ಗಣಿಗಾರಿಕೆಗೆ ಕರಗಿದ ಬೇಬಿ ಬೆಟ್ಟ


Team Udayavani, Jul 30, 2022, 5:12 PM IST

ಗಣಿಗಾರಿಕೆಗೆ ಕರಗಿದ ಬೇಬಿ ಬೆಟ್ಟ

ಮಂಡ್ಯ: ಕೃಷ್ಣರಾಜಸಾಗರ ಜಲಾಶಯ ನಿರ್ಮಾಣಕ್ಕೆ ಕಲ್ಲು ಒದಗಿಸಿದ್ದ ಬೇಬಿಬೆಟ್ಟ, ಸಂಪೂರ್ಣವಾಗಿ ಗಣಿಗಾರಿಕೆಗೆ ಕರಗುವ ಸ್ಥಿತಿ ಎದುರಾಗಿದೆ.

ಈಗಾಗಲೇ ಸುಮಾರು 7-8 ಬೆಟ್ಟಗುಡ್ಡಗಳು ಗಣಿಗಾರಿಕೆಗೆ ಸಂಪೂರ್ಣವಾಗಿ ಕರಗಿ ಹೋಗಿವೆ. ಈಗ ಇರುವ ಒಂದು ಬೆಟ್ಟವನ್ನು ಕರಗಿಸಲು ಪ್ರಾಯೋಗಿಕ ಸ್ಫೋಟ ನಡೆಸಿ ಗಣಿಗಾರಿಕೆಗೆಅವಕಾಶ ನೀಡುವ ಉದ್ದೇಶದಿಂದ ಒತ್ತಡ ಹಾಕಲಾಗುತ್ತಿದೆ.ಪಾಂಡವಪುರ ಬೇಬಿಬೆಟ್ಟದ ಸರ್ವೆ ನಂ.1ರಲ್ಲಿರುವ ಅಮೃತ್‌ ಮಹತ್‌ ಕಾವಲ್‌ನ ಪ್ರದೇಶ ಬೇಬಿಬೆಟ್ಟವನ್ನು ಆವರಿಸಿಕೊಂಡಿದೆ. ಇಲ್ಲಿನ ಕಲ್ಲು ಗಟ್ಟಿ ಕಲ್ಲಾಗಿದೆ. ಅಲ್ಲದೇ, ಸಂಪೂರ್ಣ ಗ್ರಾನೈಟ್‌ ಕಲ್ಲಿನಿಂದ ಕೂಡಿರುವುದರಿಂದ ಇಲ್ಲಿನ ಕಲ್ಲಿಗೆ ಹೆಚ್ಚು ಬೇಡಿಕೆಯೂ ಇದೆ.

ರಾಜಮನೆತನ: ಸರ್ವೆ ನಂ.1ರ ಅಮೃತ್‌ ಮಹಲ್‌ ಕಾವಲ್‌ ಒಟ್ಟು 1623.17 ಎಕರೆ ಹೊಂದಿದೆ. 1950ರ ಗೆಜೆಟ್‌ ನೋಟಿಫಿಕೇಷನ್‌ ಪ್ರಕಾರ ಇದು ಸಂಪೂರ್ಣ ಮೈಸೂರು ಮಹಾ ರಾಜರ ಮನೆತನಕ್ಕೆ ಸೇರಿದ್ದಾಗಿದೆ. ಈ ಹಿಂದೆ ಅಮೃತ್‌ ಮಹಲ್‌ ತಳಿಯ ಹಸುಗಳ ಅಭಿವೃದ್ಧಿಗೆ ಮೀಸಲಿಡಲಾಗಿತ್ತು. ಕನ್ನಂಬಾಡಿ ಅಣೆಕಟ್ಟು ಕಟ್ಟಲು ಆಗಮಿಸಿದ್ದ ಕಾರ್ಮಿಕರಿಗೆ 120 ಎಕರೆ ನೀಡಲಾಗಿತ್ತು. ಅಲ್ಲಿನ ಕಾರ್ಮಿಕರು ಮೊದಲು ಕೈಕುಳಿಯಲ್ಲಿ ಕಲ್ಲು ಹೊಡೆಯಲು ಅವಕಾಶ ನೀಡಲಾಗಿತ್ತು. ಅದು ಕಾಲ ಕ್ರಮೇಣ ಕಲ್ಲು ಗಣಿಗಾರಿಕೆ ಪಟ್ಟಭದ್ರ ಶಕ್ತಿಗಳ ಹಿಡಿತಕ್ಕೆ ಸಿಲುಕಿ ಬ್ಲಾಸ್ಟ್‌ ನಡೆಸುವ ಹಂತಕ್ಕೆ ಬಂದು ನಿಂತಿದೆ.

