿಂದ ಎನ್ನುವುದು ಖಚಿತಪಟ್ಟಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಂಡ್ಯ ಜಿಲ್ಲಾಧಿಕಾರಿಗೆ ಸಲ್ಲಿಸಿರುವ ವರದಿಯಿಂದ ಈ ಅಂಶ ಬಹಿರಂಗಗೊಂಡಿದೆ. ಆ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಸುರಕ್ಷತೆ ಕುರಿತು ಪರಿಶೀಲನೆ ನಡೆಸಿ ಖಚಿತಪಡಿಸಿಕೊಳ್ಳುವುದು ಹಾಗೂ ಅಣೆಕಟ್ಟೆ ಸುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಸರ್ವೆ ನಡೆಸಿ ಅಣೆಕಟ್ಟೆಗೆ ಅಪಾಯ ಸೃಷ್ಟಿಸುವ ಎಲ್ಲ ರೀತಿಯ ಚಟುವಟಿಕೆಗಳ ನಿಯಂತ್ರಣಕ್ಕೆ ಕ್ರಮ ವಹಿಸುವಂತೆ ಕೇಂದ್ರದ ನಿರ್ದೇಶಕ ಡಾ.ಶ್ರೀನಿವಾಸ ರೆಡ್ಡಿ ನಿರ್ದೇಶನ ನೀಡಿದ್ದಾರೆ.

ಸೆ.25ರಂದು ಮಧ್ಯಾಹ್ನ 2.40ರ ಸಮಯದಲ್ಲಿ 6 ಸೆಕೆಂಡ್‌ಗಳ ಅಂತರದಲ್ಲಿ ಎರಡು ಬಾರಿ ಬೇಬಿ ಬೆಟ್ಟಲ್‌ ಕಾವಲ್‌ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ನಿಖರವಾಗಿ ಗುರುತಿಸಿರುವ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಉಪಗ್ರಹ ಚಿತ್ರಗಳು ಹಾಗೂ ಕಂಪನದ ಪ್ರಮಾಣ ದಾಖಲಾಗಿರುವ ಚಿತ್ರಗಳನ್ನು ವರದಿಯೊಂದಿಗೆ ಸಲ್ಲಿಸಿದೆ.

ಎರಡು ಗಣಿ ಸ್ಫೋಟ:
ಕೃಷ್ಣರಾಜಸಾಗರ ಜಲಾಶಯ ಸುತ್ತಮುತ್ತ ಸೆ.25ರಂದು ಯಾವುದೇ ರೀತಿಯ ಭೂಕಂಪನ ಸಂಭವಿಸಿಲ್ಲ. ಆದರೆ, ಎರಡು ಗಣಿ ಸ್ಫೋಟಗಳು  ಸಂಭವಿಸಿರುವುದು ಕೆಆರ್‌ಎಸ್‌ ಸಮೀಪ ಸ್ಥಾಪಿಸಿರುವ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಲ್ಲಿ ದಾಖಲಾಗಿದೆ. ಕೆಆರ್‌ಎಸ್‌ ಅಣೆಕಟ್ಟೆಯಿಂದ 10.5 ಕಿ.ಮೀ. ಅಂತರದಲ್ಲಿ ಈ ಸ್ಫೋಟ ಸಂಭವಿಸಿರುವುದಾಗಿ ತಿಳಿಸಿರುವುದಲ್ಲದೆ, ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಕಾವಲ್‌ ಪ್ರದೇಶದಲ್ಲೇ ಎರಡೂ ಸ್ಫೋಟಗಳು ಉಂಟಾಗಿದೆ ಎಂದು ನಿಖರವಾಗಿ ಗುರುತಿಸಿದೆ.
ಕೇವಲ ಆರು ಸೆಕೆಂಡ್‌ ಅಂತರದಲ್ಲಿ ಎರಡು ಗಣಿ ಸ್ಫೋಟ ಸಂಭವಿಸಿದೆ. ಒಂದು ಸ್ಫೋಟ ಮಧ್ಯಾಹ್ನ 2 ಗಂಟೆ 37 ನಿಮಿಷ 21 ಸೆಕೆಂಡ್‌ಗೆ ಸಂಭವಿಸಿದರೆ, ಮತ್ತೂಂದು ಸ್ಫೋಟ 2 ಗಂಟೆ 37 ನಿಮಿಷ 27 ಸೆಕೆಂಡ್‌ಗೆ ಸಂಭವಿಸಿದೆ. ಬದಲಾದ ತೀವ್ರತೆಯಿಂದ ಅದರ ಪ್ರಮಾಣವನ್ನು ಗಮನಿಸಲು ಸಾಧ್ಯವಾಗಿಲ್ಲ.

ಕೆಆರ್‌ಎಸ್‌ ಬಳಿ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸ್ಥಾಪನೆಯಾದಂದಿನಿಂದ ಸ್ಫೋಟ ಸಂಭವಿಸಿದ ಸೆ.25ರವರೆಗೆ ಈ ಪ್ರಮಾಣದ ಸ್ಫೋಟದ ತೀವ್ರತೆ ಎಂದೂ ಸಹ ದಾಖಲಾಗಿರಲಿಲ್ಲ. ಇದು ಗಣಿಗಾರಿಕೆ ಪ್ರದೇಶದಲ್ಲಿ ನಡೆದ ಸ್ಫೋಟದಿಂದ ಉಂಟಾಗಿರುವ ಶಬ್ಧ. ಇದಕ್ಕಾಗಿ ತೀವ್ರ ಪ್ರಮಾಣದ ಸ್ಫೋಟಕವನ್ನು ಬಳಕೆ ಮಾಡಲಾಗಿದೆ ಎಂದು ಉಲ್ಲೇಖೀಸಲಾಗಿದೆ.

ಭೂಕಂಪನವಾಗಿಲ್ಲ:
ಕೃಷ್ಣರಾಜಸಾಗರ ಜಲಾಶಯದ ಸುತ್ತ ಭೂಕಂಪ ಸಂಭವಿಸಿದ್ದಲ್ಲಿ ಅದಕ್ಕೆ ಸಮೀಪದಲ್ಲಿರುವ ಕೇಂದ್ರಗಳಾದ ಗುಂಡಾಲ್‌ ಅಣೆಕಟ್ಟು, ತಿಪ್ಪಗೊಂಡನಹಳ್ಳಿ, ಹಾರಂಗಿ ಹಾಗೂ ಹೇಮಾವತಿ ಅಣೆಕಟ್ಟುಗಳಲ್ಲಿರುವ ಕೇಂದ್ರಗಳಲ್ಲೂ ಅದು ದಾಖಲಾಗಬೇಕಿತ್ತು. ಸಾಮಾನ್ಯವಾಗಿ ಭೂಕಂಪನಗಳು 10 ಕಿ.ಮೀ. ಆಳದಲ್ಲಿ ರೂಪುಗೊಳ್ಳುತ್ತವೆ.  ಬೇರೆ ಯಾವ ಕಡೆಯೂ ಭೂಕಂಪನ ಆಗದಿರುವ ಕಾರಣ ಇದು ಭೂಕಂಪನವಲ್ಲ ಗಣಿ ಸ್ಫೋಟವೆಂದು ಗುರುತಿಸಿದ್ದು, ಸ್ಫೋಟದಿಂದ ಸೃಷ್ಟಿಯಾದ ಶಬ್ಧ 12 ರಿಂದ 15 ಕಿ.ಮೀ. ವ್ಯಾಪ್ತಿಯವರೆಗೆ ಹರಡಿದೆ ಎಂದು ತಿಳಿಸಿದೆ.

ಅಣೆಕಟ್ಟೆ ಸುರಕ್ಷತೆಯ ಪರಿಶೀಲನೆ ನಡೆಸಿ:
ಕೆಆರ್‌ಎಸ್‌ ಸುತ್ತ ನಡೆಯುತ್ತಿರುವ ಗಣಿಗಾರಿಕೆ ಹಾಗೂ ಸ್ಫೋಟದಿಂದ ಅಣೆಕಟ್ಟೆಗೆ ಅಪಾಯ ಉಂಟಾಗಿದೆಯೇ ಇಲ್ಲವೇ ಎಂಬುದನ್ನು ಈಗಲೇ ಪರಿಶೀಲನೆ ನಡೆಸಿ ಖಚಿತಪಡಿಸಿಕೊಳ್ಳುವುದು ಉತ್ತಮ. 