ಉಲ್ಲೇಖ: ಬೇಬಿಬೆಟ್ಟದ ಕಾವಲು ಸರ್ವೆ ನಂ 1ರಲ್ಲಿ ಆಕಾರ್‌ ಬಂದ್‌ ರೀತಿಯ 1487.27 ಎಕರೆ ಇದೆ. ಆದರೆ, ಹಾಲಿ ಸೆಕೆಂಡರಿ ಕ್ಲಾಸಿಫಿಕೇಷನ್‌ ರೀತ್ಯಾ ಸರ್ಕಾರಿ ಖರಾಬು ಎಂದುದಾಖಲಾಗಿದೆ. ನಂತರ ಬಿ ಖರಾಬು ಎಂದು ಆಕಾರ್‌ ಬಂದ್‌ನಲ್ಲಿದೆ. ಕಂದಾಯ ದಾಖಲೆಗಳಲ್ಲಿ ಮೈಸೂರು ಸಂಸ್ಥಾನದ ಮಹಾರಾಜ ಅಮೃತ ಮಹಲ್‌ ಕಾವಲ್‌ ಜಮೀನುಪಹಣಿಯಲ್ಲಿ 1968-69 ರಿಂದ 1999-2000ರವರೆಗೆ ದಾಖಲಾಗಿದೆ. ನಂತರ, ಗಣಕೀಕೃತ ಪಹಣಿ ಕಾಲಂ 9ರಲ್ಲಿಅಮೃತ ಮಹಲ್‌ ಕಾವಲ್‌ ಎಂದು ನಂತರ ಕಾಲಂ 12ರಅನುಭವದ ಕಾಲಂನಲ್ಲಿ ಹಿಂದಿನಂತೆ ಮಹಾರಾಜರ ಅಮೃತ ಮಹಲ್‌ ಕಾವಲ್‌ ಎಂದು ದಾಖ ಲಾಗಿದೆ ಎಂದು 2012ರಲ್ಲಿ ಪಾಂಡವಪುರ ತಹಶೀಲ್ದಾರ್‌ ವರದಿ ನೀಡಿದ್ದಾರೆ.

ಬೇಬಿಬೆಟ್ಟಕ್ಕೂ ಕೆಆರ್‌ಎಸ್‌ಗೂ ಬಿಡಿಸಲಾಗದ ಸಂಬಂಧ :

ಕೆಆರ್‌ಎಸ್‌ ಜಲಾಶಯ ನಿರ್ಮಾಣದ ವೇಳೆ ಕಲ್ಲು ಹುಡುಕುತ್ತಿದ್ದಾಗ ಇದೇ ಬೇಬಿಬೆಟ್ಟದಿಂದ ಕಲ್ಲು ತಂದು ಜಲಾಶಯ ನಿರ್ಮಾಣ ಮಾಡಲಾಗಿದೆ. ಒಂದೇ ಕಲ್ಲಿನ ಪದರದ ಮೇಲೆಯೇ ಜಲಾಶಯ ನಿರ್ಮಾಣ ಮಾಡಲಾಗಿದೆ. ರಾಕ್‌ ಫಾರ್ಮೇಷನ್‌ ಸಿಸ್ಟಂ ಹೊಂದಿದೆ. ಆ ಕಲ್ಲಿನ ಪದರ 100 ಕಿ.ಮೀ.ಗಿಂತ ಹೆಚ್ಚಿದೆ. ವೈಜ್ಞಾನಿಕವಾಗಿ ಬೇಬಿಬೆಟ್ಟಕ್ಕೂ ಜಲಾಶಯಕ್ಕೂ ಸಂಪರ್ಕ ಹೊಂದಿದೆ. ಬೇಬಿಬೆಟ್ಟದಲ್ಲಿ ಕಲ್ಲು ಸ್ಫೋಟಗೊಂಡರೆ ಅದರ ಕಂಪನದ ತೀವ್ರತೆ ಜಲಾಶಯದ ಮೇಲೆ ಪರಿಣಾಮ ಬೀರಲಿದೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಕಾವೇರಿ ಜಲಾಶಯದ ತಜ್ಞ ಲಕ್ಷ್ಮಣ್‌ ಹೇಳುತ್ತಾರೆ.

ಹೈಕೋರ್ಟ್‌ ಆದೇಶ ಉಲ್ಲಂಘನೆ  :

ಕರ್ನಾಟಕ ಉತ್ಛ ನ್ಯಾಯಾಲಯದ 2001ರಲ್ಲಿ ನೀಡಿರುವ ತೀರ್ಪಿನ ಅನ್ವಯ ಹಾಗೂ ನಿಯಮಾನುಸಾರ ಅಮೃತ್‌ ಮಹಲ್‌ ಕಾವಲಿನ ಜಮೀನನ್ನು ಅಮೃತಮಹಲ್‌ ತಳಿಯ ಜಾನುವಾರುಗಳನ್ನು ಅಭಿವೃದ್ಧಿಪಡಿಸುವುದನ್ನು ಹೊರತುಪಡಿಸಿ ಬೇರೆ ಯಾವುದೇ ಉದ್ದೇಶಕ್ಕೆ ಮಂಜೂರು ಮಾಡಬಾರದೆಂದು ನ್ಯಾಯಾಲಯ ತೀರ್ಪು ನೀಡಿದೆ. ಆದರೆ, ಕಲ್ಲುಗಣಿ ಲಾಬಿಗೆ ಮಣಿದ ಜಿಲ್ಲಾಡಳಿತ, ಹೈಕೋರ್ಟ್‌ ಆದೇಶ ಉಲ್ಲಂಘಿಸಿ ಕಲ್ಲು ಗಣಿಗಾರಿಕೆಗೆ ಅನುಮತಿ ನೀಡಿರುವುದು ಕಂಡು ಬಂದಿದೆ.

ಸತ್ಯಾಗ್ರಹ ನಡೆಸಿದ್ದ ಶ್ರೀ :  ಬೇಬಿಬೆಟ್ಟದಲ್ಲಿರುವ ಶ್ರೀ ರಾಮಯೋಗೀಶ್ವರ ಮಠದ ಹಿರಿಯ ಸದಾಶಿವಸ್ವಾಮೀಜಿ ಅವರು ಬೇಬಿಬೆಟ್ಟದ ಗಣಿಗಾರಿಕೆ ವಿರುದ್ಧ ಹೋರಾಟ ನಡೆಸಿದ್ದರು. ಮಠ ಇರುವ ಜಾಗ ಬಿಟ್ಟು ಉಳಿದ ಸುತ್ತಮುತ್ತ ಸಂಪೂರ್ಣ ಬೆಟ್ಟವನ್ನುಗಣಿಗಾರಿಕೆಯಿಂದ ಕರಗಿಸಲಾಗಿತ್ತು.ಕಲ್ಲು ಸ್ಫೋಟದಿಂದ ಮಠದ ಗೋಡೆಗಳು ಬಿರುಕು ಬಿಟ್ಟಿದ್ದವು.ಇದರಿಂದ ಸ್ವಾಮೀಜಿ ಉಪವಾಸಸತ್ಯಾಗ್ರಹವನ್ನೂ ನಡೆಸಿದ್ದರು. ಆದರೆ, ಕಳೆದ 2 ವರ್ಷಗಳ ಹಿಂದೆ ನಿಧನರಾದರು.