ಏಕೆಂದರೆ. ಕೃಷ್ಣರಾಜಸಾಗರ ಜಲಾಶಯ ನಿರ್ಮಾಣಗೊಂಡು 80 ವರ್ಷ ಕಳೆದಿದೆ. ಈ ಅಣೆಕಟ್ಟೆಯಿಂದ ನೂರಾರು ನಗರಗಳಿಗೆ ನೀರು ಪೂರೈಕೆಯಾಗುತ್ತಿದೆ. ಕರ್ನಾಟಕ ಹಾಗೂ ತಮಿಳುನಾಡಿನ ರೈತರ ವ್ಯವಸಾಯಕ್ಕೆ ಅನುಕೂಲ ಕಲ್ಪಿಸಿಕೊಟ್ಟಿದೆ. ಗಣಿಗಾರಿಕೆಯಿಂದ ಆಗಬಹುದಾದ ಅನಾಹುತಗಳ ಬಗ್ಗೆ ಪರಿಶೀಲನೆ ನಡೆಸುವುದು ಉತ್ತಮ ಎಂದು ತಿಳಿಸಿದೆ.

ಕೆಆರ್‌ಎಸ್‌ ಅಣೆಕಟ್ಟು ಸುರಕ್ಷಾ ಸಮಿತಿಯನ್ನು ರಚನೆ ಮಾಡಿ ಅಣೆಕಟ್ಟು ಸುತ್ತಲಿನ 20 ಕಿ.ಮೀ. ಸುತ್ತಳತೆಯಲ್ಲಿ ವೀಕ್ಷಣೆ ನಡೆಸಿ ಸರ್ವೆ ಮಾಡುವ ಮೂಲಕ ಅಣೆಕಟ್ಟೆಗೆ ಅಪಾಯ ಉಂಟುಮಾಡುವ ಎಲ್ಲ ರೀತಿಯ ಚಟುವಟಿಕೆಗಳನ್ನು ನಿಯಂತ್ರಿಸಬೇಕು ಎಂದು ನಿರ್ದೇಶನ ನೀಡಿದೆ.

9 ತಿಂಗಳ ದಾಖಲೆಗಳ ಪರಿಶೀಲನೆ:
ಈ ವರದಿ ನೀಡುವ ಸಂದರ್ಭದಲ್ಲಿ ಜನವರಿ 2018ರಿಂದ 25 ಸೆಪ್ಟೆಂಬರ್‌ 2018ರವರೆಗೆ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ ಪ್ರಾದೇಶಿಕ ಭೂಕಂಪನ ಕೇಂದ್ರದ ವರದಿಯನ್ನು ಪಡೆದು ಜಿಲ್ಲಾಧಿಕಾರಿಗೆ ಸಲ್ಲಿಸಿದೆ.

ಅದರ ಪ್ರಕಾರ ಕರ್ನಾಟಕದ ವ್ಯಾಪ್ತಿಯ 1500 ಕಿ.ಮೀ. ಪ್ರದೇಶದಲ್ಲಿ 11 ಸಣ್ಣ ಪ್ರಮಾಣದ ಭೂಕಂಪನಗಳು ಹಾಗೂ ಹೊರಗೆ 40 ಭೂಕಂಪನಗಳು ಸಂಭವಿಸಿವೆ. ಇದರ ಜೊತೆಯಲ್ಲೇ ಎರಡು ಭಾರೀ ಪ್ರಮಾಣದ ಗಣಿ ಸ್ಫೋಟ ಸಂಭವಿಸಿರುವುದನ್ನು ಉಲ್ಲೇಖೀಸಿದೆ.

ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಕಾರ್ಯನಿರ್ವಹಣೆ ಏನು?
ಇದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಸಂಯೋಜಿಕ ನೋಂದಾಯಿತ ಸ್ವಾಯತ್ತ ಸಂಸ್ಥೆ. ಈ ಕೇಂದ್ರ ಕರ್ನಾಟಕದ ವ್ಯಾಪ್ತಿಯಲ್ಲಿ ಭೂಮಿಯೊಳಗೆ ಸಂಭವಿಸುವ ಭೂಕಂಪನ ಹಾಗೂ ಗಣಿಗಾರಿಕೆ ಚಟುವಟಿಕೆಗಳ ಉಸ್ತುವಾರಿ ಮಾಡುತ್ತಿದೆ.
ಈ ಕೇಂದ್ರವನ್ನು 2009-10ರಲ್ಲಿ ಸ್ಥಾಪಿಸಲಾಗಿದೆ. ಉಡುಪಿಯಲ್ಲಿ ಒಂದು ವೀಕ್ಷಣಾ ಕೇಂದ್ರವೂ ಸೇರಿದಂತೆ ರಾಜ್ಯದಲ್ಲಿ 14 ಶಾಶ್ವತ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಅದರ ಒಂದು ಕೇಂದ್ರವನ್ನು ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಅಣೆಕಟ್ಟು ಸಮೀಪ 12.5.2011ರಲ್ಲಿ ತೆರೆಯಲಾಗಿದೆ. ಇದರ ಮುಖ್ಯ ನಿಯಂತ್ರಣಾ ಕೇಂದ್ರ ಬೆಂಗಳೂರಿನಲ್ಲಿದೆ.

ಭೂಕಂಪ ಹಾಗೂ ಗಣಿ ಸ್ಫೋಟದಿಂದ ಭೂಮಿಯೊಳಗೆ ಉಂಟಾಗುವ ಬದಲಾವಣೆಗಳು, ಕಂಪನದ ಪ್ರಮಾಣದ ಮಾಹಿತಿಯನ್ನು ವಿಶ್ಲೇಷಣೆ ಮಾಡುವುದಲ್ಲದೆ, ಸೂಕ್ಷ್ಮ ಅಂಶಗಳನ್ನು ಗುರುತಿಸಿ ತಾಂತ್ರಿಕ ವರದಿಯನ್ನು ಸಿದ್ಧಪಡಿಸಿ ಸಂಬಂಧಿಸಿದವರಿಗೆ ರವಾನಿಸುವ ಕೆಲಸವನ್ನು ಮಾಡುತ್ತಿದೆ.

ಬೆಂಗಳೂರು ನೀರು ಸರಬರಾಜು ಮಂಡಳಿಯ ಮನವಿಯ ಮೇರೆಗೆ ಬೆಂಗಳೂರು ಸುತ್ತಮುತ್ತ ನಡೆಯುತ್ತಿರುವ ಗಣಿಗಾರಿಕೆಯಿಂದ ತಿಪ್ಪಗೊಂಡನಹಳ್ಳಿ ಜಲಾಶಯ, ಅಲ್ಲಿನ ಕುಡಿಯುವ ನೀರಿನ ಬಗ್ಗೆ ಪ್ರತಿ ತಿಂಗಳೂ ಮಾಹಿತಿ ನೀಡುತ್ತಿದೆ. ಇದಕ್ಕಾಗಿ ತಿಪ್ಪಗೊಂಡನಹಳ್ಳಿ ಸಮೀಪ  ವೀಕ್ಷಣಾ ಕೊಠಡಿಯನ್ನು ತೆರೆದು 10 ಕಿ.ಮೀ. ವ್ಯಾಪ್ತಿಯಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ನಿಗಾ ವಹಿಸಿದೆ.

ಸೆ.18ರ ಉದಯವಾಣಿಯ ವರದಿ ಉಲ್ಲೇಖ
ಗಣಿಗಾರಿಕೆ ಚಟುವಟಿಕೆಯಿಂದ ಕೃಷ್ಣರಾಜಸಾಗರ ಜಲಾಶಯದ ಮೇಲೆ ಉಂಟಾಗಬಹುದಾದ ಅಪಾಯದ ಕುರಿತು ಉದಯವಾಣಿ ದಿನಪತ್ರಿಕೆ ಸೆ.18ರಂದು ವರದಿ ಮಾಡಿತ್ತು. ಗಣಿ ಚಟುವಟಿಕೆಯಿಂದ ಕೆಆರ್‌ಎಸ್‌ ಅಣೆಕಟ್ಟೆ ಮೇಲೆ ಉಂಟಾಗುವ ಪರಿಣಾಮಗಳ ಕುರಿತು ವರದಿ ಸಲ್ಲಿಸುವಂತೆ ಮಂಡ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ನಾಗಭೂಷಣ್‌ ಮನವಿ ಮಾಡಿದ್ದರು.

– ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.