ಕೇಂದ್ರದ ಅನುಮತಿ ಪಡೆಯುವಂತೆ ವರದಿ :

2010ರಲ್ಲಿ ಕಲ್ಲು ಗಣಿಗಾರಿಕೆಗೆ ಪರವಾನಗಿ ನೀಡುವ ಹಿನ್ನೆಲೆ ಜಿಲ್ಲಾಧಿ ಕಾರಿ ಅರಣ್ಯ ಇಲಾಖೆಗೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದರು. ಈ ಹಿನ್ನೆಲೆ ಉಪ ಅರಣ್ಯ ಸಂರಕ್ಷಣಾಧಿ ಕಾರಿಗಳು ಬೇಬಿಬೆಟ್ಟದ ಕಾವಲು, ಕಾಮನಾಯ್ಕನಹಳ್ಳಿ ಹಾಗೂ ಇತರೆ ಗ್ರಾಮಗಳ ಅಗತ್ಯ ಮಾಹಿತಿಯಂತೆ ಉಪ ವಿಭಾಗಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ಬೇಬಿಬೆಟ್ಟದ ಗ್ರಾಮದ ಸರ್ವೆ ನಂಬರ್‌ 1ರಲ್ಲಿ ಆರ್‌ಟಿಸಿ ಪರಿಶೀಲಿಸಿದಾಗ, ಅಮೃತ ಮಹಲ್‌ ಕಾವಲ್‌ ಎಂಬುದಾಗಿರುವುದರಿಂದ ಅರಣ್ಯೇತರ ಚಟುವಟಿಕೆ ನಡೆಸಲು ಅರಣ್ಯ ಸಂರಕ್ಷಣಾ ಕಾಯ್ದೆ ಪ್ರಕಾರ ಕೇಂದ್ರದ ಅನುಮತಿ ಪಡೆಯಬೇಕಾಗಿದೆ. ಅಲ್ಲದೆ, ಪ್ರಸ್ತುತ ಪ್ರದೇಶದಲ್ಲಿ ಸುಮಾರು 96ರಷ್ಟು ಕಲ್ಲುಗಣಿಗಳು ನಡೆಯುತ್ತಿವೆ ಎಂದು 2010ರ ಫೆಬ್ರವರಿಯಲ್ಲಿ ವರದಿ ನೀಡಿದ್ದಾರೆ.

ಬೇಬಿಬೆಟ್ಟದ ಸರ್ವೆ ನಂಬರ್‌ 1 ಅಮೃತ ಮಹಲ್‌ ಕಾವಲ್‌ ಎಂದು ದಾಖಲಾಗಿದೆ. ಅಲ್ಲದೆ, ತಹಶೀಲ್ದಾರ್‌ ಕೂಡ ಆಕಾರ್‌ ಬಂದ್‌ನಲ್ಲಿ ಬಿ ಖರಾಬು ಎಂದು ನಮೂದಿಸಲಾಗಿದೆ. ಬಿ ಖರಾಬು ಜಮೀನನ್ನು ಗಣಿಗಾರಿಕೆಗೆ ನೀಡಲು ಬರಲ್ಲ. ಅಲ್ಲದೇ, ಹೈಕೋರ್ಟ್ ನ ಆದೇಶ ಉಲ್ಲಂಘಿಸಿ ಇಲ್ಲಿ ಗಣಿಗಾರಿಕೆಗೆ ಅವಕಾಶ ನೀಡಲಾಗಿದೆ. ಇದರಿಂದ ಜಲಾಶಯಕ್ಕೆ ತೊಂದರೆಯಾಗಲಿದೆ. – ರವೀಂದ್ರ, ಆರ್‌ಟಿಐ ಕಾರ್ಯಕರ್ತ

 

– ಎಚ್‌.ಶಿವರಾಜು

ಟಾಪ್ ನ್ಯೂಸ್

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.